Latest Updates
-
ಸೋಶಿಯಲ್ ಮೀಡಿಯಾದಲ್ಲಿ ನಿಮ್ಮ ಸಂಬಂಧವನ್ನು ರಹಸ್ಯವಾಗಿಡಬೇಕಾ? ನೆಮ್ಮದಿಯ ಬದುಕಿಗೆ ಈ ಡಿಜಿಟಲ್ ಬೌಂಡರಿಗಳು ಮಸ್ಟ್! -
ದೆಹಲಿ-ಎನ್ಸಿಆರ್ನಲ್ಲಿ ಬಿರುಗಾಳಿ ಅಬ್ಬರ: ನಿಮ್ಮ ಬಾಲ್ಕನಿ ಮತ್ತು ಗಿಡಗಳನ್ನು ಸುರಕ್ಷಿತವಾಗಿಡಲು ಈ ಮುನ್ನೆಚ್ಚರಿಕೆ ಮರೆಯದಿರಿ! -
ಅಡುಗೆಮನೆಯಲ್ಲಿ ಕಡಲೆ ಹಿಟ್ಟು ಬಳಸುವ ಮುನ್ನ ಎಚ್ಚರ: FSSAI ಜಾರಿಗೆ ತಂದಿದೆ ಹೊಸ ಕಠಿಣ ನಿಯಮಗಳು! -
ಫ್ಲಿಪ್ಕಾರ್ಟ್ GRWM ಸೇಲ್: ಟ್ರೆಂಡಿ ಲುಕ್ ಪಡೆಯಲು ಇನ್ಫ್ಲುಯೆನ್ಸರ್ ಸಜೆಸ್ಟ್ ಮಾಡಿದ ಬೆಸ್ಟ್ ಡೀಲ್ಗಳು ಇಲ್ಲಿವೆ! -
ಬಿಸಿಲಿನಲ್ಲಿ ವ್ಯಾಯಾಮ ಮಾಡ್ತಿದ್ದೀರಾ? ಈ ತಪ್ಪುಗಳನ್ನು ಮಾಡಿದರೆ ಹೀಟ್ಸ್ಟ್ರೋಕ್ ಕಟ್ಟಿಟ್ಟ ಬುತ್ತಿ, ಎಚ್ಚರವಿರಲಿ! -
ಅಸ್ಸಾಂನಲ್ಲಿ ಲಿವ್-ಇನ್ ಸಂಬಂಧದಲ್ಲಿದ್ದೀರಾ? ಹೊಸ ಕಾನೂನಿನ ಪ್ರಕಾರ ನೋಂದಣಿ ಮಾಡದಿದ್ದರೆ ಜೈಲು ಶಿಕ್ಷೆ ಕಟ್ಟಿಟ್ಟ ಬುತ್ತಿ! -
ಬಿಸಿಲಿಗೆ ಗಿಡಗಳು ಬಾಡುತ್ತಿವೆಯೇ? ಈ ಮ್ಯಾಜಿಕ್ ಟಿಪ್ಸ್ ಬಳಸಿ ನಿಮ್ಮ ಬಾಲ್ಕನಿ ಗಾರ್ಡನ್ ಅನ್ನು ಹಸಿರಾಗಿಡಿ! -
ಬಿಸಿಲ ಝಳಕ್ಕೆ ಸುಸ್ತಾಗಿದ್ದೀರಾ? ಹೀಟ್ಸ್ಟ್ರೋಕ್ನಿಂದ ಪಾರಾಗಲು ಈ ತಂಪು ಪದಾರ್ಥಗಳು ನಿಮ್ಮ ಆಹಾರದಲ್ಲಿರಲಿ, ಇಂದೇ ಟ್ರೈ ಮಾಡಿ! -
ಬಕ್ರೀದ್ 2026: ಈ ಬಾರಿಯ ಹಬ್ಬದ ಸಂಭ್ರಮದಲ್ಲಿ ಮಿಂಚಲು ನೀವು ಮಿಸ್ ಮಾಡಲೇಬಾರದ ಫ್ಯಾಷನ್ ಟ್ರೆಂಡ್ಸ್ ಮತ್ತು ಸ್ಟೈಲಿಂಗ್ ಟಿಪ್ಸ್! -
ಬಿಸಿಲ ಬೇಗೆಯಲ್ಲಿ ವರ್ಕೌಟ್ ಮಾಡ್ತಿದ್ದೀರಾ? ಈ ತಪ್ಪುಗಳನ್ನು ಮಾಡಿದರೆ ನಿಮ್ಮ ಆರೋಗ್ಯಕ್ಕೆ ಕಾದಿದೆ ದೊಡ್ಡ ಅಪಾಯ!
ಗಣೇಶ ವಿಸರ್ಜನೆ 2021: ಯಾವ ದಿನ ಮಾಡಬಹುದು? ಶುಭ ಸಮಯ ಯಾವಾಗ?
ಗಣೇಶನ ಕೂರಿಸಿದ ಮೇಲೆ ಗಣೇಶ ವಿಸರ್ಜನೆ ಕುಡ ಅಷ್ಟೇ ಮುಖ್ಯವಾಗಿದೆ. ಗಣೇಶ ವಿಸರ್ಜನೆ ಹುಟ್ಟು, ಬದುಕು, ಸಾವಿನ ನಮ್ಮ ಜೀವನ ಚಕ್ರವನ್ನು ಸೂಚಿಸುತ್ತದೆ. ಗಣೇಶನ ಕೂರಿಸಿದ ಮೇಲೆ ಆ ದಿನ ಅಥವಾ 3, ದಿನವಾದ ಮೇಲೆ, 7 ದಿನವಾದ ಮೇಲೆ ಗಣೇಶ ವಿಸರ್ಜನೆ ಮಾಡಲಾಗುವುದು.
ಗಣೇಶ ವಿಸರ್ಜನೆಯನ್ನು ಗಣೇಶನ ಕೂರಿಸಿದ ಒಂದೂವರೆ ದಿನದ ನಂತರ ವಿಸರ್ಜನೆ ಮಾಡಬಹುದು. ಮೂರನೇ ದಿನ, ಐದನೇ ದಿನ, ಏಳನೇ ದಿನ ಹೀಗೆ ವಿಸರ್ಜನೆ ಮಾಡಲಾಗುವುದು.

