Latest Updates
-
ಮಳೆಗಾಲದಲ್ಲಿ ಅಂತರಾಷ್ಟ್ರೀಯ ಯೋಗ ದಿನ: ಹಿರಿಯರು ಸುರಕ್ಷಿತವಾಗಿ ಯೋಗ ಮಾಡುವುದು ಹೇಗೆ? -
ವಿಶ್ವ ಸಂಗೀತ ದಿನ: ಸಂಗಾತಿಯೊಂದಿಗೆ ಮರೆಯಲಾಗದ ಕ್ಷಣ ಕಳೆಯಲು ಇಲ್ಲಿದೆ ಸಿಂಪಲ್ ಪ್ಲಾನ್! -
ಮುಂಬೈನಲ್ಲಿ ತೀವ್ರ ನೀರಿನ ಅಭಾವ: ಬಿಎಂಸಿ ಕಠಿಣ ನಿಯಮಗಳ ನಡುವೆ ನೀರು ಉಳಿಸಲು ಈ ಟಿಪ್ಸ್ ಪಾಲಿಸಿ -
ಮಳೆಗಾಲದಲ್ಲಿ ಸಿಕಲ್ ಸೆಲ್ ಸಮಸ್ಯೆ: ಆರೋಗ್ಯ ಕಾಪಾಡಲು ಈ ಆಹಾರ ಕ್ರಮ ಪಾಲಿಸಿ, ನೋವು ದೂರವಿಡಿ! -
ಟೆಲಿಗ್ರಾಂ ಬ್ಯಾನ್: ಜೂನ್ 22ರವರೆಗೆ ಈ ಆಪ್ಗಳನ್ನು ಬಳಸಿ, ಇಲ್ಲದಿದ್ದರೆ ತೊಂದರೆ ಕಟ್ಟಿಟ್ಟ ಬುತ್ತಿ! -
ಮಳೆಗಾಲದಲ್ಲಿ 'ರನ್ ಫಾರ್ ಯೋಗ': ಜಾರುವ ರಸ್ತೆಯಲ್ಲಿ ಸುರಕ್ಷಿತವಾಗಿ ಓಡಲು ಈ ಟಿಪ್ಸ್ ಪಾಲಿಸಿ -
ಫಾದರ್ಸ್ ಡೇ: ಅಪ್ಪನ ಜೊತೆಗಿನ ಮೌನ ಮುರಿಯಲು ಮತ್ತು ಸಂಬಂಧ ಗಟ್ಟಿಗೊಳಿಸಲು ಇಲ್ಲಿದೆ ಸರಳ ಟಿಪ್ಸ್ -
ಮುಂಬೈ ಜನರೇ ಎಚ್ಚರ! ಜೂನ್ 18-19ರಂದು ಭಾರಿ ಹೈ-ಟೈಡ್ ಭೀತಿ: ಪ್ರವಾಹದಿಂದ ಪಾರಾಗಲು ಈ ಮುನ್ನೆಚ್ಚರಿಕೆ ಮರೆಯದಿರಿ -
ಮಳೆಗಾಲದ ಎಚ್ಚರಿಕೆ: ಟೈಫಾಯಿಡ್ ಮತ್ತು ಸೋಂಕಿನಿಂದ ಪಾರಾಗಲು ನಿಮ್ಮ ಆಹಾರ ಕ್ರಮ ಹೀಗಿರಲಿ -
ಯುಜಿಸಿ ನೆಟ್ 2026 ಪ್ರವೇಶ ಪತ್ರ ಬಿಡುಗಡೆ: ಪರೀಕ್ಷಾ ಕೇಂದ್ರಕ್ಕೆ ತೆರಳುವ ಮುನ್ನ ಈ ಎಚ್ಚರಿಕೆ ಮರೆಯದಿರಿ!
ಗೋವರ್ಧನ ಪೂಜೆ 2020: ಪೂಜೆ ಶುಭ ಮುಹೂರ್ತ, ಪೂಜಾ ವಿಧಿ
ಇಂದ್ರನ ಕೋಪದಿಂದ ವೃಂದಾವನದ ಜನರನ್ನು ರಕ್ಷಿಸಲು ಶ್ರೀ ಕೃಷ್ಣನು ಗೋವರ್ಧನ ಗಿರಿಯನ್ನು ಎತ್ತಿದ ಲೀಲೆಯನ್ನು ಕೊಂಡಾಡಲು ಪ್ರತಿ ವರ್ಷ ಕಾರ್ತಿಕ ಮಾಸದಲ್ಲಿ ಗೋವರ್ಧನ ಪೂಜೆಯನ್ನು ಆಚರಿಸಲಾಗುತ್ತದೆ. ಈ ವರ್ಷ ನವೆಂಬರ್ 15ಕ್ಕೆ ಗೋವರ್ಧನ ಪೂಜೆ ಮಾಡಲಾಗುವುದು.

