Latest Updates
-
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ತುಲಾದಿಂದ ಮೀನ ರಾಶಿವರೆಗಿನ ವಾರ ಭವಿಷ್ಯ! -
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ಮೇಷದಿಂದ ಕನ್ಯಾ ರಾಶಿವರೆಗಿನ ವಾರ ಭವಿಷ್ಯ! -
ಮಳೆಗಾಲಕ್ಕೆ ತಯಾರಾಗಿ: ನಿತ್ಯ ಊಟದೊಂದಿಗೆ ಸವಿಯಲು ರವೆ ಸಂಡಿಗೆ ಮಾಡಿ! -
ಮೀನ ರಾಶಿಯಲ್ಲಿ ಶನಿ-ಮಂಗಳ ಸಂಯೋಗ: ಅಪರೂಪದ ಸಮ್ಮಿಲನವು ತರಲಿದೆ ಬಿಕ್ಕಟ್ಟು, ಆರ್ಥಿಕ ಸಮಸ್ಯೆ! -
ಈ 2 ರಾಶಿಯವರ ಪ್ರೇಮ ಸಂಬಂಧಗಳು ಸಿಹಿ! ಸಣ್ಣಪುಟ್ಟ ಸಮಸ್ಯೆಗಳು ಖಚಿತ -
March 21 Horoscope: ಹೊಸ ಆರಂಭಗಳಲ್ಲಿ ಹಣ ಹೂಡಿಕೆಗೆ ಯೋಗ್ಯ ದಿನ! -
ಒಂದು ಹನಿ ಎಣ್ಣೆ ಇಲ್ಲದೆ ಮಾಡಿ ದಹೀ ಭಲ್ಲಾ! ರುಚಿ, ಆರೋಗ್ಯದಲ್ಲಿ ರಾಜಿ ಇಲ್ಲ.. ತೂಕ ಡಬಲ್ ಇಳಿಯುತ್ತೆ -
ಸುಸ್ತು & ಆಯಾಸದಿಂದ ಬಳಲುತ್ತಿದ್ದೀರಾ? ಈ ರಾಗಿ ಖರ್ಜೂರದ ಲಾಡು ಸೇವಿಸಿ.. ಸಕ್ಕರೆ, ಬೆಲ್ಲ ಬೇಕಿಲ್ಲ.. ಮಾಡೋದು ಹೇಗೆ? -
ಎಂದಾದ್ರೂ ಚೆಟ್ಟಿನಾಡ್ ಚಿಕನ್ ಸವಿದ್ದೀರಾ? ಬಾಯಲ್ಲಿ ನೀರೂರಿರುವ ರುಚಿ.. ಮಸಾಲೆ ರುಬ್ಬದೇ ಮಾಡಿ -
ಕುಂಭ ರಾಶಿಯಲ್ಲಿ ಬುಧ ಮಾರ್ಗಿ: ಈ ರಾಶಿಯವರಿಗೆ ಶುಭಕಾಲ ಆರಂಭ! ಕಷ್ಟಗಳಿಗೆ ಮುಕ್ತಿ.. ಕುಬೇರನ ಕೃಪೆ ಶುರು
ಝೆನ್ ಕಥೆ: ಒಂದೇ ಹಸ್ತದ ಶಬ್ಧವನ್ನು ಆಲಿಸು

ಸುವೊ ಆ ವಿದ್ಯಾರ್ಥಿಗೆ " ಒಂದೇ ಹಸ್ತದ ಶಬ್ಧವನ್ನು ಆಲಿಸು " ಎಂಬ ಪಾಠವನ್ನು ಕಲಿಯಲು ಹೇಳಿದರು.
ಆ ವಿದ್ಯಾರ್ಥಿ ಮೂರು ವರ್ಷ ಪರಿಶ್ರಮ ಪಟ್ಟರೂ ಅದನ್ನು ಸಾಧಿಸಲಾಗಲಿಲ್ಲ.
ಕಣ್ಣಲ್ಲಿ ನೀರು ತುಂಬಿಕೊಂಡು ಆ ವಿದ್ಯಾರ್ಥಿ ಗುರುಗಳ ಬಳಿ ಬಂದು, "ಗುರುಗಳೇ, ನಾನೀಗ ಅತ್ಯಂತ ನಾಚಿಕೆ ಮತ್ತು ಮುಜುಗರದಿಂದ ನನ್ನ ಊರಿಗೆ ವಾಪಸಾಗಬೇಕಾಗಿದೆ. ನೀವು ಹೇಳಿಕೊಟ್ಟ ಪಾಠವನ್ನು ನನಗೆ ಕಲಿಯಲು ಸಾಧ್ಯವಾಗಲಿಲ್ಲ " ಎಂದನು.
ಗುರುಗಳು, "ಇನ್ನು ಒಂದು ವಾರದ ತನಕ ಧ್ಯಾನ ಮಾಡು" ಎಂದರು.
ಆದರೂ ಆ ವಿದ್ಯಾರ್ಥಿಗೆ ಅದು ಸಾಧ್ಯವಾಗಲಿಲ್ಲ.
ಆದರೂ ಗುರುಗಳು, " ಇನ್ನೂ ಒಂದು ವಾರದ ತನಕ ಧ್ಯಾನ ಮಾಡು " ಎಂದರು.
ಅದಾಗ್ಯೂ ಆ ವಿದ್ಯಾರ್ಥಿಗೆ ಜ್ಞಾನೋದಯವಾಗಲಿಲ್ಲ!
ಆ ವಿದ್ಯಾರ್ಥಿ ತನ್ನನ್ನು ಊರಿಗೆ ಕಳುಹಿಸುವಂತೆ ಗುರುಗಳಲ್ಲಿ ಬೇಡಿದ. ಉಹುಂ! ಗುರುಗಳು ಸುತರಾಂ ಒಪ್ಪಲಿಲ್ಲ. ಇನ್ನೂ ಐದು ದಿನ ಧ್ಯಾನಿಸುವಂತೆ ಹೇಳಿದರು. ಆದರೆ, ಅದರಿಂದ ಏನೂ ಪ್ರಯೋಜನವಾಗಲಿಲ್ಲ.
ಆಗ ಗುರುಗಳು, " ಇನ್ನು ಕೇವಲ ಮೂರು ದಿನ ಧ್ಯಾನಿಸು. ಒಂದು ವೇಳೆ ಆವಾಗಲೂ ನಿನಗೆ ಜ್ಞಾನೋದಯ ಆಗದಿದ್ದರೆ ನಿನ್ನನ್ನು ನೀನೇ ಕೊಂದುಕೊಳ್ಳುವುದೇ ಒಳ್ಳೆಯದು " ಎಂದರು!
ಆ ವಿದ್ಯಾರ್ಥಿಗೆ ಎರಡನೇ ದಿನಕ್ಕೇ ....... ಜ್ಞಾನೋದಯವಾಯಿತು!!



Click it and Unblock the Notifications


