Latest Updates
-
ಬಿಸಿಗಾಳಿಯ ಎಚ್ಚರಿಕೆ: ಮಧ್ಯಾಹ್ನ ವರ್ಕೌಟ್ ಮಾಡ್ತಿದ್ದೀರಾ? ಈ ತಪ್ಪು ನಿಮ್ಮ ಆರೋಗ್ಯಕ್ಕೆ ಕುತ್ತು ತರಬಹುದು! -
ಬಿಸಿಗಾಳಿಯ ನಡುವೆ ಮದುವೆ ಸಂಭ್ರಮ: ಅತಿಥಿಗಳ ಸುರಕ್ಷತೆಗಾಗಿ ನೀವು ಮಾಡಲೇಬೇಕಾದ ಬದಲಾವಣೆಗಳಿವು! -
ಬಿಸಿಗಾಳಿಯ ಅಬ್ಬರ ಶುರು: ನಿಮ್ಮ ಮನೆ ತಂಪಾಗಿರಲು ಮತ್ತು ಗಿಡಗಳನ್ನು ಉಳಿಸಲು ಈ ಸೀಕ್ರೆಟ್ ಟಿಪ್ಸ್ ಮಿಸ್ ಮಾಡ್ಬೇಡಿ! -
ಸುಡುವ ಬಿಸಿಲಿಗೆ ಸುಸ್ತಾಗಿದ್ದೀರಾ? ದೇಹವನ್ನು ತಂಪಾಗಿಡಲು ಈ ಆಹಾರ ಕ್ರಮ ಪಾಲಿಸಿ! -
ಮದರ್ಸ್ ಡೇ 2026: ಅಮ್ಮನಿಗೆ ಸರ್ಪ್ರೈಸ್ ನೀಡಲು ಈ ವೈರಲ್ ಟ್ರೆಂಡ್ಸ್ ಫಾಲೋ ಮಾಡಿ, ಮಿಸ್ ಮಾಡ್ಬೇಡಿ! -
ಅಮ್ಮನಿಗೆ ಈ ಬಾರಿ ವಿಶೇಷ ಉಡುಗೊರೆ: ತಾಯಂದಿರ ದಿನದಂದು 20 ನಿಮಿಷದ ಯೋಗದ ಮ್ಯಾಜಿಕ್! -
ದೆಹಲಿ ಮಳೆಯಲ್ಲಿ ಮದುವೆ ಸಂಭ್ರಮಕ್ಕೆ ಅಡ್ಡಿಯೇ? ಈ ಸಣ್ಣ ಬದಲಾವಣೆಗಳು ನಿಮ್ಮ ಮದುವೆಯನ್ನು ಉಳಿಸುತ್ತವೆ! -
ಬಿರುಗಾಳಿ ಅಬ್ಬರಕ್ಕೆ ಬಾಲ್ಕನಿ ಗಾರ್ಡನ್ ಹಾಳಾಗುತ್ತಾ? ನಿಮ್ಮ ಮನೆ ಮತ್ತು ಗಿಡಗಳನ್ನು ರಕ್ಷಿಸಲು ಈ ಟಿಪ್ಸ್ ಮಿಸ್ ಮಾಡ್ಬೇಡಿ! -
ಬಿಸಿಲಿನ ಬೇಗೆಗೆ ಸುಸ್ತಾಗಿದ್ದೀರಾ? ದೆಹಲಿ ಸರ್ಕಾರದ ಈ 'ರಿಲೀಫ್ ವ್ಯಾನ್' ನಿಮ್ಮ ಜೀವ ರಕ್ಷಕವಾಗಬಹುದು! -
ಮೆಟ್ ಗಾಲಾ 2026: ದುಬಾರಿ ಫ್ಯಾಷನ್ ಅನ್ನು ನಮ್ಮೂರಿನ ಕ್ರಿಯೇಟರ್ಗಳು ದೇಸಿ ಶೈಲಿಯಲ್ಲಿ ಮರುಸೃಷ್ಟಿಸಿದ್ದು ಹೇಗೆ? ಅಚ್ಚರಿ ಪಡಬೇಡಿ!
ಗಣೇಶ ವಿಸರ್ಜನೆ 2021: ಯಾವ ದಿನ ಮಾಡಬಹುದು? ಶುಭ ಸಮಯ ಯಾವಾಗ?
ಗಣೇಶನ ಕೂರಿಸಿದ ಮೇಲೆ ಗಣೇಶ ವಿಸರ್ಜನೆ ಕುಡ ಅಷ್ಟೇ ಮುಖ್ಯವಾಗಿದೆ. ಗಣೇಶ ವಿಸರ್ಜನೆ ಹುಟ್ಟು, ಬದುಕು, ಸಾವಿನ ನಮ್ಮ ಜೀವನ ಚಕ್ರವನ್ನು ಸೂಚಿಸುತ್ತದೆ. ಗಣೇಶನ ಕೂರಿಸಿದ ಮೇಲೆ ಆ ದಿನ ಅಥವಾ 3, ದಿನವಾದ ಮೇಲೆ, 7 ದಿನವಾದ ಮೇಲೆ ಗಣೇಶ ವಿಸರ್ಜನೆ ಮಾಡಲಾಗುವುದು.
ಗಣೇಶ ವಿಸರ್ಜನೆಯನ್ನು ಗಣೇಶನ ಕೂರಿಸಿದ ಒಂದೂವರೆ ದಿನದ ನಂತರ ವಿಸರ್ಜನೆ ಮಾಡಬಹುದು. ಮೂರನೇ ದಿನ, ಐದನೇ ದಿನ, ಏಳನೇ ದಿನ ಹೀಗೆ ವಿಸರ್ಜನೆ ಮಾಡಲಾಗುವುದು.

