Latest Updates
-
ಮನೆಯವರ ವಿರೋಧದ ನಡುವೆ ಮದುವೆ: ಅಲಹಾಬಾದ್ ಹೈಕೋರ್ಟ್ನಿಂದ ಜೋಡಿಗಳಿಗೆ ಸಿಕ್ಕಿತು ಭರ್ಜರಿ ರಕ್ಷಣೆ! -
ಮಳೆ ನಂತರ ದೆಹಲಿ-ಎನ್ಸಿಆರ್ನಲ್ಲಿ ಶುದ್ಧ ಗಾಳಿ: ನಿಮ್ಮ ಮನೆಯನ್ನು ಫ್ರೆಶ್ ಆಗಿಡಲು ಈ ಸರಳ ಟಿಪ್ಸ್ ಪಾಲಿಸಿ! -
ಯೋಗಿನಿ ಏಕಾದಶಿ: ಮಧುಮೇಹಿಗಳು ಉಪವಾಸ ಮಾಡುವಾಗ ಈ ಆರೋಗ್ಯ ಟಿಪ್ಸ್ ಮರೆಯದಿರಿ! -
ವಿಶ್ವ ಜನಸಂಖ್ಯಾ ದಿನ: ಉಚಿತ ಗರ್ಭನಿರೋಧಕಗಳು ಮತ್ತು ನಿಮ್ಮ ಗೌಪ್ಯತೆ ಬಗ್ಗೆ ತಿಳಿಯಲೇಬೇಕಾದ ಸತ್ಯಗಳು -
ಭಾರತ-ಇಂಗ್ಲೆಂಡ್ ಟಿ20 ಪಂದ್ಯದ ರೋಚಕತೆ ನಡುವೆ ಫಿಟ್ ಆಗಿರಲು ಈ 7 ನಿಮಿಷದ ಟಿಪ್ಸ್ ಮಿಸ್ ಮಾಡ್ಬೇಡಿ! -
ಮಳೆಗಾಲದ ಡೇಟಿಂಗ್: ಬಜೆಟ್ ಸ್ನೇಹಿ ಐಡಿಯಾಗಳು ಮತ್ತು ಸುರಕ್ಷಿತವಾಗಿರಲು ಇಲ್ಲಿವೆ ಬೆಸ್ಟ್ ಟಿಪ್ಸ್! -
ಕೋಲ್ಕತ್ತಾದಲ್ಲಿ ಭಾರಿ ಮಳೆ: ನಿಮ್ಮ ಬಾಲ್ಕನಿ ಮತ್ತು ಗಿಡಗಳನ್ನು ಸುರಕ್ಷಿತವಾಗಿಡಲು ಈ ಟಿಪ್ಸ್ ಮಿಸ್ ಮಾಡಬೇಡಿ! -
ಮಳೆಗಾಲದಲ್ಲಿ ಹೊಟ್ಟೆಯ ಸಮಸ್ಯೆ ಕಾಡ್ತಿದೆಯಾ? ಆರೋಗ್ಯವಾಗಿರಲು ಈ ಆಹಾರ ಪದ್ಧತಿ ಪಾಲಿಸಿ -
ಧಮಾಲ್ 4 ರಿಲೀಸ್: ಅಜಯ್ ದೇವಗನ್ ಕಾಮಿಡಿ ಹಬ್ಬಕ್ಕೆ ಫ್ಯಾಮಿಲಿ ಜೊತೆ ರೆಡಿಯಾಗಿ! -
ಸಮಲಿಂಗಿ ಜೋಡಿಗಳೇ ಎಚ್ಚರ: ಗಿಫ್ಟ್ ಟ್ಯಾಕ್ಸ್ನಿಂದ ಪಾರಾಗಲು ಈ ದಾಖಲೆಗಳು ಕಡ್ಡಾಯ!
ಇಂದು ದೇವ್ ದೀಪಾವಳಿ: ಏನಿದರ ಮಹತ್ವ?