ಗೋವರ್ಧನ ಪೂಜೆಯ ಹಿಂದಿರುವ ಪೌರಾಣಿಕ ಕತೆ
ವೃಂದಾವನದ ಜನರು ಇಂದ್ರಯಜ್ಞಕ್ಕೆ ಸಿದ್ಧರಾಗುತ್ತಿದ್ದರು. ಇದನ್ನು ತಿಳಿದ ಶ್ರೀ ಕೃಷ್ಣ ಪರಮಾತ್ಮನನ್ನು ಇಂದ್ರನನ್ನು ಪೂಜಿಸುವುದನ್ನು ಬಿಟ್ಟು ಅವರು ಗೋವರ್ಧನ ಗಿರಿಯನ್ನು ಆರಾಧಿಸಬೇಕೆಂದು ಸೂಚಿಸಿದನು. ಅದರಂತೆ ವೃಂದಾವನದ ಜನರು ಗೋವರ್ಧನ ಗಿರಿಯನ್ನು ಪೂಜಿಸಲು ನಿಶ್ಚಿಯಿಸಿದರು. ಇದರಿಂದ ಕೋಪಗೊಂಡ ಇಂದ್ರನು ಕೋಪದಿಂದ ಭಾರಿ ಮಳೆ ಸುರಿಸಲು ಮೋಡಗಳಿಗೆ ಆಜ್ಞಾಪಿಸಿದನು. ಆಗ ಕೃಷ್ಣನು ತನ್ನ ಕಿರು ಬೆರಳಿನಿಂದ ಗೋವರ್ಧನ ಗಿರಿಯನ್ನು ಎತ್ತಿ ಹಿಡಿದು ವೃಂದಾವನದ ಎಲ್ಲ ನಿವಾಸಿಗಳಿಗೆ ಅದರ ಕೆಳಗೆ ಆಶ್ರಯ ನೀಡಿದನು.
ಇದರಿಂದಾಗಿ ಇಂದ್ರನಿಗೆ ತಾನು ಮಾಡಿದ ಅರಿವಾಗಿ ಕೃಷ್ಣನ ಬಳಿ ಬಂದು ಕ್ಷಮೆ ಯಾಚಿಸಿದ. ದೇವೋತ್ತಮನಿಗೆ ಶರಣಾದ ಮ ಹಾಗೂ ಭಕ್ತಿಯಿಂದ ಸೇವೆ ಸಲ್ಲಿಸುವ ಭಕ್ತರು ಎಲ್ಲ ಹೊಣೆಗಾರಿಕೆಯಿಂದ ಮುಕ್ತರು ಮತ್ತು ಅವರು ಲೌಕಿಕ ಅನುಕೂಲಕ್ಕಾಗಿ ಯಾವ ದೇವತೆಯನ್ನೂ ಪೂಜಿಸುವ ಅಗತ್ಯ ಇಲ್ಲ ಎನ್ನುವ ಅಂಶವನ್ನು ಕೃಷ್ಣನು ಹೇಳಿದನು. ಇದು ಗೋವರ್ಧನ ಲೀಲೆ ಎಂದು ಪ್ರಸಿದ್ಧಿಯಾಗಿದೆ.

