Just In
- 23 min ago UPSCಯಲ್ಲಿ 2ನೇ ರ್ಯಾಂಕ್ ಗಳಿಸಿದ ಸಾಧಕನ ಡ್ಯಾನ್ಸ್ ವೀಡಿಯೋ ವೈರಲ್: ಇವರ ಬದುಕಿನಲ್ಲಿ ನಡೆದಿದೆ ಹಲವು ದುರಂತಗಳು
- 1 hr ago ಹುಟ್ಟುಹಬ್ಬದ ಕೇಕ್ ತಿಂದು ಬಾಲಕಿ ಸಾವು..! ಕೇಕ್ನಲ್ಲಿತ್ತು ಕೃತಕ ಸಿಹಿ ಸಾಕ್ರರಿನ್..!
- 2 hrs ago ಮೊಬೈಲ್ ಬೇಡ..ಗ್ಯಾಜೆಟ್ ಬೇಡ..ಹಸ್ತದಿಂದ ಪೇಮೆಂಟ್ ಮಾಡಿ..! ಇದು ಟಿಜಿಟಲ್ ಕ್ರಾಂತಿ..!
- 3 hrs ago ಮಂಗಳ ಗೋಚಾರ ಫಲ 2024: ಇನ್ನು 38 ದಿನಗಳ ಕಾಲ ನಿಮ್ಮ ರಾಶಿಯಲ್ಲಿ ಮಂಗಳದ ಪ್ರಭಾವ ಹೇಗಿರಲಿದೆ?
Don't Miss
- News Namma Metro Blue Line: ಇತರ ಮಾರ್ಗಕ್ಕಿಂತಲೂ 'ನೀಲಿ' ಮಾರ್ಗದಲ್ಲಿ ವೇಗವಾಗಿ ಓಡಲಿವೆ ಮೆಟ್ರೋ, ಅಪ್ಡೇಟ್
- Automobiles ಪ್ರತಿ ಕಿ.ಮೀ ಚಲಿಸಲು 3.3 ರೂ. ವೆಚ್ಚ: 10 ಜನರು ಪ್ರಯಾಣಿಸುವ ಟಾಟಾ ಮ್ಯಾಜಿಕ್ ಬೈ-ಫ್ಯೂಯಲ್ ಲಗ್ಗೆ
- Movies ನಿರಂತರ ಪ್ಲಾಫ್ ಸಿನಿಮಾಳನ್ನ ನೀಡಿದ ಈ ವಿಶ್ವಸುಂದರಿ ಯಾರು ಗೊತ್ತಾ...?
- Sports CSK vs LSG IPL 2024: ಚೆನ್ನೈ vs ಲಕ್ನೋ ಹೈ-ವೋಲ್ಟೇಜ್ ಪಂದ್ಯದ ಟಾಸ್ ವರದಿ; ಆಡುವ 11ರ ಬಳಗ
- Finance ಸಾಲ ತಂದು ನೌಕರರಿಗೆ ಸಂಬಳ ನೀಡಿದ ಬೈಜುಸ್ ಸಂಸ್ಥೆ!
- Technology Realme: ಭಾರತದಲ್ಲಿ ರಿಯಲ್ಮಿ C65 5G ಸ್ಮಾರ್ಟ್ಫೋನ್ ಲಾಂಚ್ಗೆ ದಿನಾಂಕ ಫಿಕ್ಸ್! ಫೀಚರ್ಸ್ ಲೀಕ್..
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಸಿಡಿಸಿ ಜನರಲ್ ಬಿಪಿನ್ ರಾವತ್: ಪ್ರತಿಯೊಬ್ಬ ದೇಶ ಭಕ್ತಿನಿಗೂ ಸ್ಪೂರ್ತಿ ಈ ವೀರ ಯೋಧ
