Latest Updates
-
ಸಿಲಿಂಡರ್ 3 ತಿಂಗಳು ಬರಬೇಕೆ? ಇನ್ಮುಂದೆ ಗ್ಯಾಸ್ ಚಿಂತೆ ಬೇಡ.. LPG ಉಳಿಸಲು ಇಲ್ಲಿದೆ 5 ಸ್ಮಾರ್ಟ್ ಟಿಪ್ಸ್ -
ಅಕ್ಕಿ ಬೇಡ, ಉದ್ದಿನಬೇಳೆ ಬೇಡ.. 15 ನಿಮಿಷದ ಹೆಸರು ಬೇಳೆ-ತರಕಾರಿ ಇಡ್ಲಿ! ಉಳಿದ ಇಡ್ಲಿ ಫ್ರೆಶ್ ಆಗಿಡೋದು ಹೇಗೆ? -
ಗ್ಯಾಸ್ ಇಲ್ವಾ? ಚಿಂತೆ ಬೇಡ.. ಒಲೆ ಹಚ್ಚದೇ ಮಾಡುವ 5 ಆರೋಗ್ಯಕರ ಊಟಗಳಿವು! -
ಮಿಕ್ಸಿಯಲ್ಲೇ ಮಾಡಿ ಕಬ್ಬಿನ ಹಾಲು! ಕಬ್ಬು ಇಲ್ಲದೆಯೇ ಶುದ್ಧವಾದ ಹಾಲು ಮಾಡೋದು ಹೇಗೆ? ರಸ್ತೆ ಬದಿಗಿಂತ ರುಚಿ -
ಮಘಾ ನಕ್ಷತ್ರಕ್ಕೆ ಕೇತು.. ಈ ಎಲ್ಲಾ ರಾಶಿಯವರ ಜೀವನದಲ್ಲಿ ಭಾರಿ ಬದಲಾವಣೆ! ಯಾರಿಗೆ ಶುಭ? ಯಾರಿಗೆ ಸಮಸ್ಯೆ? -
10 ನಿಮಿಷಗಳ ಅಪ್ಪೆ.. ಹೆಸರುಕಾಳು ಮತ್ತು ಬಟಾಣಿ ಬಳಸಿ ಮಾಡುವ ರೆಸಿಪಿ! ಮೃದುವಾಗಿ ಮಾಡೋದು ಹೇಗೆ ಗೊತ್ತಾ? -
ವಿವಾಹಿತ ದಂಪತಿಗಳಿಗೂ ಈ ದಿನ ಸಂತೋಷದಾಯಕ! ಸಂಗಾತಿ ಮೇಲೆ ಡೌಟ್ ಬೇಡ -
March 13 Horoscope: ಶುಭ ಕಾರ್ಯ ಸಂಬಂಧಿತ ಚರ್ಚೆಗಳಿವೆ -
ಬೇಸಿಗೆಯಲ್ಲಿ ಈ ಗಂಜಿ ಕುಡಿಯಿರಿ.. ಕೊಬ್ಬು ಕಡಿಮೆ, ದೇಹಕ್ಕೂ ತಂಪು! ಈ ಗಂಜಿಯ ಆರೋಗ್ಯ ರಹಸ್ಯ ಇಲ್ಲಿದೆ -
30 ವರ್ಷಗಳ ಬಳಿಕ ಸೂರ್ಯ-ಶನಿ ಸಂಯೋಗ! ಯಾರಿಗೆ ಶುಭ? ಯಾರಿಗೆ ಸಮಸ್ಯೆ? 12 ರಾಶಿಗಳ ಜಾತಕ ತಿಳಿಯಿರಿ
ಶೂನ್ಯ ಮಾಸವಾದ ಧನುರ್ಮಾಸ ಶುಭ ಕಾರ್ಯಕ್ಕೆ ಶ್ರೇಷ್ಠವಲ್ಲ, ಪೂಜೆಗೆ ಶ್ರೇಷ್ಠ ಏಕೆ?
ಹಿಂದೂ ಪಂಚಾಂಗದ ಪ್ರಕಾರ ಇದೀಗ ಮಾರ್ಗಶಿರ ಮಾಸ. ಇದನ್ನು, ಸೌರಮಾನದ ಪ್ರಕಾರ ಧನುರ್ಮಾಸ (ಧನುರ್ ಮಾಸ) ಎಂದು ಕೂಡ ಕರೆಯಲಾಗುವುದು . ಮರಗಟ್ಟುವ ಕೊರೆಯುವ ಚಳಿಯಲ್ಲಿ ಸೂರ್ಯೋದಯಕ್ಕೆ ಮುನ್ನ ಸ್ನಾನ ಮಾಡಿ ಪೂಜೆಯನ್ನು ಮಾಡುತ್ತಾ ಈ ಮಾಸದ ಆಚರಣೆ ಮಾಡಲಾಗುವುದು. 9ನೇ ಮಾಸವಾದ ಇದನ್ನು ಶೂನ್ಯ ಮಾಸವೆಂದು ಕೆಲವರು ಹೇಳಿದರೆ ಇನ್ನು ಇದನ್ನು ಶ್ರೇಷ್ಠ ಮಾಸವೆಂದು ಮತ್ತೆ ಕೆಲವರು ಹೇಳುತ್ತಾರೆ. ಆದ್ದರಿಂದ ಈ ಮಾಸದ ಕುರಿತು ಹಲವರಿಗೆ ಗೊಂದಲಗಳಿವೆ.

