Latest Updates
-
ವಿಶ್ವ ಆತ್ಮಹತ್ಯೆ ತಡೆ ದಿನ: ಮಾನಸಿಕ ಆರೋಗ್ಯ ಸುಧಾರಿಸಲು 10 ನಿಮಿಷದ ಸಿಂಪಲ್ ಮಾರ್ನಿಂಗ್ ರೂಟೀನ್ ಮತ್ತು ಹೆಲ್ಪ್ಲೈನ್ ವಿವರಗಳು -
ವಿಚ್ಛೇದನದ ನಂತರವೂ ಜೀವನಾಂಶ ಪಡೆಯಬಹುದೇ? ಮಧ್ಯಪ್ರದೇಶ ಹೈಕೋರ್ಟ್ನಿಂದ ಮಹತ್ವದ ತೀರ್ಪು! -
ದೆಹಲಿ ವಾಯು ಮಾಲಿನ್ಯ: ಮನೆಯಲ್ಲಿ ಶುದ್ಧ ಗಾಳಿ ಪಡೆಯಲು ಈ ಸರಳ ಟಿಪ್ಸ್ ಪಾಲಿಸಿ -
ಪ್ಯಾಕ್ ಮಾಡಿದ ಆಹಾರದ ಮೇಲೆ 'ರೆಡ್ ಹೆಕ್ಸಗನ್' ಎಚ್ಚರಿಕೆ: ಇನ್ಮುಂದೆ ತಿನ್ನುವ ಮುನ್ನ ಈ ವಿಷಯ ಗಮನಿಸಿ! -
ಆಪಲ್ 'ಸರ್ಪ್ರೈಸ್ ಆಂಡ್ ಶೈನ್' ಈವೆಂಟ್: ಐಫೋನ್ 18 ಪ್ರೋ ಮತ್ತು ಫೋಲ್ಡಬಲ್ ಆಲ್ಟ್ರಾ ಲಾಂಚ್, ಭಾರತದಲ್ಲಿ ಬೆಲೆ ಎಷ್ಟು? -
ಟಾಟಾ ಮುಂಬೈ ಮ್ಯಾರಥಾನ್ ಡ್ರೀಮ್ ರನ್: ಇಂದೇ ನೋಂದಣಿ ಮುಕ್ತಾಯ, ಓಟಕ್ಕೆ ಸಜ್ಜಾಗಲು 20 ನಿಮಿಷದ ಪ್ಲಾನ್ ಇಲ್ಲಿದೆ! -
ಲೈವ್-ಇನ್ ಸಂಬಂಧಕ್ಕೂ ಅನ್ವಯವಾಗುತ್ತೆ 498A: ಕಲ್ಕತ್ತಾ ಹೈಕೋರ್ಟ್ ಮಹತ್ವದ ತೀರ್ಪು ಮತ್ತು ನೀವು ತಿಳಿಯಲೇಬೇಕಾದ ಸುರಕ್ಷತಾ ಕ್ರಮಗಳು -
ಬೆಂಗಳೂರಿನ ಬಿಸಿಲಿಗೆ ಹೈರಾಣಾಗಿದ್ದೀರಾ? ಎಸಿ ಇಲ್ಲದೆ ಮನೆ ತಂಪು ಮಾಡೋದು ಹೇಗೆ? ಇಲ್ಲಿದೆ ಸಿಂಪಲ್ ಟಿಪ್ಸ್ -
ವೆಜ್ ಥಾಲಿ ಬೆಲೆ ಗಗನಕ್ಕೆ: ಕಡಿಮೆ ಖರ್ಚಿನಲ್ಲಿ ಪೌಷ್ಟಿಕ ಊಟ ತಯಾರಿಸುವ ಸರಳ ಟಿಪ್ಸ್ -
ಶಿವಾಜಿನಗರ ಸೇಂಟ್ ಮೇರಿಸ್ ಬಾಸಿಲಿಕಾ ಜಾತ್ರೆ: ಇಂದಿನ ಸಂಚಾರ ಮಾರ್ಗ ಬದಲಾವಣೆ ಮತ್ತು ಪಾರ್ಕಿಂಗ್ ಬಗ್ಗೆ ನೀವು ತಿಳಿಯಲೇಬೇಕಾದ ವಿಷಯಗಳು!
