Just In
- 31 min ago ಏಪ್ರಿಲ್ 24 ದಿನ ಭವಿಷ್ಯ: ಬುಧವಾರದ ಈ ದಿನ ನಿಮ್ಮ ರಾಶಿಫಲ ಹೇಗಿದೆ?
- 2 hrs ago UPSCಯಲ್ಲಿ 2ನೇ ರ್ಯಾಂಕ್ ಗಳಿಸಿದ ಸಾಧಕನ ಡ್ಯಾನ್ಸ್ ವೀಡಿಯೋ ವೈರಲ್: ಇವರ ಬದುಕಿನಲ್ಲಿ ನಡೆದಿದೆ ಹಲವು ದುರಂತಗಳು
- 3 hrs ago ಹುಟ್ಟುಹಬ್ಬದ ಕೇಕ್ ತಿಂದು ಬಾಲಕಿ ಸಾವು..! ಕೇಕ್ನಲ್ಲಿತ್ತು ಕೃತಕ ಸಿಹಿ ಸಾಕ್ರರಿನ್..!
- 4 hrs ago ಮೊಬೈಲ್ ಬೇಡ..ಗ್ಯಾಜೆಟ್ ಬೇಡ..ಹಸ್ತದಿಂದ ಪೇಮೆಂಟ್ ಮಾಡಿ..! ಇದು ಟಿಜಿಟಲ್ ಕ್ರಾಂತಿ..!
Don't Miss
- Sports CSK vs LSG IPL 2024: ರುತುರಾಜ್ ಭರ್ಜರಿ ಶತಕ, ದುಬೆ ಸ್ಫೋಟಕ ಬ್ಯಾಟಿಂಗ್; ಲಕ್ನೋಗೆ ಬೃಹತ್ ಗುರಿ ನೀಡಿದ ಚೆನ್ನೈ
- News Narendra Modi: ಕರ್ನಾಟಕಕ್ಕೆ ಏಪ್ರಿಲ್ 29, 29ಕ್ಕೆ ಪ್ರಧಾನಿ ಮೋದಿ ಆಗಮನ
- Automobiles ಪ್ರತಿ ಕಿ.ಮೀ ಚಲಿಸಲು 3.3 ರೂ. ವೆಚ್ಚ: 10 ಜನರು ಪ್ರಯಾಣಿಸುವ ಟಾಟಾ ಮ್ಯಾಜಿಕ್ ಬೈ-ಫ್ಯೂಯಲ್ ಲಗ್ಗೆ
- Movies ನಿರಂತರ ಪ್ಲಾಫ್ ಸಿನಿಮಾಳನ್ನ ನೀಡಿದ ಈ ವಿಶ್ವಸುಂದರಿ ಯಾರು ಗೊತ್ತಾ...?
- Finance ಸಾಲ ತಂದು ನೌಕರರಿಗೆ ಸಂಬಳ ನೀಡಿದ ಬೈಜುಸ್ ಸಂಸ್ಥೆ!
- Technology Realme: ಭಾರತದಲ್ಲಿ ರಿಯಲ್ಮಿ C65 5G ಸ್ಮಾರ್ಟ್ಫೋನ್ ಲಾಂಚ್ಗೆ ದಿನಾಂಕ ಫಿಕ್ಸ್! ಫೀಚರ್ಸ್ ಲೀಕ್..
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಗಣೇಶ ಚತುರ್ಥಿ 2021: ಪೂಜಾ ಶುಭ ಮುಹೂರ್ತ, ಮಹತ್ವ ಹಾಗೂ ಪೂಜೆ ಮಾಡುವ ಪದ್ಧತಿ
ಭಾದ್ರಪದ ಮಾಸ ಶುಕ್ಲಪಕ್ಷದ 4ನೇ ದಿನ ವಿಘ್ನ ನಿವಾರಕನ ಜನ್ಮ ದಿನ. ಈ ದಿನ ಲಂಬೋದರ ಮೋದಕ ಹಾಗೂ ಕರ್ಜಿಕಾಯಿ ಸೇವಿಸುತ್ತಾ, ಶೋಡಶೋಪಚಾರ ಸೇವೆ ಪಡೆಯಲು ಮನೆ ಮನೆಗೆ ಬರುತ್ತಾನೆ ಹಾಗೂ ತವರು ಮನೆಗೆ ಬಂದ ತಾಯಿ ಗೌರಿಯನ್ನು ಕರೆದುಕೊಂಡು ಹೋಗಲು ಬರುತ್ತಾನೆ ಎಂದು ಹಿಂದೂ ಪುರಾಣದಲ್ಲಿ ಹೇಳಲಾಗಿದೆ.