ಪೂಜೆಯ ವಿಧಾನ
ಭಕ್ತರು ಧಾನ್ಯ ಮತ್ತು ತುಪ್ಪದ (ಅನ್ನ, ದಾಲ್, ಹಲ್ವ, ಪಕೋಡ, ಪೂರಿ ಇತ್ಯಾದಿ) ವಿವಿಧ ತಿನಿಸುಗಳನ್ನು ಮತ್ತು ಹಾಲಿನ ಖಾದ್ಯಗಳನ್ನು (ಸಿಹಿ ಅನ್ನ, ಪೊಂಗಲ್, ರಬ್ಡಿ, ಸಂದೇಶ್, ರಸಗುಲ್ಲ, ಲಡ್ಡು ಇತ್ಯಾದಿ) ತಯಾರಿಸಿ, ಅವುಗಳನ್ನು ಬೆಟ್ಟದಂತೆ ಜೋಡಿಸಿ ಭಗವಂತನಿಗೆ ಅರ್ಪಿಸುತ್ತಾರೆ. ಅನಂತರ ಆ ತಿನಿಸುಗಳನ್ನು ಎಲ್ಲರಿಗೂ ಪ್ರಸಾದವಾಗಿ ಹಂಚಲಾಗುವುದು. ಇದನ್ನು ಅನ್ನಕೂಟ ಉತ್ಸವ ಎಂದೂ ಕರೆಯುತ್ತಾರೆ.

ಗೋವರ್ಧನ ಪೂಜೆಗೆ ಮುಹೂರ್ತ
ನವೆಂಬರ್ 15ಕ್ಕೆ ಗೋವರ್ಧನ ಪೂಜೆ ಪ್ರಾರಂಭದ ಸಮಯ ಸಂಜೆ 3 ಗಂಟೆ 18 ನಿಮಿಷ 37 ನಿಮಿಷಕ್ಕೆ ಪ್ರಾರಂಭವಾಗಿ 5 ಗಂಟೆ 27 ನಿಮಿಷ 15 ಸೆಕೆಂಡ್ಗೆ ಮುಕ್ತಾಯ.

ಗೋ ಪೂಜೆ
ಗೋವರ್ಧನ ಪೂಜೆಯಂದು ಭಕ್ತರು ಗೋವುಗಳನ್ನೂ ಪೂಜಿಸುತ್ತಾರೆ. ಕೃಷ್ಣನು ಗೋವುಗಳ ಸಂರಕ್ಷಕ, ಗೋಪಾಲ. ವಿಷ್ಣು ಪುರಾಣದಲ್ಲಿ ಕೃಷ್ಣನ ಕುರಿತು ನಮೋ ಬ್ರಾಹ್ಮಣ್ಯ ದೇವಾಯ ಗೋ ಬ್ರಾಹ್ಮಣ ಹಿತಾಯ ಚ ಅಂದರೆ ಇಲ್ಲಿ ಕೃಷ್ಣನನ್ನು ಗೋವುಗಳ ಮತ್ತು ಬ್ರಾಹ್ಮಣರ ಹಿತಚಿಂತಕ ಎಂದು ವರ್ಣಿಸಲಾಗಿದೆ. ಸಂಜೆ ಗೋವುಗಳನ್ನು ಅಲಂಕರಿಸಿ ಅವುಗಳಿಗೆ ಪೂಜೆ ಸಲ್ಲಿಸಿ ಅವುಗಳನ್ನು ಗೋವುಗಳನ್ನು ಮುಂದಿಟ್ಟುಕೊಂಡು ಭಕ್ತರು ಗೋವರ್ಧನ ಗಿರಿಯ ಪ್ರದಕ್ಷಿಣೆ ಮಾಡುವರು.



Click it and Unblock the Notifications