Latest Updates
-
ಅಕ್ಕಿ ಬೇಡ, ನೆನೆಸೋ ಸಮಯವೂ ಬೇಡ.. ತಕ್ಷಣ ಮಾಡಿ ಈ ದೋಸೆ! ಈ ಟ್ರಿಕ್ ಗೊತ್ತಿದ್ರೆ ಯಾರೂ ಮಾಡಬಹುದು -
ಸುಡು ಬಿಸಿಲಲ್ಲೂ ನಿಮ್ಮ ಮುಖ ಹಾಲಿನಂತೆ ಬೆಳ್ಳಗಾಗುತ್ತೆ! ಕೇವಲ 2 ನಿಮಿಷ ಈ ಮಸಾಜ್ ಸಾಕು.. ಮುಖ ಹೊಳೆಯುತ್ತೆ! -
ಮಾರ್ಚ್ 15ಕ್ಕೆ ರೇವತಿ ನಕ್ಷತ್ರಕ್ಕೆ ಶುಕ್ರ ಸಂಚಾರ: ಈ 4 ರಾಶಿಯವರಿಗೆ ಹೆಚ್ಚಲಿದೆ ಸಂಕಷ್ಟ! -
ಜಿಡ್ಡು ಬೊಜ್ಜು ಬೆಣ್ಣೆಯಂತೆ ಕರಗುತ್ತೆ! ದಿನಾ ಈ ಮ್ಯಾಜಿಕಲ್ ಸೂಪ್ ಕುಡಿಯಿರಿ.. 15 ದಿನಗಳಲ್ಲಿ ಕೊಬ್ಬು ಮಾಯ -
ಮೆಂತ್ಯ ಸೊಪ್ಪಿನ ಮೊಟ್ಟೆ ಪಲ್ಯ: ಊಟ, ತಿಂಡಿಯೊಂದಿಗೆ ಇದು ಬೆಸ್ಟ್! -
ಕಾಲಾಷ್ಟಮಿ 2026: ನಾಳೆ ಕಾಲಾಷ್ಟಮಿ ಆಚರಣೆ, ಶಿವನ ಉಗ್ರವತಾರ ಕಾಲಭೈರವನ ಪೂಜಿಸುವುದು ಏಕೆ? -
ಅಜ್ಜಿಯ ಕಾಲದ ಅಮೃತ! ಬೇಸಿಗೆಯಲ್ಲಿ ದೇಹ ತಂಪಾಗಿರಬೇಕಾ? ಒಂದು ಗ್ಲಾಸ್ ಸಾಕು.. ಟ್ರೈ ಮಾಡಿ ನೋಡಿ -
ಗುರು ನೇರ ಸಂಚಾರ: ಮಾರ್ಚ್ 11 ರಿಂದ ಗಜಕೇಸರಿ ಯೋಗ.. ಈ ರಾಶಿಯವರ ಸಕಲ ಕಷ್ಟಗಳಿಗೂ ಮುಕ್ತಿ ಸಿಗುವ ಕಾಲ -
ದೇಹಕ್ಕೆ ಬಲ ನೀಡುವ ಹುರಿದಕ್ಕಿ ಉಂಡೆ ಸಲೀಸಾಗಿ ಮಾಡಿ! ಇಲ್ಲಿದೆ ಸುಲಭದ ಮನೆಮದ್ದು! -
ಹೋಟೆಲ್ ರುಚಿಯ ಅಕ್ಕಿ ರೊಟ್ಟಿ.. ಮುರಿಯದಂತೆ ಸಾಫ್ಟ್ ಆಗಿ ಮಾಡೋದು ಹೇಗೆ? ಹೊಸಬರಿಗೆ ಕೂಡ ಸುಲಭ
ಶಕ್ತಿ ದೇವತೆ ಹನುಮಂತನನ್ನು ಪೂಜಿಸುವ ವಿಧಿ-ವಿಧಾನ
