Latest Updates
-
ಮದುವೆ ಅಥವಾ ಡೇಟಿಂಗ್ ಪ್ಲಾನ್ ಮಾಡಿದ್ದೀರಾ? ಇಂದಿನ ಹವಾಮಾನದ ಅಬ್ಬರಕ್ಕೆ ನಿಮ್ಮ ತಯಾರಿ ಹೇಗಿರಲಿ? -
ಬಿರುಗಾಳಿ ಮಳೆಗೆ ನಿಮ್ಮ ಬಾಲ್ಕನಿ ಗಾರ್ಡನ್ ನಲುಗುತ್ತಿದೆಯೇ? ಗಿಡಗಳನ್ನು ಉಳಿಸಲು ಈ ಟಿಪ್ಸ್ ಮಿಸ್ ಮಾಡ್ಬೇಡಿ! -
ಬಿಸಿಲ ಧಗೆಗೆ ಸುಸ್ತಾದ್ರಾ? ಈ ಪಾನೀಯಗಳಿದ್ದರೆ ಸಾಕು, ಬೇಸಿಗೆಯಲ್ಲೂ ಇರುತ್ತೀರಿ ಫ್ರೆಶ್! -
ಮೆಟ್ ಗಾಲಾ 2026: ಕರಣ್ ಜೋಹರ್ ಎಂಟ್ರಿಯಿಂದ ಫ್ಯಾಷನ್ ಲೋಕದಲ್ಲಿ ಸಂಚಲನ, ಭಾರತದಲ್ಲಿ ವೀಕ್ಷಿಸುವುದು ಹೇಗೆ? -
ಬಿಸಿಲ ಬೇಗೆಯಿಂದ ಪಾರಾಗಲು ಮುಂಜಾನೆಯೇ ವ್ಯಾಯಾಮ: ನಿಮ್ಮ ದಿನಚರಿಯಲ್ಲಿ ಈ ಬದಲಾವಣೆ ಮಾಡಿಕೊಳ್ಳಿ -
ಬೇಸಿಗೆ ಮದುವೆ ಸಂಭ್ರಮ: ಬಿಸಿಲ ಬೇಗೆಯಿಂದ ಅತಿಥಿಗಳನ್ನು ರಕ್ಷಿಸಲು ಇಲ್ಲಿದೆ ಮಾಸ್ಟರ್ ಪ್ಲಾನ್ -
ಮೇ 2-3ರ ಬಿರುಗಾಳಿ ಎಚ್ಚರಿಕೆ: ನಿಮ್ಮ ಮನೆ ಮತ್ತು ಬಾಲ್ಕನಿ ಗಿಡಗಳನ್ನು ಸುರಕ್ಷಿತವಾಗಿಡಲು ಇಂದೇ ಈ ಕೆಲಸ ಮಾಡಿ! -
ಭಾರತದಲ್ಲಿ ಸುಡುವ ಬಿಸಿಲು: ಹೀಟ್ ವೇವ್ನಿಂದ ಪಾರಾಗಲು ಇಲ್ಲಿವೆ ಬೆಸ್ಟ್ ಡಯಟ್ ಮತ್ತು ಹೈಡ್ರೇಶನ್ ಟಿಪ್ಸ್! -
ಮೆಟ್ ಗಾಲಾ 2026: ರೆಡ್ ಕಾರ್ಪೆಟ್ ಮೇಲೆ ಕರಣ್ ಜೋಹರ್ ಅಬ್ಬರ, ಭಾರತೀಯ ಫ್ಯಾಷನ್ ಲೋಕದ ಹೊಸ ಸಂಚಲನ! -
ಮೇ ತಿಂಗಳ ಬಿಸಿಲ ಧಗೆ: ನಿಮ್ಮ ಬೆಳಗಿನ ದಿನಚರಿಯಲ್ಲಿ ಈ ಬದಲಾವಣೆ ಮಾಡಿಕೊಳ್ಳದಿದ್ದರೆ ಕಷ್ಟ!
ಈ ಮೂಢನಂಬಿಕೆಗಳನ್ನು ನಂಬಬಹುದಾ?
ನಮ್ಮ ಸಮಾಜದಲ್ಲಿ ಅನೇಕ ನಂಬಿಕೆಗಳಿವೆ. ಅವುಗಳಲ್ಲಿ ಕೆಲವು ನಂಬಿಕೆಗಳು ಅರ್ಥವಿಲ್ಲದ ನಂಬಿಕೆಗಳಾಗಿವೆ. ಅಂತಹ ನಂಬಿಕೆಗಳನ್ನು ಮೂಢ ನಂಬಿಕೆಗಳೆಂದು ಕೆಲವರು ಹೇಳಿದರೆ ಹೇಳಿದರೆ ಮತ್ತೆ ಕೆಲವರು ಅಂತಹ ಅರ್ಥವಿಲ್ಲದ ನಂಬಿಕೆಗಳನ್ನು ಬಿಡಲು ಸಿದ್ಧವಿರುವುದಿಲ್ಲ.