ಅಶ್ವತ್ಥ ಮರದಲ್ಲಿ ಹಲವು ದೇವತೆಗಳ ವಾಸ... ತಪ್ಪದೇ ಪೂಜಿಸಿ
ನಮ್ಮ ಹಿಂದೂ ಸಂಸ್ಕೃತಿಯ ಆಚಾರ-ವಿಚಾರಗಳಿಗೆ ತನ್ನದೇ ಆದ ಶ್ರೇಷ್ಠತೆ ಹಾಗೂ ಹಿನ್ನೆಲೆಗಳಿವೆ. ಅಲ್ಲದೆ ಕೆಲವು ಗಿಡ ಮರಗಳಿಗೆ ಆಧ್ಯಾತ್ಮಿ ಶಕ್ತಿ ಇರುವುದನ್ನು ಸಹ ನಾವು ಕಾಣಬಹುದು. ಅಂತಹವುಗಳಲ್ಲಿ ಅಶ್ವತ್ಥ ಮರವೂ ಒಂದು. ಈ ಮರದಲ್ಲಿ ದೇವತೆಗಳು ವಾಸಿಸುತ್ತಾರೆ. ಹಾಗಾಗಿ ಎಲ್ಲಾ ಸಮಯದಲ್ಲೂ ಈ ಮರದ ಬಳಿ ಇರಬಾರದು ಎನ್ನುವ ಪ್ರತೀತಿ ಇದೆ. ಈ ನಂಬಿಕೆಗೆ ಸಾಕ್ಷಿಯಾಗಿ ಒಂದು ಕಥೆ ಇರುವುದನ್ನು ನಾವು ನೋಡಬಹುದು.
ಬ್ರಹ್ಮ ಪುರಾಣದ ಪ್ರಕಾರ, ದುಷ್ಟ ಶಕ್ತಿಗಳು ಆಗಾಗ ದೇವತೆಗಳ ವಿರುದ್ಧ ದಂಗೆ ಏಳುತ್ತಿದ್ದವು. ದುಷ್ಟ ಶಕ್ತಿಗಳಿಗೆ ಸರಿಯಾಗಿ ಪಾಠ ಕಲಿಸಬೇಕು ಎನ್ನುವ ಉದ್ದೇಶದಿಂದ, ಭಗವಂತನಾದ ವಿಷ್ಣುವು ಎಲ್ಲಾ ದೇವತೆಗಳಿಗೆ ಅಶ್ವತ್ಥ ಮರದ ಹಿಂದೆ ಅಡಗಿ ಕೊಳ್ಳಲು ಹೇಳಿದನು. ವಿಷ್ಣುವಿನ ಮಾತಿನಂತೆ ಎಲ್ಲಾ ದೇವತೆಗಳು ಮರದ ಒಂದೊಂದು ಭಾಗದಲ್ಲಿ ಒಬ್ಬೊಬ್ಬರಂತೆ ಅವಿತು ಕುಳಿತರು.
ಆದರೆ ಲಕ್ಷ್ಮಿ ಮಾತ್ರ ಮರದ ಬುಡದಲ್ಲಿ ಕುಳಿತಳು. ಹಾಗಾಗಿಯೇ ಈ ಮರದ ಆರಾಧನೆಯು ಹೆಚ್ಚು ಮಹತ್ವ ಪಡೆದುಕೊಂಡಿದೆ ಎನ್ನಲಾಗುತ್ತದೆ. ಶಾಸ್ತ್ರವು ಅಶ್ವತ್ಥ ಮರದ ಬಳಿ ಹೋಗುವುದು ಮತ್ತು ಅದರ ಪೂಜೆ ಮಾಡುವುದಕ್ಕೆ ನಿಗದಿತ ಸಮಯವನ್ನು ಹೇಳುತ್ತದೆ. ಹಾಗಾದರೆ ಅದು ಯಾವ ಸಮಯ ಎನ್ನುವ ವಿಚಾರ ಇಲ್ಲಿದೆ....

