Latest Updates
-
ಮಳೆಗಾಲದಲ್ಲಿ ದಂಪತಿಗಳ ಬಾಂಧವ್ಯ ಗಟ್ಟಿಯಾಗಬೇಕೆ? ಮದುವೆ ಮತ್ತು ಬಜೆಟ್ ಪ್ಲಾನಿಂಗ್ಗೆ ಇಲ್ಲಿದೆ ಬೆಸ್ಟ್ ಟಿಪ್ಸ್ -
ದೆಹಲಿ ನೀರಿನ ಬಿಕ್ಕಟ್ಟು: ಮನೆಯಲ್ಲಿ ನೀರು ಉಳಿಸಿ, ಗಿಡಗಳನ್ನು ಕಾಪಾಡಲು ಇಲ್ಲಿವೆ ಸ್ಮಾರ್ಟ್ ಟಿಪ್ಸ್! -
ತೂಕ ಇಳಿಕೆ ಮತ್ತು ಮಧುಮೇಹ ನಿಯಂತ್ರಣಕ್ಕೆ ಡೈರಿ ಉತ್ಪನ್ನಗಳ ಸ್ಮಾರ್ಟ್ ಆಯ್ಕೆ: ವಿಶ್ವ ಹಾಲು ದಿನದ ವಿಶೇಷ ಸಲಹೆಗಳು -
ಬೆಂಗಳೂರು ಮಳೆ: ಟ್ರಾಫಿಕ್ ಕಿರಿಕಿರಿ ತಪ್ಪಿಸಿ, ಸ್ಟೈಲಿಶ್ ಆಗಿ ಕಾಣಲು ಈ ವೈರಲ್ ಟಿಪ್ಸ್ ಮಿಸ್ ಮಾಡ್ಬೇಡಿ! -
ವಿಶ್ವ ಸೈಕಲ್ ದಿನ: ಫಿಟ್ನೆಸ್ ಕಾಯ್ದುಕೊಳ್ಳಲು ಮತ್ತು ಸುರಕ್ಷಿತ ಸೈಕ್ಲಿಂಗ್ಗೆ ಇಲ್ಲಿದೆ ಬೆಸ್ಟ್ ಟಿಪ್ಸ್ -
ಪ್ರೈಡ್ ಮಂತ್ 2026: ಮನೆಯವರ ಮುಂದೆ ನಿಮ್ಮ ನಿಜವಾದ ವ್ಯಕ್ತಿತ್ವವನ್ನು ಹೇಳಿಕೊಳ್ಳಲು ಹೆದರುತ್ತಿದ್ದೀರಾ? ಈ ಸಲಹೆಗಳು ನಿಮಗಾಗಿ! -
ಮಳೆಗಾಲದ ಮೊದಲ ಮಳೆ ಬಂತು: ನಿಮ್ಮ ಮನೆಯನ್ನು ದುಬಾರಿ ರಿಪೇರಿಯಿಂದ ರಕ್ಷಿಸಲು ಈ ಸಣ್ಣ ಕೆಲಸಗಳನ್ನು ಇಂದೇ ಮಾಡಿ! -
ಮಳೆಗಾಲದಲ್ಲಿ ಪದೇ ಪದೇ ಕಾಯಿಲೆ ಬೀಳ್ತಿದ್ದೀರಾ? ಆರೋಗ್ಯವಾಗಿರಲು ಈ ಆಹಾರ ಪದ್ಧತಿ ಪಾಲಿಸಿ, ವೈರಲ್ ಜ್ವರದಿಂದ ದೂರವಿರಿ! -
ಆರ್ಸಿಬಿ ಗೆಲುವಿನ ಅಬ್ಬರ: ಬೆಂಗಳೂರಿನಲ್ಲಿ ವಿರಾಟ್-ಅನುಷ್ಕಾ ಸಂಭ್ರಮದ ವಿಡಿಯೋ ವೈರಲ್, ನೀವು ನೋಡಲೇಬೇಕಾದ ದೃಶ್ಯಗಳಿವು! -
ಮಳೆಗಾಲದಲ್ಲಿ ವ್ಯಾಯಾಮ ಮಾಡ್ತೀರಾ? ಈ ತಪ್ಪುಗಳನ್ನು ಮಾಡಿದರೆ ನಿಮ್ಮ ಆರೋಗ್ಯಕ್ಕೆ ಅಪಾಯ ಕಟ್ಟಿಟ್ಟ ಬುತ್ತಿ!
ಸಾವಿನ ಬಗ್ಗೆ ಯಮ ಧರ್ಮ ತಿಳಿಸಿದ ರಹಸ್ಯ ಯಾವುದು?
ಗೌತಮ ಬುದ್ಧನ ಒಂದು ಕಥೆಯಲ್ಲಿ ಸಾವಿಲ್ಲದ ಮನೆಯಿಂದ ಒಂದು ಹಿಡಿ ಸಾಸಿವೆ ತೆಗೆದುಕೊಂಡು ಬರಲು ತಿಳಿಸಿದಾಗ ಅವನ ಶಿಷ್ಯರಿಗೆ ಒಂದೂ ಮನೆ ಸಿಗಲಿಲ್ಲವಂತೆ. ಅಂದರೆ ಸಾವಿಲ್ಲದ ಮನೆಯೇ ಇಲ್ಲವೆಂದಾಯ್ತು. ಜಗತ್ತಿನ ಪ್ರತಿಯೊಂದು ಜೀವಿಗೂ ಒಂದು ಆಯಸ್ಸಿದೆ. ಕೆಲವು ಅಲ್ಪಾಯುಷಿಗಳಾದರೆ ಕಡಲಾಮೆಯಂತಹವು ಶತವರ್ಷಗಳಿಗೂ ಹೆಚ್ಚು ಕಾಲ ಜೀವಿಸುತ್ತವೆ. ಸಾವು ಯಾರನ್ನೂ ಕೇಳಿ ಬರುವುದಿಲ್ಲ, ಯಾರ ಆಯಸ್ಸೂ ಇಷ್ಟೇ ಎಂದು ಯಾರಿಗೂ ಗೊತ್ತಿಲ್ಲ.
ಒಂದು ವೇಳೆ ಗೊತ್ತಿದ್ದರೆ ಅದು ಸಾವಿನ ಅಧಿಪತಿಯಾದ ಯಮಧರ್ಮನಿಗೆ ಮಾತ್ರ. ಲೋಕದಲ್ಲಿ ಎಷ್ಟೇ ಗಳಿಸಿದರೂ ಸಾವನ್ನು ಎದುರಿಸಿ ಉಳಿಯಲು ಯಾರಿಂದಲೂ ಸಾಧ್ಯವಿಲ್ಲ. ದೊರೆಗೂ ಭಿಕಾರಿಗೂ ಸಾವು ಸರಿಸಮಾನ. ಸಾವಿನ ಬಗ್ಗೆ ಎಲ್ಲಾ ಧರ್ಮಗಳಲ್ಲಿಯೂ ವಿವಿಧ ರೀತಿಯ ವಿವರಣೆಗಳಿವೆ. ಸಾವಿನ ನಂತರದ ಬದುಕಿಗೆ ಹಾಗೂ ಆತ್ಮ ಒಂದು ಶರೀರವನ್ನು ಬಿಟ್ಟು ಇನ್ನೊಂದು ಶರೀರವನ್ನು ಆವರಿಸಿಕೊಳ್ಳುವ ವಿಷಯವನ್ನು ಹಲವು ಧರ್ಮಗಳಲ್ಲಿ ವಿವರಣೆ ಸಿಗುತ್ತದೆ. ಸಾವಿನ ಬಗ್ಗೆ ಹಾಗೂ ಸಾವಿನ ಬಳಿಕದ ಜೀವನದ ಬಗ್ಗೆ ಕುತೂಹಲವುಳ್ಳವರಿಗೆ ಬೋಲ್ಡ್ ಸ್ಕೈ ಹಲವು ಮಾಹಿತಿಗಳನ್ನು ಇಲ್ಲಿ ನೀಡುತ್ತಿದೆ.
ಸಾವಿನ ಅಧಿಪತಿಯಾದ ಯಮಧರ್ಮರಾಯ ಹಾಗೂ ನಚಿಕೇತನೆಂಬ ಹುಡುಗನ ನಡುವೆ ನಡೆದ ಸಂವಾದದಲ್ಲಿ ಯಮಧರ್ಮ ಸಾವಿನ ಕುರಿತು ಹಲವು ಸಂಗತಿಗಳನ್ನು ತಿಳಿಸಿದ್ದುದು ಪುರಾಣಗಳಲ್ಲಿ ದಾಖಲಾಗಿದೆ. ಈ ಸಂಗತಿಗಳಲ್ಲಿ ಪ್ರಮುಖವಾದುದನ್ನು ಇಲ್ಲಿ ವಿವರಿಸಲಾಗಿದೆ.