ಅಂತೆಯೇ 2021ರಲ್ಲಿ ನಾಡಿದ ಪ್ರಸಿದ್ಧ ಹಿಂದೂ ಹಬ್ಬಗಳಲ್ಲಿ ಒಂದಾದ ವಿನಾಯಕ ಚತುರ್ಥಿಯು ಸೆಪ್ಟೆಂಬರ್ 10ರಂದು ಆಚರಿಸಲಾಗುತ್ತದೆ. ಇದನ್ನು ಭಾರತದಾದ್ಯಂತಲೂ ಆಚರಿಸುವ ವಾಡಿಕೆ ಇದೆ. ಈ ಸಾಲಿನ ಗಣೇಶ ಚತುರ್ಥಿಯಂದು ಪೂಜೆಗೆ ಶುಭ ಮುಹೂರ್ತ ಯಾವುದು, ಹಬ್ದದ ಮಹತ್ವವೇನು, ಪೂಜೆ ಮಾಡುವ ಪದ್ಧತಿ ಹೇಗೆ ಎಂಬುದರ ಬಗ್ಗೆ ತಿಳಿಯೋಣ.
ಗಣೇಶ ಚತುರ್ಥಿಯ ಪೂಜಾ ದಿನ ಹಾಗೂ ಶುಭ ಮುಹೂರ್ತ
ಭಾದ್ರಪದ ಮಾಸ, ಶುಕ್ಲ ಪಕ್ಷ, ಚತುರ್ಥಿಯಂದು
ಸೆಪ್ಟೆಂಬರ್ 10 ಶುಕ್ರವಾರ
ಪೂಜೆಗೆ ಮುಹೂರ್ತ: ಬೆಳಿಗ್ಗೆ 11.03 ರಿಂದ ಮಧ್ಯಾಹ್ನ 1.33 ರವರೆಗೆ
ಸೆಪ್ಟೆಂಬರ್ 10 ಶುಕ್ರವಾರ ಚತುರ್ಥಿ ತಿಥಿ ಆರಂಭ: 12.18 ರಿಂದ
ಚತುರ್ಥಿ ತಿಥಿ ಅಂತ್ಯ ಸಮಯ: ರಾತ್ರಿ 9.57ರವರೆಗೆ
ಗಣೇಶ ಚತುರ್ಥಿಯ ಮಹತ್ವ
ಬಾಧ್ರಪದ ಮಾಸ, ಶುಕ್ಲ ಪಕ್ಷ, ಚತುರ್ಥಿಯಂದು ಗಣೇಶನನ್ನು ಪೂಜಿಸಲು ಅತ್ಯಂತ ಮಹತ್ವದ ದಿನವೆಂದು ಪರಿಗಣಿಸಲಾಗಿದೆ, ಈ ದಿನ ವಿನಾಯಕನನ್ನು ಶ್ರದ್ಧಾ ಭಕ್ತಿಯಿಂದ ಪೂಜಿಸಿದರೆ ಅವನ ಕೃಪೆಗೆ ಪಾತ್ರರಾಗಬಹುದು ಎಂದು ಹೇಳಲಾಗುತ್ತದೆ. ಅತ್ಯಂತ ಬುದ್ಧಿವಂತ, ಜ್ಞಾನವಂತ, ಸಂಪತ್ತು ಹಾಗೂ ಜ್ಞಾನದ ದೇವರು ಮತ್ತು ಎಲ್ಲಾ ಅಡೆತಡೆಗಳನ್ನು ನಿವಾರಿಸುವವನು ಎಂದು ಪರಿಗಣಿಸಲಾಗಿದೆ. ಎಲ್ಲಾ ದೇವರುಗಳಲ್ಲಿ ಮತ್ತು ಯಾವುದೇ ಪೂಜೆ ಅಥವಾ ಆಚರಣೆಯನ್ನು ಪ್ರಾರಂಭಿಸುವ ಮೊದಲು ಗಣೇಶನಿಗೆ ಮೊದಲು ಪೂಜಿಸಲಾಗುತ್ತದೆ.
ಗಣೇಶ ಪುರಾಣ ಮತ್ತು ಸ್ಕಂದ ಪುರಾಣದ ಪ್ರಕಾರ, ಗಣೇಶನು ಶುಕ್ಲ ಚತುರ್ಥಿಯಂದು ಭಾದ್ರಪದ ಮಾಸದಲ್ಲಿ ಜನಿಸಿದನು. ಆದಾಗ್ಯೂ, ಶಿವ ಧರ್ಮದ ಪ್ರಕಾರ ಗಣೇಶ ಮಾಘ ಮಾಸದಲ್ಲಿ ಕೃಷ್ಣ ಚತುರ್ಥಿಯಂದು ಜನಿಸಿದರು ಎಂದೂ ಸಹ ಹೇಳಲಾಗುತ್ತದೆ.
