Latest Updates
-
ವಿಶ್ವ ಸಿಂಹ ದಿನ: ಸಿಂಹದಂತೆ ಗರ್ಜಿಸುವ ಶಕ್ತಿ ಪಡೆಯಲು 10 ನಿಮಿಷದ ಈ ವರ್ಕೌಟ್ ಟ್ರೈ ಮಾಡಿ! -
ಸೂರ್ಯಗ್ರಹಣದ ಗೊಂದಲ: ಹಿರಿಯರ ನಂಬಿಕೆಗಳ ನಡುವೆ ಯುವ ದಂಪತಿಗಳು ಶಾಂತಿ ಕಾಪಾಡುವುದು ಹೇಗೆ? -
ಲಾಲ್ಬಾಗ್ ಫಲಪುಷ್ಪ ಪ್ರದರ್ಶನ: ನಿಮ್ಮ ಬಾಲ್ಕನಿಯಲ್ಲಿಯೇ ಸೃಷ್ಟಿಸಿ ಹಸಿರು ಸ್ವರ್ಗ! -
ಕೇರಳದ ಉಚಿತ ಓಣಂ ಕಿಟ್: ದಿನಸಿ ಪದಾರ್ಥಗಳು ಹಾಳಾಗದಂತೆ ಇಡಲು ಇಲ್ಲಿವೆ ಸ್ಮಾರ್ಟ್ ಟಿಪ್ಸ್! -
ಆಗಸ್ಟ್ ಕ್ರಾಂತಿ ದಿನ: ಸೋಶಿಯಲ್ ಮೀಡಿಯಾದಲ್ಲಿ ದೇಶಭಕ್ತಿ ಮೆರೆಯಲು ಇಲ್ಲಿದೆ ಬೆಸ್ಟ್ ಐಡಿಯಾಸ್! -
ಮಳೆಗಾಲದ ಓಟದ ನಂತರ ಕಾಲು ನೋವೇ? ಕೀಲುಗಳ ರಕ್ಷಣೆಗೆ ಈ 12 ನಿಮಿಷದ ಸರಳ ವ್ಯಾಯಾಮಗಳು -
ಶ್ರಾವಣ ಶಿವರಾತ್ರಿ 2026: ಮಳೆಗಾಲದಲ್ಲಿ ಜಾಗರಣೆ ಮಾಡುವಾಗ ಈ ಮುನ್ನೆಚ್ಚರಿಕೆ ಮರೆಯದಿರಿ, ಪೂಜೆ ಸುಗಮವಾಗಲಿ! -
ಬೆಂಗಳೂರಿನ ಹೈ-ಎಂಡ್ ಹೋಟೆಲ್ಗಳಲ್ಲಿ ಕೊಳೆತ ಆಹಾರ: ನೀವು ತಿನ್ನುವ ಊಟ ನಿಜಕ್ಕೂ ಸುರಕ್ಷಿತವೇ? -
2026ರ ಫ್ರೀಡಂ ಸೇಲ್: ಆನ್ಲೈನ್ ಶಾಪಿಂಗ್ನಲ್ಲಿ ಹಣ ಉಳಿಸಲು ಈ ಸ್ಮಾರ್ಟ್ ಟಿಪ್ಸ್ ಮಿಸ್ ಮಾಡ್ಬೇಡಿ! -
ಮಳೆಗಾಲದಲ್ಲಿ ಟಾಟಾ ಮುಂಬೈ ಮ್ಯಾರಥಾನ್ 2027 ತಯಾರಿ: ಸುರಕ್ಷಿತವಾಗಿ ಓಡಲು 14 ನಿಮಿಷಗಳ ಬೆಸ್ಟ್ ವರ್ಕೌಟ್ ಟಿಪ್ಸ್
ಅಂದು ಭಗವಾನ್ ಶ್ರೀರಾಮನು ಹನುಮಂತನನ್ನು ಕೊಲ್ಲಲು ಪ್ರಯತ್ನಿಸಿದಾಗ...!
ರಾಮನು ರಾವಣನನ್ನು ಸೋಲಿಸಿ ಅಯೋಧ್ಯೆಗೆ ಹಿಂತಿರುಗಿದನು. ಆ ಸಂದರ್ಭದಲ್ಲಿ ಸಂತಸಗೊಂಡ ಜನರೆಲ್ಲರೂ ಹರ್ಷವನ್ನು ವ್ಯಕ್ತಪಡಿಸಿದರು. ಜೊತೆಗೆ ಅಯೋಧ್ಯೆಯ ಹೊಸ ರಾಜ ಎಂದು ಘೋಷಿಸಿದರು.