ಹಿಂದೂ ಧರ್ಮದಲ್ಲಿ ಮುಕ್ಕೋಟಿ ದೇವರಿದ್ದಾರೆ. ಅವರವರ ಇಷ್ಟಕ್ಕೆ ತಕ್ಕಂತೆ ಒಬ್ಬೊಬ್ಬ ದೇವರನ್ನು ಪೂಜಿಸಬಹುದಾಗಿದೆ. ನೀವು ಈ ದೇವರನ್ನೇ ಪೂಜಿಸಬೇಕೆಂಬ ಕಟ್ಟುಪಾಡಿಲ್ಲ. ವಿಶ್ವದೆಲ್ಲೆಡೆಯಲ್ಲಿ ಹಿಂದೂ ದೇವರನ್ನು ಪೂಜಿಸಲಾಗುತ್ತಿದೆ. ಅದರಲ್ಲಿ ಆಂಜನೇಯ ದೇವರು ಕೂಡ ಒಬ್ಬರು. ಆಂಜನೇಯ ದೇವರ ಮೂರ್ತಿಯನ್ನು ಅಮೆರಿಕಾದ ಅಧ್ಯಕ್ಷ ಬರಾಕ್ ಒಬಾಮಾ ಕೂಡ ತನ್ನೊಂದಿಗೆ ಇಟ್ಟುಕೊಂಡಿದ್ದಾರೆಂದು ಸಾಮಾಜಿಕ ಜಾಲತಾಣದಲ್ಲಿ ಸುದ್ದಿಯಾಗಿತ್ತು.... ಹನುಮಂತ ದೇವರ ಪ್ರಭಾವ ಎಷ್ಟಿದೆ ಎಂದು ಇದರಿಂದ ತಿಳಿದುಕೊಳ್ಳಬಹುದು. ಹನುಮಾನ್ ನಮ್ಮ ನಡುವೆ ಇದ್ದಾನೆಯೇ? ಇಲ್ಲಿದೆ ಪುರಾವೆಗಳು!
ವಾನರ ಮೂರ್ತಿಯ ಹನುಮಂತ ದೇವರನ್ನು ಹೇಗೆ ಪೂಜಿಸಬೇಕು ಎಂದು ಕೆಲವರು ಪ್ರಶ್ನಿಸಬಹುದು. ಹನುಮಂತ ದೇವರಿಗೆ ಕೋಟ್ಯಾಂತರ ಭಕ್ತರಿದ್ದಾರೆ. ಪುರುಷರು ಹನುಮಂತ ದೇವರನ್ನು ಪೂಜಿಸಬಹುದು. ಆದರೆ ಬ್ರಹ್ಮಚಾರಿಯಾಗಿರುವ ಹನುಮಂತ ದೇವರನ್ನು ಮಹಿಳೆಯರು ಪೂಜಿಸಬಾರದು ಎನ್ನುವ ನಂಬಿಕೆ ಇದೆ. ಪುರುಷರು ಹನುಮಂತನನ್ನು ಪೂಜಿಸಿ ತಮ್ಮ ಇಷ್ಟಾರ್ಥಗಳನ್ನು ಸಿದ್ಧಿಸಿಕೊಳ್ಳಬಹುದು. ಹನುಮಂತ ದೇವರನ್ನು ಒಲಿಸಿಕೊಳ್ಳುವ ಕೆಲವೊಂದು ಸೂತ್ರಗಳನ್ನು ಇಲ್ಲಿ ನೀಡಲಾಗಿದೆ. ಇದನ್ನು ಪಾಲಿಸಿಕೊಂಡು ದೇವರನ್ನು ಒಲಿಸಿಕೊಳ್ಳಿ.....

