Latest Updates
-
ವಿಶ್ವ ಆತ್ಮಹತ್ಯೆ ತಡೆ ದಿನ: ಮಾನಸಿಕ ಆರೋಗ್ಯ ಸುಧಾರಿಸಲು 10 ನಿಮಿಷದ ಸಿಂಪಲ್ ಮಾರ್ನಿಂಗ್ ರೂಟೀನ್ ಮತ್ತು ಹೆಲ್ಪ್ಲೈನ್ ವಿವರಗಳು -
ವಿಚ್ಛೇದನದ ನಂತರವೂ ಜೀವನಾಂಶ ಪಡೆಯಬಹುದೇ? ಮಧ್ಯಪ್ರದೇಶ ಹೈಕೋರ್ಟ್ನಿಂದ ಮಹತ್ವದ ತೀರ್ಪು! -
ದೆಹಲಿ ವಾಯು ಮಾಲಿನ್ಯ: ಮನೆಯಲ್ಲಿ ಶುದ್ಧ ಗಾಳಿ ಪಡೆಯಲು ಈ ಸರಳ ಟಿಪ್ಸ್ ಪಾಲಿಸಿ -
ಪ್ಯಾಕ್ ಮಾಡಿದ ಆಹಾರದ ಮೇಲೆ 'ರೆಡ್ ಹೆಕ್ಸಗನ್' ಎಚ್ಚರಿಕೆ: ಇನ್ಮುಂದೆ ತಿನ್ನುವ ಮುನ್ನ ಈ ವಿಷಯ ಗಮನಿಸಿ! -
ಆಪಲ್ 'ಸರ್ಪ್ರೈಸ್ ಆಂಡ್ ಶೈನ್' ಈವೆಂಟ್: ಐಫೋನ್ 18 ಪ್ರೋ ಮತ್ತು ಫೋಲ್ಡಬಲ್ ಆಲ್ಟ್ರಾ ಲಾಂಚ್, ಭಾರತದಲ್ಲಿ ಬೆಲೆ ಎಷ್ಟು? -
ಟಾಟಾ ಮುಂಬೈ ಮ್ಯಾರಥಾನ್ ಡ್ರೀಮ್ ರನ್: ಇಂದೇ ನೋಂದಣಿ ಮುಕ್ತಾಯ, ಓಟಕ್ಕೆ ಸಜ್ಜಾಗಲು 20 ನಿಮಿಷದ ಪ್ಲಾನ್ ಇಲ್ಲಿದೆ! -
ಲೈವ್-ಇನ್ ಸಂಬಂಧಕ್ಕೂ ಅನ್ವಯವಾಗುತ್ತೆ 498A: ಕಲ್ಕತ್ತಾ ಹೈಕೋರ್ಟ್ ಮಹತ್ವದ ತೀರ್ಪು ಮತ್ತು ನೀವು ತಿಳಿಯಲೇಬೇಕಾದ ಸುರಕ್ಷತಾ ಕ್ರಮಗಳು -
ಬೆಂಗಳೂರಿನ ಬಿಸಿಲಿಗೆ ಹೈರಾಣಾಗಿದ್ದೀರಾ? ಎಸಿ ಇಲ್ಲದೆ ಮನೆ ತಂಪು ಮಾಡೋದು ಹೇಗೆ? ಇಲ್ಲಿದೆ ಸಿಂಪಲ್ ಟಿಪ್ಸ್ -
ವೆಜ್ ಥಾಲಿ ಬೆಲೆ ಗಗನಕ್ಕೆ: ಕಡಿಮೆ ಖರ್ಚಿನಲ್ಲಿ ಪೌಷ್ಟಿಕ ಊಟ ತಯಾರಿಸುವ ಸರಳ ಟಿಪ್ಸ್ -
ಶಿವಾಜಿನಗರ ಸೇಂಟ್ ಮೇರಿಸ್ ಬಾಸಿಲಿಕಾ ಜಾತ್ರೆ: ಇಂದಿನ ಸಂಚಾರ ಮಾರ್ಗ ಬದಲಾವಣೆ ಮತ್ತು ಪಾರ್ಕಿಂಗ್ ಬಗ್ಗೆ ನೀವು ತಿಳಿಯಲೇಬೇಕಾದ ವಿಷಯಗಳು!
