Latest Updates
-
ಕಾಲಾಷ್ಟಮಿ 2026: ನಾಳೆ ಕಾಲಾಷ್ಟಮಿ ಆಚರಣೆ, ಶಿವನ ಉಗ್ರವತಾರ ಕಾಲಭೈರವನ ಪೂಜಿಸುವುದು ಏಕೆ? -
ಅಜ್ಜಿಯ ಕಾಲದ ಅಮೃತ! ಬೇಸಿಗೆಯಲ್ಲಿ ದೇಹ ತಂಪಾಗಿರಬೇಕಾ? ಒಂದು ಗ್ಲಾಸ್ ಸಾಕು.. ಟ್ರೈ ಮಾಡಿ ನೋಡಿ -
ಗುರು ನೇರ ಸಂಚಾರ: ಮಾರ್ಚ್ 11 ರಿಂದ ಗಜಕೇಸರಿ ಯೋಗ.. ಈ ರಾಶಿಯವರ ಸಕಲ ಕಷ್ಟಗಳಿಗೂ ಮುಕ್ತಿ ಸಿಗುವ ಕಾಲ -
ದೇಹಕ್ಕೆ ಬಲ ನೀಡುವ ಹುರಿದಕ್ಕಿ ಉಂಡೆ ಸಲೀಸಾಗಿ ಮಾಡಿ! ಇಲ್ಲಿದೆ ಸುಲಭದ ಮನೆಮದ್ದು! -
ಹೋಟೆಲ್ ರುಚಿಯ ಅಕ್ಕಿ ರೊಟ್ಟಿ.. ಮುರಿಯದಂತೆ ಸಾಫ್ಟ್ ಆಗಿ ಮಾಡೋದು ಹೇಗೆ? ಹೊಸಬರಿಗೆ ಕೂಡ ಸುಲಭ -
ಹೊಸ ಮನೆ, ವಾಹನ ಖರೀದಿಸುವ ಯೋಗ! ಜೀವನದಲ್ಲಿ ಹೆಚ್ಚಲಿದೆ ಸಂತಸ -
March 10 Horoscope: ಆದಾಯ ಗಳಿಕೆಯ ಆಸೆಯಿಂದ ಹಣ ಕಳೆದುಕೊಳ್ಳಬೇಡಿ -
ಹುಷಾರ್.. ಈ ರಾಶಿಗಳಿಗೆ ಶನಿಯಿಂದ ಸಂಕಷ್ಟ ಶುರು! ಶನಿಯ ಕೆಂಗಣ್ಣಿನಿಂದ ತಪ್ಪಿಸಿಕೊಳ್ಳೋದು ಹೇಗೆ? -
ಕಡಲ ತೀರದಲ್ಲಿ ಮತ್ತೆ ಕಾಣಿಸಿಕೊಂಡ ಡೂಮ್ಸ್ಡೇ ಫಿಶ್: ಮತ್ತೇನು ದುರಂತ ಕಾದಿದೆ? -
ಮಾರ್ಚ್ 13ರಿಂದ ಶನಿ ಅಸ್ತಮ: 40 ದಿನಗಳ ಕಾಲ ಈ ರಾಶಿಯವರಿಗೆ ಶನಿ ಪ್ರಭಾವ ಇಳಿಕೆ! ಅದೃಷ್ಟದ ದಿನ!
ಝೆನ್ ಕಥೆ: ಒಂದೇ ಹಸ್ತದ ಶಬ್ಧವನ್ನು ಆಲಿಸು

ಸುವೊ ಆ ವಿದ್ಯಾರ್ಥಿಗೆ " ಒಂದೇ ಹಸ್ತದ ಶಬ್ಧವನ್ನು ಆಲಿಸು " ಎಂಬ ಪಾಠವನ್ನು ಕಲಿಯಲು ಹೇಳಿದರು.
ಆ ವಿದ್ಯಾರ್ಥಿ ಮೂರು ವರ್ಷ ಪರಿಶ್ರಮ ಪಟ್ಟರೂ ಅದನ್ನು ಸಾಧಿಸಲಾಗಲಿಲ್ಲ.
ಕಣ್ಣಲ್ಲಿ ನೀರು ತುಂಬಿಕೊಂಡು ಆ ವಿದ್ಯಾರ್ಥಿ ಗುರುಗಳ ಬಳಿ ಬಂದು, "ಗುರುಗಳೇ, ನಾನೀಗ ಅತ್ಯಂತ ನಾಚಿಕೆ ಮತ್ತು ಮುಜುಗರದಿಂದ ನನ್ನ ಊರಿಗೆ ವಾಪಸಾಗಬೇಕಾಗಿದೆ. ನೀವು ಹೇಳಿಕೊಟ್ಟ ಪಾಠವನ್ನು ನನಗೆ ಕಲಿಯಲು ಸಾಧ್ಯವಾಗಲಿಲ್ಲ " ಎಂದನು.
ಗುರುಗಳು, "ಇನ್ನು ಒಂದು ವಾರದ ತನಕ ಧ್ಯಾನ ಮಾಡು" ಎಂದರು.
ಆದರೂ ಆ ವಿದ್ಯಾರ್ಥಿಗೆ ಅದು ಸಾಧ್ಯವಾಗಲಿಲ್ಲ.
ಆದರೂ ಗುರುಗಳು, " ಇನ್ನೂ ಒಂದು ವಾರದ ತನಕ ಧ್ಯಾನ ಮಾಡು " ಎಂದರು.
ಅದಾಗ್ಯೂ ಆ ವಿದ್ಯಾರ್ಥಿಗೆ ಜ್ಞಾನೋದಯವಾಗಲಿಲ್ಲ!
ಆ ವಿದ್ಯಾರ್ಥಿ ತನ್ನನ್ನು ಊರಿಗೆ ಕಳುಹಿಸುವಂತೆ ಗುರುಗಳಲ್ಲಿ ಬೇಡಿದ. ಉಹುಂ! ಗುರುಗಳು ಸುತರಾಂ ಒಪ್ಪಲಿಲ್ಲ. ಇನ್ನೂ ಐದು ದಿನ ಧ್ಯಾನಿಸುವಂತೆ ಹೇಳಿದರು. ಆದರೆ, ಅದರಿಂದ ಏನೂ ಪ್ರಯೋಜನವಾಗಲಿಲ್ಲ.
ಆಗ ಗುರುಗಳು, " ಇನ್ನು ಕೇವಲ ಮೂರು ದಿನ ಧ್ಯಾನಿಸು. ಒಂದು ವೇಳೆ ಆವಾಗಲೂ ನಿನಗೆ ಜ್ಞಾನೋದಯ ಆಗದಿದ್ದರೆ ನಿನ್ನನ್ನು ನೀನೇ ಕೊಂದುಕೊಳ್ಳುವುದೇ ಒಳ್ಳೆಯದು " ಎಂದರು!
ಆ ವಿದ್ಯಾರ್ಥಿಗೆ ಎರಡನೇ ದಿನಕ್ಕೇ ....... ಜ್ಞಾನೋದಯವಾಯಿತು!!



Click it and Unblock the Notifications











