Just In
- 12 min ago ವಾರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಈ 7 ದಿನಗಳು ನಿಮಗೆ ಹೇಗಿರಲಿದೆ?
- 43 min ago ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- 1 hr ago ಪರಿಸರ ದಿನ: ಇಂದು ನೀವು ಹೀಗೆ ಮಾಡಿದರೆ ಮುಂದಿನ ಪೀಳಿಗೆಗೆ ನೀಡುವ ದೊಡ್ಡ ಆಸ್ತಿ
- 2 hrs ago ಲಿವರ್ ಸಮಸ್ಯೆಯಿದೆ ಎಂದು ಸೂಚಿಸುವ ಲಕ್ಷಣಗಳಿವು, ಕುಟುಂಬಸ್ಥರು ಲಿವರ್ ದಾನ ಮಾಡಿದರೆ ವ್ಯಕ್ತಿಯ ಪ್ರಾಣ ಉಳಿಸಬಹುದು
Don't Miss
- News Rain Alert: ರಾಜ್ಯಾದ್ಯಂತ ಹಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆ; ಜಿಲ್ಲಾವಾರು ಮಳೆ ವಿವರ
- Movies ಡಿ. ಕೆ ಸುರೇಶ್ ಪರ ನಟ ದರ್ಶನ್ ಪ್ರಚಾರ; ಆ 2 ವಿಧಾನಸಭಾ ಕ್ಷೇತ್ರಗಳಲ್ಲಿ ಮತಬೇಟೆ
- Sports ಆರ್ಸಿಬಿಗೆ ಸಹಿ ಹಾಕಲು ವಿರಾಟ್ ಕೊಹ್ಲಿ ಕೇಳಿದ್ದೇಗೆ?; ಕುತೂಹಲಕಾರಿ ಕಥೆ ಬಿಚ್ಚಿಟ್ಟ ಕೆಎಲ್ ರಾಹುಲ್
- Automobiles ಟಾಟಾ ಕಾರುಗಳಂತೆಯೇ ಗರಿಷ್ಠ ಸುರಕ್ಷತೆ ತೋರಿದ ಸ್ವಿಫ್ಟ್: ಕ್ರ್ಯಾಶ್ ಟೆಸ್ಟ್ನಲ್ಲಿ 4 ಸ್ಟಾರ್
- Technology ಅಗ್ಗದ ಬೆಲೆಯಲ್ಲಿ ಎಂಟ್ರಿ ಕೊಡಲು ಸಜ್ಜಾಗಿದೆ ಐಟೆಲ್ S24 ಸ್ಮಾರ್ಟ್ಫೋನ್!
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಶ್ರಾವಣ ಮುಗಿಯುವುದರೊಳಗೆ ಶಿವನ ಕೃಪೆಗೆ ಪಾತ್ರರಾಗಿ!
ಶ್ರಾವಣಮಾಸವು ಹಿಂದೂ ಪಂಚಾಂಗದಲ್ಲಿಯೇ ಅತ್ಯಂತ ಪವಿತ್ರವಾದ ಮಾಸವೆಂದು ಪರಿಗಣಿಸಲ್ಪಟ್ಟಿದೆ. ಏಕೆಂದರೆ ಈ ಮಾಸದಲ್ಲಿ ಶಿವನು ಭೂಮಿಯ ಜೊತೆಗೆ ತನ್ನ ಅವಿನಾಭಾವ ಸಂಬಂಧವನ್ನು ತೋರಿದ್ದಾನೆ. ಹಾಗಾಗಿ ಈ ಮಾಸದಲ್ಲಿ ವ್ರತ ಮತ್ತು ಪೂಜೆಗಳಲ್ಲಿ ತೊಡಗಿಸಿಕೊಂಡು ಆತನನ್ನು ಆರಾಧಿಸಿದರೆ ಶಿವನ ಆಶೀರ್ವಾದ ಲಭಿಸುವುದರಲ್ಲಿ ಯಾವುದೇ ಸಂಶಯವಿಲ್ಲ.
