Latest Updates
-
ವಿಶ್ವ ಸಂಗೀತ ದಿನ: ಸಂಗಾತಿಯೊಂದಿಗೆ ಮರೆಯಲಾಗದ ಕ್ಷಣ ಕಳೆಯಲು ಇಲ್ಲಿದೆ ಸಿಂಪಲ್ ಪ್ಲಾನ್! -
ಮುಂಬೈನಲ್ಲಿ ತೀವ್ರ ನೀರಿನ ಅಭಾವ: ಬಿಎಂಸಿ ಕಠಿಣ ನಿಯಮಗಳ ನಡುವೆ ನೀರು ಉಳಿಸಲು ಈ ಟಿಪ್ಸ್ ಪಾಲಿಸಿ -
ಮಳೆಗಾಲದಲ್ಲಿ ಸಿಕಲ್ ಸೆಲ್ ಸಮಸ್ಯೆ: ಆರೋಗ್ಯ ಕಾಪಾಡಲು ಈ ಆಹಾರ ಕ್ರಮ ಪಾಲಿಸಿ, ನೋವು ದೂರವಿಡಿ! -
ಟೆಲಿಗ್ರಾಂ ಬ್ಯಾನ್: ಜೂನ್ 22ರವರೆಗೆ ಈ ಆಪ್ಗಳನ್ನು ಬಳಸಿ, ಇಲ್ಲದಿದ್ದರೆ ತೊಂದರೆ ಕಟ್ಟಿಟ್ಟ ಬುತ್ತಿ! -
ಮಳೆಗಾಲದಲ್ಲಿ 'ರನ್ ಫಾರ್ ಯೋಗ': ಜಾರುವ ರಸ್ತೆಯಲ್ಲಿ ಸುರಕ್ಷಿತವಾಗಿ ಓಡಲು ಈ ಟಿಪ್ಸ್ ಪಾಲಿಸಿ -
ಫಾದರ್ಸ್ ಡೇ: ಅಪ್ಪನ ಜೊತೆಗಿನ ಮೌನ ಮುರಿಯಲು ಮತ್ತು ಸಂಬಂಧ ಗಟ್ಟಿಗೊಳಿಸಲು ಇಲ್ಲಿದೆ ಸರಳ ಟಿಪ್ಸ್ -
ಮುಂಬೈ ಜನರೇ ಎಚ್ಚರ! ಜೂನ್ 18-19ರಂದು ಭಾರಿ ಹೈ-ಟೈಡ್ ಭೀತಿ: ಪ್ರವಾಹದಿಂದ ಪಾರಾಗಲು ಈ ಮುನ್ನೆಚ್ಚರಿಕೆ ಮರೆಯದಿರಿ -
ಮಳೆಗಾಲದ ಎಚ್ಚರಿಕೆ: ಟೈಫಾಯಿಡ್ ಮತ್ತು ಸೋಂಕಿನಿಂದ ಪಾರಾಗಲು ನಿಮ್ಮ ಆಹಾರ ಕ್ರಮ ಹೀಗಿರಲಿ -
ಯುಜಿಸಿ ನೆಟ್ 2026 ಪ್ರವೇಶ ಪತ್ರ ಬಿಡುಗಡೆ: ಪರೀಕ್ಷಾ ಕೇಂದ್ರಕ್ಕೆ ತೆರಳುವ ಮುನ್ನ ಈ ಎಚ್ಚರಿಕೆ ಮರೆಯದಿರಿ! -
ಸಿಡಿಲು-ಮಳೆಯ ಎಚ್ಚರಿಕೆ: ಹೊರಗೆ ಹೋಗುವ ಸಾಹಸ ಬೇಡ, ಮನೆಯಲ್ಲೇ ಫಿಟ್ ಆಗಿರಲು ಈ ಟಿಪ್ಸ್ ಫಾಲೋ ಮಾಡಿ!
ಝೆನ್ ಕಥೆ: ದುಡಿಯದೆ ತಿನ್ನುವುದು ಒಳ್ಳೆಯದಲ್ಲ

ಗುರುಗಳು ಈ ಇಳಿ ವಯಸ್ಸಿನಲ್ಲಿ ಆ ರೀತಿ ಕಷ್ಟಪಟ್ಟು ದುಡಿಯುವುದು ನೋಡಲು ಶಿಷ್ಯರಿಗೆ ತುಂಬಾ ಸಂಕಟವಾಗುತ್ತಿತ್ತು. ಈ ರೀತಿ ಕೆಲಸ ಮಾಡಬೇಡಿ, ಒಂದು ಕಡೆ ಕೂತು ವಿಶ್ರಾಂತಿ ತೆಗೆದುಕೊಳ್ಳಿ ಎಂದು ಎಷ್ಟು ಹೇಳಿದರೂ ಇವರ ಮಾತು ಕೇಳುತ್ತಿರಲಿಲ್ಲ.
ಹೇಗಾದರೂ ಮಾಡಿ ಗುರುಗಳು ಕೆಲಸ ಮಾಡುವುದನ್ನು ನಿಲ್ಲಿಸಬೇಕು ಎಂದು ಯೋಚಿಸಿದ ಶಿಷ್ಯರು ಒಂದು ಉಪಾಯ ಹೂಡಿದರು. ಅದರಂತೆ ಗುರುಗಳು ಕೆಲಸ ಮಾಡುವಾಗ ಬಳಸುತ್ತಿದ್ದ ಗುದ್ದಲಿ, ಕತ್ತಿ ಮುಂತಾದ ಉಪಕರಣಗಳನ್ನು ಬಚ್ಚಿಟ್ಟರು. ಗುರುಗಳು ಯಾವತ್ತಿನಂತೆ ತೋಟದಲ್ಲಿ ಕೆಲಸ ಮಾಡಲು ಬಂದಾಗ ಯಾವುದೇ ಉಪಕರಣಗಳು ಕಣ್ಣಿಗೆ ಬೀಳಲಿಲ್ಲ, ಇದು ತನ್ನ ಶಿಷ್ಯರ ಕೆಲಸವೆಂದು ಗೊತ್ತಾಯಿತು.
ತನ್ನ ಕೆಲಸದ ಸಾಮಾನುಗಳನ್ನು ಮರಳಿ ಕೊಡುವವರೆಗೆ ತಿನ್ನುವುದಿಲ್ಲ ಎಂದು ಉಪವಾಸ ಕೂತರು. ಈ ರೀತಿ ಎರಡು ದಿನ ಏನೂ ತಿನ್ನಲಿಲ್ಲ. ಕೊನೆಗೆ ಗುರುವಿನ ಹಠದ ಮುಂದೆ ಶಿಷ್ಯರು ಸೋತರು. ಗುರುವಿಗೆ ತಾವು ಬಚ್ಚಿಟ್ಟಿದ್ದ ಸಾಮಾನುಗಳನ್ನು ಹಿಂತಿರುಗಿಸಿದರು. ಆಗ ಗುರುಗಳು ಕೆಲಸವನ್ನು ಮಾಡಿ ನಂತರ ಊಟ ಮಾಡಿದರು. ಗುರುಗಳನ್ನೇ ಆಶ್ಚರ್ಯದಿಂದ ನೋಡುತ್ತಿದ್ದ ಶಿಷ್ಯರ ಹತ್ತಿರ "ಮೈ ಬಗ್ಗಿಸಿ ದುಡಿಯದೆ ತಿನ್ನುವುದು ಒಳ್ಳೆಯ ಲಕ್ಷಣವಲ್ಲ" ಅಂದರು.



Click it and Unblock the Notifications