Latest Updates
-
ಹಾಲಿನಲ್ಲಿ ವಿಷಕಾರಿ ಕಲಬೆರಕೆ ಪತ್ತೆ: ನಿಮ್ಮ ಮನೆಯ ಹಾಲಿನ ಸುರಕ್ಷತೆ ಪರೀಕ್ಷಿಸುವುದು ಹೇಗೆ? -
ಬೆಂಗಳೂರಿನಲ್ಲಿ 12 ಗಂಟೆಗಳ ಕಾಲ ನೀರಿನ ಕಡಿತ: ನಾಳೆ ನೀರು ಉಳಿಸಲು ಈ ಟಿಪ್ಸ್ ಫಾಲೋ ಮಾಡಿ! -
ಮಳೆಗಾಲದಲ್ಲಿ ಜಿಮ್ಗೆ ಹೋಗಲು ಸಾಧ್ಯವಿಲ್ಲವೇ? ಮನೆಯಲ್ಲೇ ಫಿಟ್ ಆಗಿರಲು 8 ನಿಮಿಷದ ಈ ವರ್ಕೌಟ್ ಟ್ರೈ ಮಾಡಿ! -
ಮದುವೆಗೆ ಮುನ್ನ ಎಚ್ಚರ: ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ವರದಕ್ಷಿಣೆ ಮತ್ತು ಉಡುಗೊರೆಗಳ ನಡುವಿನ ವ್ಯತ್ಯಾಸವೇನು? -
ಬೆಂಗಳೂರಿನಲ್ಲಿ ಮಳೆ ಬಿಡುವು: ನಿಮ್ಮ ಬಾಲ್ಕನಿ ಗಾರ್ಡನ್ ಗಿಡಗಳನ್ನು ರಕ್ಷಿಸಲು ಈ ಸರಳ ಟಿಪ್ಸ್ ಪಾಲಿಸಿ -
ಟೊಮೆಟೊ, ಶುಂಠಿ ಬೆಲೆ ಏರಿಕೆ: ಅಡುಗೆ ಮನೆ ಬಜೆಟ್ ಉಳಿಸಲು ಇಲ್ಲಿದೆ ಸ್ಮಾರ್ಟ್ ಟಿಪ್ಸ್! -
2026ರಲ್ಲಿ ಚಿನ್ನದ ಆಭರಣ: ತೂಕದಲ್ಲಿ ಕಡಿಮೆ ಖರೀದಿ, ಖರ್ಚಿ ನಲ್ಲಿ ಹೆಚ್ಚು — ಕುಟುಂಬಗಳ ಖರೀ ದಿ ಹೇಗೆ ಬದಲಾಗುತ್ತಿದೆ? -
ನಥಿಂಗ್ ಫೋನ್ (4b) RCB ಎಡಿಷನ್ ಸೇಲ್ ಶುರು: ಫ್ಯಾನ್ಸ್ ಮಿಸ್ ಮಾಡ್ಬೇಡಿ, ಇಂದೇ ಖರೀದಿಸಿ! -
ಆಷಾಢ ಅಮಾವಾಸ್ಯೆ: ಉಪವಾಸದ ದಿನ ಸುಸ್ತಾಗದಂತೆ ಇರಲು ಈ 7 ನಿಮಿಷದ ವ್ಯಾಯಾಮ ಟ್ರೈ ಮಾಡಿ! -
ಮಳೆಗಾಲದ ಮದುವೆ: ನಿಮ್ಮ ಸಂಭ್ರಮಕ್ಕೆ ಅಡ್ಡಿಯಾಗದಂತೆ ಪ್ಲಾನ್ ಮಾಡುವುದು ಹೇಗೆ?
ಗಣೇಶ ವಿಸರ್ಜನೆ 2021: ಯಾವ ದಿನ ಮಾಡಬಹುದು? ಶುಭ ಸಮಯ ಯಾವಾಗ?
ಗಣೇಶನ ಕೂರಿಸಿದ ಮೇಲೆ ಗಣೇಶ ವಿಸರ್ಜನೆ ಕುಡ ಅಷ್ಟೇ ಮುಖ್ಯವಾಗಿದೆ. ಗಣೇಶ ವಿಸರ್ಜನೆ ಹುಟ್ಟು, ಬದುಕು, ಸಾವಿನ ನಮ್ಮ ಜೀವನ ಚಕ್ರವನ್ನು ಸೂಚಿಸುತ್ತದೆ. ಗಣೇಶನ ಕೂರಿಸಿದ ಮೇಲೆ ಆ ದಿನ ಅಥವಾ 3, ದಿನವಾದ ಮೇಲೆ, 7 ದಿನವಾದ ಮೇಲೆ ಗಣೇಶ ವಿಸರ್ಜನೆ ಮಾಡಲಾಗುವುದು.
ಗಣೇಶ ವಿಸರ್ಜನೆಯನ್ನು ಗಣೇಶನ ಕೂರಿಸಿದ ಒಂದೂವರೆ ದಿನದ ನಂತರ ವಿಸರ್ಜನೆ ಮಾಡಬಹುದು. ಮೂರನೇ ದಿನ, ಐದನೇ ದಿನ, ಏಳನೇ ದಿನ ಹೀಗೆ ವಿಸರ್ಜನೆ ಮಾಡಲಾಗುವುದು.

