Latest Updates
-
ವೈವಾಹಿಕ ಅತ್ಯಾಚಾರ: ಸುಪ್ರೀಂ ಕೋರ್ಟ್ನಿಂದ ಕೇಂದ್ರಕ್ಕೆ ಪ್ರಶ್ನೆ, ಮಹಿಳೆಯರ ಸುರಕ್ಷತೆಗೆ ಹೊಸ ತಿರುವು? -
ದೆಹಲಿ ಪಿಜಿ ದುರಂತ: ಕಟ್ಟಡ ಕುಸಿಯುವ ಮುನ್ನವೇ ಎಚ್ಚರಿಸುವ 10 ಅಪಾಯಕಾರಿ ಲಕ್ಷಣಗಳಿವು! -
ಅಂಗನವಾಡಿ ಊಟದ ಬಗ್ಗೆ ಪೋಷಕರಿಗೆ ಎಚ್ಚರ! ಪೋಷಣ್ ಮಾಹ್ 2026ರ ಹೊಸ ನಿಯಮಗಳು ಮತ್ತು ದೂರು ನೀಡುವುದು ಹೇಗೆ? -
ಇಂದಿನ ಪೆಟ್ರೋಲ್ ದರ: ಬೆಂಗಳೂರಿನಲ್ಲಿ ಬೆಲೆ ಎಷ್ಟು? ಹಣ ಉಳಿಸಲು ಈ ಟಿಪ್ಸ್ ಮಿಸ್ ಮಾಡ್ಬೇಡಿ -
ರಾಷ್ಟ್ರೀಯ ಪೋಷಕಾಂಶ ಸಪ್ತಾಹ: ಕೇವಲ 15 ನಿಮಿಷದಲ್ಲಿ ನಿಮ್ಮ ಬೆಳಗಿನ ದಿನಚರಿಯನ್ನು ರೀಸೆಟ್ ಮಾಡಿ, ದಿನವಿಡೀ ಎನರ್ಜಿ ಪಡೆಯಿರಿ! -
ಭಾರೀ ಮಳೆ ಎಚ್ಚರಿಕೆ: ನಿಮ್ಮ ಮನೆಯ ಬಾಲ್ಕನಿ ಮತ್ತು ಗಿಡಗಳನ್ನು ಸುರಕ್ಷಿತವಾಗಿಡಲು ಈ 30 ನಿಮಿಷದ ಟಿಪ್ಸ್ ಪಾಲಿಸಿ -
ಪ್ಯಾಕೆಟ್ ಆಹಾರದ ಮೇಲೆ ಕೆಂಪು ಷಡ್ಕೋನ ಎಚ್ಚರಿಕೆ: ಸುಪ್ರೀಂ ಕೋರ್ಟ್ನಲ್ಲಿ ಹೊಸ ತಿರುವು, ನಿಮಗೇನು ಲಾಭ? -
ಆಪಲ್ ಸೆಪ್ಟೆಂಬರ್ 9ರ ಇವೆಂಟ್: ಐಫೋನ್ 18 ಮತ್ತು ಫೋಲ್ಡಬಲ್ ಫೋನ್ ಲಾಂಚ್ ಆಗುತ್ತಾ? -
ಸಂಡೇಸ್ ಆನ್ ಸೈಕಲ್: ಮಳೆಯಲ್ಲಿ ಸೈಕ್ಲಿಂಗ್ ಮಾಡುವಾಗ ಈ 5 ಸುರಕ್ಷತಾ ನಿಯಮಗಳನ್ನು ಪಾಲಿಸಿ! -
ಸುಪ್ರೀಂ ಕೋರ್ಟ್ ಮಹತ್ವದ ಆದೇಶ: ತಾಯಿ ದುಡಿಯುತ್ತಿದ್ದರೂ ಮಕ್ಕಳ ಜೀವನಾಂಶ ಪಾವತಿಸುವುದು ತಂದೆಯ ಕರ್ತವ್ಯ!
ಫೆ.4ಕ್ಕೆ ಗಣೇಶ ಜಯಂತಿ: ಮನೆಯಲ್ಲಿ ಯಾವ ಬಗೆಯ ಗಣೇಶನ ಪೂಜಿಸಬೇಕು?
ಫೆಬ್ರವರಿ 4ಕ್ಕೆ ಗಣೇಶ ಜಯಂತಿಯನ್ನು ಆಚರಿಸಲಾಗುತ್ತಿದೆ. ಮಾಘ ಮಾಸದ ಶುಕ್ಲ ಪಕ್ಷದಂದು ಗಣೇಶ ಜನಿಸಿದ ಎಂದು ಪೌರಾಣಿಕ ಕತೆ ಹೇಳುತ್ತದೆ.

