Latest Updates
-
ತಾಯಂದಿರ ದಿನದ ಗೊಂದಲವೇ? ಅಮ್ಮ ಮತ್ತು ಅತ್ತೆ ಇಬ್ಬರನ್ನೂ ಖುಷಿಪಡಿಸಲು ಇಲ್ಲಿದೆ ಬೆಸ್ಟ್ ಪ್ಲಾನ್! -
ಅಮೆಜಾನ್ ಸೇಲ್ ಶುರು: ನಿಮ್ಮ ಬಾಲ್ಕನಿಯನ್ನು ಸುಂದರ ತೋಟವನ್ನಾಗಿಸಲು ಮಿಸ್ ಮಾಡ್ಬೇಡಿ ಈ ಬೆಸ್ಟ್ ಡೀಲ್ಸ್! -
ಬಿಸಿಲ ಧಗೆಯಿಂದ ಸುಸ್ತಾಗಿದ್ದೀರಾ? ದೇಹವನ್ನು ತಂಪಾಗಿಡಲು ಈ ಪಾನೀಯಗಳೇ ಮದ್ದು! -
ಅಮ್ಮನಿಗೆ ಕೊನೆಯ ನಿಮಿಷದಲ್ಲಿ ಗಿಫ್ಟ್ ಕೊಡಬೇಕಾ? ಈ ಟ್ರಿಕ್ಸ್ ಫಾಲೋ ಮಾಡಿ, ಅಮ್ಮನ ಮುಖದಲ್ಲಿ ನಗು ಮೂಡಿಸಿ! -
ಬಿಸಿಗಾಳಿಯ ಎಚ್ಚರಿಕೆ: ಮಧ್ಯಾಹ್ನ ವರ್ಕೌಟ್ ಮಾಡ್ತಿದ್ದೀರಾ? ಈ ತಪ್ಪು ನಿಮ್ಮ ಆರೋಗ್ಯಕ್ಕೆ ಕುತ್ತು ತರಬಹುದು! -
ಬಿಸಿಗಾಳಿಯ ನಡುವೆ ಮದುವೆ ಸಂಭ್ರಮ: ಅತಿಥಿಗಳ ಸುರಕ್ಷತೆಗಾಗಿ ನೀವು ಮಾಡಲೇಬೇಕಾದ ಬದಲಾವಣೆಗಳಿವು! -
ಬಿಸಿಗಾಳಿಯ ಅಬ್ಬರ ಶುರು: ನಿಮ್ಮ ಮನೆ ತಂಪಾಗಿರಲು ಮತ್ತು ಗಿಡಗಳನ್ನು ಉಳಿಸಲು ಈ ಸೀಕ್ರೆಟ್ ಟಿಪ್ಸ್ ಮಿಸ್ ಮಾಡ್ಬೇಡಿ! -
ಸುಡುವ ಬಿಸಿಲಿಗೆ ಸುಸ್ತಾಗಿದ್ದೀರಾ? ದೇಹವನ್ನು ತಂಪಾಗಿಡಲು ಈ ಆಹಾರ ಕ್ರಮ ಪಾಲಿಸಿ! -
ಮದರ್ಸ್ ಡೇ 2026: ಅಮ್ಮನಿಗೆ ಸರ್ಪ್ರೈಸ್ ನೀಡಲು ಈ ವೈರಲ್ ಟ್ರೆಂಡ್ಸ್ ಫಾಲೋ ಮಾಡಿ, ಮಿಸ್ ಮಾಡ್ಬೇಡಿ! -
ಅಮ್ಮನಿಗೆ ಈ ಬಾರಿ ವಿಶೇಷ ಉಡುಗೊರೆ: ತಾಯಂದಿರ ದಿನದಂದು 20 ನಿಮಿಷದ ಯೋಗದ ಮ್ಯಾಜಿಕ್!
ಗೋವರ್ಧನ ಪೂಜೆ 2021: ದಿನಾಂಕ, ಶುಭ ಮುಹೂರ್ತ, ಪೂಜಾವಿಧಿ
ಈ ಆಚರಣೆಯಂದು ಶ್ರೀಕೃಷ್ಣನ ಮಹಿಮೆಯನ್ನು ಕೊಂಡಾಡಲಾಗುವುದು. ಇಂದ್ರನ ಕೋಪದಿಂದ ವೃಂದಾವನದ ಜನರನ್ನು ರಕ್ಷಿಸಲು ಶ್ರೀ ಕೃಷ್ಣನು ಗೋವರ್ಧನ ಗಿರಿಯನ್ನು ಎತ್ತಿದ ಲೀಲೆಯನ್ನು ಕೊಂಡಾಡಲು ಪ್ರತಿ ವರ್ಷ ಕಾರ್ತಿಕ ಮಾಸದಲ್ಲಿ ಗೋವರ್ಧನ ಪೂಜೆಯನ್ನು ಆಚರಿಸಲಾಗುತ್ತದೆ. ಈ ವರ್ಷ ನವೆಂಬರ್ 5ಕ್ಕೆ ಗೋವರ್ಧನ ಪೂಜೆ ಆಚರಿಸಲಾಗುವುದು.

