Latest Updates
-
ಉತ್ತರಾಖಂಡದಲ್ಲಿ ಆರೆಂಜ್ ಅಲರ್ಟ್: ಹೋಟೆಲ್ ರೂಮ್ನಲ್ಲೇ ಫಿಟ್ ಆಗಿರಲು ಈ ಸರಳ ವ್ಯಾಯಾಮಗಳನ್ನು ಮಾಡಿ! -
UGC-NET ಪರೀಕ್ಷೆಯ ಗೊಂದಲ: ವಿದ್ಯಾರ್ಥಿಗಳ ಆತಂಕ ದೂರ ಮಾಡಲು ಪೋಷಕರಿಗೆ ಇಲ್ಲಿದೆ 48 ಗಂಟೆಗಳ ಸ್ಟಡಿ-ರಿಸೆಟ್ ಪ್ಲಾನ್! -
ದೆಹಲಿ ಮಳೆ: ಗುಡುಗು-ಮಿಂಚಿನಿಂದ ನಿಮ್ಮ ಎಲೆಕ್ಟ್ರಾನಿಕ್ ವಸ್ತುಗಳನ್ನು ರಕ್ಷಿಸಲು ಈ 15 ನಿಮಿಷದ ಟಿಪ್ಸ್ ಪಾಲಿಸಿ! -
ಎನರ್ಜಿ ಡ್ರಿಂಕ್ಸ್ ಕುಡಿಯುವ ಮುನ್ನ ಎಚ್ಚರ! FSSAI ಹೊಸ ನಿಯಮ ಮತ್ತು ಆರೋಗ್ಯಕರ ಪರ್ಯಾಯಗಳು -
ಗುರುಗ್ರಾಮದಲ್ಲಿ ವರುಣನ ಆರ್ಭಟ: ಕಚೇರಿಗೆ ಹೋಗ್ಬೇಡಿ, ಮನೆಯಿಂದಲೇ ಕೆಲಸ ಮಾಡಿ - ಪೊಲೀಸರ ಮಹತ್ವದ ಸೂಚನೆ -
ಮಳೆಗಾಲದ ಜಡತ್ವಕ್ಕೆ ಗುಡ್ ಬೈ: ಮುಂಬೈ-ಪುಣೆ ಜನರಿಗಾಗಿ 10 ನಿಮಿಷದ ಸರಳ ವ್ಯಾಯಾಮಗಳು -
ಮುಂಬೈ ಮಳೆ ಆರ್ಭಟ: ಸಂಗಾತಿಯ ಸುರಕ್ಷತೆಗಾಗಿ ನೀವು ಮಾಡಬೇಕಾದ ಪ್ರಮುಖ ಕೆಲಸಗಳಿವು! -
ಭಾರಿ ಮಳೆ ಎಚ್ಚರಿಕೆ: ನಿಮ್ಮ ಮನೆಯ ಮಳೆನೀರು ಕೊಯ್ಲು ವ್ಯವಸ್ಥೆ ಹಾಳಾಗದಂತೆ ತಡೆಯುವುದು ಹೇಗೆ? -
ಮಳೆಗಾಲದಲ್ಲಿ ಮಕ್ಕಳ ಲಂಚ್ಬಾಕ್ಸ್ ಸುರಕ್ಷತೆ: ಆರೋಗ್ಯಕರ ಮತ್ತು ಹೈ-ಪ್ರೋಟೀನ್ ಆಹಾರದ ಟಿಪ್ಸ್ -
ಮುಂಬೈನಲ್ಲಿ ಭಾರೀ ಮಳೆ: ಇಂದು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ, ಪೋಷಕರು ಗಮನಿಸಿ!
ಝೆನ್ ಕಥೆ: ದುಡಿಯದೆ ತಿನ್ನುವುದು ಒಳ್ಳೆಯದಲ್ಲ

ಗುರುಗಳು ಈ ಇಳಿ ವಯಸ್ಸಿನಲ್ಲಿ ಆ ರೀತಿ ಕಷ್ಟಪಟ್ಟು ದುಡಿಯುವುದು ನೋಡಲು ಶಿಷ್ಯರಿಗೆ ತುಂಬಾ ಸಂಕಟವಾಗುತ್ತಿತ್ತು. ಈ ರೀತಿ ಕೆಲಸ ಮಾಡಬೇಡಿ, ಒಂದು ಕಡೆ ಕೂತು ವಿಶ್ರಾಂತಿ ತೆಗೆದುಕೊಳ್ಳಿ ಎಂದು ಎಷ್ಟು ಹೇಳಿದರೂ ಇವರ ಮಾತು ಕೇಳುತ್ತಿರಲಿಲ್ಲ.
ಹೇಗಾದರೂ ಮಾಡಿ ಗುರುಗಳು ಕೆಲಸ ಮಾಡುವುದನ್ನು ನಿಲ್ಲಿಸಬೇಕು ಎಂದು ಯೋಚಿಸಿದ ಶಿಷ್ಯರು ಒಂದು ಉಪಾಯ ಹೂಡಿದರು. ಅದರಂತೆ ಗುರುಗಳು ಕೆಲಸ ಮಾಡುವಾಗ ಬಳಸುತ್ತಿದ್ದ ಗುದ್ದಲಿ, ಕತ್ತಿ ಮುಂತಾದ ಉಪಕರಣಗಳನ್ನು ಬಚ್ಚಿಟ್ಟರು. ಗುರುಗಳು ಯಾವತ್ತಿನಂತೆ ತೋಟದಲ್ಲಿ ಕೆಲಸ ಮಾಡಲು ಬಂದಾಗ ಯಾವುದೇ ಉಪಕರಣಗಳು ಕಣ್ಣಿಗೆ ಬೀಳಲಿಲ್ಲ, ಇದು ತನ್ನ ಶಿಷ್ಯರ ಕೆಲಸವೆಂದು ಗೊತ್ತಾಯಿತು.
ತನ್ನ ಕೆಲಸದ ಸಾಮಾನುಗಳನ್ನು ಮರಳಿ ಕೊಡುವವರೆಗೆ ತಿನ್ನುವುದಿಲ್ಲ ಎಂದು ಉಪವಾಸ ಕೂತರು. ಈ ರೀತಿ ಎರಡು ದಿನ ಏನೂ ತಿನ್ನಲಿಲ್ಲ. ಕೊನೆಗೆ ಗುರುವಿನ ಹಠದ ಮುಂದೆ ಶಿಷ್ಯರು ಸೋತರು. ಗುರುವಿಗೆ ತಾವು ಬಚ್ಚಿಟ್ಟಿದ್ದ ಸಾಮಾನುಗಳನ್ನು ಹಿಂತಿರುಗಿಸಿದರು. ಆಗ ಗುರುಗಳು ಕೆಲಸವನ್ನು ಮಾಡಿ ನಂತರ ಊಟ ಮಾಡಿದರು. ಗುರುಗಳನ್ನೇ ಆಶ್ಚರ್ಯದಿಂದ ನೋಡುತ್ತಿದ್ದ ಶಿಷ್ಯರ ಹತ್ತಿರ "ಮೈ ಬಗ್ಗಿಸಿ ದುಡಿಯದೆ ತಿನ್ನುವುದು ಒಳ್ಳೆಯ ಲಕ್ಷಣವಲ್ಲ" ಅಂದರು.



Click it and Unblock the Notifications