Latest Updates
-
NEET ಮರುಪರೀಕ್ಷೆ ಮುಗಿದಿದೆ: ಮಕ್ಕಳ ಆತಂಕ ದೂರ ಮಾಡಲು ಪೋಷಕರು ಮಾಡಬೇಕಾದ ಅತ್ಯಗತ್ಯ ಕೆಲಸಗಳಿವು! -
ಪುಣೆ-ಮುಂಬೈ ಮಳೆಗಾಲ: ನಿಮ್ಮ ಮನೆಯನ್ನು ಸುರಕ್ಷಿತವಾಗಿಡಲು ಇಂದೇ ರಾತ್ರಿ ಈ 45 ನಿಮಿಷಗಳ ಕೆಲಸ ಮಾಡಿ! -
ಮಳೆಗಾಲದಲ್ಲಿ ಆರೋಗ್ಯದ ಬಗ್ಗೆ ಎಚ್ಚರ: ಅತಿಸಾರ ತಡೆಯಲು ಮತ್ತು ಸುರಕ್ಷಿತ ಆಹಾರಕ್ಕಾಗಿ ಈ ಸರಳ ಟಿಪ್ಸ್ ಪಾಲಿಸಿ -
ಫಾದರ್ಸ್ ಡೇ 2026: ಅಪ್ಪನ ಮುಖದಲ್ಲಿ ನಗು ಮೂಡಿಸಲು ಇಲ್ಲಿದೆ ಸಿಂಪಲ್ ಮತ್ತು ಬೆಸ್ಟ್ ಐಡಿಯಾಗಳು! -
10ನೇ ಅಂತರಾಷ್ಟ್ರೀಯ ಯೋಗ ದಿನ: ಮಳೆಯನ್ನೂ ಮೀರಿ ಕೋಲ್ಕತ್ತಾದಲ್ಲಿ ಯೋಗ ಸಂಭ್ರಮ, ಮನೆಯಲ್ಲೇ ಅಭ್ಯಾಸ ಮಾಡಲು ಇಲ್ಲಿದೆ ಸರಳ ಟಿಪ್ಸ್! -
ಭಾರತ vs ಅಫ್ಘಾನಿಸ್ತಾನ ಪಂದ್ಯ: ಮ್ಯಾಚ್ ನೋಡುವಾಗ ಮನೆಯಲ್ಲಿ ಶಾಂತಿ ಕಾಪಾಡಲು ಈ ಟಿಪ್ಸ್ ಫಾಲೋ ಮಾಡಿ! -
ನಾಳೆ ನೀಟ್ ಮರುಪರೀಕ್ಷೆ: ಮಳೆಗಾಲದ ನಡುವೆ ಪರೀಕ್ಷೆಗೆ ಸಜ್ಜಾಗುವುದು ಹೇಗೆ? ಇಲ್ಲಿದೆ ಫೈನಲ್ ಚೆಕ್ಲಿಸ್ಟ್ -
ಪಿಎಂ-ಕಿಸಾನ್ ಹಣ ಜಮೆ: ರೈತರೇ, ಈ 2,000 ರೂಪಾಯಿಯಲ್ಲಿ ಆರೋಗ್ಯಕರ ಆಹಾರ ಖರೀದಿಸಿ, ಮಧುಮೇಹ ನಿಯಂತ್ರಿಸಿ! -
ಭಾರಿ ಗಾಳಿ-ಮಳೆಯ ಎಚ್ಚರಿಕೆ: ಜೂನ್ 20ರಂದು ನಿಮ್ಮ ಸುರಕ್ಷತೆಗಾಗಿ ಈ ಮುನ್ನೆಚ್ಚರಿಕೆ ಕ್ರಮಗಳನ್ನು ಮರೆಯದಿರಿ! -
ಮಳೆಗಾಲದಲ್ಲಿ ಅಂತರಾಷ್ಟ್ರೀಯ ಯೋಗ ದಿನ: ಹಿರಿಯರು ಸುರಕ್ಷಿತವಾಗಿ ಯೋಗ ಮಾಡುವುದು ಹೇಗೆ?