ವಿಘ್ನಗಳನ್ನು ನಿವಾರಿಸುತ್ತಾನೆ, ಜೀವನದಲ್ಲಿ ಎದುರಾಗುವ ಅಡೆತಡೆಗಳನ್ನು ಸುಲಭವಾಗಿ ಪರಿಹರಿಸುತ್ತಾನೆ, ಸದಾ ಭಕ್ತರ ಪರವಾಗಿರುವ ವಿನಾಯಕ ಎಲ್ಲ ದೇವತೆಗಳ ನಡುವೆ ಮೊದಲ ಸ್ಥಾನವನ್ನು ಪಡೆಯುತ್ತಾನೆ.
ಪೂಜೆ ಮಾಡುವ ಪದ್ಧತಿ
ಗಣೇಶ ಚತುರ್ಥಿಯ ಸಿದ್ಧತೆಗಳು ಒಂದು ತಿಂಗಳ ಮೊದಲಿನಿಂದಲೆ ಆರಂಭಗೊಳ್ಳುತ್ತವೆ. ಈ ಹಬ್ಬವು ಸುಮಾರು ಹತ್ತು ದಿನಗಳ ಕಾಲ ನಡೆಯುತ್ತದೆ ( ಭಾದ್ರಪದ ಶುದ್ಧ ಚತುರ್ಥಿಯಿಂದ ಅನಂತ ಚತುರ್ದಶಿಯವರೆಗೆ).
ಮೊದಲನೆ ದಿನ ಮನೆಗಳಲ್ಲಿ ಗಣೇಶನ ಮಣ್ಣಿನ ಮೂರ್ತಿಯನ್ನು ಪ್ರತಿಷ್ಟಾಪಿಸಲಾಗುತ್ತದೆ.
ಮನೆಗಳನ್ನು ಹೂವಿನಿಂದ ಅಲಂಕರಿಸಿ, ತಳಿರು ತೋರಣಗಳಿಂದ ಸಿಂಗರಿಸಬೇಕು.
ಗಣೇಶನಿಗೆ ಪ್ರಿಯವಾದ ಹೂಗಳು, ಎಕ್ಕದ ಹೂ, ದಾಸವಾಳ, ಗರಿಕೆಯನ್ನು ತಪ್ಪದೆ ಅರ್ಪಿಸಬೇಕು.
ಗಣೇಶನಿಗೆ ಪ್ರಿಯವಾದ ತಿಂಡಿಗಳು, ಮೋದಕ, ಕರ್ಜಿಕಾಯಿ ಮಾಡಿ ಅರ್ಪಿಸಲಾಗುತ್ತದೆ.
ಹಸುವಿನ ಸಗಣಿಯಲ್ಲಿ ಗರಿಕೆಯನ್ನು ಇಟ್ಟರೆ ಗಣಪನಿಗೆ ಶ್ರೇಷ್ಟ ಎಂದು ಹೇಳಲಾಗುತ್ತದೆ.
ಇಡೀ ದಿನ ಉಪವಾಸ ಮಾಡುವ ಪದ್ಧತಿ ಸಹ ಇದೆ.
ಸಂಜೆಯ ವೇಳೆಗೆ ಗಣಪನಿಗೆ ಧಾನ್ಯಗಳಿಂದ ಮಾಡಿದ ಪ್ರಸಾದ ಅಥವ ಮೊಸರನ್ನವನ್ನು ಅರ್ಪಿಸಿ ಮಂಗಳಾರತಿ ಮಾಡಬೇಕು.
ಕೆಲವರು ಮನೆಗಳಲ್ಲಿ ಇರುವವರು ಒಂದೇ ದಿನ ಇಟ್ಟು ಗಣಪನನ್ನು ವಿಸರ್ಜಿಸುತ್ತಾರೆ. ಆಗ ಸಂಜೆ ಪ್ರಸಾದ ಅರ್ಪಿಸಿ ಮಹಾ ಮಂಗಳಾರತಿ ಮಾಡಿ ಗಣೇಶನನ್ನು ಬೀಳ್ಕೊಡಬೇಕು.
ಬಹುತೇಕರು ಅನಂತ ಚತುರ್ದಶಿಯಂದು ಗಣೇನನ್ನು ವಿರ್ಜಿಸುತ್ತಾರೆ.
ಗಣೇಶನನ್ನು ವಿಷರ್ಜಿಸುವ ದಿನದವರೆಗೂ ಪ್ರತಿ ದಿನ ಸಂಜೆ ಪ್ರಸಾದ ಅರ್ಪಿಸಿ ಮಂಗಳಾರತಿ ಮಾಡಬೇಕು.