Latest Updates
-
ಮೈದಾ, ಮೊಟ್ಟೆ ಎರಡೂ ಬೇಡ! ಈ ಹೊಸ ರುಚಿಯ ಕೇಕ್ ಮಾಡಿ ನೋಡಿ.. ಶುಗರ್ ಇರುವವರು ತಿನ್ನಬಹುದು -
ಉದ್ದು ಬೇಡ 1 ಕಪ್ ರವೆ ಇದ್ರೆ ಥಟ್ ಅಂತ ವಡೆ ಮಾಡಿಕೊಳ್ಳಿ: ಬ್ರೇಕ್ಫಾಸ್ಟ್ಗೆ ಇದು ಬೆಸ್ಟ್ ರೆಸಿಪಿ! -
ಕೊನೆಗೂ ಕಣ್ಣು ಬಿಟ್ಟ ಶುಕ್ರ-ಶನಿ: ಈ ರಾಶಿಯವರ ಜೀವನದಲ್ಲಿ ಭೌತಿಕ ಸುಖ! ಸಂಪತ್ತು ತುಂಬಿ ತುಳುಕಲಿದೆ -
ಬದನೆಕಾಯಿ ಕಹಿ ತೆಗೆಯೋದು ಹೇಗೆ? ಈ ಸಿಂಪಲ್ ಟ್ರಿಕ್ ಬಳಸಿ.. ಬಲು ರುಚಿ! ಕಹಿ ಅನ್ನೋದೇ ಇರಲ್ಲ -
ಮಧ್ಯಪ್ರಾಚ್ಯ ಸಂಘರ್ಷ: ಭಾರತದಲ್ಲಿ ಏರಿಕೆಯಾಗಲಿದೆ ಈ ವಸ್ತುಗಳ ಬೆಲೆ! -
ಇವ್ರು ಬೇಗ ಲವ್ನಲ್ಲಿ ಬೀಳ್ತಾರೆ.. ಮದುವೆ ಅಂದ್ರೆ ಅನ್ಪ್ರೆಡಿಕ್ಟಬಲ್! ನಿಮ್ಮ ಜನ್ಮದಿನಾಂಕ ಇದೇನಾ? -
ಬೇಸಿಗೆಯ ಉರಿ ಬಿಸಿಲಿನಲ್ಲಿ ಫ್ರಿಡ್ಜ್ನಲ್ಲಿಟ್ಟ ಈ ಹಣ್ಣು ಸೇವಿಸಬೇಡಿ! ಎದುರಾಗುತ್ತೆ ಆಪತ್ತು! -
ಸಕ್ಕರೆ ಬೇಡ, ಪಾಕವೂ ಬೇಡ.. ಅಜ್ಜ-ಅಜ್ಜಿಯರ ಕಾಲದ ಹೆಲ್ದಿ ಲಡ್ಡು! ತಿಂದ್ರೆ ತೂಕ ಇಳಿಯುತ್ತೆ, ಶುಗರ್ಗೂ ಬೆಸ್ಟ್ -
ಬಿಸಿಲಿನ ತಾಪಕ್ಕೆ ಕಣ್ಣು ಉರಿಗೆ ಈ ಪುಡಿ ಬೆಸ್ಟ್! ದಿನ 1 ಚಮಚ ಕಣ್ಣಿನ ಎಲ್ಲಾ ಸಮಸ್ಯೆ ಕಡಿಮೆಯಾಗುತ್ತೆ -
ಭಾಲಚಂದ್ರ ಸಂಕಷ್ಟ ಚತುರ್ಥಿ 2026: ಈ 6 ರಾಶಿಗಳಿಗೆ ಗಜಕೇಸರಿ ಯೋಗ! ಹಣದ ಮಳೆ ಸುರಿಸಲಿದ್ದಾರೆ ಗಣಪ
Gowri Habba 2022: ಗೌರಿ ಹಬ್ಬದ ದಿನ, ಶುಭ ಮುಹೂರ್ತ ಮತ್ತು ಹಬ್ಬದ ಮಹತ್ವ
ಪ್ರಕೃತಿಯ ಪ್ರತಿರೂಪ ಗೌರಿ ದೇವಿ. ಪಾರ್ವತಿ ದೇವಿಯ ಅಪರಾವತಾರ ಗೌರಿ ವ್ರತ ಈ ವರ್ಷ 2022ನೇ ಸಾಲಿನಲ್ಲಿ ಆಗಸ್ಟ್ 30ರಂದು ಆಚರಿಸಲಾಗುತ್ತಿದೆ. ಕರ್ನಾಟಕ, ಆಂಧ್ರಪ್ರದೇಶ ಮತ್ತು ತಮಿಳುನಾಡಿನಲ್ಲಿ ಹೆಚ್ಚು ಮಹತ್ವ ಪಡೆದಿರುವ ಸ್ವರ್ಣ ಗೌರಿ ವ್ರತ ಪುತ್ರ ವಿನಾಯಕ ಚತುರ್ಥಿಯ ಹಿಂದಿನ ದಿನ ಆಚರಿಸಲಾಗುತ್ತದೆ.
ಶಕ್ತಿ, ಧೈರ್ಯ, ಸ್ಥೈರ್ಯಕ್ಕೆ ಹೆಸರುವಾಗಿಯಾದ ಗೌರಿ ಮಾತೆ ಶಕ್ತಿಯನ್ನು ನಮಗೆ ದಯಪಾಲಿಸಲು ಎಂದು ಮಹಿಳೆಯರು ಗೌರಿಯನ್ನು ಶ್ರದ್ಧಾ ಭಕ್ತಿಯಿಂದ ಪೂಜಿಸುತ್ತಾರೆ. ಗೌರಿ ವ್ರತದ ಪೂಜಾ ದಿನ, ಶುಭ ಸಮಯ ಹಾಗೂ ಗೌರಿ ಹಬ್ಬದ ಮಹತ್ವದ ಬಗ್ಗೆ ಈ ಲೇಖನದಲ್ಲಿ ನಿಮಗೆ ತಿಳಿಸಿಕೊಡಲಿದ್ದೇವೆ.