ಪ್ರತಿವರ್ಷ ಕಾರ್ತಿಕ ಪೂರ್ಣಿಮೆಯಂದು ದೇವ್ ದೀಪಾವಳಿಯನ್ನು ಆಚರಿಸಲಾಗುವುದು. ದೇವ್ ದೀಪಾವಳಿಯನ್ನು ವಾರಾಣಸಿಯಲ್ಲಿ ಆಚರಿಸಲಾಗುವುದು. ಶಿವನು ಈ ದಿನ ಅಸುರ ತ್ರಿಪುರಾಸುರನನ್ನು ವಧಿಸಿದನು ಎಂದು ಹೇಳಲಾಗುವುದು. ಆದ್ದರಿಂದ ಈ ದಿನವನ್ನು ತ್ರಿಪುರಾರಿ ಪೂರ್ಣಿಮಾ ಎಂದು ಕರೆಯಲಾಗುವುದು.

ಈ ದಿನ ಶಿವ ಭಕ್ತರು ಪವಿತ್ರ ಗಂಗೆಯಲ್ಲಿ ಮಿಂದು ಪೂಜೆಯನ್ನು ಸಲ್ಲಿಸುತ್ತಾರೆ. ಈ ದಿನ ಗಂಗೆಯ ತೀರದಲ್ಲಿ ದೀಪಗಳನ್ನು ಹಚ್ಚಲಾಗುವುದು. ಈ ದಿನ ಮನೆಗಳಿಗೂ ಲೈಟಿಂಗ್ಸ್ ಹಾಕಿ ಅಲಂಕರಿಸಲಾಗುವುದು.
ಸಂಜೆ ಹೊತ್ತಿಗೆ ಗಂಗೆಗೆ ಆರತಿಯನ್ನು ಮಾಡಲಾಗುವುದು.
ದೇವ್ ದೀಪಾವಳಿ ದಿನಾಂಕ ಮತ್ತು ಸಮಯ
ದೇವ್ ದೀಪಾವಳಿ ದಿನಾಂಕ: ನವೆಂಬರ್ 26
ದೇವ್ ದೀಪಾವಳಿ ಆಚರಣೆಯ ಮಹತ್ವ
ಅಸುರ ತ್ರಿಪುರಾನನ್ನು ಶಿವನು ಸೋಲಿಸಿದ ದಿನವನ್ನು ದೇವ್ ದೀಪಾವಳಿ ಎಮದು ಆಚರಿಸಲಾಗುವುದು. ಈ ದಿನ ನೂರಾರು ಮಣ್ಣಿನ ಹಣತೆಗಳನ್ನು ಗಂಗಾ ನದಿಯಲ್ಲಿ ತೇಲಿ ಬಿಡಲಾಗುವುದು. ಈ ಆಚರಣೆ 1985ರಿಂದ ಪ್ರಾರಂಭವಾಗಿದೆ. ರಾತ್ರಿ ಪೂರ್ತಿ ಶಿವನ ಕೀರ್ತನೆಗಳನ್ನು ಹಾಡುತ್ತಾ ವಾರಾಣಸಿ ಬೀದಿಗಳಲ್ಲಿ ಮೆರವಣಿಗೆ ಕೂಡ ಇಡುತ್ತದೆ.
ಈ ದಿನ 21 ಬ್ರಾಹ್ಮಣರು ಹಾಗೂ 24 ಮಹಿಳೆಯರು ಗಂಗೆಗೆ ಆರತಿ ಎತ್ತುತ್ತಾರೆ. ಗಂಗೆಗೆ ನೂರಾರು ಮಣ್ಣಿನ ಹಣತೆಗಳನ್ನು ತೇಲಿ ಬಿಡಲಾಗುವುದು, ಇದನ್ನು ಅಲ್ಲಿ ನೆರೆದ ಪ್ರವಾಸಿಗರು ಕಣ್ತುಂಬಿಕೊಳ್ಳುತ್ತಾರೆ. ಈ ಇನ ಗುರುನಾನಕ್ ಜಯಂತಿಯನ್ನು ಕೂಡ ಆಚರಿಸಲಾಗುವುದು.



Click it and Unblock the Notifications