ಗಣೇಶ ವಿಸರ್ಜನೆಗೆ ಶುಭ ಮುಹೂರ್ತ
ಬೆಳಗ್ಗೆ ಶುಭ ಮುಹೂರ್ತ (ಶುಭ):06:16ರಿಂದ 07:48ರವರೆಗೆ
ಬೆಳಗ್ಗೆ ಮುಹೂರ್ತ (ಅಮೃತ):10:50ರಿಂದ 03:25ರವರೆಗೆ
ಮಧ್ಯಾಹ್ನದ ಮುಹೂರ್ತ (ಶುಭ): ಸಂಜೆ 04:56ರಿಂದ 06:27ರವರೆಗೆ
ಸಂಜೆ ಮುಹೂರ್ತ(ಅಮೃತ): ಸಂಜೆ 06:27ರಿಂದ 09:27ರವರೆಗೆ
ರಾತ್ರಿ ಮುಹೂರ್ತ: ರಾತ್ರಿ 12:22ರಿಂದ 01:50ರವರೆಗೆ

ಒಂದೂವರೆ ದಿನದ ಬಳಿಕ ಗಣೇಶ ವಿಸರ್ಜನೆ
ಗಣೇಶ ಕೂರಿಸಿ ಮಾರನೇಯ ದಿನ ಮಧ್ಯಾಹ್ನದ ಮೇಲೆ ಕೆಲವು ಕಡೆ ವಿಸರ್ಜನೆ ಮಾಡಲಾಗುವುದು. ಮಧ್ಯಾಹ್ನ ಹೊತ್ತು ಗಣೇಶನಿಗೆ ಪೂಜೆ ಸಲ್ಲಿಸಿ ಮಧ್ಯಾಹ್ನದ ನಂತರ ಗಣೇಶನನ್ನು ತೆಗೆದುಕೊಂಡು ಹೋಗಿ ಗಣೇಶನ ವಿಸರ್ಜನೆ ಮಾಡಲಾಗುವುದು.

3ನೇ, 5ನೇ, 7ನೇ ದಿನ ಗಣೇಶ ವಿಸರ್ಜನೆ
ಅನಂತ ಚತುರ್ಧಶಿಗೆ ಗಣೇಶನ ವಿಸರ್ಜನೆ ಮಾಡುವುದು ತುಂಬಾ ಮಹತ್ವವಾದರೂ 3ನೇ, 5ನೇ, 7ನೇ ದಿನ ಕೂಡ ಗಣೇಶನ ವಿಸರ್ಜನೆ ಮಾಡಬಹುದು. ಗಣೇಶ ವಿಸರ್ಜನೆಯನ್ನು ಬೆಸ ಸಂಖ್ಯೆಯಲ್ಲಿ ಮಾಡಬೇಕು. ಗಣೇಶನ ವಿಸರ್ಜನೆಗೆ ತುಂಬಾ ಸೂಕ್ತವಾದ ದಿನವೆಂದರೆ 11ನೇ ದಿನವಾದ ಗಣೇಶ ಚತುರ್ಧಶಿಯಾಗಿದೆ.

ಅನಂತ ಚತುರ್ಧಶಿಯಂದು ಗಣೇಶನ ವಿಸರ್ಜನೆ
ಗಣೇಶನ ವಿಸರ್ಜನೆಗೆ ಈ ದಿನ ತುಂಬಾನೇ ಮಹತ್ವವಾದ ದಿನವಾಗಿದೆ. ಗಣೇಶನ ವಿಸರ್ಜನೆಗೆ ಮಾತ್ರವಲ್ಲ ವಿಷ್ಣು ಭಕ್ತರಿಗೂ ಈ ದಿನ ತುಂಬಾ ಮಹತ್ವದ್ದಾಗಿದೆ. ಈ ದಿನ ಉಪವಾಸವಿದ್ದು ಶ್ರೀ ವಿಷ್ಣುವಿನ ಆರಾಧನೆ ಮಾಡಲಾಗುವುದು ಹಾಗೂ ಕೈಗೆ ಪವಿತ್ರ ದಾರವನ್ನು ಕಟ್ಟಲಾಗುವುದು. ಈ ದಾರ ಎಲ್ಲಾ ಕೆಟ್ಟ ದೃಷ್ಟಿಯಿಂದ ರಕ್ಷಣೆ ನೀಡುವುದು ಎಂಬ ನಂಬಿಕೆ ಇದೆ.
11ನೇ ದಿನ ಗಣೇಶನ ವಿಸರ್ಜನೆ ಮಾಡಲಾಗುವುದು. ಸಾಮಾನ್ಯವಾಗಿ ನದಿ, ಕೆರೆ ಅಥವಾ ಕೊಳದಲ್ಲಿ ವಿಸರ್ಜನೆ ಮಾಡಲಾಗುವುದು. ಇದೀಗ ಪರಿಸರ ಉಳಿಸಲು ದೊಡ್ಡ ಡ್ರಮ್ ಅಥವಾ ಬಕೆಟ್ನಲ್ಲಿ ಮುಳುಗಿಸಲಾಗುವುದು. ಅಲ್ಲದೆ ಮಣ್ಣಿನ ಗಣಪನ ಬಳಕೆ ಹೆಚ್ಚಾಗಿದೆ. ಗಣೇಶನನನ್ನು ವಿಸರ್ಜನೆ ಮಾಡುವಾಗ ಜೈ ಗಣೇಶ.. ಎಂದು ಹಾಡಿ ಕುಣಿಯುತ್ತಾ ವಿಸರ್ಜನೆ ಮಾಡಲಾಗುವುದು. ಈ ವರ್ಷ ಅನಂತ ಚತುರ್ಧಶಿ ಸೆಪ್ಟೆಂಬರ್ 19ಕ್ಕೆ ಇದೆ.



Click it and Unblock the Notifications