ಗೋವರ್ಧನ ಪೂಜೆಗೆ ಶುಭ ಮೂಹೂರ್ತ
ಗೋವರ್ಧನ ಪೂಜೆಗೆ ಪ್ರಾತಃಕಾಲ: ಬೆಳಗ್ಗೆ 06:36ರಿಂದ 08:47ರವರೆಗೆ
ಗೋವರ್ಧನ ಪೂಜೆಗೆ ಸಾಯಂಕಾಲದ ಮುಹೂರ್ತ: ಮಧ್ಯಾಹ್ನ 03:22ರಿಂದ 05:33ರವರೆಗೆ
ಪ್ರತಿಪಾದ ತಿಥಿ ಪ್ರಾರಂಭ: 5ನೇ ತಾರೀಕು ಬೆಳಗ್ಗಿನ ಜಾವ 02:44ಕ್ಕೆ
ಪ್ರತಿಪಾದ ತಿಥಿ ಮುಕ್ತಾಯ: ನವೆಂಬರ್ 5, ರಾತ್ರಿ 11:14ಕ್ಕೆ

ಗೋವರ್ಧನ ಪೂಜೆಯ ಹಿಂದಿರುವ ಪೌರಾಣಿಕ ಕತೆ
ವೃಂದಾವನದ ಜನರು ಇಂದ್ರಯಜ್ಞಕ್ಕೆ ಸಿದ್ಧರಾಗುತ್ತಿದ್ದರು. ಇದನ್ನು ತಿಳಿದ ಶ್ರೀ ಕೃಷ್ಣ ಪರಮಾತ್ಮನನ್ನು ಇಂದ್ರನನ್ನು ಪೂಜಿಸುವುದನ್ನು ಬಿಟ್ಟು ಅವರು ಗೋವರ್ಧನ ಗಿರಿಯನ್ನು ಆರಾಧಿಸಬೇಕೆಂದು ಸೂಚಿಸಿದನು. ಅದರಂತೆ ವೃಂದಾವನದ ಜನರು ಗೋವರ್ಧನ ಗಿರಿಯನ್ನು ಪೂಜಿಸಲು ನಿಶ್ಚಿಯಿಸಿದರು. ಇದರಿಂದ ಕೋಪಗೊಂಡ ಇಂದ್ರನು ಕೋಪದಿಂದ ಭಾರಿ ಮಳೆ ಸುರಿಸಲು ಮೋಡಗಳಿಗೆ ಆಜ್ಞಾಪಿಸಿದನು. ಆಗ ಕೃಷ್ಣನು ತನ್ನ ಕಿರು ಬೆರಳಿನಿಂದ ಗೋವರ್ಧನ ಗಿರಿಯನ್ನು ಎತ್ತಿ ಹಿಡಿದು ವೃಂದಾವನದ ಎಲ್ಲ ನಿವಾಸಿಗಳಿಗೆ ಅದರ ಕೆಳಗೆ ಆಶ್ರಯ ನೀಡಿದನು.
ಇದರಿಂದಾಗಿ ಇಂದ್ರನಿಗೆ ತಾನು ಮಾಡಿದ ಅರಿವಾಗಿ ಕೃಷ್ಣನ ಬಳಿ ಬಂದು ಕ್ಷಮೆ ಯಾಚಿಸಿದ. ದೇವೋತ್ತಮನಿಗೆ ಶರಣಾದ ಮ ಹಾಗೂ ಭಕ್ತಿಯಿಂದ ಸೇವೆ ಸಲ್ಲಿಸುವ ಭಕ್ತರು ಎಲ್ಲ ಹೊಣೆಗಾರಿಕೆಯಿಂದ ಮುಕ್ತರು ಮತ್ತು ಅವರು ಲೌಕಿಕ ಅನುಕೂಲಕ್ಕಾಗಿ ಯಾವ ದೇವತೆಯನ್ನೂ ಪೂಜಿಸುವ ಅಗತ್ಯ ಇಲ್ಲ ಎನ್ನುವ ಅಂಶವನ್ನು ಕೃಷ್ಣನು ಹೇಳಿದನು. ಇದು ಗೋವರ್ಧನ ಲೀಲೆ ಎಂದು ಪ್ರಸಿದ್ಧಿಯಾಗಿದೆ.