ಅಲ್ಲದೆ ಅಲ್ಲಿ ನೆರೆದಿದ್ದ ಎಲ್ಲಾ ಗುರು-ಹಿರಿಯರು ಸಂತರು ಹಾಗೂ ಜನರೆಲ್ಲರೂ ರಾಮನ ಪಾದವನ್ನು ಸ್ಪರ್ಶಿಸಿ ನಮಸ್ಕರಿಸಿ, ಆಶೀರ್ವಾದವನ್ನು ಪಡೆದುಕೊಳ್ಳುತ್ತಿದ್ದರು. ಭಗವಾನ್ ಹನುಮಂತನು ರಾಮನ ಪರಮ ಭಕ್ತನಾಗಿದ್ದನು. ಅಲ್ಲದೆ ಅವನ ಹೃದಯವೂ ಸಂಪೂರ್ಣವಾಗಿ ಮುಗ್ಧತೆಯಿಂದ ಕೂಡಿತ್ತು.

ನಾರದ ಮುನಿಯ ಚೇಷ್ಟೆ
ನಾರದ ಮುನಿಯು ದೈವ ಸ್ವರೂಪದವನು. ಅವನ ಬುದ್ಧಿಯು ಬಹಳ ತೀಕ್ಷ್ಣ ಮತಿಯದ್ದಾಗಿತ್ತು. ಅಲ್ಲದೆ ತನ್ನ ಚಾಣಾಕ್ಷ ಬುದ್ಧಿಯಿಂದ ಏನನ್ನು ಬೇಕಾದರು ಸಾಧಿಸುವ ಸಾಮಥ್ರ್ಯವಿತ್ತು. ತನ್ನ ಬುದ್ಧಿಯಿಂದಲೇ ಬಹುತೇಕ ಕುಚೇಷ್ಟೆ ಮಾಡಿದ ಕಥೆಗಳನ್ನು ಪುರಾಣ ಇತಿಹಾಸದಲ್ಲಿ ಕಾಣಬಹುದು. ರಾಮನು ರಾಜ್ಯಕ್ಕೆ ಹಿಂತಿರುಗಿದ್ದ ಆ ಸುಸಂದರ್ಭದಲ್ಲಿ ಎಲ್ಲಾ ಋಷಿಮುನಿಗಳನ್ನು ಅತಿಥಿಗಳಾಗಿ ಆಮಂತ್ರಿಸಲಾಗಿತ್ತು. ಆಗ ನಾರದ ಮುನಿಯು ಹನುಂತನಿಗೆ ವಿಶ್ವಾಮಿತ್ರ ಋಷಿಯ ಪಾದವನ್ನು ಮುಟ್ಟಿ ನಮಸ್ಕರಿಸಬಾರದು. ಅವರು ರಾಮನಿಗಿಂತ ಮೊದಲು ರಾಜನಾಗಿ ಇಲ್ಲಿ ಆಡಳಿತ ನಡೆಸಿದ್ದರು ಎಂದು ರಹಸ್ಯವಾಗಿ ಹೇಳಿದರು.
Most Read: ಶ್ರೀರಾಮ ಸೀತೆಗೆ ಏಕೆ ಅಗ್ನಿ ಪರೀಕ್ಷೆ ಮಾಡಲು ಹೇಳಿದ?

ಮುಗ್ಧ ಭಗವಾನ್ ಹನುಮಂತ
ನಾರದ ಮುನಿಯ ಮಾತಿಗೆ ಬೆಲೆ ನೀಡಿದ ಭಗವಾನ್ ಹನುಮಂತನು ವಿಶ್ವಾಮಿತ್ರ ಮುನಿಯ ಪಾದವನ್ನು ಬಿಟ್ಟು, ಉಳಿದ ಎಲ್ಲಾ ಋಷಿಮುನಿಗಳ ಪಾದ ಮುಟ್ಟಿ ನಮಸ್ಕರಿಸಿದನು. ವಿಶ್ವಾಮಿತ್ರ ಋಷಿಗಳು ರಾಮನ ಗುರುವಾಗಿದ್ದರು. ಹಾಗಾಗಿಯೇ ಹನುಂತನ ತಪ್ಪನ್ನು ಲಘುವಾಗಿಯೇ ಪರಿಗಣಿಸಿದರು. ನಾರದ ಮುನಿಯು ನಿರೀಕ್ಷೆಯಂತೆ ಏನೂ ನಡೆಯದೆ ಇದ್ದುದರಿಂದ, ತನ್ನ ಪ್ರಯತ್ನವೆಲ್ಲಾ ನಿರರ್ಥಕವಾಯಿತು ಎಂದು ಸಹಿಸಿಕೊಳ್ಳಲು ಕಷ್ಟವಾಯಿತು. ಆ ಕಾರಣಕ್ಕಾಗಿಯೇ ಮಿಶ್ವಾಮಿತ್ರರ ಬಳಿ ಹೋಗಿ ಹನುಮಂತನು ಉದ್ದೇಶಪೂರ್ವಕವಾಗಿಯೇ ನಿಮಗೆ ಅವಮಾನಿಸಿದ್ದಾನೆ ಎಂದು ಹನುಂತನ ವಿರುದ್ಧ ವಿಶ್ವಾಮಿತ್ರರಿಗೆ ಪ್ರೇರೇಪಣೆ ನೀಡಿದರು.

