Latest Updates
-
ಲವ್ ಮ್ಯಾರೇಜ್ನ ಅಡೆತಡೆಗಳು ದೂರ! ಸಂಗಾತಿಗೆ ಹೊಸ ಉದ್ಯೋಗ -
ಯುಗಾದಿ ಹಬ್ಬಕ್ಕೆ ಮಾಡಿ ಗಸೆಗಸೆ ಪಾಯಸ: ಬಾಯಲ್ಲಿ ನೀರು ತರಿಸುವ ಸಿಹಿ -
Summer Garden: ಬೇಸಿಗೆಯಲ್ಲಿ ಬಾಡದ ಹೂವುಗಳಿವು! ಈ 5 ಹೂಗಳನ್ನು ನೆಡಿದ್ರೆ ಸಾಕು.. ನಿಮ್ಮ ಗಾರ್ಡನ್ ಕಲರ್ಫುಲ್ -
ಸೂರ್ಯ ಬುಧನಿಂದ ಬುಧಾದಿತ್ಯ ಯೋಗ; ಈ ರಾಶಿಯವರ ಬದುಕಲ್ಲಿ ಬೆಳಕು, ಕಷ್ಟಗಳು ಪರಿಹಾರ -
ಯುಗಾದಿ ಹೊಸತೊಡಕು.. ಮಟನ್ ಖರೀದಿಸುವಾಗ ಮೋಸ ಹೋಗಬೇಡಿ! ಫ್ರೆಶ್ ಇದ್ಯಾ? ಅಥವಾ ನಿನ್ನೆಯದ್ದೇ? ಹೀಗೆ ಗುರುತಿಸಿ -
ಒಂದು ಹನಿ ಎಣ್ಣೆ ಕೆಳಗೆ ಬೀಳದಂತೆ ಬಾಟಲಿಗೆ ಹಾಕೋ ಐಡಿಯಾ ಗೊತ್ತಾ? ಈ ಟ್ರಿಕ್ಸ್ ನೀವೆಂದು ಬಳಸಿರಲ್ಲ! -
ಸ್ಟೌವ್ ಬೇಡ, ಎಣ್ಣೆ ಬೇಡ..! 5 ನಿಮಿಷದಲ್ಲಿ ಸಿದ್ಧವಾಗುತ್ತೆ ಈ ಇಡಿಚ್ಚ ಮೊಸರು ಚಟ್ನಿ! ಒಮ್ಮೆ ಟ್ರೈ ಮಾಡಿ -
ಬಾಯಿ ಚಪ್ಪರಿಸಿ ಸವಿಯುವ ಮಾವಿನಮಿಡಿ ಉಪ್ಪಿನಕಾಯಿ: ಮನೆಯಲ್ಲೇ ಮಾಡುವ ವಿಧಾನ! -
Eid-ul-Fitr 2026: ಮಾ.20 ಅಥವಾ ಮಾ.21? ಭಾರತದಲ್ಲಿ ರಂಜಾನ್ ಯಾವ ದಿನ? ರಜೆ ಯಾವಾಗ? ತಿಳಿಯಿರಿ -
ಗುರು-ಶುಕ್ರನಿಂದ ಗಜಕೇಸರಿ ರಾಜಯೋಗ: ಯುಗಾದಿ ಬಳಿಕ ಈ ರಾಶಿಯವರ ಜೀವನದಲ್ಲಿ ಅದೃಷ್ಟ!
ಭೂ ತಾಯಿಯ ಮಗಳು 'ಸೀತಾ ಮಾತೆಯ' ರಹಸ್ಯ....
ಜನಕ ರಾಜನ ದತ್ತುಪುತ್ರಿ ಸೀತಾ ಮಾತೆ ತನ್ನ ಸಹನೆ ಮತ್ತು ಪತಿ ಶ್ರೀರಾಮನ ಕಡೆಗಿನ ಅದಮ್ಯ ಒಲವಿನಿಂದ ಲೋಕಮಾತೆಯಾಗಿ ಹೆಸರುಗಳಿಸಿದವಳು. 14 ವರುಷ ವನವಾಸವನ್ನು ತನ್ನ ಪತಿಯೊಂದಿಗೆ ಅನುಭವಿಸಿದ ಸೀತಾ ಮಾತೆ ಎಂತಹ ಕಷ್ಟ ಕಾರ್ಪಣ್ಯಗಳನ್ನು ಮೆಟ್ಟಿ ನಿಂತು ಹೋರಾಡುವ ತ್ಯಾಗ ಮೂರ್ತಿಯಾಗಿ ರಾಮಾಯಣದಲ್ಲಿ ಕಂಡುಬಂದಿದ್ದಾಳೆ.
ರಾಮಾಯಣ ಬರೆದ ವಾಲ್ಮೀಕಿ ಮಹರ್ಷಿ ಕೂಡ ಸೀತೆಯ ಸಹನೆ, ವಿನಯತೆ ಮತ್ತು ಪತಿಭಕ್ತಿಯ ಬಗ್ಗೆ ಹೊಗಳಿ ಬರೆದಿದ್ದಾರೆ. ಜನಕನ ಮಗಳಾದ್ದರಿಂದ ಜಾನಕಿ ಎಂಬ ಹೆಸರೂ ಮಾತೆಗೆ ಇದೆ. ರಾಮನ ಹೆಜ್ಜೆ ಗುರುತು ಸೀತೆ ಲಕ್ಷ್ಮಣರಿಗೆ ಪಾವನ ಏಕೆ?
ಭೂಮಿಯನ್ನು ಊಳುತ್ತಿರುವಾಗ ದೊರಕಿದ ಮಗುವನ್ನು ಜನಕ ರಾಜ ಪ್ರೀತಿಯಿಂದ ಸಲಹುತ್ತಾರೆ. ಅಂತೆಯೇ ಮಗಳಾಗಿ, ಪತ್ನಿಯಾಗಿ ತಾಯಿಯಾಗಿ ಹೆಣ್ಣು ಹೇಗೆ ಲೋಕದಲ್ಲಿ ಇರಬೇಕೆಂಬ ಅಂಶವನ್ನು ಸಾರಿದ್ದಾರೆ. ಇಂದಿನ ಲೇಖನದಲ್ಲಿ ಸೀತಾ ಮಾತೆಯಿಂದ ನಾವು ತಿಳಿದುಕೊಳ್ಳುವ ಅಂಶಗಳೇನು ಎಂಬುದನ್ನು ಅರಿತುಕೊಳ್ಳೋಣ.....