ಶಕ್ತಿ ದೇವತೆ ಹನುಮಂತನನ್ನು ಪೂಜಿಸುವ ವಿಧಿ-ವಿಧಾನ
ಹಿಂದೂ ಧರ್ಮದಲ್ಲಿ ಮುಕ್ಕೋಟಿ ದೇವರಿದ್ದಾರೆ. ಅವರವರ ಇಷ್ಟಕ್ಕೆ ತಕ್ಕಂತೆ ಒಬ್ಬೊಬ್ಬ ದೇವರನ್ನು ಪೂಜಿಸಬಹುದಾಗಿದೆ. ನೀವು ಈ ದೇವರನ್ನೇ ಪೂಜಿಸಬೇಕೆಂಬ ಕಟ್ಟುಪಾಡಿಲ್ಲ. ವಿಶ್ವದೆಲ್ಲೆಡೆಯಲ್ಲಿ ಹಿಂದೂ ದೇವರನ್ನು ಪೂಜಿಸಲಾಗುತ್ತಿದೆ. ಅದರಲ್ಲಿ ಆಂಜನೇಯ ದೇವರು ಕೂಡ ಒಬ್ಬರು. ಆಂಜನೇಯ ದೇವರ ಮೂರ್ತಿಯನ್ನು ಅಮೆರಿಕಾದ ಅಧ್ಯಕ್ಷ ಬರಾಕ್ ಒಬಾಮಾ ಕೂಡ ತನ್ನೊಂದಿಗೆ ಇಟ್ಟುಕೊಂಡಿದ್ದಾರೆಂದು ಸಾಮಾಜಿಕ ಜಾಲತಾಣದಲ್ಲಿ ಸುದ್ದಿಯಾಗಿತ್ತು.... ಹನುಮಂತ ದೇವರ ಪ್ರಭಾವ ಎಷ್ಟಿದೆ ಎಂದು ಇದರಿಂದ ತಿಳಿದುಕೊಳ್ಳಬಹುದು. ಹನುಮಾನ್ ನಮ್ಮ ನಡುವೆ ಇದ್ದಾನೆಯೇ? ಇಲ್ಲಿದೆ ಪುರಾವೆಗಳು!
ವಾನರ ಮೂರ್ತಿಯ ಹನುಮಂತ ದೇವರನ್ನು ಹೇಗೆ ಪೂಜಿಸಬೇಕು ಎಂದು ಕೆಲವರು ಪ್ರಶ್ನಿಸಬಹುದು. ಹನುಮಂತ ದೇವರಿಗೆ ಕೋಟ್ಯಾಂತರ ಭಕ್ತರಿದ್ದಾರೆ. ಪುರುಷರು ಹನುಮಂತ ದೇವರನ್ನು ಪೂಜಿಸಬಹುದು. ಆದರೆ ಬ್ರಹ್ಮಚಾರಿಯಾಗಿರುವ ಹನುಮಂತ ದೇವರನ್ನು ಮಹಿಳೆಯರು ಪೂಜಿಸಬಾರದು ಎನ್ನುವ ನಂಬಿಕೆ ಇದೆ. ಪುರುಷರು ಹನುಮಂತನನ್ನು ಪೂಜಿಸಿ ತಮ್ಮ ಇಷ್ಟಾರ್ಥಗಳನ್ನು ಸಿದ್ಧಿಸಿಕೊಳ್ಳಬಹುದು. ಹನುಮಂತ ದೇವರನ್ನು ಒಲಿಸಿಕೊಳ್ಳುವ ಕೆಲವೊಂದು ಸೂತ್ರಗಳನ್ನು ಇಲ್ಲಿ ನೀಡಲಾಗಿದೆ. ಇದನ್ನು ಪಾಲಿಸಿಕೊಂಡು ದೇವರನ್ನು ಒಲಿಸಿಕೊಳ್ಳಿ.....

