Latest Updates
-
ಟೆಲಿಗ್ರಾಂ ಬಳಕೆದಾರರೇ ಗಮನಿಸಿ: ಸೇವೆ ಆರಂಭವಾದರೂ ಈ ಬದಲಾವಣೆ ಮರೆಯದಿರಿ! -
ಬಿಸಿಗಾಳಿಯ ಎಚ್ಚರಿಕೆ: ಅಡುಗೆ ಮಾಡದೆಯೇ ದೇಹಕ್ಕೆ ತಂಪು ನೀಡುವ ಪ್ರೋಟೀನ್ ಆಹಾರಗಳಿವು! -
ಮಳೆಯ ನಡುವೆ ಯುಜಿಸಿ ನೆಟ್ ಪರೀಕ್ಷೆ: ಸಂಗಾತಿಯ ಈ ಸಣ್ಣ ಬೆಂಬಲವೇ ಯಶಸ್ಸಿನ ಗುಟ್ಟು -
ಮಳೆಗಾಲದಲ್ಲಿ ಮನೆಯ ಪೀಠೋಪಕರಣ ಹಾಳಾಗುತ್ತಿದೆಯೇ? ಬೂಸು ತಡೆಯಲು ಈ ಸರಳ ಟಿಪ್ಸ್ ಪಾಲಿಸಿ -
ಮುಂಬೈ ಆರೆಂಜ್ ಅಲರ್ಟ್: ಮಳೆಯಲ್ಲಿ ಆಫೀಸ್ ಹೋಗುವವರೇ, ಈ 'ನೋ-ಕುಕ್' ಪ್ರೋಟೀನ್ ಮೀಲ್ಸ್ ಮಿಸ್ ಮಾಡ್ಬೇಡಿ! -
ಅಮೆಜಾನ್ ಪ್ರೈಮ್ ಡೇ ಸೇಲ್: ಕಡಿಮೆ ಬೆಲೆಗೆ ವಸ್ತುಗಳನ್ನು ಖರೀದಿಸಲು ಈ ಸ್ಮಾರ್ಟ್ ಟ್ರಿಕ್ಸ್ ಮಿಸ್ ಮಾಡ್ಬೇಡಿ! -
ಯೋಗದ ನಂತರ ಮೈಕೈ ನೋವು ಕಾಡುತ್ತಿದೆಯೇ? ಕಚೇರಿಯಲ್ಲಿ ಕೆಲಸ ಮಾಡುವಾಗ ಈ 12 ನಿಮಿಷದ ಟಿಪ್ಸ್ ಪಾಲಿಸಿ -
NEET ಮರುಪರೀಕ್ಷೆ ಮುಗಿದಿದೆ: ಮಕ್ಕಳ ಆತಂಕ ದೂರ ಮಾಡಲು ಪೋಷಕರು ಮಾಡಬೇಕಾದ ಅತ್ಯಗತ್ಯ ಕೆಲಸಗಳಿವು! -
ಪುಣೆ-ಮುಂಬೈ ಮಳೆಗಾಲ: ನಿಮ್ಮ ಮನೆಯನ್ನು ಸುರಕ್ಷಿತವಾಗಿಡಲು ಇಂದೇ ರಾತ್ರಿ ಈ 45 ನಿಮಿಷಗಳ ಕೆಲಸ ಮಾಡಿ! -
ಮಳೆಗಾಲದಲ್ಲಿ ಆರೋಗ್ಯದ ಬಗ್ಗೆ ಎಚ್ಚರ: ಅತಿಸಾರ ತಡೆಯಲು ಮತ್ತು ಸುರಕ್ಷಿತ ಆಹಾರಕ್ಕಾಗಿ ಈ ಸರಳ ಟಿಪ್ಸ್ ಪಾಲಿಸಿ
ಫೆ.4ಕ್ಕೆ ಗಣೇಶ ಜಯಂತಿ: ಮನೆಯಲ್ಲಿ ಯಾವ ಬಗೆಯ ಗಣೇಶನ ಪೂಜಿಸಬೇಕು?
ಫೆಬ್ರವರಿ 4ಕ್ಕೆ ಗಣೇಶ ಜಯಂತಿಯನ್ನು ಆಚರಿಸಲಾಗುತ್ತಿದೆ. ಮಾಘ ಮಾಸದ ಶುಕ್ಲ ಪಕ್ಷದಂದು ಗಣೇಶ ಜನಿಸಿದ ಎಂದು ಪೌರಾಣಿಕ ಕತೆ ಹೇಳುತ್ತದೆ.