ಗಣೇಶ ವಿಸರ್ಜನೆಗೆ ಶುಭ ಮುಹೂರ್ತ
ಬೆಳಗ್ಗೆ ಶುಭ ಮುಹೂರ್ತ (ಶುಭ):06:16ರಿಂದ 07:48ರವರೆಗೆ
ಬೆಳಗ್ಗೆ ಮುಹೂರ್ತ (ಅಮೃತ):10:50ರಿಂದ 03:25ರವರೆಗೆ
ಮಧ್ಯಾಹ್ನದ ಮುಹೂರ್ತ (ಶುಭ): ಸಂಜೆ 04:56ರಿಂದ 06:27ರವರೆಗೆ
ಸಂಜೆ ಮುಹೂರ್ತ(ಅಮೃತ): ಸಂಜೆ 06:27ರಿಂದ 09:27ರವರೆಗೆ
ರಾತ್ರಿ ಮುಹೂರ್ತ: ರಾತ್ರಿ 12:22ರಿಂದ 01:50ರವರೆಗೆ

ಒಂದೂವರೆ ದಿನದ ಬಳಿಕ ಗಣೇಶ ವಿಸರ್ಜನೆ
ಗಣೇಶ ಕೂರಿಸಿ ಮಾರನೇಯ ದಿನ ಮಧ್ಯಾಹ್ನದ ಮೇಲೆ ಕೆಲವು ಕಡೆ ವಿಸರ್ಜನೆ ಮಾಡಲಾಗುವುದು. ಮಧ್ಯಾಹ್ನ ಹೊತ್ತು ಗಣೇಶನಿಗೆ ಪೂಜೆ ಸಲ್ಲಿಸಿ ಮಧ್ಯಾಹ್ನದ ನಂತರ ಗಣೇಶನನ್ನು ತೆಗೆದುಕೊಂಡು ಹೋಗಿ ಗಣೇಶನ ವಿಸರ್ಜನೆ ಮಾಡಲಾಗುವುದು.