ಪೂಜಾ ವಿಧಾನ
* ಗೋವರ್ಧನ ಪೂಜೆಯ ಹಬ್ಬವನ್ನು ಕಾರ್ತಿಕ ಮಾಸದ ಶುಕ್ಲ ಪಕ್ಷದ ಪ್ರತಿಪಾದದ ದಿನದಂದು ಆಚರಿಸಲಾಗುವುದು. ಈ ದಿನದಂದು ಮೈಗೆ ಎಣ್ಣೆ ಹಚ್ಚಿ ನಂತರ ಸ್ನಾನ ಮಾಡಲಾಗುವುದು.
* ಇದರ ನಂತರ, ಮನೆಯ ಮುಖ್ಯ ಬಾಗಿಲಲ್ಲಿ ಗೋವಿನ ಸಗಣಿಯಿಂದ ಸಾಂಕೇತಿಕ ಗೋವರ್ಧನ ಪರ್ವತವನ್ನು ಮಾಡಬೇಕು, ಅದರ ಮಧ್ಯದಲ್ಲಿ ಶ್ರೀಕೃಷ್ಣನ ವಿಗ್ರಹವನ್ನು ಇರಿಸಬೇಕು.
* ನಂತರ ಗೋವರ್ಧನ ಪರ್ವತ ಮತ್ತು ಗೋವಿನ ಸಗಣಿಯಿಂದ ಮಾಡಿದ ಶ್ರೀಕೃಷ್ಣನಿಗೆ ವಿವಿಧ ರೀತಿಯ ಭಕ್ಷ್ಯಗಳು ಮತ್ತು ಸಿಹಿತಿಂಡಿಗಳನ್ನು ಅರ್ಪಿಸಲಾಗುವುದು.
ಅನ್ನಕೂಟ ಉತ್ಸವ
ಪೂಜೆಯ ವಿಧಾನ ಭಕ್ತರು ಧಾನ್ಯ ಮತ್ತು ತುಪ್ಪದ (ಅನ್ನ, ದಾಲ್, ಹಲ್ವ, ಪಕೋಡ, ಪೂರಿ ಇತ್ಯಾದಿ) ವಿವಿಧ ತಿನಿಸುಗಳನ್ನು ಮತ್ತು ಹಾಲಿನ ಖಾದ್ಯಗಳನ್ನು (ಸಿಹಿ ಅನ್ನ, ಪೊಂಗಲ್, ರಬ್ಡಿ, ಸಂದೇಶ್, ರಸಗುಲ್ಲ, ಲಡ್ಡು ಇತ್ಯಾದಿ) ತಯಾರಿಸಿ, ಅವುಗಳನ್ನು ಬೆಟ್ಟದಂತೆ ಜೋಡಿಸಿ ಭಗವಂತನಿಗೆ ಅರ್ಪಿಸುತ್ತಾರೆ. ಅನಂತರ ಆ ತಿನಿಸುಗಳನ್ನು ಎಲ್ಲರಿಗೂ ಪ್ರಸಾದವಾಗಿ ಹಂಚಲಾಗುವುದು. ಇದನ್ನು ಅನ್ನಕೂಟ ಉತ್ಸವ ಎಂದೂ ಕರೆಯುತ್ತಾರೆ.
* ಈ ದಿನ ಇಂದ್ರ, ವರುಣ, ಅಗ್ನಿಯನ್ನು ಪೂಜಿಸಲಾಗುವುದು.
* ನಂತರ ಗೋವರ್ಧನ ಬೆಟ್ಟದ ಕತೆಯನ್ನು ಕೇಳಲಾಗುವುದು. ಅದಾದ ಬಳಿಕ ಬ್ರಾಹ್ಮಣರಿಗೆ ದಾನ ಮತ್ತು ದಕ್ಷಿಣೆ ನೀಡಿ ಎಲ್ಲರಿಗೆ ಪ್ರಸಾದವನ್ನು ಹಂಚಲಾಗುವುದು.

ಗೋ ಪೂಜೆ
ಗೋವರ್ಧನ ಪೂಜೆಯಂದು ಭಕ್ತರು ಗೋವುಗಳನ್ನೂ ಪೂಜಿಸುತ್ತಾರೆ. ಕೃಷ್ಣನು ಗೋವುಗಳ ಸಂರಕ್ಷಕ, ಗೋಪಾಲ. ವಿಷ್ಣು ಪುರಾಣದಲ್ಲಿ ಕೃಷ್ಣನ ಕುರಿತು ನಮೋ ಬ್ರಾಹ್ಮಣ್ಯ ದೇವಾಯ ಗೋ ಬ್ರಾಹ್ಮಣ ಹಿತಾಯ ಚ ಅಂದರೆ ಇಲ್ಲಿ ಕೃಷ್ಣನನ್ನು ಗೋವುಗಳ ಮತ್ತು ಬ್ರಾಹ್ಮಣರ ಹಿತಚಿಂತಕ ಎಂದು ವರ್ಣಿಸಲಾಗಿದೆ. ಸಂಜೆ ಗೋವುಗಳನ್ನು ಅಲಂಕರಿಸಿ ಅವುಗಳಿಗೆ ಪೂಜೆ ಸಲ್ಲಿಸಿ ಅವುಗಳನ್ನು ಗೋವುಗಳನ್ನು ಮುಂದಿಟ್ಟುಕೊಂಡು ಭಕ್ತರು ಗೋವರ್ಧನ ಗಿರಿಯ ಪ್ರದಕ್ಷಿಣೆ ಮಾಡುವರು.



Click it and Unblock the Notifications