Latest Updates
-
ಪ್ರತಿಭಟನೆಯಲ್ಲಿ ಪ್ರೀತಿ: 'ಪ್ರೊಟೆಸ್ಟ್ ನೇ ಬನಾ ದಿ ಜೋಡಿ' ಟ್ರೆಂಡ್ ಹಿಂದೆ ಅಡಗಿದೆ ದೊಡ್ಡ ಅಪಾಯ! -
ಮಳೆಗಾಲದಲ್ಲಿ ಮನೆಯಲ್ಲಿ ಬೂಷ್ಟು ಹರಡುತ್ತಿದೆಯೇ? ಈ 20 ನಿಮಿಷದ ಟಿಪ್ಸ್ ಪಾಲಿಸಿ, ಮನೆ ಫ್ರೆಶ್ ಆಗಿಡಿ! -
ಕೇವಲ 200 ರೂಪಾಯಿಯಲ್ಲಿ ಪರಿಸರ ಸ್ನೇಹಿ ಊಟ: ವಿಶ್ವ ಪ್ರಕೃತಿ ಸಂರಕ್ಷಣಾ ದಿನಕ್ಕೆ ನಿಮ್ಮ ಅಡುಗೆಮನೆಯೇ ಮೊದಲ ಹೆಜ್ಜೆ! -
CWG 2026: 6ನೇ ದಿನ ಭಾರತದ ಪದಕದ ಬೇಟೆ; ಮನೆಯಲ್ಲೇ ಕಮ್ಮಿ ಬಜೆಟ್ನಲ್ಲಿ ಅದ್ಭುತ ವಾಚ್ ಪಾರ್ಟಿ ಪ್ಲಾನ್! -
ವಿಶ್ವ ಹೆಪಟೈಟಿಸ್ ದಿನ: ಲಿವರ್ ಆರೋಗ್ಯ ಹೆಚ್ಚಿಸಲು ಈ 10 ನಿಮಿಷದ ಬೆಳಗಿನ ದಿನಚರಿ ಪಾಲಿಸಿ! -
ಮಳೆಗಾಲದ ರಜೆ: ವರ್ಕ್ ಫ್ರಮ್ ಹೋಮ್ ಪೋಷಕರಿಗೆ ಮಕ್ಕಳನ್ನು ನಿಭಾಯಿಸುವುದು ಹೇಗೆ? ಇಲ್ಲಿದೆ ಸರಳ ಟಿಪ್ಸ್ -
ಮಳೆಗಾಲದಲ್ಲಿ ನಿಮ್ಮ ಮನೆಯ ಗಿಡಗಳು ಸಾಯುತ್ತಿವೆಯೇ? ಈ 15 ನಿಮಿಷದ ಟಿಪ್ಸ್ ಪಾಲಿಸಿ! -
ಮಳೆಗಾಲದಲ್ಲಿ ಕರೆಂಟ್ ಹೋದರೆ ಫ್ರಿಜ್ ಆಹಾರ ಹಾಳಾಗುತ್ತಾ? ಸುರಕ್ಷಿತವಾಗಿಡಲು ಇಲ್ಲಿವೆ ಸರಳ ಟಿಪ್ಸ್ -
ಐಟಿಆರ್ ಸಲ್ಲಿಕೆಗೆ ಇನ್ನು 4 ದಿನ ಬಾಕಿ: ಭಾರಿ ದಂಡದಿಂದ ಪಾರಾಗಲು ಈ ಕೆಲಸಗಳನ್ನು ಇಂದೇ ಮಾಡಿ! -
IMD ಮಳೆ ಎಚ್ಚರಿಕೆ: ಹೊರಗೆ ಹೋಗಬೇಡಿ, ಮನೆಯಲ್ಲೇ ಈ 12 ನಿಮಿಷದ ವರ್ಕೌಟ್ ಮಾಡಿ ಫಿಟ್ ಆಗಿರಿ!
ಸುಭದ್ರ ಕುಮಾರಿ ಚೌಹಾಣ್ ಅವರಿಗೆ ಗೂಗಲ್ ಗೌರವ: ಪ್ರತಿಯೊಬ್ಬ ಭಾರತೀಯ ಇವರ ಬಗ್ಗೆ ತಿಳಿದಿರಲೇಬೇಕಾದ ಸಂಗತಿಗಳು
ಇಂದು ಗೂಗಲ್ ಭಾರತದ ಮೊದಲ ಮಹಿಳಾ ಸತ್ಯಾಗ್ರಹಿ ಸುಭದ್ರ ಕುಮಾರಿ ಚೌಹಾಣ್ ಅವರ 117ನೇ ಜನ್ಮ ದಿನಾಚರಣೆಯ ದಿನಂದು ಡೂಡಲ್ ಮೂಲಕ ಗೌರವ ಸಲ್ಲಿಸಿದೆ.