ಅದರಲ್ಲೂ ಶ್ರಾವಣ ಮಾಸದ ಸೋಮವಾರಗಳು ಹೆಂಗಳೆಯರ ಪಾಲಿಗೆ ಅತ್ಯಂತ ಮುಖ್ಯವಾದುದಾಗಿದೆ. ಏಕೆಂದರೆ ಇವರು ತಮಗೆ ಅನುರೂಪನಾದ ವರ ಸಿಗಲೆಂದು ಮತ್ತು ಕುಟುಂಬದಲ್ಲಿ ಶಾಂತಿ ನೆಲೆಸಲೆಂದು ಶಿವನನ್ನು ಪ್ರಾರ್ಥಿಸುವ ಮಾಸ ಇದಾಗಿದೆ. ಹಿಂದೂ ಧರ್ಮದ ಭಾವೈಕ್ಯತೆಯ ಹಬ್ಬ: ಶ್ರಾವಣ ಮಾಸ
ಈ ವರ್ಷದ ಶ್ರಾವಣ ಮಾಸ ಆಗಸ್ಟ್ ಒಂದರಿಂದಲೇ ಪ್ರಾರಂಭವಾಗಿದ್ದು ಪೂರ್ಣಗೊಳ್ಳಲು ಇನ್ನು ಕೆಲವೇ ದಿನಗಳು ಉಳಿದಿವೆ. ಈ ತಿಂಗಳಲ್ಲಿ ಶಿವನನ್ನು ಪಾರ್ಥಿಸುವುದರಿಂದ ಇಷ್ಟಾರ್ಥಗಳು ಸಿದ್ಧಿಸುತ್ತವೆ ಎಂದು ಭಕ್ತರು ನಂಬುತ್ತಾರೆ. ಅಲ್ಲದೇ ಜಗದ ನಾಯಕನೂ ಶಿವನೇ ಆಗಿರುವುದರಿಂದ ಈ ಅವಧಿಯಲ್ಲಿ ನೆರವೇರಿಸುವ ಪೂಜೆ ಭಕ್ತರ ವಿಧಿಯನ್ನೇ ಬದಲಿಸಿಬಿಡಬಹುದು. ಶಿವ ಪೂಜೆಯಲ್ಲಿ ಇಂತಹ ತಪ್ಪುಗಳಾಗದಂತೆ ಎಚ್ಚರವಹಿಸಿ
ಈ
ತಿಂಗಳಲ್ಲಿ
ನಿಮ್ಮ
ಪೂಜೆಗಳು
ಫಲನೀಡಲು
ಇವುಗಳನ್ನು
ಸರಿಯಾದ
ಕ್ರಮದಲ್ಲಿ
ಆಚರಿಸುವುದು
ಅಗತ್ಯ.
ಕೆಳಗಿನ
ಸ್ಲೈಡ್
ಶೋ
ಮೂಲಕ
ನೀಡಲಾಗಿರುವ
ವಿಧಿಗಳನ್ನು
ಅನುಸರಿಸುವ
ಮೂಲಕ
ಭಗವಂತನ
ಕೃಪೆಗೆ
ಪಾತ್ರರಾಗಿ...
’ಓಂ ನಮಃ ಶಿವಾಯಃ’ ಮಂತ್ರ
ಪ್ರತಿದಿನ 'ಓಂ ನಮಃ ಶಿವಾಯಃ' ಮಂತ್ರವನ್ನು ಬರೆದ ಇಪ್ಪತ್ತೊಂದು ಬಿಲ್ವಪತ್ರೆಯ ಎಲೆಗಳನ್ನು ಚಂದನದೊಂದಿಗೆ ಶಿವಲಿಂಗಕ್ಕೆ ಅರ್ಪಿಸಿ. ಇದರೊಂದಿಗೆ ಏಕಮುಖಿ ರುದ್ರಾಕ್ಷಿಯೊಂದನ್ನೂ ನೀಡಿ. ಇದರಿಂದ ನಿಮ್ಮ ಇಷ್ಟಾರ್ಥಗಳು ಸಿದ್ಧಿಸುತ್ತವೆ.
ಗೋಮೂತ್ರವನ್ನು ಚಿಮುಕಿಸಿ
ಒಂದು ವೇಳೆ ನಿಮ್ಮ ಮನೆಯಲ್ಲಿ ಯಾವುದೇ ರೀತಿಯ ತೊಂದರೆ ಕಂಡುಬಂದರೆ ಶ್ರಾವಣ ಮಾಸದ ಯಾವುದಾದರೊಂದು ದಿನದಲ್ಲಿ ಗೋಮೂತ್ರವನ್ನು ಚಿಮುಕಿಸಿ. ಬಳಿಕ ಇಡಿಯ ಮನೆಯಲ್ಲಿ ಧೂಪದ ಧೂಮವನ್ನು ಇಡಿಯ ಮನೆ ಆವರಿಸುವಂತೆ ಮಾಡಿ. ಇದರಿಂದ ಮನೆಗೆ ಬಂದಿದ್ದ ಕಂಟಕಗಳು ದೂರವಾಗುತ್ತವೆ.