ಸೀತಾ ಎಂಬ ಪದವು ಸಂಸ್ಕೃತದ ಮೂಲ....
ಸೀತಾ ಎಂಬ ಪದವು ಸಂಸ್ಕೃತದಿಂದ ವಿಭಜನೆಗೊಂಡಿದ್ದು, ತನ್ನ ತಂದೆಗೆ ಭೂಮಿಯನ್ನು ಉಳುತ್ತಿರುವಾಗ ದೊರಕಿದ ಮಗಳಾಗಿದ್ದಾಳೆ ಸೀತೆ. ಭೂಮಿಯ ಫಲವತ್ತತೆಯ ಸಂಕೇತವಾಗಿ ಆಕೆಯನ್ನು ಬಣ್ಣಿಸಲಾಗಿದೆ.

ಭೂ ತಾಯಿಯ ಮಗಳು....
ಭೂ ತಾಯಿಯ ಮಗಳು ಎಂಬುದಾಗಿ ಕೂಡ ಸೀತೆ ಪುರಾಣದಲ್ಲಿ ಸ್ಥಾನ ಪಡೆದುಕೊಂಡಿದ್ದಾರೆ, ಆದ್ದರಿಂದ ಭೂಮಿಜೆ ಎಂಬ ಹೆಸರೂ ಕೂಡ ಆಕೆಗಿದೆ. ತನ್ನ ಪತಿ ಶ್ರೀರಾಮನೊಂದಿಗೆ ಆಕೆ ವನವಾಸವನ್ನು ಅನುಭವಿಸುತ್ತಿದ್ದಾಗ "ವೈದೇಹಿ" ಎಂಬುದಾಗಿ ಕೂಡ ಆಕೆಯನ್ನು ಕರೆದಿದ್ದಾರೆ.

ಜಾನಕಪುರ v/s ಸೀತಾಮರಾಹಿ
ಸೀತಾ ಮಾತೆಯ ಹುಟ್ಟಿದ ಸ್ಥಳದ ಕುರಿತು ಸಾಕಷ್ಟು ವದಂತಿಗಳಿವೆ. ನೇಪಾಳದ ದಕ್ಷಿಣದಲ್ಲಿರುವ ಮಿಥಿಲಾದ ಜಾನಕಪುರ ಆಕೆಯ ಜನ್ಮಸ್ಥಳ ಎಂಬುದಾಗಿ ಕೆಲವರು ಹೇಳಿದರೆ, ಬಿಹಾರದಲ್ಲಿರುವ ಸೀತಾಮರಾಹಿ ಎಂಬುದಾಗಿ ಇನ್ನು ಕೆಲವರು ಹೇಳುತ್ತಾರೆ.

