Latest Updates
-
ಲಿವರ್ ಆರೋಗ್ಯಕ್ಕೆ ಈ ಸರಳ ಅಭ್ಯಾಸಗಳು ನಿಮ್ಮನ್ನು ಕಾಪಾಡುತ್ತವೆ -
ಅಕ್ಷಯ ತೃತೀಯ: ಚಿನ್ನದ ಖರೀದಿ ಮತ್ತು ನಿಶ್ಚಿತಾರ್ಥಕ್ಕೆ ಹೀಗೆ ಪ್ಲಾನ್ ಮಾಡಿ -
ದೆಹಲಿ ಧೂಳು ತಡೆಯಲು ನಿಮ್ಮ ಮನೆಯನ್ನು ಹೀಗೆ ರಕ್ಷಿಸಿಕೊಳ್ಳಿ -
FSSAI ದಾಳಿ: ವಿಷಕಾರಿ ಹಣ್ಣುಗಳನ್ನು ಗುರುತಿಸುವುದು ಹೇಗೆ ಗೊತ್ತಾ? -
ಅಕ್ಷಯ ತೃತೀಯ ಸಂಭ್ರಮ: ಈ ಟ್ರೆಂಡಿ ಆಭರಣಗಳೇ ಈಗ ಹವಾ -
ಹೀಟ್ವೇವ್ ಎಚ್ಚರಿಕೆ: ಬಿಸಿಲಿನ ತಾಪದಿಂದ ಪಾರಾಗಲು ಈ ಟಿಪ್ಸ್ ಫಾಲೋ ಮಾಡಿ -
ಮದುವೆಗೂ ಮುನ್ನ ಈ 48 ಗಂಟೆಗಳ ಚೆಕ್ಲಿಸ್ಟ್ ಮರೆಯದಿರಿ -
ಬಿಸಿಲ ಬೇಗೆಯಿಂದ ಪಾರಾಗಲು ಮನೆಯನ್ನು ತಂಪಾಗಿರಿಸುವ ಅದ್ಭುತ ಟಿಪ್ಸ್ -
ಬಿಸಿಲ ಬೇಗೆಯಿಂದ ಪಾರಾಗಲು ಈ ಪಾನೀಯಗಳೇ ಮದ್ದು! -
ಬಿಸಿಲ ಬೇಗೆಯಿಂದ ಪಾರಾಗಲು ಈ ಟ್ರೆಂಡ್ಸ್ ಮಿಸ್ ಮಾಡ್ಬೇಡಿ
ಇಂದು ದೇವ್ ದೀಪಾವಳಿ: ಏನಿದರ ಮಹತ್ವ?
ಪ್ರತಿವರ್ಷ ಕಾರ್ತಿಕ ಪೂರ್ಣಿಮೆಯಂದು ದೇವ್ ದೀಪಾವಳಿಯನ್ನು ಆಚರಿಸಲಾಗುವುದು. ದೇವ್ ದೀಪಾವಳಿಯನ್ನು ವಾರಾಣಸಿಯಲ್ಲಿ ಆಚರಿಸಲಾಗುವುದು. ಶಿವನು ಈ ದಿನ ಅಸುರ ತ್ರಿಪುರಾಸುರನನ್ನು ವಧಿಸಿದನು ಎಂದು ಹೇಳಲಾಗುವುದು. ಆದ್ದರಿಂದ ಈ ದಿನವನ್ನು ತ್ರಿಪುರಾರಿ ಪೂರ್ಣಿಮಾ ಎಂದು ಕರೆಯಲಾಗುವುದು.

ಈ ದಿನ ಶಿವ ಭಕ್ತರು ಪವಿತ್ರ ಗಂಗೆಯಲ್ಲಿ ಮಿಂದು ಪೂಜೆಯನ್ನು ಸಲ್ಲಿಸುತ್ತಾರೆ. ಈ ದಿನ ಗಂಗೆಯ ತೀರದಲ್ಲಿ ದೀಪಗಳನ್ನು ಹಚ್ಚಲಾಗುವುದು. ಈ ದಿನ ಮನೆಗಳಿಗೂ ಲೈಟಿಂಗ್ಸ್ ಹಾಕಿ ಅಲಂಕರಿಸಲಾಗುವುದು.
ಸಂಜೆ ಹೊತ್ತಿಗೆ ಗಂಗೆಗೆ ಆರತಿಯನ್ನು ಮಾಡಲಾಗುವುದು.
ದೇವ್ ದೀಪಾವಳಿ ದಿನಾಂಕ ಮತ್ತು ಸಮಯ
ದೇವ್ ದೀಪಾವಳಿ ದಿನಾಂಕ: ನವೆಂಬರ್ 26
ದೇವ್ ದೀಪಾವಳಿ ಆಚರಣೆಯ ಮಹತ್ವ
ಅಸುರ ತ್ರಿಪುರಾನನ್ನು ಶಿವನು ಸೋಲಿಸಿದ ದಿನವನ್ನು ದೇವ್ ದೀಪಾವಳಿ ಎಮದು ಆಚರಿಸಲಾಗುವುದು. ಈ ದಿನ ನೂರಾರು ಮಣ್ಣಿನ ಹಣತೆಗಳನ್ನು ಗಂಗಾ ನದಿಯಲ್ಲಿ ತೇಲಿ ಬಿಡಲಾಗುವುದು. ಈ ಆಚರಣೆ 1985ರಿಂದ ಪ್ರಾರಂಭವಾಗಿದೆ. ರಾತ್ರಿ ಪೂರ್ತಿ ಶಿವನ ಕೀರ್ತನೆಗಳನ್ನು ಹಾಡುತ್ತಾ ವಾರಾಣಸಿ ಬೀದಿಗಳಲ್ಲಿ ಮೆರವಣಿಗೆ ಕೂಡ ಇಡುತ್ತದೆ.
ಈ ದಿನ 21 ಬ್ರಾಹ್ಮಣರು ಹಾಗೂ 24 ಮಹಿಳೆಯರು ಗಂಗೆಗೆ ಆರತಿ ಎತ್ತುತ್ತಾರೆ. ಗಂಗೆಗೆ ನೂರಾರು ಮಣ್ಣಿನ ಹಣತೆಗಳನ್ನು ತೇಲಿ ಬಿಡಲಾಗುವುದು, ಇದನ್ನು ಅಲ್ಲಿ ನೆರೆದ ಪ್ರವಾಸಿಗರು ಕಣ್ತುಂಬಿಕೊಳ್ಳುತ್ತಾರೆ. ಈ ಇನ ಗುರುನಾನಕ್ ಜಯಂತಿಯನ್ನು ಕೂಡ ಆಚರಿಸಲಾಗುವುದು.



Click it and Unblock the Notifications