ನಾವಿಲ್ಲಿ ಧನುರ್ಮಾಸವನ್ನು ಏಕೆ ಶೂನ್ಯ ಮಾಸವೆಂದು ಹೇಳಲಾಗುವುದು, ಯಾವ ಕಾರ್ಯಕ್ಕೆ ಈ ಮಾಸ ಶ್ರೇಷ್ಠ ಎಂಬುವುದರ ಬಗ್ಗೆ ಹೇಳಲಾಗಿದೆ ನೋಡಿ.

ಧನುರ್ಮಾಸದಲ್ಲಿ ವಿಷ್ಣುವಿನ ಆರಾಧನೆ
ಸೂರ್ಯ ಧನು ರಾಶಿಗೆ ಪ್ರವೇಶಿಸುವ ದಿನದಿಂದ ಧನುರ್ಮಾಸ ಪ್ರಾರಂಭವಾಗುತ್ತದೆ. ಈ ತಿಂಗಳು ಡಿಸೆಂಬರ್ 15ಕ್ಕೆ ಸೂರ್ಯನು ಧನು ರಾಶಿಗೆ ಸಂಚರಿಸುತ್ತಿದ್ದಾನೆ. ವೇದ, ಪುರಾಣಗಳಲ್ಲಿ ಈ ಮಾಸವನ್ನು ದೈವೀ ಕಾರ್ಯಗಳಿಗೆ ಶ್ರೇಷ್ಠ ಎಂದು ಹೇಳಲಾಗಿದೆ. ಈ ಮಾಸದಲ್ಲಿ ದೇವಾಲಯಗಳಲ್ಲಿ ಪೂಜೆಗಷ್ಟೇ ಮೀಸಲಿರಿಸಲಾಗಿದೆ. ಈ ಮಾಸದಲ್ಲಿ ವಿಷ್ಣುವಿನ ಆರಾಧನೆ ಮಾಡಲಾಗುವುದು. ಕೃಷ್ಣನಿಗೂ ಇದು ಪ್ರಿಯವಾದ ಮಾಸವಾಗಿದೆ.