ಗೌರಿ ವ್ರತದ ದಿನಾಂಕ, ಶುಭ ಮುಹೂರ್ತ
ಅಗಸ್ಟ್ 30ರಂದು ಮಂಗಳವಾರ
ಭಾದ್ರಪದ ಮಾಸ ಶುಕ್ಲ ಪಕ್ಷದ ತದಿಗೆ
ಪ್ರಾತಃಕಾಲ ಗೌರಿ ಪೂಜಾ ಶುಭ ಮುಹೂರ್ತ: ಬೆಳಗ್ಗೆ 6.08 ರಿಂದ 8.37

ಗೌರಿ ವ್ರತದ ಮಹತ್ವ
ಭಗವಾನ್ ಶಿವನ ಪತ್ನಿ ಮತ್ತು ಗಣೇಶ ಮತ್ತು ಕಾರ್ತಿಕೇಯರ ತಾಯಿ ಗೌರಿ ದೇವಿಯನ್ನು ಅತ್ಯಂತ ಶಕ್ತಿಶಾಲಿ ದೇವಿಯಾಗಿ ಪೂಜಿಸಲಾಗುತ್ತದೆ. ಅವಳು ಶಕ್ತಿ, ದೈವಿಕತೆ, ಸೃಜನಶೀಲ ಶಕ್ತಿಯ ಪರಿಕಲ್ಪನೆಯಾಗಿದ್ದಾಳೆ. ಗೌರಿ ಹಬ್ಬದ ಸಮಯದಲ್ಲಿ, ಶುಕ್ಲ ಪಕ್ಷದಲ್ಲಿ ಅಂದರೆ ಬಾಧ್ರಪದ ಮಾಸದ ಮೂರನೇ ದಿನ ತದಿಗೆಯ ದಿನ ಮಾತಾ ಗೌರಿಯು ತನ್ನ ತವರು ಮನೆಗೆ ಬಂದು ಬಾಗಿನ ಪಡೆಯುತ್ತಾಳೆ, ಮರುದಿನ ಚತುರ್ಥಿಯಂದು ಅವಳ ಮಗ ಗಣೇಶನು ಗೌರಿಯನ್ನು ಕೈಲಾಸ ಪರ್ವತಕ್ಕೆ ಕರೆದೊಯ್ಯುವಂತೆ ಬರುತ್ತಾನೆ. ಅಂತೆಯೇ ಗೌರಿ ವ್ರತದ ದಿನ ವಿವಾಹಿತ ಮಹಿಳೆಯರು ತಮ್ಮ ತವರು ಮನೆಗೆ ಬಂದು ಬಾಗಿನ ಪಡೆಯುವ ಸಂಪ್ರದಾಯ ಈಗಲೂ ಮುಂದುವರೆದಿದೆ.

ಪೂಜಾ ದಿನ, ಶುಭ ಮುಹೂರ್ತ ಮತ್ತು ಹಬ್ಬದ ಮಹತ್ವ
ವಿವಾಹಿತ ಮಹಿಳೆಯರು ತಮ್ಮ ವೈವಾಹಿಕ ಜೀವನ ಉತ್ತಮವಾಗಿರಲು, ಪತಿಯ ದೀರ್ಘಾಯುಷ್ಯ ಹಾಗೂ ಕೌಟುಂಬಿಕ ಜೀವನದ ಶ್ರೇಯೋಭಿವೃದ್ಧಿಗಾಗಿ ಗೌರಿ ದೇವಿಯ ಆಶೀರ್ವಾದ ಪಡೆಯಲು ಸ್ವರ್ಣ ಗೌರಿ ವ್ರತವನ್ನು ಆಚರಿಸುತ್ತಾರೆ. ಅವಿವಾಹಿತ ಹೆಣ್ಣು ಮಕ್ಕಳು ಉತ್ತಮ ಜೀವನ ಸಂಗಾತಿ ಸಿಗಲಿ ಎಂದು ಕೋರಿ ದೇವಿ ವ್ರತವನ್ನು ಮಾಡುತ್ತಾರೆ. ವ್ರತದ ದಿನ ಉಪವಾಸ ಆಚರಿಸುತ್ತಾರೆ, ಗೌರಿಯ ಆಶೀರ್ವಾದ ಎಂದು ಭಾವಿಸಿ 16 ಗಂಟುಗಳ ಗೌರ ದಾರವನ್ನು ಧರಿಸುತ್ತಾರೆ.



Click it and Unblock the Notifications











