Latest Updates
-
ಬಿಸಿಲ ಧಗೆಯಿಂದ ಸುಸ್ತಾಗಿದ್ದೀರಾ? ದೇಹವನ್ನು ತಂಪಾಗಿಡಲು ಈ ಪಾನೀಯಗಳೇ ಮದ್ದು! -
ಅಮ್ಮನಿಗೆ ಕೊನೆಯ ನಿಮಿಷದಲ್ಲಿ ಗಿಫ್ಟ್ ಕೊಡಬೇಕಾ? ಈ ಟ್ರಿಕ್ಸ್ ಫಾಲೋ ಮಾಡಿ, ಅಮ್ಮನ ಮುಖದಲ್ಲಿ ನಗು ಮೂಡಿಸಿ! -
ಬಿಸಿಗಾಳಿಯ ಎಚ್ಚರಿಕೆ: ಮಧ್ಯಾಹ್ನ ವರ್ಕೌಟ್ ಮಾಡ್ತಿದ್ದೀರಾ? ಈ ತಪ್ಪು ನಿಮ್ಮ ಆರೋಗ್ಯಕ್ಕೆ ಕುತ್ತು ತರಬಹುದು! -
ಬಿಸಿಗಾಳಿಯ ನಡುವೆ ಮದುವೆ ಸಂಭ್ರಮ: ಅತಿಥಿಗಳ ಸುರಕ್ಷತೆಗಾಗಿ ನೀವು ಮಾಡಲೇಬೇಕಾದ ಬದಲಾವಣೆಗಳಿವು! -
ಬಿಸಿಗಾಳಿಯ ಅಬ್ಬರ ಶುರು: ನಿಮ್ಮ ಮನೆ ತಂಪಾಗಿರಲು ಮತ್ತು ಗಿಡಗಳನ್ನು ಉಳಿಸಲು ಈ ಸೀಕ್ರೆಟ್ ಟಿಪ್ಸ್ ಮಿಸ್ ಮಾಡ್ಬೇಡಿ! -
ಸುಡುವ ಬಿಸಿಲಿಗೆ ಸುಸ್ತಾಗಿದ್ದೀರಾ? ದೇಹವನ್ನು ತಂಪಾಗಿಡಲು ಈ ಆಹಾರ ಕ್ರಮ ಪಾಲಿಸಿ! -
ಮದರ್ಸ್ ಡೇ 2026: ಅಮ್ಮನಿಗೆ ಸರ್ಪ್ರೈಸ್ ನೀಡಲು ಈ ವೈರಲ್ ಟ್ರೆಂಡ್ಸ್ ಫಾಲೋ ಮಾಡಿ, ಮಿಸ್ ಮಾಡ್ಬೇಡಿ! -
ಅಮ್ಮನಿಗೆ ಈ ಬಾರಿ ವಿಶೇಷ ಉಡುಗೊರೆ: ತಾಯಂದಿರ ದಿನದಂದು 20 ನಿಮಿಷದ ಯೋಗದ ಮ್ಯಾಜಿಕ್! -
ದೆಹಲಿ ಮಳೆಯಲ್ಲಿ ಮದುವೆ ಸಂಭ್ರಮಕ್ಕೆ ಅಡ್ಡಿಯೇ? ಈ ಸಣ್ಣ ಬದಲಾವಣೆಗಳು ನಿಮ್ಮ ಮದುವೆಯನ್ನು ಉಳಿಸುತ್ತವೆ! -
ಬಿರುಗಾಳಿ ಅಬ್ಬರಕ್ಕೆ ಬಾಲ್ಕನಿ ಗಾರ್ಡನ್ ಹಾಳಾಗುತ್ತಾ? ನಿಮ್ಮ ಮನೆ ಮತ್ತು ಗಿಡಗಳನ್ನು ರಕ್ಷಿಸಲು ಈ ಟಿಪ್ಸ್ ಮಿಸ್ ಮಾಡ್ಬೇಡಿ!
ದುರ್ಗಾ ಪೂಜೆ ಆಚರಣೆ; ಹಿನ್ನಲೆ, ಐತಿಹ್ಯವೇನು?
