Latest Updates
-
ಆರ್ಸಿಬಿ ಗೆಲುವಿನ ಅಬ್ಬರ: ಬೆಂಗಳೂರಿನಲ್ಲಿ ವಿರಾಟ್-ಅನುಷ್ಕಾ ಸಂಭ್ರಮದ ವಿಡಿಯೋ ವೈರಲ್, ನೀವು ನೋಡಲೇಬೇಕಾದ ದೃಶ್ಯಗಳಿವು! -
ಮಳೆಗಾಲದಲ್ಲಿ ವ್ಯಾಯಾಮ ಮಾಡ್ತೀರಾ? ಈ ತಪ್ಪುಗಳನ್ನು ಮಾಡಿದರೆ ನಿಮ್ಮ ಆರೋಗ್ಯಕ್ಕೆ ಅಪಾಯ ಕಟ್ಟಿಟ್ಟ ಬುತ್ತಿ! -
ಪ್ರೈಡ್ ಮಂತ್ 2026: ಕ್ವೀರ್ ಜೋಡಿಗಳ ಭವಿಷ್ಯ ಭದ್ರಪಡಿಸಲು ಮತ್ತು ಕುಟುಂಬದ ಮನವೊಲಿಸಲು ಇಲ್ಲಿದೆ ವಿಶೇಷ ಮಾರ್ಗದರ್ಶಿ! -
ಮಳೆಗಾಲ ಶುರುವಾಗುವ ಮುನ್ನವೇ ನಿಮ್ಮ ಮನೆಯನ್ನು ಹೀಗೆ ರಕ್ಷಿಸಿಕೊಳ್ಳಿ: ದುಬಾರಿ ರಿಪೇರಿ ತಪ್ಪಿಸಲು ಇಲ್ಲಿವೆ ಸರಳ ಟಿಪ್ಸ್! -
ಬಿಸಿಲು-ಮಳೆಯ ಆಟದಲ್ಲಿ ಸುಸ್ತಾಗಿದ್ದೀರಾ? ಆರೋಗ್ಯ ಕಾಪಾಡಿಕೊಳ್ಳಲು ಈ ಸರಳ ಆಹಾರ ಕ್ರಮಗಳನ್ನು ಮಿಸ್ ಮಾಡಬೇಡಿ! -
ದಿಢೀರ್ ಮಳೆಗೆ ರೆಡಿಯಾಗಿದ್ದೀರಾ? ಸ್ಟೈಲಿಶ್ ಆಗಿ ಕಾಣಲು ಮತ್ತು ಮಳೆಯಿಂದ ಪಾರಾಗಲು ಈ ಟಿಪ್ಸ್ ಮಿಸ್ ಮಾಡ್ಬೇಡಿ! -
ಹವಾಮಾನ ಬದಲಾಗಿದೆ, ನಿಮ್ಮ ವರ್ಕೌಟ್ ಪ್ಲಾನ್ ಬದಲಾಯಿಸಿದ್ದೀರಾ? ಇಲ್ಲದಿದ್ದರೆ ಈ ಎಚ್ಚರಿಕೆ ನಿಮಗಾಗಿ! -
ಮಳೆಗಾಲದಲ್ಲಿ ಮದುವೆ ನಿಶ್ಚಯವಾಗಿದೆಯೇ? ನಿಮ್ಮ ಮದುವೆ ಸಂಭ್ರಮ ಹಾಳಾಗದಂತೆ ತಡೆಯಲು ಇಲ್ಲಿವೆ ಸ್ಮಾರ್ಟ್ ಟಿಪ್ಸ್! -
ಮಳೆಗಾಲ ಶುರುವಾಗುವ ಮುನ್ನವೇ ನಿಮ್ಮ ಮನೆಯನ್ನು ಹೀಗೆ ಸಜ್ಜುಗೊಳಿಸಿ: ಸೋರಿಕೆ ಮತ್ತು ತೇವಾಂಶದಿಂದ ಮುಕ್ತಿ ಪಡೆಯಿರಿ! -
ಬಿಸಿಲಿನ ಬೇಗೆಗೆ ಸುಸ್ತಾಗಿದ್ದೀರಾ? ದೇಹ ತಂಪಾಗಿಡಲು ಈ ಸಾಂಪ್ರದಾಯಿಕ ಪಾನೀಯಗಳೇ ಮದ್ದು!