ಮಾಘಿ ಗಣಪತಿ, ಮಾಘ ಶುಕ್ಲ ಚತುರ್ಥಿ, ವರದ ಚತುರ್ಥಿ ಹೀಗೆ ಗಣೇಶ ಜಯಂತಿಯನ್ನು ಹಲವು ನಾಮಗಳಿಂದ ಆಚರಿಸಲಾಗುವುದು. ಗಣೇಶ ಜಯಂತಿಯ ದಿನದಂದು ಭಕ್ತರು ಉಪವಾಸವಿದ್ದು ಗಣೇಶನ ಮಂತ್ರಗಳನ್ನು ಹೇಳುತ್ತಾ ಪೂಜೆ ಸಲ್ಲಿಸುತ್ತಾರೆ. ಗಣೇಶನ ಆರಾಧನೆ ಮಾಡಿದರೆ ಇಷ್ಟಾರ್ಥಗಳು ನೆರವಾಗುವುದು.

ಗಣೇಶ ಜಯಂತಿ 2022: ತಿಥಿ ಹಾಗೂ ಪೂಜೆಗೆ ಮುಹೂರ್ತ ಸಮಯ
ದಿನಾಂಕ: ಫೆಬ್ರವರಿ4
ಗಣೇಶ ಪೂಜೆಗೆ ಮಹೂರ್ತ: ಬೆಳಗ್ಗೆ 11:44ರಿಂದ ಮಧ್ಯಾಹ್ನ 12:01ರವರೆಗೆ
ಚತುರ್ಥಿ ತಿಥಿ ಪ್ರಾರಂಭ: ಫೆಬ್ರವರಿ 4 ಬೆಳಗ್ಗೆ 04:38ಕ್ಕೆ
ಚತುರ್ಥಿ ತಿಥಿ ಮುಕ್ತಾಯ: ಫೆಬ್ರವರಿ 5 ಮುಂಜಾನೆ 03:47ಕ್ಕೆ

ಮನೆಯಲ್ಲಿ ಯಾವ ಬಗೆಯ ಗಣೇಶನ ಪೂಜಿಸಬೇಕು?
ಗಣೇಶನ ಆರಾಧನೆ ಮಾಡುವುದರಿಂದ ಅವನು ಬದುಕಿನಲ್ಲಿ ಎದುರಾಗುವ ಎಲ್ಲಾ ವಿಘ್ನಗಳನ್ನು ಓಡಿಸುತ್ತಾನೆ ಎಂಬುವುದನ್ನು ಭಕ್ತರು ಬಲವಾಗಿ ನಂಬುತ್ತಾರೆ. ಹಿಂದೂ ಧರ್ಮದಲ್ಲಿ ಯಾವುದೇ ಪೂಜೆ ಮಾಡುವ ಮುನ್ನ ಗಣೇಶನಿಗೆ ಪೂಜೆ ಸಲ್ಲಿಕೆಯಾಗಲೇಬೇಕು. ಗಣೇಶನ ಪೂಜಿಸಿದರೆ ಎಲ್ಲಾ ವಿಘ್ನಗಳು ನಿವಾರಣೆಯಾಗುವುದು, ಸಂಕಲ್ಪ ನೆರವಾಗುವುದು. ಜನರು ಹಲವಾರು ಬಗೆಯ ಗಣೇಶನ ಮೂರ್ತಿಗಳನ್ನು ಪೂಜಿಸುತ್ತಾರೆ. ಮನೆಯಲ್ಲಿ ಪೂಜೆಗೆ ಯಾವ ಗಣೇಶನ ಇಟ್ಟು ಪೂಜಿಸುವುದು ಒಳ್ಳೆಯದು ಎಂದು ನೋಡುವುದಾದರೆ