Mi-17V5 ಹೆಲಿಕಾಪ್ಟರ್ ಲ್ಯಾಂಡಿಂಗ್ ಆಗಲು ಇನ್ನೇನು 5 ನಿಮಿಷ ಬಾಕಿ ಇತ್ತು, ಅಷ್ಟರಲ್ಲಿ ಈ ದುರ್ಘಟನೆ ಸಂಭವಿಸಿದ್ದು , ಹೆಲಿಕಾಪ್ಟರ್ ದುರಂತಕ್ಕೆ ಹವಾಮಾನದಲ್ಲಿ ವೈಪರೀತ್ಯ ಕಾರಣವಿರಬಹುದು ಎಂದು ಅಂದಾಜಿಸಲಾಗಿದೆ. ಹೆಲಿಕಾಪ್ಟರ್ ನಲ್ಲಿ 14 ಮಂದಿ ಪ್ರಯಾಣಿಸುತ್ತಿದ್ದರು. ಅವರಲ್ಲಿ ಜನರಲ್ ಬಿಪಿನ್ ರಾವತ್ ಮತ್ತು ಅವರ ಪತ್ನಿ ಮಧುಲಿಕಾ ರಾವತ್, ಬ್ರಿಗೇಡಿಯರ್ ಎಲ್ಎಸ್ ಲಿಡರ್, ಲೆಫ್ಟಿನೆಂಟ್ ಕರ್ನಲ್ ಹರ್ಜಿಂದರ್ ಸಿಂಗ್, ನಾಯಕ್ ಗುರ್ಸೇವಕ್ ಸಿಂಗ್, ನಾಯಕ್ ಜಿತೇಂದ್ರ ಕುಮಾರ್, ಲ್ಯಾನ್ಸ್ ನಾಯಕ್ ವಿವೇಕ್ ಕುಮಾರ್, ಲ್ಯಾನ್ಸ್ ನಾಯಕ್ ಬಿ ಸಾಯಿ ತೇಜಾ ಮತ್ತು ಹವಾಲ್ದಾರ್ ಸತ್ಪಾಲ್ ಹೆಲಿಕಾಪ್ಟರ್ ದುರಂತದಿಂದಾಗಿ ಸಾವನ್ನಪ್ಪಿದ್ದಾರೆ. ವೀರಯೋಧರನ್ನು ಕಳೆದುಕೊಂಡು ಇಡೀ ದೇಶವೇ ಕಣ್ಣೀರಿಡುತ್ತಿದೆ. 2020ರ ಜನವರಿಯಿಂದ ಭೂ ಸೇನಾ ಮುಖ್ಯಸ್ಥರಾಗಿ ಕಾರ್ಯನಿರ್ವಹಿಸುತ್ತಿದ್ದ ಜನರಲ್ ಬಿಪಿನ್ ರಾವತ್ ಈ ಹೆಲಿಕಾಪ್ಟರ್ ದುರಂತದಲ್ಲಿ ಸಾವನ್ನಪ್ಪಿರುವುದು ಕೇಳಿ ದೇಶವೇ ಆಘಾತಕ್ಕೆ ಒಳಗಾಗಿದೆ. ಶತ್ರುಗಳ ಪಾಲಿಗೆ ಸಿಂಹ ಸ್ವಪ್ನವಾಗಿದ್ದರು ಬಿಪಿನ್ ರಾವತ್. ಭಾರತೀಯ ಸೇನೆಗೆ ಬಿಪಿನ್ ರಾವತ್ ಅವರ ಸೇವೆ ಅಪಾರ. ಅವರ ಜೀವನವೂ ಸೇನೆಗೆ ಸೇರಿ ದೇಶ ಸೇವೆ ಮಾಡಲು ಯುವ ಜನತೆಗೆ ಸ್ಪೂರ್ತಿ ತುಂಬುವಂತಿದೆ.
ಅವರ ಜೀವನದ ಕುರಿತ ಕೆಲವೊಂದು ಮಾಹಿತಿಗಳನ್ನು ನಿಮಗೆ ನೀಡಲಾಗಿದೆ ನೋಡಿ:
ಬಿಪಿನ್ ರಾವತ್
ಉತ್ತರಾಖಂಡದ ಪೌರಿಯಲ್ಲಿ 1958, ಮಾರ್ಚ್ 16ರಂದು ಜನಿಸಿದರು. ಅವರ ತಂದೆ ದೇಶ ಕಾಯುವ ಯೋಧರಾಗಿದ್ದರು. ಬಿಪಿನ್ರಾವ್ ತಂದೆ ಲಕ್ಷಣ್ ಸಿಂಗ್ ರಾವತ್ ಭಾರತೀಯ ಸೈನ್ಯದಲ್ಲಿ ಲೆಫ್ಟಿನೆಮಟ್ ಜನರಲ್ ಆಗಿ ಸೇವೆ ಸಲ್ಲಿಸಿದ್ದರು. ಡೆಹರಾಡೂನ್ನ ಕೇಂಬ್ರಡ್ಜ್ ಹಾಲ್ ಸ್ಕೂಲ್ನಲ್ಲಿ ಪ್ರಾಥಮಿಕ ಶಿಕ್ಷಣ, ಶಿಮ್ಲಾದ ಸೆಂಟ್ ಎಡ್ವರ್ಡ್ ಹೈಸ್ಕೂಲ್ನಲ್ಲಿ ಶಿಕ್ಷಣ ಪಡೆದ ಬಳಿಕ ಡೆಹರಾಡೂನ್ನ ಮಿಲಿಟರಿ ಅಕಾಡೆಮಿಯಲ್ಲಿ ಸೇರಿ ಸೈನ್ಯದ ತರಬೇತಿ ಪಡೆದರು.