ಕೆಲವೊಮ್ಮೆ ನಡೆಯುವ ಘಟನೆಗಳು ಅಂತಹ ಮೂಢಂಬಿಕೆಗೆ ಮತ್ತಷ್ಟು ಪುಷ್ಠಿ ನೀಡುತ್ತದೆ. ಉದಾಹರಣೆಗೆ ರಸ್ತೆ ದಾಡುವಾಗ ಬೆಕ್ಕು ಅಡ್ಡ ಬಂದರೆ ಅಪಶಕುನ ಎಂದು ನಂಬಿಕೆ ಹೆಚ್ಚಿನವರಲ್ಲಿದೆ. ಈ ಮೂಢ ನಂಬಿಕೆ ನಂಬಿದವರಿಗೆ ಅಯ್ಯೋ ಏನಾಗಬಹುದೋ ಎಂಬ ಭಯವಿರುತ್ತದೆ. ಸ್ವಲ್ಪ ಮುಂದೆ ನಡೆಯುವಾಗ ಗಾಡಿ ಕೈ ಕೊಡುವುದಾ ಅಥವಾ ನಡೆಯುವಾಗ ಸ್ವಲ್ಪ ಎಡವಿದರೆ ಅದನ್ನು ಆಕಸ್ಮಿಕವೆಂದು ತಿಳಿದುಕೊಳ್ಳದೆ ಆ ಮೂಢನಂಬಿಕೆಯನ್ನು ಬಲವಾಗಿ ನಂಬಿ ಬಿಡುತ್ತಾರೆ.

ಅದರಲ್ಲೂ ಈ ಕೆಳಗಿನ ಮೂಢನಂಬಿಕೆಗಳು ಹೆಚ್ಚಾಗಿ ಕಂಡು ಬರುತ್ತಿವೆ:
* ಮೇಲೆ ಹೇಳಿದಂತೆ ಎಲ್ಲಿಗಾದರೂ ಹೋಗುವಾಗ ಬೆಕ್ಕು ಅಡ್ಡ ಓಡುವುದು ಸರಿಯಲ್ಲ.
* ಮೂರು ಜನರು ಸೇರಿ ಶುಭ ಕಾರ್ಯಗಳಿಗೆ ಹೋಗಬಾರದು. ಈ ರೀತಿ ಮೂರು ಜನರು ಇದ್ದರೆ ಚಿಕ್ಕ ಮಗುವನ್ನು ಆದರೂ ಜೊತೆಗೆ ಕರೆದುಕೊಂಡು ಹೋಗುತ್ತಾರೆ.
* 13ನೇ ತಾರೀಕು ಶುಕ್ರವಾರದಂದು ಬಂದರೆ ಆ ದಿನದಂದು ಏನಾದರೂ ಅಪಶಕುನವಾಗುತ್ತದೆ ಎಂದು ಜನರು ಭಯಪಡುತ್ತಾರೆ.
* ದಾರಿಯಲ್ಲಿ ನೋಟ್ ಅಥವಾ ಚಿಲ್ಲರೆ ಬಿದ್ದಿರುವುದು ಕಂಡರೆ ಅದನ್ನು ಎತ್ತಿಕೊಳ್ಳಬೇಕು, ಇದರಿಂದ ನಿಮಗೆ ಅದೃಷ್ಟ ಲಕ್ಷ್ಮಿ ಒಲಿದು ಬರುತ್ತದೆ ಎಂಬ ನಂಬಿಕೆ ಜನರಲ್ಲಿ ಇದೆ.
* ಯಾವುದಾದರೂ ಒಂದು ಕಣ್ರೆಪ್ಪೆ ಉದುರಿ ಮುಖದ ಮೇಲೆ ಬಿದ್ದಿದ್ದರೆ ಕೆಲವರು ಅದನ್ನು ಜೋಪಾನವಾಗಿ ತೆಗೆದು ಕೈಯಲ್ಲಿ ಹಿಡಿದುಕೊಂಡು ನಂತರ ನಮಗೆ ಒಳ್ಳೆಯದಾಗಲಿ ಎಂದು ಬಯಸಿ ಊದುತ್ತಾರೆ. ಅದು ಹಾರಿದರೆ ಒಳ್ಳೆಯದಾಗುತ್ತದೆ ಎಂದು ಅರ್ಥ. ಊದಿದರೆ ಅಷ್ಟು ಚಿಕ್ಕ ರೆಪ್ಪೆ ಹಾರದೆ ಇರುತ್ತದೆಯೇ?
* ಕಣ್ರೆಪ್ಪೆ ಬಡೆಯುತ್ತಿದ್ದರೆ ಏನೋ ಅನಾಹುತ ಉಂಟಾಗಬಹುದೆಂಬ ಮೂಢ ನಂಬಿಕೆ ಜನರಲ್ಲಿದೆ. ಅದರಲ್ಲಿ ಬಲ ರೆಪ್ಪೆ ಬಡೆದರೆ ಹೆಣ್ಣು ಮಕ್ಕಳಿಗೆ ಒಳ್ಳೆಯದಲ್ಲ, ಎಡ ಕಣ್ಣಿನ ರೆಪ್ಪೆ ಬರೆದರೆ ಹೆಣ್ಣು ಮಕ್ಕಳಿಗೆ ಒಳ್ಳೆಯದು. ಈ ರೀತಿಯ ಅನೇಕ ಅರ್ಥವಿಲ್ಲದ ನಂಬಿಕೆಗಳು ನಮ್ಮ ಸಮಾಜದಲ್ಲಿವೆ.



Click it and Unblock the Notifications