ಧರ್ನುಮಾಸದ ಪೂಜೆಗೆ ತುಂಬಾ ವಿಶೇಷ ದಿನಗಳಿವು
ವಿಷ್ಣು ಭಕ್ತರಿಗೆ ಧರ್ನುಮಾಸ ತುಂಬಾ ವಿಶೇಷವಾದ ತಿಂಗಳಾಗಿದೆ. ಧ್ಯಾನ ಮಾಡಲು ಅಥವಾ ಸಾಧನೆ ಈ ತಿಂಗಳು ತುಂಬಾ ಶುಭವಾಗಿದೆ. ಸೂರ್ಯನು ಧನು ರಾಶಿಗೆ ಪ್ರವೇಶಿಸಿದಾಗ ಧರ್ನುಮಾಸ ಪ್ರಾರಂಭವಾಗುವುದು. ಇದು ಪ್ರತೀವರ್ಷ ಡಿಸೆಂಬರ್ ಮಧ್ಯದಲ್ಲಿ ಪ್ರಾರಂಭವಾಗಿ ಸಂಕ್ರಾಂತಿಗೆ ಮುಕ್ತಾಯವಾಗುತ್ತದೆ.
ಈ ತಿಂಗಳಿನಲ್ಲಿ ವಿಷ್ಣು ಭಕ್ತರು ಅನೇಕ ಧಾರ್ಮಿಕ ಚಟುವಟಿಕೆಗಳಲ್ಲಿ ಭಾಗಿಯಾಗುತ್ತಾರೆ. ದೇವಾಲಯಗಳಲ್ಲಿ ವಿಶೇಷ ಪೂಜೆಗಳನ್ನು ಮಾಡಲಾಗುವುದು. ಧಾರ್ಮಿಕ ನಂಬಿಕೆಯ ಪ್ರಕಾರ ಶ್ರೀ ವಿಷ್ಣು ಧರ್ಮನುಮಾಸದಲ್ಲಿ ಎದ್ದೇಳುತ್ತಾನೆ ಎಂದು ಹೇಳಲಾಗುವುದು. ಆದ್ದರಿಂದ ಶ್ರೀ ಮಹಾ ವಿಷ್ಣುವಿಗೆ ಬ್ರಹ್ಮ ಮುಹೂರ್ತದಲ್ಲಿ ಅಂದರೆ ಸೂರ್ಯ ಉದಯಿಸುವ ಒಂದು ಗಂಟೆಯ ಮೊದಲು ವಿಶೇಷ ಪೂಜೆಯನ್ನು ಸಲ್ಲಿಸಲಾಗುವುದು. ಪ್ರತಿದಿನ ಬ್ರಹ್ಮ ಮುಹೂರ್ತದಲ್ಲಿ ಶ್ರೀ ವಿಷ್ಣುವಿಗೆ ಪೂಜೆಯನ್ನು ಸಲ್ಲಿಸಲಾಗುವುದು.
ಧರ್ನುಮಾಸದಲ್ಲಿ ಶ್ರೀ ವಿಷ್ಣುವಿನ ಪೂಜಿಸಿದರೆ ಅಶ್ವಮೇಧ ಯಾಗ ಮಾಡಿದಷ್ಟು ಫಲ ಸಿಗುವುದು. ಧರ್ನುಮಾಸದಲ್ಲಿ ಕರ್ನಾಟಕ ಹಾಗೂ ಆಂಧ್ರ ಪ್ರದೇಶದಲ್ಲಿ ಕಾತ್ಯಾಯನಿ ವ್ರತವನ್ನು ಆಚರಿಸಲಾಗುವುದು. ಧರ್ನುಮಾಸದಲ್ಲಿ ವೈಕುಂಠ ಏಕಾದಶಿ, ವೈಕುಂಠ ದ್ವಾದಶಿ ಹಬ್ಬವನ್ನು ಆಚರಣೆ ಮಾಡಲಾಗುವುದು.

