Latest Updates
-
ಫ್ಯಾಮಿಲಿ ವಾಟ್ಸಾಪ್ ಗ್ರೂಪ್ನಲ್ಲಿ ರಾಜಕೀಯ ಜಗಳವೇ? ಈ ಟಿಪ್ಸ್ ಪಾಲಿಸಿ, ಸಂಬಂಧ ಉಳಿಸಿಕೊಳ್ಳಿ! -
ಓಣಂ ಹಬ್ಬದ ಸಂಭ್ರಮ: ಹೂವಿನ ಬೆಲೆ ಏರಿಕೆ ನಡುವೆ ಕಡಿಮೆ ದರದಲ್ಲಿ ಖರೀದಿಸಲು ಇಲ್ಲಿವೆ ಟಿಪ್ಸ್! -
ಸಸ್ಯಜನ್ಯ ಹಾಲು: ತೂಕ ಇಳಿಕೆ ಮತ್ತು ಮಧುಮೇಹ ನಿಯಂತ್ರಣಕ್ಕೆ ಇದುವೇ ಬೆಸ್ಟ್ ಪರ್ಯಾಯ! -
ಸಕ್ಕರೆ ಬೆಲೆ ಏರಿಕೆ ಬಿಸಿ: ಹಬ್ಬದ ಸಿಹಿ ಬಜೆಟ್ ಉಳಿಸಲು ಇಲ್ಲಿದೆ 300 ರೂಪಾಯಿಯ ಸ್ಮಾರ್ಟ್ ಟಿಪ್ಸ್ -
ವರಮಹಾಲಕ್ಷ್ಮೀ ವ್ರತದ ಶಾಸ್ತ್ರೋಕ್ತ ವಿಧಾನ ಮತ್ತು ಪೂಜಾ ನಿಯಮಗಳು -
ವರಮಹಾಲಕ್ಷ್ಮೀ ಹಬ್ಬದ ಸಂಭ್ರಮಕ್ಕೆ ಬೆಲೆ ಏರಿಕೆಯ ಬಿಸಿ: ಕೆ.ಆರ್. ಮಾರುಕಟ್ಟೆಯಲ್ಲಿ ಗಗನಕ್ಕೇರಿದ ಹೂವು-ಹಣ್ಣುಗಳ ದರ -
BWF ವಿಶ್ವ ಚಾಂಪಿಯನ್ಷಿಪ್: ದೆಹಲಿಯಲ್ಲಿ ಭಾರತೀಯ ಆಟಗಾರರ ಅಬ್ಬರ, ಅಭಿಮಾನಿಗಳಿಗೆ ಇಲ್ಲಿದೆ ವಿಶೇಷ ಗೇಮ್ ಪ್ಲಾನ್! -
ವರಮಹಾಲಕ್ಷ್ಮಿ ಹಬ್ಬದ ದಿನಾಂಕದ ಗೊಂದಲ: ಆಗಸ್ಟ್ 21 ಅಥವಾ 28? ಇಲ್ಲಿದೆ ಸ್ಪಷ್ಟ ಮಾಹಿತಿ! -
ವಿಶ್ವ ಸೊಳ್ಳೆ ದಿನ: ಮಳೆಗಾಲದಲ್ಲಿ ಬಾಲ್ಕನಿಯಲ್ಲಿ ಯೋಗ ಮಾಡುವಾಗ ಸೊಳ್ಳೆ ಕಡಿತದಿಂದ ಪಾರಾಗುವುದು ಹೇಗೆ? -
BWF ವರ್ಲ್ಡ್ಸ್ ದೆಹಲಿ: ಕ್ಯೂನಲ್ಲಿ ನಿಂತು ಸುಸ್ತಾಗಿದ್ದೀರಾ? ಈ 8 ನಿಮಿಷದ ವ್ಯಾಯಾಮ ನಿಮ್ಮ ನೋವನ್ನು ಮರೆಸುತ್ತೆ!
ಇಂದು ದೇವ್ ದೀಪಾವಳಿ: ಏನಿದರ ಮಹತ್ವ?