ಬಿಪಿನ್ ರಾವತ್ರ ವೃತ್ತಿ ಜೀವನ
1978ರಲ್ಲಿ ಗೂರ್ಖಾ ರೆಜಿಮೆಂಟ್ ಮೂಲಕ ಸೇನೆ ಸೇರಿದ ಬಿಪಿನ್ ರಾವತ್ ಬ್ರಿಗೇಡ್ ಕಮಾಂಡರ್, ಜನರಲ್ ಆಫೀಸರ್ ಕಮಾಂಡಿಂಗ್ ಇನ್ ಚೀಫ್ ಸದರ್ನ್ ಕಮಾಂಡ್, ಜನರಲ್ ಸ್ಟಾಫ್ ಆಫೀಸರ್ ಗ್ರೇಡ್ 2, ಕರ್ನಲ್ ಮಿಲಿಟರಿ ಕಾರ್ಯದರ್ಶಿ ಹಾಗೂ ಉಪ ಮಿಲಿಟರಿ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ್ದಾರೆ. ಮಿಲಿಟರಿ ಕಾರಯದರ್ಶಿಯ ಶಾಲೆ ಮತ್ತು ಜೂನಿಯರ್ ಕಮಾಂಡ್ ವಿಂಗ್ನಲ್ಲಿ ಬೋಧಕರಾಗಿದ್ದರು, ಯುನೈಟೆಡ್ ನೇಷನ್ಸ್ ಪೀಸ್ ಕೀಪಿಂಗ್ ಫೋರ್ಸ್ನ ಭಾಗವಾಗಿದ್ದರು, ಡೆಮಾಕ್ರಟಿಕ್ ರಿಪಬ್ಲಿಕ್ ಕಾಂಗೋದಲ್ಲಿ ಬಹುರಾಷ್ಟ್ರೀಯ ಬ್ರಿಗೇಡ್ ಕಮಾಂಡರ್ ಆಗಿ ದೇಶಕ್ಕೆ ಸೇವೆ ಸಲ್ಲಿಸಿದ್ದಾರೆ. 2016ರಿಂದ ಭಾರತೀಯ 3 ಸೇನಾ ಪಡೆಗಳ ಮುಖ್ಯಸ್ಥರಾಗಿ ನಿಯೋಜನೆಗೊಂಡರು.
ಸೇನೆಗೆ ಬಿಪಿನ್ ರಾವತ್ ಕೊಡುಗೆ
* 1987ರಲ್ಲಿ ಅರುಣಾಚಲ ಪ್ರದೇಶದ ಸುಮದೊರೋಂಗ್ ಚು ಕಣಿವೆಯಲ್ಲಿ ಚನಾ ವಿರುದ್ಧದ ಹೋರಾಟದಲ್ಲಿ ಬಿಪಿನ್ ರಾವತ್ ನೇತೃತ್ವದ ಬೆಟಾಲಿಯನ್ ತುಂಬಾ ಪ್ರಮುಖ ಪಾತ್ರವಹಿಸಿತ್ತು.
* 2015ರಲ್ಲಿ ಮಯನ್ಮಾರ್ನಲ್ಲಿ ಭಯೋತ್ಪಾದಕರ ವಿರುದ್ಧ ನಡೆದ ಕ್ಷಿಪ್ರ ಕಾರ್ಯಚರಣೆಯಲ್ಲೂ ಪ್ರಮುಖ ಪಾತ್ರವಹಿಸಿದ್ದರು.
* ಕಾಂಗೋದಲ್ಲಿ ವಿಶ್ವಸಂಸ್ಥೆಯ ಪರವಾಗಿ ಕಳುಹಿಸಲಾದ ಭಾರತೀಯ ಸೇನಾ ಪಡೆಯ ನೇತೃತ್ವವನ್ನು ರಾವತ್ ಅವರೇ ವಹಿಸಿಕೊಂಡಿದ್ದರು.
* ತುಂಬಾ ಸೇನಾನುಭವ ಮತ್ತು ಯುದ್ಧಾನುಭವ ಹೊಂದಿರುವ ಬಿಪನ್ ರಾವತ್ ದೇಶಕ್ಕೆ ಅನರ್ಘ್ಯ ರತ್ನವಾಗಿದ್ದರು.
ಇವರು ಸೇನೆಯಲ್ಲಿ ಸಲ್ಲಿಸಿರುವ ಸೇವೆ ನೋಡಿದಾಗ ಪ್ರತಿಯೊಬ್ಬ ದೇಶ ಭಕ್ತರಿಗೂ ಇವರ ಮೇಲೆ ಗೌರವ ಹೆಚ್ಚುವುದು, ಇವರ ಸಾಧನೆಗಳು, ದೇಶಕ್ಕೆ ಇವರು ಸಲ್ಲಿಸಿದ ಅಪಾರ ಕೊಡುಗೆಗಳ ಬಗ್ಗೆ ಕೇಳಿದಾಗ ಎಷ್ಟೋ ಯುವ ಜನರಿಗೆ ಸೇನೆಯಲ್ಲಿ ಸೇರಿ ಸೇವೆ ಸಲ್ಲಿಸಬೇಕು ಎಂದು ಸ್ಪೂರ್ತಿ ಉಂಟಾಗುವುದು.