ಗಣೇಶ ವಿಸರ್ಜನೆಗೆ ಶುಭ ಮುಹೂರ್ತ
ಬೆಳಗ್ಗೆ ಶುಭ ಮುಹೂರ್ತ (ಶುಭ):06:16ರಿಂದ 07:48ರವರೆಗೆ
ಬೆಳಗ್ಗೆ ಮುಹೂರ್ತ (ಅಮೃತ):10:50ರಿಂದ 03:25ರವರೆಗೆ
ಮಧ್ಯಾಹ್ನದ ಮುಹೂರ್ತ (ಶುಭ): ಸಂಜೆ 04:56ರಿಂದ 06:27ರವರೆಗೆ
ಸಂಜೆ ಮುಹೂರ್ತ(ಅಮೃತ): ಸಂಜೆ 06:27ರಿಂದ 09:27ರವರೆಗೆ
ರಾತ್ರಿ ಮುಹೂರ್ತ: ರಾತ್ರಿ 12:22ರಿಂದ 01:50ರವರೆಗೆ

ಒಂದೂವರೆ ದಿನದ ಬಳಿಕ ಗಣೇಶ ವಿಸರ್ಜನೆ
ಗಣೇಶ ಕೂರಿಸಿ ಮಾರನೇಯ ದಿನ ಮಧ್ಯಾಹ್ನದ ಮೇಲೆ ಕೆಲವು ಕಡೆ ವಿಸರ್ಜನೆ ಮಾಡಲಾಗುವುದು. ಮಧ್ಯಾಹ್ನ ಹೊತ್ತು ಗಣೇಶನಿಗೆ ಪೂಜೆ ಸಲ್ಲಿಸಿ ಮಧ್ಯಾಹ್ನದ ನಂತರ ಗಣೇಶನನ್ನು ತೆಗೆದುಕೊಂಡು ಹೋಗಿ ಗಣೇಶನ ವಿಸರ್ಜನೆ ಮಾಡಲಾಗುವುದು.