ಧರ್ನುಮಾಸ 2021-22ರಲ್ಲಿ ಈ ದಿನಗಳು ತುಂಬಾನೇ ವಿಶೇಷವಾಗಿದೆ:
ಧನು ಸಂಕ್ರಾಂತಿ: ಡಿಸೆಂಬರ್ 16, 2021
ದತ್ತಾತ್ರೇಯ ಜಯಂತಿ: ಡಿಸೆಂಬರ್ 18
ಮಾರ್ಗಶೀರ್ಷ ಪೂರ್ಣಿಮೆ: ಡಿಸೆಂಬರ್ 19
ಸಫಲ ಏಕಾದಶಿ: ಡಿಸೆಂಬರ್ 30
ಪೌಷ ಪುತ್ರದ ಏಕಾದಶಿ: ಜನವರಿ 13
ಮಕರ ಸಂಕ್ರಾಂತಿ: ಜನವರಿ 14

ಧರ್ನುಮಾಸದಲ್ಲಿ ವಿಷ್ಣು ಸಹಸ್ರನಾಮ ಪಠಿಸಿ
ಧರ್ನುಮಾಸದಲ್ಲಿ ವಿಷ್ಣು ಸಹಸ್ರನಾಮ ಪಠಿಸಿದರೆ ತುಂಬಾನೇ ಒಳ್ಳೆಯದು. ಬೆಳಗ್ಗೆ ಎದ್ದು ವಿಷ್ಣುವಿಗೆ ಪೂಜೆ ಮಾಡಿ, ವಿಷ್ಣು ಸಹಸ್ರನಾಮ ಪಠಿಸಿ. ವೈಕುಂಠ ಏಕಾಶಿ, ದ್ವಾದಶಿಯಂದು ಉಪವಾಸವಿದ್ದು ವಿಷ್ಣುವಿಗೆ ಪೂಜೆ ಮಾಡಿದರೆ ಬದುಕಿನಲ್ಲಿರುವ ಕಷ್ಟಗಳು ದೂರಾಗುವುದು, ನಿಮ್ಮ ಇಷ್ಟಾರ್ಥಗಳು ನೆರವೇರುವುದು.

ಹುಗ್ಗಿಯನ್ನು ನೈವೇದ್ಯವಾಗಿ ಅರ್ಪಿಸಿ
ಶ್ರೀ ವಿಷ್ಣುವಿಗೆ ಪೂಜೆ ಮಾಡುವಾಗ ಹುಗ್ಗಿಯನ್ನು ತಯಾರಿ ಮಾಡಿ ನೈವೇದ್ಯ ಮಾಡಿ ಇಡಲಾಗುವುದು. ಇದನ್ನು ಮುದ್ಗಾನ್ನ ಎಂದು ಕರೆಯಲಾಗುವುದು. ಹುಗ್ಗಿ ಅಕ್ಕಿಯ ಎರಡರಷ್ಟು ಪ್ರಮಾಣದ ಹೆಸರುಬೇಳೆ, ಒಣಶುಂಠಿ, ಮೆಣಸು, ಜೀರಿಗೆ , ಪತ್ರೆ, ಡಾಲ್ಷಿನ್ನಿ, ಜಾಯಿಕಾಯಿ, ಕೊಬ್ಬರಿ, ಲವಂಗ, ತುಪ್ಪ, ಉಪ್ಪು ಹಾಕಿ ಇದನ್ನು ತಯಾರಿಸಲಾಗುವುದು.
ಧರ್ನುಮಾಸದಲ್ಲಿ ಹುಗ್ಗಿ ಅನ್ನ ಸೇವನೆ ವೈಜ್ಞಾನಿಕ ದೃಷ್ಟಿಯಿಂದಲೂ ಒಳ್ಳೆಯದು. ಧರ್ನುಮಾಸದಲ್ಲಿ ಚಳಿ ಹೆಚ್ಚು, ಈ ಸಮಯದಲ್ಲಿ ಶರೀರದಲ್ಲಿ ಕೊಬ್ಬಿನಂಶ ಕಡಿಮೆಯಾಗುವುದರಿಂದ ಈ ಹುಗ್ಗಿ ಅನ್ನ ಸೇವಿಸಿದರೆ ಶಾರೀರಿಕ ಸಮತೋಲನ ಕಾಪಾಡಿಕೊಳ್ಳಬಹುದು.



Click it and Unblock the Notifications