ಪುರುಷ ಪ್ರಧಾನ ಸಮಾಜದಲ್ಲಿ ಕಟ್ಟಳೆಗಳನ್ನು ಮೀರಿ ಮುಂದೆ ಬಂದ ದಿಟ್ಟ ಮಹಿಳೆ ಸುಭದ್ರ ಕುಮಾರಿ ಚೌಹಾಣ್. ಇವರು ಬರಹಗಾರ್ತಿ ಹಾಗೂ ಸ್ವಾತಂತ್ರ್ಯ ಹೋರಾಟಗಾರ್ತಿ. ಸುಭದ್ರರವರ 'ಜಾನ್ಸಿ ಕೀ ರಾಣಿ' ರಾಷ್ಟ್ರೀಯ ಪದ್ಯವಾಗಿದೆ.
1904 ಆಗಸ್ಟ್ 16ರಂದು ತಮಿಳು ನಾಡಿನ ನಿಹಾಲ್ಪುರ್ನಲ್ಲಿ ಜನಿಸಿದರು. ಇವರು ತುಂಬಾ ಬರೆಯುತ್ತಿದ್ದರು. ಸ್ಕೂಲ್ಗೆ ಕುದುರೆಗಾಡಿಯಲ್ಲಿ ಹೋಗುತ್ತಿರುವಾಗಲೂ ಬರೆಯುತ್ತಿದ್ದರು, ಅವರು ಒಂಭತ್ತು ವರ್ಷವಿದ್ದಾಗಲೇ ಮೊದಲ ಪದ್ಯ ಪ್ರಕಟವಾಗಿತ್ತು.
ಇವರು ಹದಿಹರೆಯದ ಪ್ರಾಯಕ್ಕೆ ಬರುವಾಗಲೇ ದೇಶದಲ್ಲಿ ಸ್ವಾತಂತ್ರ್ಯ ಕಹಳೆ ಜೋರಾಗಿತ್ತು. ಇವರು ಕೂಡ ಸ್ವಾತಂತ್ರ್ಯ ಹೋರಾಟದಲ್ಲಿ ಭಾಗವಹಿಸಿದರು.. ತಮ್ಮ ಕವನಗಳ ಮೂಲಕ ಸ್ವಾತಂತ್ರ್ಯ ಹೋರಾಟಕ್ಕೆ ಜನರನ್ನು ಒಗ್ಗೂಡಿಸುತ್ತಿದ್ದರು. ಪ್ರಾರಂಭದಲ್ಲಿ ಜಾತಿ ಬೇಧ, ಲಿಂಗ ತಾರತಮ್ಯ ಬಗ್ಗೆ ಬರೆಯುತ್ತಿದ್ದ ಸುಭದ್ರ ಅವರು ನಂತರ ದೇಶದ ಕುರತು ಬರೆಯಲಾರಂಭಿಸಿದರು.
1923ರಲ್ಲಿ ಬ್ರಿಟಿಷರಿಂದ ಬಂಧನಕ್ಕೊಳಗಾದರು, ಮಹಿಳಾ ಸ್ವಾತಂತ್ರ್ಯ ಹೋರಾಟಗಾರರಲ್ಲಿ ನಂಧನಕ್ಕೆ ಒಳಗಾದ ಮೊದಲ ಮಹಿಳಾ ಸತ್ಯಾಗ್ರಹಿ ಸುಭದ್ರವರು. ಸುಭದ್ರವರು ಅನೇಕ ಕ್ರಾಂತಿಕಾರಿ ಹೇಳಿಕೆಗಳನ್ನು ನೀಡುತ್ತಿದ್ದರು, ಇವರು ಮಾತುಗಳು ಜನರಲ್ಲಿ ಸ್ವಾತಂತ್ರ್ಯ ಕಿಚ್ಚು ಹೆಚ್ಚಿಸುತ್ತಿತ್ತು. ಸುಭದ್ರರವರು ಒಟ್ಟು 88 ಪದ್ಯಗಳು ಮತ್ತು 46 ಚಿಕ್ಕ ಕತೆಗಳನ್ನು ಬರೆದಿದ್ದಾರೆ.
ಸುಭದ್ರ ಕುಮಾರಿ ಚೌಹಾಣ್ 1948ರಲ್ಲಿ ಮಧ್ಯಪ್ರದೇಶದಲ್ಲಿ ಕಾರು ಅಪಘಾತದಲ್ಲಿ ಸಾವನ್ನಪ್ಪಿದರು. ಇಂಥ ಮಹಾನ್ ಹೋರಾಟಗಾರ್ತಿ, ಕವಿಯತ್ರಿಯನ್ನು ಗೂಗಲ್ ಡೂಡಲ್ ಮೂಲಕ ಸ್ಮರಿಸಲಾಗಿದೆ.



Click it and Unblock the Notifications