ಮಾಘಿ ಗಣಪತಿ, ಮಾಘ ಶುಕ್ಲ ಚತುರ್ಥಿ, ವರದ ಚತುರ್ಥಿ ಹೀಗೆ ಗಣೇಶ ಜಯಂತಿಯನ್ನು ಹಲವು ನಾಮಗಳಿಂದ ಆಚರಿಸಲಾಗುವುದು. ಗಣೇಶ ಜಯಂತಿಯ ದಿನದಂದು ಭಕ್ತರು ಉಪವಾಸವಿದ್ದು ಗಣೇಶನ ಮಂತ್ರಗಳನ್ನು ಹೇಳುತ್ತಾ ಪೂಜೆ ಸಲ್ಲಿಸುತ್ತಾರೆ. ಗಣೇಶನ ಆರಾಧನೆ ಮಾಡಿದರೆ ಇಷ್ಟಾರ್ಥಗಳು ನೆರವಾಗುವುದು.

ಗಣೇಶ ಜಯಂತಿ 2022: ತಿಥಿ ಹಾಗೂ ಪೂಜೆಗೆ ಮುಹೂರ್ತ ಸಮಯ
ದಿನಾಂಕ: ಫೆಬ್ರವರಿ4
ಗಣೇಶ ಪೂಜೆಗೆ ಮಹೂರ್ತ: ಬೆಳಗ್ಗೆ 11:44ರಿಂದ ಮಧ್ಯಾಹ್ನ 12:01ರವರೆಗೆ
ಚತುರ್ಥಿ ತಿಥಿ ಪ್ರಾರಂಭ: ಫೆಬ್ರವರಿ 4 ಬೆಳಗ್ಗೆ 04:38ಕ್ಕೆ
ಚತುರ್ಥಿ ತಿಥಿ ಮುಕ್ತಾಯ: ಫೆಬ್ರವರಿ 5 ಮುಂಜಾನೆ 03:47ಕ್ಕೆ

ಮನೆಯಲ್ಲಿ ಯಾವ ಬಗೆಯ ಗಣೇಶನ ಪೂಜಿಸಬೇಕು?
ಗಣೇಶನ ಆರಾಧನೆ ಮಾಡುವುದರಿಂದ ಅವನು ಬದುಕಿನಲ್ಲಿ ಎದುರಾಗುವ ಎಲ್ಲಾ ವಿಘ್ನಗಳನ್ನು ಓಡಿಸುತ್ತಾನೆ ಎಂಬುವುದನ್ನು ಭಕ್ತರು ಬಲವಾಗಿ ನಂಬುತ್ತಾರೆ. ಹಿಂದೂ ಧರ್ಮದಲ್ಲಿ ಯಾವುದೇ ಪೂಜೆ ಮಾಡುವ ಮುನ್ನ ಗಣೇಶನಿಗೆ ಪೂಜೆ ಸಲ್ಲಿಕೆಯಾಗಲೇಬೇಕು. ಗಣೇಶನ ಪೂಜಿಸಿದರೆ ಎಲ್ಲಾ ವಿಘ್ನಗಳು ನಿವಾರಣೆಯಾಗುವುದು, ಸಂಕಲ್ಪ ನೆರವಾಗುವುದು. ಜನರು ಹಲವಾರು ಬಗೆಯ ಗಣೇಶನ ಮೂರ್ತಿಗಳನ್ನು ಪೂಜಿಸುತ್ತಾರೆ. ಮನೆಯಲ್ಲಿ ಪೂಜೆಗೆ ಯಾವ ಗಣೇಶನ ಇಟ್ಟು ಪೂಜಿಸುವುದು ಒಳ್ಳೆಯದು ಎಂದು ನೋಡುವುದಾದರೆ