ನಚಿಕೇತನ ಮೂರು ವರಗಳು
ನಚಿಕೇತ ಯಮಧರ್ಮನನ್ನು ಭೇಟಿಯಾದಾಗ ಮೂರು ವರಗಳನ್ನು ಬೇಡಿದನಂತೆ. ಮೊದಲನೆಯದು ತಂದೆಯ ಪ್ರೀತಿ, ಎರಡನೆಯದು ಅಗ್ನಿ ವಿದ್ಯೆಯ ಬಗ್ಗೆ ಅರಿಯುವುದು ಹಾಗೂ ಮೂರನೆಯದು ಆತ್ಮಜ್ಞಾನ ಮತ್ತು ಸಾವಿನ ಬಗ್ಗೆ ಅರಿವು. ಯಮಧರ್ಮ ಮೊದಲ ಎರಡು ವರಗಳನ್ನು ದಯಪಾಲಿಸಲು ಒಪ್ಪಿದರೂ ಮೂರನೆಯ ವರವನ್ನು ನೀಡಲು ಹಿಂದೇಟು ಹಾಕಿದನಂತೆ. ಆದರೆ ತನಗೆ ಬೇಕೇ ಬೇಕು ಎಂದು ನಚಿಕೇತ ಹಠ ಹಿಡಿದುದರಿಂದ ಅನಿವಾರ್ಯವಾಗಿ ಸಾವಿನ ಬಗ್ಗೆ ಹಲವು ಮಾಹಿತಿಗಳನ್ನು ನೀಡಲೇ ಬೇಕಾಯಿತಂತೆ. ಆ ವಿವರಗಳು ಇಂತಿವೆ