ದುರ್ಗಾ ಪೂಜೆ ಅಥವ ನವರಾತ್ರಿ ಹಬ್ಬದ ಅಸಮಾನ್ಯ ಆಚರಣೆಯಾಗಿದೆ. ಈ ಹಬ್ಬವನ್ನು ನಾವು ಪ್ರತಿ ವರ್ಷವೂ ಆಚರಿಸುತ್ತೇವೆ. ಅನೇಕ ತಲೆಮಾರುಗಳಿಂದ ನಮ್ಮ ಪೂರ್ವಿಕರು ನಮಗೆ ಮೊದಲೇ ಈ ಹಬ್ಬವು ಆಚರಿಸಿಕೊಂಡು ಬಂದಿದ್ದಾರೆ. ನಮ್ಮ ಸಂಸ್ಕೃತಿಯ ಇತರ ಎಲ್ಲಾ ಪದ್ಧತಿಗಳಂತೆ ಹಬ್ಬಗಳು ಏನಾದರೊಂದು ವಿಷಯಕ್ಕೆ ಸಂಬಂಧ ಹೊಂದಿರುತ್ತವೆ. ಹಾಗೆ ವಿನಾ ಕಾರಣದಿಂದ ಏನೂ ಆಚರಿಸುವುದಿಲ್ಲ. ಆದ್ದರಿಂದ ದುರ್ಗಾಪೂಜೆಯ ಮೂಲ ಕಾರಣಗಳೇನು?
ನಮ್ಮ ಇತಿಹಾಸದಲ್ಲಿ ಪೂಜೆಯನ್ನು ಆಚರಿಸಲು ಯಾರು ಮೊದಲು ಪ್ರಾರಂಭಿಸಿದರು? ನಮ್ಮಲ್ಲಿ ಯಾವ ಲಿಖಿತ ಪುರಾವೆಗಳಿಲ್ಲವಾದರೂ ಶ್ರೀ ರಾಮನು ಮೊದಲು ದುರ್ಗಾಪೂಜೆಯನ್ನು ಆರಂಭಿಸಿದನೆಂದು ಮೌಖಿಕ ಸಂಪ್ರದಾಯದಿಂದ ಕಂಡುಬರುತ್ತದೆ.

ನವರಾತ್ರಿ ಹಬ್ಬವನ್ನು ವರ್ಷದಲ್ಲಿ ಎರಡು ಬಾರಿ ಆಚರಿಸುತ್ತಾರೆಂದು ಬಹಳಷ್ಟು ಜನರಿಗೆ ತಿಳಿದಿದೆ. ಮಾರ್ಚ್ ಮತ್ತು ಏಪ್ರಿಲ್ ನಡುವೆ ಬರುವ ನವರಾತ್ರಿ ಮುಖ್ಯವಾದ ಹಬ್ಬ. ಹೀಗೆ ಚೈತ್ರಮಾಸದಲ್ಲಿ ಆಚರಿಸುವ ನವರಾತ್ರಿ ಹಬ್ಬವು ಸೆಪ್ಟೆಂಬರ್ ಮತ್ತು ಅಕ್ಟೋಬರ್ ನಡುವೆ ಆಚರಿಸುವ ಹಬ್ಬಕ್ಕಿಂತ ಮೊದಲಾಗಿದೆ. ಶ್ರೀರಾಮನು ರಾಕ್ಷಸ ರಾಜ ರಾವಣನೊಡನೆ ಯುದ್ಧಮಾಡಲು ಹೊರಡುವ ಮೊದಲು ಹೆಚ್ಚು ಜನಪ್ರಿಯತೆಗಳಿಸಿರುವ ದುರ್ಗಾ ಪೂಜೆಯನ್ನು ಪ್ರಾರಂಭಿಸಿದನು. ದುರ್ಗಾ ಮಾತೆಯ ಅವತಾರದ ಹಿಂದಿರುವ ಕುತೂಹಲಕಾರಿ ಕಥೆ