ಶ್ವೇತಾರ್ಕ ಗಣಪತಿ-
ಆಕ ಗಿಡದ ಬೇರಿನಿಂದ ತಯಾರಿಸಿದ ಶ್ವೇತಾರ್ಕ ಗಣಪತಿಯನ್ನು ಪೂಜಿಸುವುದರಿಂದ ಯಾವುದೇ ರೀತಿಯ ವಾಮಾಚಾರ, ನೇತ್ರ ದೋಷ ಇತ್ಯಾದಿ ಭಯ ನಿವಾರಣೆಯಾಗುವುದು.

ಪರದ ಗಣೇಶ -
ಪಾದರಸದಿಂದ ಮಾಡಿದ ಗಣೇಶನ ಪೂಜೆಯನ್ನು ಸಹ ಬಹಳ ಮಂಗಳಕರವೆಂದು ಪರಿಗಣಿಸಲಾಗುತ್ತದೆ. ಪರದ ಗಣೇಶನನ್ನು ಪೂಜಿಸುವುದರಿಂದ ಯಾವುದೇ ಅಡ್ಡಿಗಳಿರುವುದಿಲ್ಲ, ಜೀವನದಲ್ಲಿ ಸಂತೋಷ ಸಿಗುತ್ತದೆ ಎಂದು ನಂಬಲಾಗಿದೆ.

ಬೆಳ್ಳಿ ಗಣಪತಿ
ಶಾಸ್ತ್ರಗಳ ಪ್ರಕಾರ, ಬೆಳ್ಳಿಯಿಂದ ಮಾಡಿದ ಗಣಪತಿಯ ವಿಗ್ರಹವನ್ನು ಪೂಜಿಸುವುದರಿಂದ ಸಂಪತ್ತು, ಆಹಾರಕ್ಕೆ ಕೊರತೆ ಇರುವುದಿಲ್ಲ, ಮನೆಯಲ್ಲಿ ಸಂತೋಷಕ್ಕೆ ಕೊರತೆಯಿಲ್ಲ.

ಶ್ರೀಗಂಧದ ಗಣಪತಿ
ಶ್ರೀಗಂಧದ ಗಣಪತಿಯನ್ನು ಪೂಜಿಸುವುದರಿಂದ ಮನೆಯಲ್ಲಿ ಪ್ರೀತಿ ಮತ್ತು ಸಾಮರಸ್ಯ ಇರುತ್ತದೆ.

ಹವಳದ ಗಣಪತಿ
ಸಿಂಧೂರ ಹವಳದಿಂದ ಮಾಡಿದ ಗಣೇಶನನ್ನು ಪೂಜಿಸುವುದರಿಂದ ಗೊತ್ತಿರುವ ಮತ್ತು ಅಪರಿಚಿತ ಶತ್ರುಗಳ ಭಯ ದೂರವಾಗುತ್ತದೆ ಎಂದು ನಂಬಲಾಗಿದೆ. ಅಲ್ಲದೆ ಗಣಪತಿಯ ಕೃಪೆಯಿಂದ ನಿರ್ಭೀತರಾಗಿ ಸುಖ ಜೀವನ ನಡೆಸಬಹುದು

ಪನ್ನದ ಗಣೇಶ
ಪಚ್ಚೆ ರತ್ನದಿಂದ ಮಾಡಿದ ಗಣಪತಿಯನ್ನು ಪೂಜಿಸುವುದರಿಂದ ಬುದ್ಧಿವಂತಿಕೆ ಮತ್ತು ವಿದ್ಯೆಯ ಆಶೀರ್ವಾದ ಸಿಗುತ್ತದೆ. ಅದೇ ಸಮಯದಲ್ಲಿ, ಪರೀಕ್ಷೆ ಮತ್ತು ಸ್ಪರ್ಧೆಯಲ್ಲಿ ಯಶಸ್ಸು ಸಿಗುವುದು.



Click it and Unblock the Notifications