ಓಂ ಕಾರ
ಯಮಧರ್ಮನ ಪ್ರಕಾರ ಓಂ ಎಂಬ ಪಠನ ಪರಮಾತ್ಮನ ಸ್ವರೂಪವಾಗಿದೆ. ಮಾನವನ ಹೃದಯದಲ್ಲಿ ಬ್ರಹ್ಮ ನೆಲೆಸಿದ್ದಾನೆ.

ಆತ್ಮಕ್ಕೆ ಸಾವಿಲ್ಲ
ದೇಹ ನಶ್ವರ, ಆತ್ಮ ಶಾಶ್ವತ. ಆತ್ಮಕ್ಕೆ ಸಾವಿಲ್ಲ. ದೇಹ ಅಳಿದ ಬಳಿಕ ಆತ್ಮ ಇನ್ನೊಂದು ಶರೀರವನ್ನು ಹುಡುಕಿಕೊಳ್ಳುತ್ತದೆ.

ಅಂತಿಮವಾಗಿ ಪಡೆಯುವ ಬ್ರಹ್ಮ ರೂಪ
ಹಲವು ಬಾರಿಯ ಹುಟ್ಟು ಸಾವಿನ ಬಳಿಕ ಆತ್ಮ ಕಡೆಗೆ ಮುಕ್ತಿ ಪಡೆದು ಪರಮಾತ್ಮನ ಅಂದರೆ ಬ್ರಹ್ಮನ ಸಾನಿಧ್ಯ ಪಡೆಯುತ್ತದೆ. ಈ ರೂಪಕ್ಕೆ ಬ್ರಹ್ಮ ರೂಪ ಎಂದು ಕರೆಯುತ್ತಾರೆ.

ನಾಸ್ತಿಕ ಆತ್ಮ ಶಾಂತಿಯನ್ನು ಹುಡುಕುತ್ತಿರುತ್ತದೆ
ದೇವರನ್ನು ನಂಬದ ನಾಸ್ತಿಕರಿಗೂ ಸಾವು ಬರುತ್ತದೆ. ಆದರೆ ಅವರ ಆತ್ಮಕ್ಕೆ ಶಾಂತಿ ದೊರಕಲಾರದೇ ಶಾಂತಿಯನ್ನು ಹುಡುಕುತ್ತಾ ಹಲವು ಜನ್ಮಗಳನ್ನು ಎತ್ತಬೇಕಾಗುತ್ತದೆ. ಆಸ್ತಿಕನಾಗಿ ಭಗವಂತನ ಇರುವಿಕೆಯನ್ನು ಅರಿಯುವವರೆಗೂ ಇದು ಮುಂದುವರೆಯುತ್ತದೆ.



Click it and Unblock the Notifications