ಶ್ರೀರಾಮನು ಲಂಕೆಯ ಮೇಲೆ ಯುದ್ಧ ಮಾಡಲು ಹೊರಡುವ ಮುನ್ನ ದೇವಿಯ ಆಶೀರ್ವಾದ ಪಡೆಯಲು ಇಚ್ಛಿಸಿದನು. ಅದಕ್ಕಾಗಿ ಅವನು ಆರು ತಿಂಗಳು ಕಾಯುವುದಕ್ಕೆ ಇಷ್ಟಪಡಲಿಲ್ಲ. ಆದ್ದರಿಂದ ಅವನು ತಪ್ಪಾದ ಮಾಸದಲ್ಲಿ ದುರ್ಗಾ ದೇವಿಯ ಪೂಜೆಯನ್ನು ಕೈಕೊಂಡನು. ಆದ್ದರಿಂದಲೇ ಅವನು ದುರ್ಗಾಪೂಜೆಯನ್ನು ಮಾಡಿದ ಮಾಸವನ್ನು 'ಅಕಾಲ್ ಬೋಧಾನ್' ಅಥವಾ ತಪ್ಪು ಮಾಸದಲ್ಲಿ ಮಾಡಿದ ಪೂಜೆ ಎಂದು ಉಲ್ಲೇಖಿಸಲಾಗಿದೆ. ಅವನು ಪೂಜೆಯನ್ನು ಆಚರಿಸಲು ದುರ್ಗಾದೇವಿಗೆ 108 ಕಮಲ ಹೂವುಗಳನ್ನು ಅರ್ಪಿಸಿ 108 ದೀಪಗಳನ್ನು ಹಚ್ಚಿದನು.
ಶ್ರೀರಾಮನು ಪೂಜೆಮಾಡುವ ಸಮಯದಲ್ಲಿ ರಾಕ್ಷಸನೊಬ್ಬನು ಒಂದು ಕಮಲವನ್ನು ಕದ್ದುಬಿಟ್ಟನು. ಆದ್ದರಿಂದ ಪೂಜೆಯನ್ನು ಸಂಪೂರ್ಣಗೊಳಿಸಲು ಶ್ರೀರಾಮನು ಕಮಲದ ಬದಲಿಗೆ ತನ್ನ ಎರಡು ಕಣ್ಣುಗಳಲ್ಲಿ ಒಂದು ಕಣ್ಣನ್ನು ಅರ್ಪಿಸಲು ಸಿದ್ಧನಾದನು. ಆದರೆ ಅವನು ಹಾಗೆ ಮಾಡುವ ಮೊದಲೇ ದೇವಿಯು ಶ್ರೀರಾಮನ ಮುಂದೆ ಪ್ರತ್ಯಕ್ಷ್ಯಳಾಗಿ ಅವನು ಯುದ್ಧದಲ್ಲಿ ವಿಜಯಶಾಲಿಯಾಗಲೆಂದು ಹರಸಿದಳು. ದುರ್ಗಾ ಪೂಜೆಯ ಮಹತ್ವವನ್ನು ಸಾರುವ 9 ಆಚರಣೆಗಳು
ನವರಾತ್ರಿಯ ಹತ್ತನೇ ದಿವಸ ಶ್ರೀರಾಮನು ರಾವಣನನ್ನು ಸಂಹರಿಸಿದನು. ಈಗಲೂ ಕೂಡ ದಸರಾ ಹಬ್ಬದ ಹತ್ತನೆಯ ದಿವಸ ಶ್ರೀರಾಮನ ಐತಿಹಾಸಿಕ ವಿಜಯವನ್ನು ಆಚರಿಸಲು ರಾವಣನ ವಿಗ್ರಹವನ್ನು ಸೃಷ್ಟಿಸಿ ಸುಡುತ್ತಾರೆ. ಆದ್ದರಿಂದ ಪೌರಾಣಿಕ ದೃಷ್ಟಿಯಿಂದ ದುರ್ಗಾ ಪೂಜೆಯ ಮೂಲವು ಲಂಕೆಯಮೇಲೆ ಮಾಡಿದ ಮಹಾ ಯುದ್ಧದಲ್ಲಿ ಅಡಗಿದೆ.



Click it and Unblock the Notifications