ಶ್ವೇತಾರ್ಕ ಗಣಪತಿ-
ಆಕ ಗಿಡದ ಬೇರಿನಿಂದ ತಯಾರಿಸಿದ ಶ್ವೇತಾರ್ಕ ಗಣಪತಿಯನ್ನು ಪೂಜಿಸುವುದರಿಂದ ಯಾವುದೇ ರೀತಿಯ ವಾಮಾಚಾರ, ನೇತ್ರ ದೋಷ ಇತ್ಯಾದಿ ಭಯ ನಿವಾರಣೆಯಾಗುವುದು.

ಪರದ ಗಣೇಶ -
ಪಾದರಸದಿಂದ ಮಾಡಿದ ಗಣೇಶನ ಪೂಜೆಯನ್ನು ಸಹ ಬಹಳ ಮಂಗಳಕರವೆಂದು ಪರಿಗಣಿಸಲಾಗುತ್ತದೆ. ಪರದ ಗಣೇಶನನ್ನು ಪೂಜಿಸುವುದರಿಂದ ಯಾವುದೇ ಅಡ್ಡಿಗಳಿರುವುದಿಲ್ಲ, ಜೀವನದಲ್ಲಿ ಸಂತೋಷ ಸಿಗುತ್ತದೆ ಎಂದು ನಂಬಲಾಗಿದೆ.

ಬೆಳ್ಳಿ ಗಣಪತಿ
ಶಾಸ್ತ್ರಗಳ ಪ್ರಕಾರ, ಬೆಳ್ಳಿಯಿಂದ ಮಾಡಿದ ಗಣಪತಿಯ ವಿಗ್ರಹವನ್ನು ಪೂಜಿಸುವುದರಿಂದ ಸಂಪತ್ತು, ಆಹಾರಕ್ಕೆ ಕೊರತೆ ಇರುವುದಿಲ್ಲ, ಮನೆಯಲ್ಲಿ ಸಂತೋಷಕ್ಕೆ ಕೊರತೆಯಿಲ್ಲ.

ಶ್ರೀಗಂಧದ ಗಣಪತಿ
ಶ್ರೀಗಂಧದ ಗಣಪತಿಯನ್ನು ಪೂಜಿಸುವುದರಿಂದ ಮನೆಯಲ್ಲಿ ಪ್ರೀತಿ ಮತ್ತು ಸಾಮರಸ್ಯ ಇರುತ್ತದೆ.

ಹವಳದ ಗಣಪತಿ
ಸಿಂಧೂರ ಹವಳದಿಂದ ಮಾಡಿದ ಗಣೇಶನನ್ನು ಪೂಜಿಸುವುದರಿಂದ ಗೊತ್ತಿರುವ ಮತ್ತು ಅಪರಿಚಿತ ಶತ್ರುಗಳ ಭಯ ದೂರವಾಗುತ್ತದೆ ಎಂದು ನಂಬಲಾಗಿದೆ. ಅಲ್ಲದೆ ಗಣಪತಿಯ ಕೃಪೆಯಿಂದ ನಿರ್ಭೀತರಾಗಿ ಸುಖ ಜೀವನ ನಡೆಸಬಹುದು

ಪನ್ನದ ಗಣೇಶ
ಪಚ್ಚೆ ರತ್ನದಿಂದ ಮಾಡಿದ ಗಣಪತಿಯನ್ನು ಪೂಜಿಸುವುದರಿಂದ ಬುದ್ಧಿವಂತಿಕೆ ಮತ್ತು ವಿದ್ಯೆಯ ಆಶೀರ್ವಾದ ಸಿಗುತ್ತದೆ. ಅದೇ ಸಮಯದಲ್ಲಿ, ಪರೀಕ್ಷೆ ಮತ್ತು ಸ್ಪರ್ಧೆಯಲ್ಲಿ ಯಶಸ್ಸು ಸಿಗುವುದು.



Click it and Unblock the Notifications