ಸಿಂಧೂರ ಹಾಕಿಕೊಳ್ಳಿ
ಕಿತ್ತಳೆ ಬಣ್ಣದ ಸಿಂಧೂರವನ್ನು ಹನುಮಂತ ದೇವರ ಮೂರ್ತಿಗೆ ಹಚ್ಚಲಾಗುತ್ತದೆ. ಹೆಚ್ಚಿನ ಮಂದಿರಗಳಲ್ಲಿ ಹನುಮಂತ ದೇವರ ಮೂರ್ತಿಗಳಿಗೆ ಕಿತ್ತಳೆ ಬಣ್ಣದ ಸಿಂಧೂರವನ್ನು ಹಚ್ಚಿರುತ್ತಾರೆ. ಕಿತ್ತಳೆ ಬಣ್ಣದ ಸಿಂಧೂರವನ್ನು ಹನುಮಂತನ ಮೂರ್ತಿಗೆ ಹಚ್ಚುವ ಮೂಲಕ ಆತನನ್ನು ಪೂಜಿಸಬಹುದು.

ಸಿಂಧೂರ ಹಾಕಿಕೊಳ್ಳಿ
ಹಣೆ ಅಥವಾ ಸಂಪೂರ್ಣ ದೇಹಕ್ಕೆ ಸಿಂಧೂರ ಹಚ್ಚಬಹುದು. ಸಿಂಧೂರಕ್ಕೆ ನೀರು ಹಾಕಿ ದಪ್ಪಗಿನ ಪೇಸ್ಟ್ ಮಾಡಿಕೊಳ್ಳಿ. ಇದನ್ನು ಮೂರ್ತಿಗೆ ಹಚ್ಚಿ. ಮಂಗಳವಾರ ಅಥವಾ ಶನಿವಾರದಂದು ಪುರುಷರು ಹೀಗೆ ಮಾಡಬೇಕು.

ಹನುಮಂತನ ಮಂತ್ರ ಪಠಿಸಿ
ಮನೋಜವಂ ಮಾರುತತುಲ್ಯವೆಗಂ ಜಿತೇಂದ್ರಿಯಂ ಬುದ್ಧಿಮಾತಂ ವರಿಸ್ತಂ, ವಾತಾತಮಜಂ ವಾನರಾಯುಕ್ತಮುಖ್ಯಂ ಶ್ರೀರಾಮ ದೂತಂ ಸರನಾಮ ಪ್ರಪಾದಯೆ. ಪುರುಷರು ಈ ಮಂತ್ರವನ್ನು ಪಠಿಸಿ ಹನುಮಂತ ದೇವರನ್ನು ಪೂಜಿಸಬಹುದಾಗಿದೆ. ಸ್ನಾನ ಮಾಡಿದ ಬಳಿಕ ಅಥವಾ ರಾತ್ರಿ ವೇಳೆ ಈ ಮಂತ್ರವನ್ನು ಪಠಿಸಬಹುದು. ಮಧ್ಯರಾತ್ರಿ ವೇಳೆ ಹನುಮಂತನ ಪೂಜಿಸಿದರೆ ತುಂಬಾ ಒಳ್ಳೆಯದು.ಮಲಗುವ ಮುನ್ನ 'ಹನುಮಾನ್ ಚಾಲೀಸಾ' ಪಠಿಸಲು ಮರೆಯದಿರಿ

ರಾಮ ದೇವರನ್ನು ಪೂಜಿಸಿ
ಹನುಮಂತ ದೇವರ ಶ್ರೀರಾಮಚಂದ್ರ ದೇವರ ದೂತನಾಗಿದ್ದಾರೆ. ಯಾವಾಗಲೂ ಅವರನ್ನು ಭಕ್ತಿಯಿಂದ ಪೂಜಿಸುತ್ತಾರೆ. ಹನುಮಂತ ದೇವರ ಕೃಪೆಗೆ ಪಾತ್ರರಾಗಬೇಕಾದರೆ ರಾಮ ದೇವರನ್ನು ಪೂಜಿಸಬೇಕು. ಜೈ ಶ್ರೀರಾಮ್ ಮಂತ್ರವನ್ನು ಪಠಿಸುತ್ತ ಇರಬೇಕು.

ಮಂಗಳವಾರ ಉಪವಾಸ
ಮಂಗಳವಾರದಂದು ಉಪವಾಸ ಮಾಡಿಕೊಂಡು ಹನುಮಂತ ದೇವರನ್ನು ಪ್ರಾರ್ಥಿಸಬಹುದು. ದಿನದಲ್ಲಿ ಒಂದು ಊಟವನ್ನು ಮಾಡಿ ಹನುಮಂತ ದೇವರ ಮಂತ್ರ ಅಥವಾ ಹನುಮಾನ್ ಚಾಲೀಸವನ್ನು ಪಠಿಸಬೇಕು.

ಮಂಗಳವಾರ ಉಪವಾಸ
ಹನುಮಂತ ದೇವರಿಗೆ ಸಿಹಿ ಇಷ್ಟವಾಗಿರುವ ಕಾರಣದಿಂದ ಕಡಲೆಹಿಟ್ಟಿನ ಲಾಡನ್ನು ಅರ್ಪಿಸಿ. ವಾನರಗಳಿಗೆ ಬಾಳೆಹಣ್ಣನ್ನು ಅರ್ಪಿಸಬಹುದು. ವಾನರಗಳು ಪತ್ತೆಯಾಗದೆ ಇದ್ದರೆ ಹನುಮಂತನ ಮೂರ್ತಿಗೆ ಬಾಳೆಹಣ್ಣನ್ನು ಅರ್ಪಿಸಿ. ಪುರುಷರು ಈ ಮೂಲಕ ಹನುಮಂತನನ್ನು ಪೂಜಿಸಬಹುದಾಗಿದೆ.



Click it and Unblock the Notifications