ಸಿಂಧೂರ ಹಾಕಿಕೊಳ್ಳಿ
ಕಿತ್ತಳೆ ಬಣ್ಣದ ಸಿಂಧೂರವನ್ನು ಹನುಮಂತ ದೇವರ ಮೂರ್ತಿಗೆ ಹಚ್ಚಲಾಗುತ್ತದೆ. ಹೆಚ್ಚಿನ ಮಂದಿರಗಳಲ್ಲಿ ಹನುಮಂತ ದೇವರ ಮೂರ್ತಿಗಳಿಗೆ ಕಿತ್ತಳೆ ಬಣ್ಣದ ಸಿಂಧೂರವನ್ನು ಹಚ್ಚಿರುತ್ತಾರೆ. ಕಿತ್ತಳೆ ಬಣ್ಣದ ಸಿಂಧೂರವನ್ನು ಹನುಮಂತನ ಮೂರ್ತಿಗೆ ಹಚ್ಚುವ ಮೂಲಕ ಆತನನ್ನು ಪೂಜಿಸಬಹುದು.

ಸಿಂಧೂರ ಹಾಕಿಕೊಳ್ಳಿ
ಹಣೆ ಅಥವಾ ಸಂಪೂರ್ಣ ದೇಹಕ್ಕೆ ಸಿಂಧೂರ ಹಚ್ಚಬಹುದು. ಸಿಂಧೂರಕ್ಕೆ ನೀರು ಹಾಕಿ ದಪ್ಪಗಿನ ಪೇಸ್ಟ್ ಮಾಡಿಕೊಳ್ಳಿ. ಇದನ್ನು ಮೂರ್ತಿಗೆ ಹಚ್ಚಿ. ಮಂಗಳವಾರ ಅಥವಾ ಶನಿವಾರದಂದು ಪುರುಷರು ಹೀಗೆ ಮಾಡಬೇಕು.

ಹನುಮಂತನ ಮಂತ್ರ ಪಠಿಸಿ
ಮನೋಜವಂ ಮಾರುತತುಲ್ಯವೆಗಂ ಜಿತೇಂದ್ರಿಯಂ ಬುದ್ಧಿಮಾತಂ ವರಿಸ್ತಂ, ವಾತಾತಮಜಂ ವಾನರಾಯುಕ್ತಮುಖ್ಯಂ ಶ್ರೀರಾಮ ದೂತಂ ಸರನಾಮ ಪ್ರಪಾದಯೆ. ಪುರುಷರು ಈ ಮಂತ್ರವನ್ನು ಪಠಿಸಿ ಹನುಮಂತ ದೇವರನ್ನು ಪೂಜಿಸಬಹುದಾಗಿದೆ. ಸ್ನಾನ ಮಾಡಿದ ಬಳಿಕ ಅಥವಾ ರಾತ್ರಿ ವೇಳೆ ಈ ಮಂತ್ರವನ್ನು ಪಠಿಸಬಹುದು. ಮಧ್ಯರಾತ್ರಿ ವೇಳೆ ಹನುಮಂತನ ಪೂಜಿಸಿದರೆ ತುಂಬಾ ಒಳ್ಳೆಯದು.ಮಲಗುವ ಮುನ್ನ 'ಹನುಮಾನ್ ಚಾಲೀಸಾ' ಪಠಿಸಲು ಮರೆಯದಿರಿ

ರಾಮ ದೇವರನ್ನು ಪೂಜಿಸಿ
ಹನುಮಂತ ದೇವರ ಶ್ರೀರಾಮಚಂದ್ರ ದೇವರ ದೂತನಾಗಿದ್ದಾರೆ. ಯಾವಾಗಲೂ ಅವರನ್ನು ಭಕ್ತಿಯಿಂದ ಪೂಜಿಸುತ್ತಾರೆ. ಹನುಮಂತ ದೇವರ ಕೃಪೆಗೆ ಪಾತ್ರರಾಗಬೇಕಾದರೆ ರಾಮ ದೇವರನ್ನು ಪೂಜಿಸಬೇಕು. ಜೈ ಶ್ರೀರಾಮ್ ಮಂತ್ರವನ್ನು ಪಠಿಸುತ್ತ ಇರಬೇಕು.

ಮಂಗಳವಾರ ಉಪವಾಸ
ಮಂಗಳವಾರದಂದು ಉಪವಾಸ ಮಾಡಿಕೊಂಡು ಹನುಮಂತ ದೇವರನ್ನು ಪ್ರಾರ್ಥಿಸಬಹುದು. ದಿನದಲ್ಲಿ ಒಂದು ಊಟವನ್ನು ಮಾಡಿ ಹನುಮಂತ ದೇವರ ಮಂತ್ರ ಅಥವಾ ಹನುಮಾನ್ ಚಾಲೀಸವನ್ನು ಪಠಿಸಬೇಕು.

ಮಂಗಳವಾರ ಉಪವಾಸ
ಹನುಮಂತ ದೇವರಿಗೆ ಸಿಹಿ ಇಷ್ಟವಾಗಿರುವ ಕಾರಣದಿಂದ ಕಡಲೆಹಿಟ್ಟಿನ ಲಾಡನ್ನು ಅರ್ಪಿಸಿ. ವಾನರಗಳಿಗೆ ಬಾಳೆಹಣ್ಣನ್ನು ಅರ್ಪಿಸಬಹುದು. ವಾನರಗಳು ಪತ್ತೆಯಾಗದೆ ಇದ್ದರೆ ಹನುಮಂತನ ಮೂರ್ತಿಗೆ ಬಾಳೆಹಣ್ಣನ್ನು ಅರ್ಪಿಸಿ. ಪುರುಷರು ಈ ಮೂಲಕ ಹನುಮಂತನನ್ನು ಪೂಜಿಸಬಹುದಾಗಿದೆ.



Click it and Unblock the Notifications











