Latest Updates
-
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ತುಲಾದಿಂದ ಮೀನ ರಾಶಿವರೆಗಿನ ವಾರ ಭವಿಷ್ಯ! -
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ಮೇಷದಿಂದ ಕನ್ಯಾ ರಾಶಿವರೆಗಿನ ವಾರ ಭವಿಷ್ಯ! -
ಮಳೆಗಾಲಕ್ಕೆ ತಯಾರಾಗಿ: ನಿತ್ಯ ಊಟದೊಂದಿಗೆ ಸವಿಯಲು ರವೆ ಸಂಡಿಗೆ ಮಾಡಿ! -
ಮೀನ ರಾಶಿಯಲ್ಲಿ ಶನಿ-ಮಂಗಳ ಸಂಯೋಗ: ಅಪರೂಪದ ಸಮ್ಮಿಲನವು ತರಲಿದೆ ಬಿಕ್ಕಟ್ಟು, ಆರ್ಥಿಕ ಸಮಸ್ಯೆ! -
ಈ 2 ರಾಶಿಯವರ ಪ್ರೇಮ ಸಂಬಂಧಗಳು ಸಿಹಿ! ಸಣ್ಣಪುಟ್ಟ ಸಮಸ್ಯೆಗಳು ಖಚಿತ -
March 21 Horoscope: ಹೊಸ ಆರಂಭಗಳಲ್ಲಿ ಹಣ ಹೂಡಿಕೆಗೆ ಯೋಗ್ಯ ದಿನ! -
ಒಂದು ಹನಿ ಎಣ್ಣೆ ಇಲ್ಲದೆ ಮಾಡಿ ದಹೀ ಭಲ್ಲಾ! ರುಚಿ, ಆರೋಗ್ಯದಲ್ಲಿ ರಾಜಿ ಇಲ್ಲ.. ತೂಕ ಡಬಲ್ ಇಳಿಯುತ್ತೆ -
ಸುಸ್ತು & ಆಯಾಸದಿಂದ ಬಳಲುತ್ತಿದ್ದೀರಾ? ಈ ರಾಗಿ ಖರ್ಜೂರದ ಲಾಡು ಸೇವಿಸಿ.. ಸಕ್ಕರೆ, ಬೆಲ್ಲ ಬೇಕಿಲ್ಲ.. ಮಾಡೋದು ಹೇಗೆ? -
ಎಂದಾದ್ರೂ ಚೆಟ್ಟಿನಾಡ್ ಚಿಕನ್ ಸವಿದ್ದೀರಾ? ಬಾಯಲ್ಲಿ ನೀರೂರಿರುವ ರುಚಿ.. ಮಸಾಲೆ ರುಬ್ಬದೇ ಮಾಡಿ -
ಕುಂಭ ರಾಶಿಯಲ್ಲಿ ಬುಧ ಮಾರ್ಗಿ: ಈ ರಾಶಿಯವರಿಗೆ ಶುಭಕಾಲ ಆರಂಭ! ಕಷ್ಟಗಳಿಗೆ ಮುಕ್ತಿ.. ಕುಬೇರನ ಕೃಪೆ ಶುರು
ಗಣೇಶ ವಿಸರ್ಜನೆ ಸಮಯದಲ್ಲಿ ಯಾವ ತಪ್ಪುಗಳು ಆಗಬಾರದು?
ಗಣೇಶನ ಪೂಜೆಗೆ ತುಂಬಾ ಕಟ್ಟು ನಿಟ್ಟಿನ ನಿಯಮಗಳು ಇಲ್ಲದಿದ್ದರೂ ಮಾಡುವ ಪೂಜೆಯನ್ನು ಭಕ್ತಿ, ಶ್ರದ್ಧೆಯಿಂದ ಮಾತ್ರ ಫಲ ಸಿಗುವುದು. ಗಣೇಶ ಚತುರ್ಥಿಯಂದು ಗಣೇಶನ ತಂದು ಶುಭ ಸಮಯದಲ್ಲಿ ಕೂರಿಸಿ ಪೂಜೆ ಮಾಡುತ್ತೇವೆ, ಅದೇ ರೀತಿ ಶುಭ ಸಮಯ ನೋಡಿ ವಿಸರ್ಜನೆ ಮಾಡಬೇಕು. ಕೂರಿಸುವಾಗ, ವಿಸರ್ಜನೆ ಮಾಡುವಾಗ ತಪ್ಪುಗಳಾಗದಂತೆ ಎಚ್ಚರವಹಿಸಬೇಕು.