ಧನುರ್ಮಾಸದಲ್ಲಿ ಮಾಡುವ ಪೂಜೆಗಳಿಗೆ ಸಿಗುವುದು ವಿಶೇಷ ಫಲ
ಹಿಂದೂ ಪಂಚಾಗದಲ್ಲಿ ಕಾಲವನ್ನು ಉತ್ತರಾಯಣ ಪ್ಯುಣ್ಯಕಾಲ ಮತ್ತು ದಕ್ಷಿಣಾಯನ ಪುಣ್ಯಕಾಲ ಎಂದು ವಿಭಾಗಿಸಲಾಗಿದೆ. ನಮ್ಮ ಕಾಲ ಗಣನೆಗೂ ದೇವತೆಗಳ ಕಾಲಗಣನೆಗೂ ವ್ಯತ್ಯಾಸವಿದೆ. ದೇವತೆಗಳ ಒಂದು ದಿನ ನಮಗೆ ಒಂದು ವರ್ಷದ ಅವಧಿಗೆ ಎಂದು ಹೇಳಲಾಗುವುದು. ಮಾರ್ಗಶಿರ ಮಾಸ/ ಧನುರ್ ಮಾಸದ ಅವಧಿಯು ದೇವತೆಗಳಿಗೆ ಶ್ರೇಷ್ಠ ಮುಹೂರ್ತ ಇರುವ ಸಮಯ. ನಮ್ಮ ಈ ಒಂದು ಮಾಸದ ಅವಧಿ ದೇವತೆಗಳಿಗೆ ಪೂರ್ತಿ ಬ್ರಹ್ಮ ಮುಹೂರ್ತವಿದ್ದಂತೆ. ಈ ಕಾರಣದಿಂದ ದೇವತೆಗಳಿಗೆ ಶ್ರೇಷ್ಠವಾದ ಸಮಯದಲ್ಲಿ ನಾವು ದೈವಾರಾಧನೆ ಮಾಡಿದರೆ ಅದಕ್ಕೆ ವಿಶೇಷ ಫಲ ಸಿಗಲಿದೆ.

ಶುಭ ಕಾರ್ಯಕ್ಕೆ ಶ್ರೇಷ್ಠವಲ್ಲ ಏಕೆ?
ನಾಮಕರಣ, ವಿವಾಹ ಮೊದಲಾದ ಶುಭ ಮುಹೂರ್ತಗಳಿಗೆ ಈ ಮಾಸ ಶ್ರೇಷ್ಠವಲ್ಲ, ಈ ಮಾಸವನ್ನು ದೇವಾಲಯದಲ್ಲಿ ಪೂಜೆಗಷ್ಏ ಮೀಸಲಿರಿಸಲಾಗಿದೆ, ಆದ್ದರಿಂದ ಧನುರ್ ಮಾಸದಲ್ಲಿ ಮದುವೆ ಮುಂತಾದ ಶುಭ ಕಾರ್ಯ ಮಾಡಲಾಗುವುದಿಲ್ಲ, ಆದ್ದರಿಂದ ಇದನ್ನು ಶೂನ್ಯ ಮಾಸವೆಂದು ಕರೆಯಲಾಗುವುದು. ಈ ಮಾಸದಲ್ಲಿ ಬೆಳಗ್ಗೆ ತಣ್ಣೀರು ಸ್ನಾನ ಮಾಡಿ, ಇಷ್ಟ ದೇವರನ್ನು ಪ್ರಾರ್ಥಿಸುವುದರಿಂದ ಒಳ್ಳೆಯ ಫಲ ಸಿಗುವುದು.

ಸಂತಾನ ಭಾಗ್ಯಕ್ಕಾಗಿ ಸುಬ್ರಹ್ಮಣ್ಯನಿಗೆ ಪೂಜೆ
ಈ ಮಾಸದಲ್ಲಿ ಅಮಾವಾಸ್ಯೆಯ 6 ದಿನಗಳ ನಂತರ ಚಂಪ ಷಷ್ಟಿಯನ್ನು ಆಚರಿಸಲಾಗುತ್ತದೆ. ಸಂತಾನವಿಲ್ಲದವರು ಈ ಷಷ್ಠಿಯ ದಿನದಂದು ಸುಬ್ರಹ್ಮಣ್ಯನಿಗೆ ಪೂಜೆ ಸಲ್ಲಿಸಿದರೆ ಸಂತಾನ ಪಡೆಯುತ್ತಾರೆ ಎಂಬ ನಂಬಿಕೆಯೂ ಇದೆ...... ಚಂಪ ಷಷ್ಠಿ ಡಿಸೆಂಬರ್ 20ರಂದು ನಡೆಯಲಿದೆ.



Click it and Unblock the Notifications