ಪದ್ಮ ಪುರಾಣ
ಪದ್ಮ ಪುರಾಣದ ಪ್ರಕಾರ ಸೂರ್ಯೋದಯಕ್ಕಿಂತ ಮುಂಚೆ ಅಶ್ವತ್ಥ ಮರದ ಬಳಿ ಹೋಗಬಾರದು. ಹಾಗೊಮ್ಮೆ ಹೋದರೆ ಜೀವನದಲ್ಲಿ ಬಡತನ ಎದುರಾಗುವುದು. ಈ ಮರದ ಪೂಜೆಗೆ ಸೂಕ್ತ ಕಾಲವೆಂದರೆ ಸೂರ್ಯೋದಯದ ನಂತರದ ಕಾಲ. ಈ ಸಮಯದಲ್ಲಿ ಲಕ್ಷ್ಮಿ ದೇವಿಯು ಇಲ್ಲಿಯೇ ನೆಲೆಸುತ್ತಾಳೆ. ಆ ವೇಳೆ ಪೂಜಿಸಿದವರಿಗೆ ಒಳ್ಳೆಯದಾಗುತ್ತದೆ ಎನ್ನಲಾಗುತ್ತದೆ.

ಶ್ರೀಕೃಷ್ಣನ ಸ್ಥಾನ
ಋಷಿ ಮುನಿಗಳ ನಡುವೆ ನಾರದ ಮಹರ್ಷಿಗಳು ಇರುವಂತೆ, ಶ್ರೀಕೃಷ್ಣನು ಅಶ್ವತ್ಥಮರದಲ್ಲಿ ನೆಲೆಸಿದ್ದಾನೆ. ಹಾಗಾಗಿ ಈ ಮರವನ್ನು ಆರಾಧಿಸುವುದರಿಂದ ಪುಣ್ಯ ಪ್ರಾಪ್ತಿಯಾಗುವುದು.

ಸ್ಕಂದ ಪುರಾಣ
ಶನಿ ದೇವರಿಗೆ ಸಂಬಂಧಿಸಿದಂತೆ ವ್ಯಕ್ತಿಗೆ ಸಾಡೇ ಸಾತಿ ಸಂಧಿ ನಡೆಯುತ್ತಿದ್ದರೆ, ಪ್ರತಿ ಶನಿವಾರ ಸಂಜೆ ಮರವನ್ನು ಪ್ರದಕ್ಷಿಣೆ ಹಾಕಿ ಪೂಜಿಸಬೇಕು. ಆಗ ಎಲ್ಲಾ ಸಮಸ್ಯೆಗಳು ನಿವಾರಣೆಯಾಗುತ್ತವೆ...
'ಸಾಡೇ ಸಾತಿ' ಇದು ಶನಿ ದೇವನ ಇನ್ನೊಂದು ಅಗ್ನಿ ಪರೀಕ್ಷೆ!

ಪುಣ್ಯ ಪ್ರಾಪ್ತಿ
ಈ ಮರದ ಆರಾಧನೆ ಕೇವಲ ಕಲ್ಪನೆ ಅಥವಾ ನಂಬಿಕೆಗೆ ಸೀಮಿತವಾಗಿಲ್ಲ. ಇದರ ಆರಾಧನೆಯಿಂದ ಆರೋಗ್ಯ ಮತ್ತು ಇತರ ಒಳ್ಳೆಯ ಪ್ರಯೋಜನಗಳು ಉಂಟಾಗುವುದು ಎನ್ನಲಾಗುತ್ತದೆ.



Click it and Unblock the Notifications