3ನೇ, 5ನೇ, 7ನೇ ದಿನ ಗಣೇಶ ವಿಸರ್ಜನೆ
ಅನಂತ ಚತುರ್ಧಶಿಗೆ ಗಣೇಶನ ವಿಸರ್ಜನೆ ಮಾಡುವುದು ತುಂಬಾ ಮಹತ್ವವಾದರೂ 3ನೇ, 5ನೇ, 7ನೇ ದಿನ ಕೂಡ ಗಣೇಶನ ವಿಸರ್ಜನೆ ಮಾಡಬಹುದು. ಗಣೇಶ ವಿಸರ್ಜನೆಯನ್ನು ಬೆಸ ಸಂಖ್ಯೆಯಲ್ಲಿ ಮಾಡಬೇಕು. ಗಣೇಶನ ವಿಸರ್ಜನೆಗೆ ತುಂಬಾ ಸೂಕ್ತವಾದ ದಿನವೆಂದರೆ 11ನೇ ದಿನವಾದ ಗಣೇಶ ಚತುರ್ಧಶಿಯಾಗಿದೆ.

ಅನಂತ ಚತುರ್ಧಶಿಯಂದು ಗಣೇಶನ ವಿಸರ್ಜನೆ
ಗಣೇಶನ ವಿಸರ್ಜನೆಗೆ ಈ ದಿನ ತುಂಬಾನೇ ಮಹತ್ವವಾದ ದಿನವಾಗಿದೆ. ಗಣೇಶನ ವಿಸರ್ಜನೆಗೆ ಮಾತ್ರವಲ್ಲ ವಿಷ್ಣು ಭಕ್ತರಿಗೂ ಈ ದಿನ ತುಂಬಾ ಮಹತ್ವದ್ದಾಗಿದೆ. ಈ ದಿನ ಉಪವಾಸವಿದ್ದು ಶ್ರೀ ವಿಷ್ಣುವಿನ ಆರಾಧನೆ ಮಾಡಲಾಗುವುದು ಹಾಗೂ ಕೈಗೆ ಪವಿತ್ರ ದಾರವನ್ನು ಕಟ್ಟಲಾಗುವುದು. ಈ ದಾರ ಎಲ್ಲಾ ಕೆಟ್ಟ ದೃಷ್ಟಿಯಿಂದ ರಕ್ಷಣೆ ನೀಡುವುದು ಎಂಬ ನಂಬಿಕೆ ಇದೆ.
11ನೇ ದಿನ ಗಣೇಶನ ವಿಸರ್ಜನೆ ಮಾಡಲಾಗುವುದು. ಸಾಮಾನ್ಯವಾಗಿ ನದಿ, ಕೆರೆ ಅಥವಾ ಕೊಳದಲ್ಲಿ ವಿಸರ್ಜನೆ ಮಾಡಲಾಗುವುದು. ಇದೀಗ ಪರಿಸರ ಉಳಿಸಲು ದೊಡ್ಡ ಡ್ರಮ್ ಅಥವಾ ಬಕೆಟ್ನಲ್ಲಿ ಮುಳುಗಿಸಲಾಗುವುದು. ಅಲ್ಲದೆ ಮಣ್ಣಿನ ಗಣಪನ ಬಳಕೆ ಹೆಚ್ಚಾಗಿದೆ. ಗಣೇಶನನನ್ನು ವಿಸರ್ಜನೆ ಮಾಡುವಾಗ ಜೈ ಗಣೇಶ.. ಎಂದು ಹಾಡಿ ಕುಣಿಯುತ್ತಾ ವಿಸರ್ಜನೆ ಮಾಡಲಾಗುವುದು. ಈ ವರ್ಷ ಅನಂತ ಚತುರ್ಧಶಿ ಸೆಪ್ಟೆಂಬರ್ 19ಕ್ಕೆ ಇದೆ.



Click it and Unblock the Notifications