ಝೆನ್ ಕಥೆ: ಒಂದೇ ಹಸ್ತದ ಶಬ್ಧವನ್ನು ಆಲಿಸು

ಸುವೊ ಆ ವಿದ್ಯಾರ್ಥಿಗೆ " ಒಂದೇ ಹಸ್ತದ ಶಬ್ಧವನ್ನು ಆಲಿಸು " ಎಂಬ ಪಾಠವನ್ನು ಕಲಿಯಲು ಹೇಳಿದರು.
ಆ ವಿದ್ಯಾರ್ಥಿ ಮೂರು ವರ್ಷ ಪರಿಶ್ರಮ ಪಟ್ಟರೂ ಅದನ್ನು ಸಾಧಿಸಲಾಗಲಿಲ್ಲ.
ಕಣ್ಣಲ್ಲಿ ನೀರು ತುಂಬಿಕೊಂಡು ಆ ವಿದ್ಯಾರ್ಥಿ ಗುರುಗಳ ಬಳಿ ಬಂದು, "ಗುರುಗಳೇ, ನಾನೀಗ ಅತ್ಯಂತ ನಾಚಿಕೆ ಮತ್ತು ಮುಜುಗರದಿಂದ ನನ್ನ ಊರಿಗೆ ವಾಪಸಾಗಬೇಕಾಗಿದೆ. ನೀವು ಹೇಳಿಕೊಟ್ಟ ಪಾಠವನ್ನು ನನಗೆ ಕಲಿಯಲು ಸಾಧ್ಯವಾಗಲಿಲ್ಲ " ಎಂದನು.
ಗುರುಗಳು, "ಇನ್ನು ಒಂದು ವಾರದ ತನಕ ಧ್ಯಾನ ಮಾಡು" ಎಂದರು.
ಆದರೂ ಆ ವಿದ್ಯಾರ್ಥಿಗೆ ಅದು ಸಾಧ್ಯವಾಗಲಿಲ್ಲ.
ಆದರೂ ಗುರುಗಳು, " ಇನ್ನೂ ಒಂದು ವಾರದ ತನಕ ಧ್ಯಾನ ಮಾಡು " ಎಂದರು.
ಅದಾಗ್ಯೂ ಆ ವಿದ್ಯಾರ್ಥಿಗೆ ಜ್ಞಾನೋದಯವಾಗಲಿಲ್ಲ!
ಆ ವಿದ್ಯಾರ್ಥಿ ತನ್ನನ್ನು ಊರಿಗೆ ಕಳುಹಿಸುವಂತೆ ಗುರುಗಳಲ್ಲಿ ಬೇಡಿದ. ಉಹುಂ! ಗುರುಗಳು ಸುತರಾಂ ಒಪ್ಪಲಿಲ್ಲ. ಇನ್ನೂ ಐದು ದಿನ ಧ್ಯಾನಿಸುವಂತೆ ಹೇಳಿದರು. ಆದರೆ, ಅದರಿಂದ ಏನೂ ಪ್ರಯೋಜನವಾಗಲಿಲ್ಲ.
ಆಗ ಗುರುಗಳು, " ಇನ್ನು ಕೇವಲ ಮೂರು ದಿನ ಧ್ಯಾನಿಸು. ಒಂದು ವೇಳೆ ಆವಾಗಲೂ ನಿನಗೆ ಜ್ಞಾನೋದಯ ಆಗದಿದ್ದರೆ ನಿನ್ನನ್ನು ನೀನೇ ಕೊಂದುಕೊಳ್ಳುವುದೇ ಒಳ್ಳೆಯದು " ಎಂದರು!
ಆ ವಿದ್ಯಾರ್ಥಿಗೆ ಎರಡನೇ ದಿನಕ್ಕೇ ....... ಜ್ಞಾನೋದಯವಾಯಿತು!!



Click it and Unblock the Notifications