Latest Updates
-
ಕರಣ್-ತೇಜಸ್ವಿ ಗುಟ್ಟಾಗಿ ಮದುವೆಯಾದ್ರಾ? ವೈರಲ್ ವಿಡಿಯೋ ಹಿಂದಿನ ಅಸಲಿ ಸತ್ಯ ಇಲ್ಲಿದೆ! -
ಮುಂಬೈನಲ್ಲಿ ನೀರು ಕಡಿತ: ಬಿಎಂಸಿ ಎಚ್ಚರಿಕೆ ಬೆನ್ನಲ್ಲೇ ಮನೆಯಲ್ಲಿ ನೀರು ಉಳಿಸಲು ಈ ಟಿಪ್ಸ್ ಮಿಸ್ ಮಾಡ್ಬೇಡಿ! -
ಬಿಸಿಲಿನ ತಾಪಕ್ಕೆ ಸುಸ್ತಾಗಿದ್ದೀರಾ? ದೇಹವನ್ನು ತಂಪಾಗಿಡಲು ಈ ಆಹಾರಗಳೇ ಮದ್ದು! -
ಕಿರೀಟ ಯಾರ ಪಾಲಾಗಲಿದೆ? ದೆಹಲಿಯಲ್ಲಿ ಮಿಸ್ ಗ್ರ್ಯಾಂಡ್ ಇಂಡಿಯಾ 2026 ಫಿನಾಲೆ ಸಂಭ್ರಮದ ಕ್ಷಣಗಳು -
ಹವಾಮಾನದಲ್ಲಿ ಭಾರಿ ಬದಲಾವಣೆ: ಮೇ 12-13 ರಂದು ಹೊರಗೆ ಹೋಗುವ ಮುನ್ನ ಈ ಎಚ್ಚರಿಕೆ ಮರೆಯದಿರಿ! -
ದೆಹಲಿ ಮದುವೆ ಸೀಸನ್: ಮಳೆ ಮತ್ತು ಬಿರುಗಾಳಿಯಿಂದ ನಿಮ್ಮ ಸಂಭ್ರಮವನ್ನು ಕಾಪಾಡಿಕೊಳ್ಳುವುದು ಹೇಗೆ? -
ಬಿಸಿಗಾಳಿ-ಮಳೆ ಎಚ್ಚರಿಕೆ: ನಿಮ್ಮ ಮನೆ ಮತ್ತು ಗಿಡಗಳನ್ನು ಸುರಕ್ಷಿತವಾಗಿಡಲು ಈ ಟಿಪ್ಸ್ ಫಾಲೋ ಮಾಡಿ! -
ಬಿಸಿಗಾಳಿಯ ಆರ್ಭಟಕ್ಕೆ ಸುಸ್ತಾಗಿದ್ದೀರಾ? ಈ ಆಹಾರ ಕ್ರಮ ಪಾಲಿಸಿದರೆ ಬಿಸಿಲು ನಿಮ್ಮನ್ನೇನೂ ಮಾಡಲ್ಲ! -
ಕಾನ್ 2026: ರೆಡ್ ಕಾರ್ಪೆಟ್ ಮೇಲೆ ಭಾರತೀಯರ ಅಬ್ಬರ, ಈ ಬಾರಿ ಫ್ಯಾಷನ್ ಲೋಕವೇ ದಂಗು! -
ಪ್ರಧಾನಿ ಮೋದಿ ಭೇಟಿಯ ನಂತರ ಟ್ರೆಂಡಿಂಗ್: ಕೇವಲ 15 ನಿಮಿಷದಲ್ಲಿ ನಿಮ್ಮ ದಿನವನ್ನು ಬದಲಾಯಿಸುವ ಮ್ಯಾಜಿಕ್ ಯೋಗ ಟಿಪ್ಸ್!
ಝೆನ್ ಕಥೆ: ದುಡಿಯದೆ ತಿನ್ನುವುದು ಒಳ್ಳೆಯದಲ್ಲ

ಗುರುಗಳು ಈ ಇಳಿ ವಯಸ್ಸಿನಲ್ಲಿ ಆ ರೀತಿ ಕಷ್ಟಪಟ್ಟು ದುಡಿಯುವುದು ನೋಡಲು ಶಿಷ್ಯರಿಗೆ ತುಂಬಾ ಸಂಕಟವಾಗುತ್ತಿತ್ತು. ಈ ರೀತಿ ಕೆಲಸ ಮಾಡಬೇಡಿ, ಒಂದು ಕಡೆ ಕೂತು ವಿಶ್ರಾಂತಿ ತೆಗೆದುಕೊಳ್ಳಿ ಎಂದು ಎಷ್ಟು ಹೇಳಿದರೂ ಇವರ ಮಾತು ಕೇಳುತ್ತಿರಲಿಲ್ಲ.
ಹೇಗಾದರೂ ಮಾಡಿ ಗುರುಗಳು ಕೆಲಸ ಮಾಡುವುದನ್ನು ನಿಲ್ಲಿಸಬೇಕು ಎಂದು ಯೋಚಿಸಿದ ಶಿಷ್ಯರು ಒಂದು ಉಪಾಯ ಹೂಡಿದರು. ಅದರಂತೆ ಗುರುಗಳು ಕೆಲಸ ಮಾಡುವಾಗ ಬಳಸುತ್ತಿದ್ದ ಗುದ್ದಲಿ, ಕತ್ತಿ ಮುಂತಾದ ಉಪಕರಣಗಳನ್ನು ಬಚ್ಚಿಟ್ಟರು. ಗುರುಗಳು ಯಾವತ್ತಿನಂತೆ ತೋಟದಲ್ಲಿ ಕೆಲಸ ಮಾಡಲು ಬಂದಾಗ ಯಾವುದೇ ಉಪಕರಣಗಳು ಕಣ್ಣಿಗೆ ಬೀಳಲಿಲ್ಲ, ಇದು ತನ್ನ ಶಿಷ್ಯರ ಕೆಲಸವೆಂದು ಗೊತ್ತಾಯಿತು.
ತನ್ನ ಕೆಲಸದ ಸಾಮಾನುಗಳನ್ನು ಮರಳಿ ಕೊಡುವವರೆಗೆ ತಿನ್ನುವುದಿಲ್ಲ ಎಂದು ಉಪವಾಸ ಕೂತರು. ಈ ರೀತಿ ಎರಡು ದಿನ ಏನೂ ತಿನ್ನಲಿಲ್ಲ. ಕೊನೆಗೆ ಗುರುವಿನ ಹಠದ ಮುಂದೆ ಶಿಷ್ಯರು ಸೋತರು. ಗುರುವಿಗೆ ತಾವು ಬಚ್ಚಿಟ್ಟಿದ್ದ ಸಾಮಾನುಗಳನ್ನು ಹಿಂತಿರುಗಿಸಿದರು. ಆಗ ಗುರುಗಳು ಕೆಲಸವನ್ನು ಮಾಡಿ ನಂತರ ಊಟ ಮಾಡಿದರು. ಗುರುಗಳನ್ನೇ ಆಶ್ಚರ್ಯದಿಂದ ನೋಡುತ್ತಿದ್ದ ಶಿಷ್ಯರ ಹತ್ತಿರ "ಮೈ ಬಗ್ಗಿಸಿ ದುಡಿಯದೆ ತಿನ್ನುವುದು ಒಳ್ಳೆಯ ಲಕ್ಷಣವಲ್ಲ" ಅಂದರು.



Click it and Unblock the Notifications