3ನೇ, 5ನೇ, 7ನೇ ದಿನ ಗಣೇಶ ವಿಸರ್ಜನೆ
ಅನಂತ ಚತುರ್ಧಶಿಗೆ ಗಣೇಶನ ವಿಸರ್ಜನೆ ಮಾಡುವುದು ತುಂಬಾ ಮಹತ್ವವಾದರೂ 3ನೇ, 5ನೇ, 7ನೇ ದಿನ ಕೂಡ ಗಣೇಶನ ವಿಸರ್ಜನೆ ಮಾಡಬಹುದು. ಗಣೇಶ ವಿಸರ್ಜನೆಯನ್ನು ಬೆಸ ಸಂಖ್ಯೆಯಲ್ಲಿ ಮಾಡಬೇಕು. ಗಣೇಶನ ವಿಸರ್ಜನೆಗೆ ತುಂಬಾ ಸೂಕ್ತವಾದ ದಿನವೆಂದರೆ 11ನೇ ದಿನವಾದ ಗಣೇಶ ಚತುರ್ಧಶಿಯಾಗಿದೆ.

ಅನಂತ ಚತುರ್ಧಶಿಯಂದು ಗಣೇಶನ ವಿಸರ್ಜನೆ
ಗಣೇಶನ ವಿಸರ್ಜನೆಗೆ ಈ ದಿನ ತುಂಬಾನೇ ಮಹತ್ವವಾದ ದಿನವಾಗಿದೆ. ಗಣೇಶನ ವಿಸರ್ಜನೆಗೆ ಮಾತ್ರವಲ್ಲ ವಿಷ್ಣು ಭಕ್ತರಿಗೂ ಈ ದಿನ ತುಂಬಾ ಮಹತ್ವದ್ದಾಗಿದೆ. ಈ ದಿನ ಉಪವಾಸವಿದ್ದು ಶ್ರೀ ವಿಷ್ಣುವಿನ ಆರಾಧನೆ ಮಾಡಲಾಗುವುದು ಹಾಗೂ ಕೈಗೆ ಪವಿತ್ರ ದಾರವನ್ನು ಕಟ್ಟಲಾಗುವುದು. ಈ ದಾರ ಎಲ್ಲಾ ಕೆಟ್ಟ ದೃಷ್ಟಿಯಿಂದ ರಕ್ಷಣೆ ನೀಡುವುದು ಎಂಬ ನಂಬಿಕೆ ಇದೆ.
11ನೇ ದಿನ ಗಣೇಶನ ವಿಸರ್ಜನೆ ಮಾಡಲಾಗುವುದು. ಸಾಮಾನ್ಯವಾಗಿ ನದಿ, ಕೆರೆ ಅಥವಾ ಕೊಳದಲ್ಲಿ ವಿಸರ್ಜನೆ ಮಾಡಲಾಗುವುದು. ಇದೀಗ ಪರಿಸರ ಉಳಿಸಲು ದೊಡ್ಡ ಡ್ರಮ್ ಅಥವಾ ಬಕೆಟ್ನಲ್ಲಿ ಮುಳುಗಿಸಲಾಗುವುದು. ಅಲ್ಲದೆ ಮಣ್ಣಿನ ಗಣಪನ ಬಳಕೆ ಹೆಚ್ಚಾಗಿದೆ. ಗಣೇಶನನನ್ನು ವಿಸರ್ಜನೆ ಮಾಡುವಾಗ ಜೈ ಗಣೇಶ.. ಎಂದು ಹಾಡಿ ಕುಣಿಯುತ್ತಾ ವಿಸರ್ಜನೆ ಮಾಡಲಾಗುವುದು. ಈ ವರ್ಷ ಅನಂತ ಚತುರ್ಧಶಿ ಸೆಪ್ಟೆಂಬರ್ 19ಕ್ಕೆ ಇದೆ.



Click it and Unblock the Notifications