ಹನುಮಂತನಿಗೆ ಪರೀಕ್ಷೆಯ ಸಮಯವಾಗಿತ್ತು
ನಾರದ ಮುನಿಗಳ ಮಾತನ್ನು ಕೇಳಿದ ವಿಶ್ವಾಮಿತ್ರರಿಗೆ ಕೋಪ ಬಂದಿತು. ಈ ಹಿನ್ನೆಲೆಯಲ್ಲಿಯೇ ರಾಮನಿಗೆ ಹನುಮಂತನನ್ನು ಕೊಲ್ಲಬೇಕು ಎಂದು ಆದೇಶ ನೀಡಿದರು. ಗುರುವಿನ ಮಾತನ್ನು ಅಲ್ಲಗಳೆಯಲು ರಾಮನಿಗೆ ಸಾಧ್ಯವಾಗಲಿಲ್ಲ. ಹನುಮಂತನು ನಿರಂತರ ರಾಮ ನಾಮ ಜಪವನ್ನು ಮಾಡಲು ಪ್ರಾರಂಭಿಸಿದನು. ರಾಮನು ಹನುಮಂತನನ್ನು ಕೊಲ್ಲಲು ಎಷ್ಟೇ ಪ್ರಯತ್ನಿಸಿದರೂ ಹನುಮಂತನಿಗೆ ಏನೂ ಮಾಡಲು ಸಾಧ್ಯವಾಗಲಿಲ್ಲ. ಹನುಂತನ ಮೇಲೆ ನಡೆದ ನಿರಂತರ ದಾಳಿಯಿಂದ ಏನೂ ಪ್ರಭಾವ ಬೀರಲಿಲ್ಲ. ನಂತರ ರಾಮನು ಬ್ರಹ್ಮಾಸ್ತ್ರ ಬಳಸಲು ನಿರ್ಧರಿಸಿದನು. ಆದಾಗ್ಯೂ ಹನುಮಂತ ತನ್ನ ಭಕ್ತಿಯಿಂದ ರಾಮನ ನಾಮವನ್ನು ಜಪಿಸಿತ್ತಿದ್ದುದರ ಪರಿಣಾಮ ಯಾವ ಅಸ್ತ್ರವೂ ಹನುಮಂತನಿಗೆ ಹಾನಿಯುಂಟುಮಾಡಲು ಸಾಧ್ಯವಾಗಲಿಲ್ಲ.

ನಾರದ ಮುನಿಯ ಹೃದಯ ಕರಗಿತು
ಹನುಂತನಿಗೆ ತನ್ನ ರಾಮನ ಮೇಲೆ ಇದ್ದ ಭಕ್ತಿಯನ್ನು ಕಂಡ ನಾರದ ಮುನಿಗೆ ಆಶ್ಚರ್ಯವಾಯಿತು. ಜೊತೆಗೆ ತನ್ನ ದುಷ್ಕೃತ್ಯಕ್ಕೆ ಕ್ಷಮೆಯಾಚಿಸಬೇಕು ಎಂದು ಬಯಸಿದನು. ನಂತರ ವಿಶ್ವಾಮಿತ್ರರಲ್ಲಿ ತನ್ನ ತಪ್ಪುಗಳನ್ನು ಹೇಳಿಕೊಂಡು, ಕ್ಷಮೆಯನ್ನು ಯಾಚಿಸಿದನು. ಜೊತೆಗೆ ರಾಮನಿಂದ ಹುನುಮಂತನಿಗೆ ಯಾವುದೇ ತೊಂದರೆ ಆಗದಂತೆ, ಹನುಮಂತನನ್ನು ರಕ್ಷಿಸಬೇಕೆಂದು ಕೇಳಿಕೊಂಡನು. ಅಂತೆಯೇ ವಿಶ್ವಾಮಿತ್ರರು ತಮ್ಮ ಆದೇಶವನ್ನು ಹಿಂದೆ ತೆಗೆದುಕೊಂಡು ಹನುಮಂತನಿಗೆ ಯಾವುದೇ ಹಾನಿ ಮಾಡಬಾರದು ಎಂದು ರಾಮನಿಗೆ ಹೇಳಿದರು. ತನ್ನ ಮುಗ್ಧತೆ ಮತ್ತು ರಾಮನ ಮೇಲಿರುವ ಭಕ್ತಯಿಯನ್ನು ತೋರುವುದರ ಮೂಲಕ ರಾಮನ ಪ್ರೀತಿಗೆ ಹನುಮಂತ ಪಾತ್ರನಾದನು ಎಂದು ಹೇಳಲಾಗುವುದು.



Click it and Unblock the Notifications