ಹಿಂದಿನ ಜನ್ಮದಲ್ಲಿ ವೇದವತಿ
ಸೀತಾ ಮಾತೆಯು ವೇದವತಿ ಎಂಬ ಹೆಸರಿನಿಂದ ಹಿಂದಿನ ಜನ್ಮದಲ್ಲಿ ವಿಷ್ಣುವನ್ನು ವರಿಸಲು ತಪಸ್ಸು ಮಾಡುತ್ತಿದ್ದ ಸಂದರ್ಭದಲ್ಲಿ ರಾವಣನ ಕಿರುಕುಳಕ್ಕೆ ಒಳಗಾಗಿದ್ದರು. ಮುಂದಿನ ಜನ್ಮದಲ್ಲಿ ವಿನಾಶಗೊಳ್ಳುವ ಶಾಪವನ್ನು ವೇದವತಿಯಿಂದ ರಾವಣ ಪಡೆದುಕೊಂಡಿದ್ದನು.

ಪುರಾಣದಲ್ಲಿ ಉಲ್ಲೇಖಿಸಿರುವ ಪ್ರಕಾರ
ಪುರಾಣದಲ್ಲಿ ಉಲ್ಲೇಖಿಸಿರುವ ಪ್ರಕಾರ ರಾವಣ ಮತ್ತು ಮಂಡೋದರಿಯ ಪ್ರಥಮ ಪುತ್ರಿ ಸೀತೆಯಾಗಿದ್ದಾರೆ. ಮಂಡೋದರಿಯಲ್ಲಿ ಜನಿಸಿದ ಪ್ರಥಮ ಮಗುವಿನಿಂದ ಸಂಪೂರ್ಣ ಸ್ವತ್ತು ನಾಶವಾಗುತ್ತದೆ ಎಂಬುದಾಗಿ ಜ್ಯೋತಿಷಿಗಳು ಹೇಳಿದ್ದರಿಂದ ಮಗುವನ್ನು ಭೂಮಿಯಲ್ಲಿ ಹೂಳಲು ನಿರ್ಧರಿಸಿದರು. ಈ ಮಗುವೇ ನಂತರ ಜನಕನಿಗೆ ದೊರಕಿ ಮಿಥಿಲಾದ ರಾಜಕುಮಾರಿಯಾಗಿ ಬೆಳೆದರು.

ಮಾಯಾ ಸೀತೆ.....
ಸೀತೆಯ ಬಗ್ಗೆ ಇರುವ ಇನ್ನೊಂದು ಮಹತ್ತರ ಅಂಶವೆಂದರೆ, ರಾಮಾಯಣದಲ್ಲಿ ಮಾಯಾ ಸೀತೆಯ ಬಗ್ಗೆ ಉಲ್ಲೇಖವಿದೆ. ಇದರ ಪ್ರಕಾರ ರಾವಣ ಅಪಹರಿಸಿದ್ದು ಮಾಯಾ ಸೀತೆಯಾಗಿದ್ದು ನಿಜವಾದ ಸೀತೆ ಬೆಂಕಿಯ ದೇವತೆ ಅಗ್ನಿಯಲ್ಲಿ ಆಶ್ರಯವನ್ನು ಪಡೆದುಕೊಂಡಿದ್ದರು. ಅಗ್ನಿಯು ಆಕೆಯನ್ನು ಪಾರ್ವತಿಯಲ್ಲಿಗೆ ಕರೆದೊಯ್ದಿದ್ದರು.

ಮಾಯಾ ಸೀತೆ.....
ಯುದ್ಧ ಸಮಾಪ್ತಿಯಾದ ಬಳಿಕ ಆಕೆ ರಾಮನ ಬಳಿಗೆ ಬಂದರು. ಮಾಯಾ ಸೀತೆಯು ತನ್ನ ಮುಂದಿನ ಜನ್ಮದಲ್ಲಿ ದ್ರೌಪದಿಯಾಗಿ ಮರುಜನ್ಮವನ್ನು ಪಡೆದುಕೊಂಡರು.



Click it and Unblock the Notifications