ಗಣೇಶ ಚತುರ್ಥಿಗೆ ಮನೆಗೆ ತಂದ ಗಣೇಶನ ವಿಸರ್ಜನೆ ಮಾಡುವಾಗ ಏ ನು ಮಾಡಬೇಕು, ಏನು ಮಾಡಲೇಬಾರದು ಎಂದು ನೋಡೋಣ:

ಗಣೇಶನ ವಿಸರ್ಜನೆ ಸಮಯದಲ್ಲಿ ಏನು ಮಾಡಬೇಕು?
* ಗಣೇಶನ ಮನೆಯಲ್ಲಿರುವಾಗ ಸಾತ್ವಿಕ ಆಹಾರಗಳನ್ನಷ್ಟೇ ಮಾಡಬೇಕು.
* ಗಣಪನನ್ನು ವಿಸರ್ಜನೆಗೆ ತೆಗೆದುಕೊಂಡು ಹೋಗುವ ಮುನ್ನ ಆರತಿ ಎತ್ತಬೇಕು.
* ಮಣ್ಣಿನ ಗಣಪನ ಮೂರ್ತಿಯಾಗಿರಬೇಕು. ಆಗ ಮಾತ್ರ ಮೂರ್ತಿ ನೀರಿನಲ್ಲಿ ಕರಗುವುದು. ಬಣ್ಣ ಹಚ್ಚದ ಮೂರ್ತಿಯಾದರೆ ಇನ್ನೂ ಒಳ್ಳೆಯದು.
* ಗಣಪನ ಮೂರ್ತಿಯನ್ನು ಸಮುದ್ರ, ನದಿಯಲ್ಲಿ ಅಥವಾ ಕೊಳದಲ್ಲಿ ವಿಸರ್ಜನೆ ಮಾಡಬೇಕು. ನದಿ, ಕೊಳದಲ್ಲಿ ಬಿಡುವುದಾದರೆ ಮಣ್ಣಿನ ಗಣಪನ ಮಾತ್ರ ವಿಸರ್ಜನೆ ಮಾಡಿ.
* ಪ್ಯಾರಿಸ್ ಆಫ್ ಫ್ಲಾಸ್ಟರ್ನಿಂದ ಮಾಡಿದ ಗಣಪನನ್ನು ನದಿಯಲ್ಲಿ ವಿಸರ್ಜಿಸಬೇಡಿ. ಟ್ಯಾಂಕ್ ಅಥವಾ ಡ್ರಮ್ನಲ್ಲಿ ಮುಳುಗಿಸಿ. ಇದರಿಂದ ಜಲಚರಗಳಿಗೆ ತೊಂದರೆಯಾಗುವುದು ತಪ್ಪುವುದು. ನಿಮ್ಮ ಈ ನಡೆಯಿಂದ ಗಣೇಶನು ಖುಷಿಯಾಗುತ್ತಾನೆ.

ಏನು ಮಾಡಬಾರದು?
* ಗಣೇಶನಿಗೆ ಆರತಿ ಮಾಡದೆ ವಿಸರ್ಜನೆ ಮುಂದಾಗಬಾರದು
* ಗಣೇಶನ ಮೆರವಣಿಗೆಯನ್ನು ಶುಭ ಸಮಯದಲ್ಲಿಯೇ ಮಾಡಿ.