ಪ್ರತಿವರ್ಷ ಕಾರ್ತಿಕ ಪೂರ್ಣಿಮೆಯಂದು ದೇವ್ ದೀಪಾವಳಿಯನ್ನು ಆಚರಿಸಲಾಗುವುದು. ದೇವ್ ದೀಪಾವಳಿಯನ್ನು ವಾರಾಣಸಿಯಲ್ಲಿ ಆಚರಿಸಲಾಗುವುದು. ಶಿವನು ಈ ದಿನ ಅಸುರ ತ್ರಿಪುರಾಸುರನನ್ನು ವಧಿಸಿದನು ಎಂದು ಹೇಳಲಾಗುವುದು. ಆದ್ದರಿಂದ ಈ ದಿನವನ್ನು ತ್ರಿಪುರಾರಿ ಪೂರ್ಣಿಮಾ ಎಂದು ಕರೆಯಲಾಗುವುದು.

ಈ ದಿನ ಶಿವ ಭಕ್ತರು ಪವಿತ್ರ ಗಂಗೆಯಲ್ಲಿ ಮಿಂದು ಪೂಜೆಯನ್ನು ಸಲ್ಲಿಸುತ್ತಾರೆ. ಈ ದಿನ ಗಂಗೆಯ ತೀರದಲ್ಲಿ ದೀಪಗಳನ್ನು ಹಚ್ಚಲಾಗುವುದು. ಈ ದಿನ ಮನೆಗಳಿಗೂ ಲೈಟಿಂಗ್ಸ್ ಹಾಕಿ ಅಲಂಕರಿಸಲಾಗುವುದು.
ಸಂಜೆ ಹೊತ್ತಿಗೆ ಗಂಗೆಗೆ ಆರತಿಯನ್ನು ಮಾಡಲಾಗುವುದು.
ದೇವ್ ದೀಪಾವಳಿ ದಿನಾಂಕ ಮತ್ತು ಸಮಯ
ದೇವ್ ದೀಪಾವಳಿ ದಿನಾಂಕ: ನವೆಂಬರ್ 26
ದೇವ್ ದೀಪಾವಳಿ ಆಚರಣೆಯ ಮಹತ್ವ
ಅಸುರ ತ್ರಿಪುರಾನನ್ನು ಶಿವನು ಸೋಲಿಸಿದ ದಿನವನ್ನು ದೇವ್ ದೀಪಾವಳಿ ಎಮದು ಆಚರಿಸಲಾಗುವುದು. ಈ ದಿನ ನೂರಾರು ಮಣ್ಣಿನ ಹಣತೆಗಳನ್ನು ಗಂಗಾ ನದಿಯಲ್ಲಿ ತೇಲಿ ಬಿಡಲಾಗುವುದು. ಈ ಆಚರಣೆ 1985ರಿಂದ ಪ್ರಾರಂಭವಾಗಿದೆ. ರಾತ್ರಿ ಪೂರ್ತಿ ಶಿವನ ಕೀರ್ತನೆಗಳನ್ನು ಹಾಡುತ್ತಾ ವಾರಾಣಸಿ ಬೀದಿಗಳಲ್ಲಿ ಮೆರವಣಿಗೆ ಕೂಡ ಇಡುತ್ತದೆ.
ಈ ದಿನ 21 ಬ್ರಾಹ್ಮಣರು ಹಾಗೂ 24 ಮಹಿಳೆಯರು ಗಂಗೆಗೆ ಆರತಿ ಎತ್ತುತ್ತಾರೆ. ಗಂಗೆಗೆ ನೂರಾರು ಮಣ್ಣಿನ ಹಣತೆಗಳನ್ನು ತೇಲಿ ಬಿಡಲಾಗುವುದು, ಇದನ್ನು ಅಲ್ಲಿ ನೆರೆದ ಪ್ರವಾಸಿಗರು ಕಣ್ತುಂಬಿಕೊಳ್ಳುತ್ತಾರೆ. ಈ ಇನ ಗುರುನಾನಕ್ ಜಯಂತಿಯನ್ನು ಕೂಡ ಆಚರಿಸಲಾಗುವುದು.



Click it and Unblock the Notifications