Latest Updates
-
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ತುಲಾದಿಂದ ಮೀನ ರಾಶಿವರೆಗಿನ ವಾರ ಭವಿಷ್ಯ! -
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ಮೇಷದಿಂದ ಕನ್ಯಾ ರಾಶಿವರೆಗಿನ ವಾರ ಭವಿಷ್ಯ! -
ಮಳೆಗಾಲಕ್ಕೆ ತಯಾರಾಗಿ: ನಿತ್ಯ ಊಟದೊಂದಿಗೆ ಸವಿಯಲು ರವೆ ಸಂಡಿಗೆ ಮಾಡಿ! -
ಮೀನ ರಾಶಿಯಲ್ಲಿ ಶನಿ-ಮಂಗಳ ಸಂಯೋಗ: ಅಪರೂಪದ ಸಮ್ಮಿಲನವು ತರಲಿದೆ ಬಿಕ್ಕಟ್ಟು, ಆರ್ಥಿಕ ಸಮಸ್ಯೆ! -
ಈ 2 ರಾಶಿಯವರ ಪ್ರೇಮ ಸಂಬಂಧಗಳು ಸಿಹಿ! ಸಣ್ಣಪುಟ್ಟ ಸಮಸ್ಯೆಗಳು ಖಚಿತ -
March 21 Horoscope: ಹೊಸ ಆರಂಭಗಳಲ್ಲಿ ಹಣ ಹೂಡಿಕೆಗೆ ಯೋಗ್ಯ ದಿನ! -
ಒಂದು ಹನಿ ಎಣ್ಣೆ ಇಲ್ಲದೆ ಮಾಡಿ ದಹೀ ಭಲ್ಲಾ! ರುಚಿ, ಆರೋಗ್ಯದಲ್ಲಿ ರಾಜಿ ಇಲ್ಲ.. ತೂಕ ಡಬಲ್ ಇಳಿಯುತ್ತೆ -
ಸುಸ್ತು & ಆಯಾಸದಿಂದ ಬಳಲುತ್ತಿದ್ದೀರಾ? ಈ ರಾಗಿ ಖರ್ಜೂರದ ಲಾಡು ಸೇವಿಸಿ.. ಸಕ್ಕರೆ, ಬೆಲ್ಲ ಬೇಕಿಲ್ಲ.. ಮಾಡೋದು ಹೇಗೆ? -
ಎಂದಾದ್ರೂ ಚೆಟ್ಟಿನಾಡ್ ಚಿಕನ್ ಸವಿದ್ದೀರಾ? ಬಾಯಲ್ಲಿ ನೀರೂರಿರುವ ರುಚಿ.. ಮಸಾಲೆ ರುಬ್ಬದೇ ಮಾಡಿ -
ಕುಂಭ ರಾಶಿಯಲ್ಲಿ ಬುಧ ಮಾರ್ಗಿ: ಈ ರಾಶಿಯವರಿಗೆ ಶುಭಕಾಲ ಆರಂಭ! ಕಷ್ಟಗಳಿಗೆ ಮುಕ್ತಿ.. ಕುಬೇರನ ಕೃಪೆ ಶುರು
ಇಂದು ದೇವ್ ದೀಪಾವಳಿ: ಏನಿದರ ಮಹತ್ವ?
ಪ್ರತಿವರ್ಷ ಕಾರ್ತಿಕ ಪೂರ್ಣಿಮೆಯಂದು ದೇವ್ ದೀಪಾವಳಿಯನ್ನು ಆಚರಿಸಲಾಗುವುದು. ದೇವ್ ದೀಪಾವಳಿಯನ್ನು ವಾರಾಣಸಿಯಲ್ಲಿ ಆಚರಿಸಲಾಗುವುದು. ಶಿವನು ಈ ದಿನ ಅಸುರ ತ್ರಿಪುರಾಸುರನನ್ನು ವಧಿಸಿದನು ಎಂದು ಹೇಳಲಾಗುವುದು. ಆದ್ದರಿಂದ ಈ ದಿನವನ್ನು ತ್ರಿಪುರಾರಿ ಪೂರ್ಣಿಮಾ ಎಂದು ಕರೆಯಲಾಗುವುದು.

ಈ ದಿನ ಶಿವ ಭಕ್ತರು ಪವಿತ್ರ ಗಂಗೆಯಲ್ಲಿ ಮಿಂದು ಪೂಜೆಯನ್ನು ಸಲ್ಲಿಸುತ್ತಾರೆ. ಈ ದಿನ ಗಂಗೆಯ ತೀರದಲ್ಲಿ ದೀಪಗಳನ್ನು ಹಚ್ಚಲಾಗುವುದು. ಈ ದಿನ ಮನೆಗಳಿಗೂ ಲೈಟಿಂಗ್ಸ್ ಹಾಕಿ ಅಲಂಕರಿಸಲಾಗುವುದು.
ಸಂಜೆ ಹೊತ್ತಿಗೆ ಗಂಗೆಗೆ ಆರತಿಯನ್ನು ಮಾಡಲಾಗುವುದು.
ದೇವ್ ದೀಪಾವಳಿ ದಿನಾಂಕ ಮತ್ತು ಸಮಯ
ದೇವ್ ದೀಪಾವಳಿ ದಿನಾಂಕ: ನವೆಂಬರ್ 26
ದೇವ್ ದೀಪಾವಳಿ ಆಚರಣೆಯ ಮಹತ್ವ
ಅಸುರ ತ್ರಿಪುರಾನನ್ನು ಶಿವನು ಸೋಲಿಸಿದ ದಿನವನ್ನು ದೇವ್ ದೀಪಾವಳಿ ಎಮದು ಆಚರಿಸಲಾಗುವುದು. ಈ ದಿನ ನೂರಾರು ಮಣ್ಣಿನ ಹಣತೆಗಳನ್ನು ಗಂಗಾ ನದಿಯಲ್ಲಿ ತೇಲಿ ಬಿಡಲಾಗುವುದು. ಈ ಆಚರಣೆ 1985ರಿಂದ ಪ್ರಾರಂಭವಾಗಿದೆ. ರಾತ್ರಿ ಪೂರ್ತಿ ಶಿವನ ಕೀರ್ತನೆಗಳನ್ನು ಹಾಡುತ್ತಾ ವಾರಾಣಸಿ ಬೀದಿಗಳಲ್ಲಿ ಮೆರವಣಿಗೆ ಕೂಡ ಇಡುತ್ತದೆ.
ಈ ದಿನ 21 ಬ್ರಾಹ್ಮಣರು ಹಾಗೂ 24 ಮಹಿಳೆಯರು ಗಂಗೆಗೆ ಆರತಿ ಎತ್ತುತ್ತಾರೆ. ಗಂಗೆಗೆ ನೂರಾರು ಮಣ್ಣಿನ ಹಣತೆಗಳನ್ನು ತೇಲಿ ಬಿಡಲಾಗುವುದು, ಇದನ್ನು ಅಲ್ಲಿ ನೆರೆದ ಪ್ರವಾಸಿಗರು ಕಣ್ತುಂಬಿಕೊಳ್ಳುತ್ತಾರೆ. ಈ ಇನ ಗುರುನಾನಕ್ ಜಯಂತಿಯನ್ನು ಕೂಡ ಆಚರಿಸಲಾಗುವುದು.



Click it and Unblock the Notifications