* ಗಣೇಶನ ಮೂರ್ತಿಯನ್ನು ವಿಸರ್ಜನೆಗೆ ತೆಗೆದುಕೊಂಡು ಹೋಗುವಾಗ ಮನೆಯ ಬಾಗಿಲು ಹಾಕಬಾರದು. ಯಾರಾದರೂ ಒಬ್ಬರು ಮನೆಯಲ್ಲಿಯೇ ಇರಬೇಕು.
* ದೊಡ್ಡ ಮೂರ್ತಿಯನ್ನು ಹೊತ್ತುಕೊಂಡು ಹೋಗಿ ಮುಳುಗಿಸುವ ಬದಲಿಗೆ ಬೋಟ್ನಲ್ಲಿ ತೆಗೆದುಕೊಂಡು ಹೋಗಿ ನದಿಯಲ್ಲಿ ಮುಳುಗಿಸಿ.
(ಈ ಬಾರಿ 3 ಅಡಿಗಿಂತ ದೊಡ್ಡ ಗಣಪನ ಕೂರಿಸಲು ಅವಕಾಶವಿಲ್ಲದ ಕಾರಣ, ಎತ್ತಿಕೊಂಡು ಹೋಗಿಯೇ ಮುಳುಗಿಸಬಹುದು, ಆದರೆ ನೀರಿನ ಹರಿವು ಹೆಚ್ಚಿರುವ ಕಡೆ ಜಾಗ್ರತೆ)

ಗಣೇಶನ ವಿಸರ್ಜನೆ ಯಾವಾಗಲ್ಲ ಮಾಡಬಹುದು?
ಗಣೇಶ ಮೂರ್ತಿ ಪ್ರತಿಷ್ಠಾಪನೆ ಮಾಡಿದ ಒಂದೂವರೆ, 3, 5. 7, 11ನೇ ದಿನಗಳಲ್ಲಿ ವಿಸರ್ಜನೆ ಮಾಡಲಾಗುವುದು
ಈ ದಿನಗಳಲ್ಲಿ ನೀವು ವಿಸರ್ಜನೆ ಮಾಡಬಹುದಾಗಿದ್ದು ಈ ಶುಭ ಸಮಯದಲ್ಲಿ ಮಾಡಿ.
ಬೆಳಗ್ಗೆ ಶುಭ ಮುಹೂರ್ತ (ಶುಭ):06:16ರಿಂದ 07:48ರವರೆಗೆ
ಬೆಳಗ್ಗೆ ಮುಹೂರ್ತ (ಅಮೃತ):10:50ರಿಂದ 03:25ರವರೆಗೆ
ಮಧ್ಯಾಹ್ನದ ಮುಹೂರ್ತ (ಶುಭ): ಸಂಜೆ 04:56ರಿಂದ 06:27ರವರೆಗೆ
ಸಂಜೆ ಮುಹೂರ್ತ(ಅಮೃತ): ಸಂಜೆ 06:27ರಿಂದ 09:27ರವರೆಗೆ
ರಾತ್ರಿ ಮುಹೂರ್ತ: ರಾತ್ರಿ 12:22ರಿಂದ 01:50ರವರೆಗೆ
ಅನಂತ ಚತುರ್ಧಶಿ: ಸೆಪ್ಟೆಂಬರ್ 17
ಅನಂತ ಚತುರ್ಧಶಿ ಗಣಪನ ವಿಸರ್ಜನೆಗೆ ತುಂಬಾನೇ ಸೂಕ್ತ
ಗಣಪನ ವಿಸರ್ಜನೆಗೆ ತುಂಬಾ ಸೂಕ್ತವಾದ ದಿನವೆಂದರೆ ಗಣೇಶನ ಕೂರಿಸಿ 11ನೇ ದಿನ. ಈ 11ನೇ ದಿನ ಅನಂತ ಚತುರ್ಧಶಿ ದಿನವಾಗಿದ್ದು ಈ ವರ್ಷ ಸೆಪ್ಟೆಂಬರ್ 17ಕ್ಕೆ ಈ ದಿನ ಬಂದಿದೆ.



Click it and Unblock the Notifications