ವೈವಾಹಿಕ ಜೀವನದಲ್ಲಿ ಕಷ್ಟ ಕಾರ್ಪಣ್ಯಗಳಿಗೆ
ಒಂದು ವೇಳೆ ನಿಮ್ಮ ವೈವಾಹಿಕ ಜೀವನದಲ್ಲಿ ತೊಂದರೆ ಕಂಡುಬಂದರೆ ಶ್ರಾವಣ ಮಾಸದ ಪ್ರತಿದಿನ ಹಾಲಿನಲ್ಲಿ ಕೇಸರಿಯನ್ನು ಮಿಶ್ರಣ ಮಾಡಿ ಶಿವಲಿಂಗಕ್ಕೆ ಅರ್ಪಿಸಿ.
ಹಸುವಿಗೆ ಹಸಿರು ಹುಲ್ಲನ್ನು ತಿನ್ನಿಸಿ
ಹಸುವಿಗೆ ಹಸಿರು ಹುಲ್ಲನ್ನು ತಿನ್ನಿಸಿ. ಇದರಿಂದ ನಿಮ್ಮ ಜೀವನದಲ್ಲಿ ಸಂತೋಷಕ್ಕೆ ಎಂದೂ ಕೊರತೆಯಾಗದು.
ಸಾಧ್ಯವಾದಷ್ಟು ಸಹಾಯ ಮಾಡಿ
ಶ್ರಾವಣ ಮಾಸದ ಎಲ್ಲಾ ದಿನಗಳಲ್ಲಿ ಅರ್ಹ ಬಡವ ಬಲ್ಲಿದರಿಗೆ ಸಾಧ್ಯವಾದ ಸಹಾಯ ಮಾಡಿ. ಇದರಿಂದ ನಿಮ್ಮ ಮನೆಯಲ್ಲಿ ಎಂದಿಗೂ ಆಹಾರದ ಕೊರತೆಯಾಗದು. ಜೊತೆಗೆ ಇದು ನಿಮ್ಮ ವಂಶಸ್ಥರ ಆತ್ಮಗಳನ್ನೂ ಸಂತೋಷ ಮತ್ತು ಶಾಂತಿಯಲ್ಲಿರಿಸುವುದು.
ಕರಿಎಳ್ಳನ್ನು ಶಿವಲಿಂಗಕ್ಕೆ ಅರ್ಪಿಸಿ
ಶ್ರಾವಣ ಮಾಸದ ಪ್ರತಿದಿನ ಶಿವಾಲಯಕ್ಕೆ ಭೇಟಿ ನೀಡಿ ಕರಿಎಳ್ಳನ್ನು ಶಿವಲಿಂಗಕ್ಕೆ ಅರ್ಪಿಸಿ. ಬಳಿಕ ದೇವಾಲಯದ ಆವರಣದಲ್ಲಿ ಕೊಂಚ ಹೊತ್ತು ಕುಳಿತು ಓಂ ನಮಃ ಶಿವಾಯ ಮಂತ್ರವನ್ನು ಪಠಿಸಿ.
ಮೀನುಗಳಿಗೆ ಹಿಟ್ಟಿನ ಉಂಡೆಗಳನ್ನು ಅರ್ಪಿಸಿ
ಈ ತಿಂಗಳಲ್ಲಿ ಎಷ್ಟು ದಿನ ಸಾಧ್ಯವೋ ಅಷ್ಟು ದಿನ ಮುಂಜಾವಿನ ವೇಳೆ ಕೆರೆ ಅಥವಾ ನದಿಪಾತ್ರದ ಬಳಿ ತೆರಳಿ ಮೀನುಗಳಿಗೆ ಹಿಟ್ಟಿನ ಉಂಡೆಗಳನ್ನು ಅರ್ಪಿಸಿ. ಇದು ನಿಮ್ಮ ಮನೆಯಲ್ಲಿ ಧನಾಗಮನವಾಗುವಂತೆ ಮಾಡುತ್ತದೆ.