Latest Updates
-
Weekly Horoscope: ಮಾರ್ಚ್ 08 ರಿಂದ ಮಾರ್ಚ್ 15ರ ವರೆಗೆ ತುಲಾದಿಂದ ಮೀನ ರಾಶಿವರೆಗಿನ ವಾರ ಭವಿಷ್ಯ! -
Weekly Horoscope: ಮಾರ್ಚ್ 08 ರಿಂದ ಮಾರ್ಚ್ 15ರ ವರೆಗೆ ಮೇಷದಿಂದ ಕನ್ಯಾ ರಾಶಿವರೆಗಿನ ವಾರ ಭವಿಷ್ಯ! -
ಹೊಸ ರೀತಿಯ ಟೊಮೆಟೊ ಚಕ್ಕುಲಿ ಸುಲಭವಾಗಿ ಮಾಡಿ: ಇಲ್ಲಿದೆ ಮಾಡುವ ವಿಧಾನ -
ಶನಿ ಸಂಚಾರ 2026: ಮಾರ್ಚ್ನಿಂದ ಈ 5 ರಾಶಿ ಜನರು ಎಚ್ಚರವಹಿಸಿ, ವೈಯಕ್ತಿಕ ಹಾನಿ ಸಂಭವ! -
ಮಸಾಲೆ ಲೆಸ್ ವೈಟ್ ಪಲಾವ್; ವಿಭಿನ್ನ ರುಚಿ ವಿಶೇಷ ಖಾದ್ಯ ಸಿದ್ದಮಾಡಿ ನೋಡಿ! -
ಅಂತಾರಾಷ್ಟ್ರೀಯ ಮಹಿಳಾ ದಿನ: ದಕ್ಷಿಣ ಏಷ್ಯಾದಲ್ಲಿ ಹೆಚ್ಚಾಗುತ್ತಿದೆ ರಕ್ತಹೀನತೆ, ಮಹಿಳೆಯರೇ ಬಲಿಪಶು ಏಕೆ? -
March 08 Horoscope: ಯಾರ ಬಳಿಯಾದರು ಸಾಲ ಪಡೆಯುವ ಆಲೋಚನೆ ಮುಂದೂಡಿ! -
ನೀನೇ ನನ್ನ ಶಕ್ತಿ.. ನಿಮ್ಮ ಪ್ರಿಯತಮೆಗೆ ಕಳಿಸಿ ಈ ರೊಮ್ಯಾಂಟಿಕ್ ಶುಭಾಶಯಗಳು! ಆಕೆಯ ಮುಖದಲ್ಲಿ ನಗು ತರಿಸಿ -
ಕೊನೆಗೂ ಬಂತು ರಾಜಯೋಗ: ಈ ರಾಶಿಗಳಿಗೆ ನಸೀಬಲ್ಲೇ ಇಲ್ಲದ ಸುಖ-ಸಂಪತ್ತು ಪ್ರಾಪ್ತಿ! ಪ್ರೀತಿಯಲ್ಲಿ ದೊಡ್ಡ ಯಶಸ್ಸು -
ಎಂದಾದರೂ ಮೊಸರು ಪರೋಟ ತಿಂದಿದ್ದೀರಾ? ಒಮ್ಮೆ ಇದರ ರುಚಿ ನೋಡಿ.. ಹಿಟ್ಟು ಕಲಸುವಾಗ ಈ ಟ್ರಿಕ್ ಬಳಸಿ
ಬಣ್ಣದ ಹಬ್ಬ 'ಹೋಳಿಯ' ಹಿಂದಿದೆ, ಒಂದು ರೋಚಕ ಕಥೆ...
ಭಾರತದಾದ್ಯಂತ ಹೋಳಿ ಹಬ್ಬವನ್ನು ಸಂಭ್ರಮ ಸಡಗರದಿಂದ ಆಚರಿಸಲಾಗುತ್ತದೆ. ಬಣ್ಣಗಳ ಓಕುಳಿಯಾಟ ಸರ್ವ ಮತಬಾಂಧವರನ್ನು ಒಂದುಗೂಡಿಸುತ್ತದೆ. ಜಾತಿ ಮತಗಳ ಭೇದವಿಲ್ಲದೆ ಆಚರಿಸುವ ಬಣ್ಣಗಳ ಹಬ್ಬ ಹೋಳಿ ತನ್ನದೇ ಆಚಾರ ಸಂಪ್ರದಾಯಗಳನ್ನು ಹೊಂದಿದೆ. ಪ್ರತಿಯೊಂದು ಹಬ್ಬಕ್ಕೂ ಆಚಾರ ಸಂಪ್ರದಾಯ ಪ್ರಮುಖವಾಗಿರುತ್ತದೆ ಅದಕ್ಕೆ ಹೋಳಿ ಹಬ್ಬ ಕೂಡ ಹೊರತಲ್ಲ. ಪ್ರೀತಿ, ಸಂತಸ ಮತ್ತು ಸಹೋದರತ್ವದ ಪಾಠವನ್ನು ಬಣ್ಣಗಳ ಹಬ್ಬ ಹೋಳಿ ತಿಳಿಸುತ್ತದೆ. ಬಣ್ಣಗಳೊಂದಿಗೆ ಓಕುಳಿಯಾಡುತ್ತಾ ಸರ್ವ ಮತಬೇಧಗಳನ್ನು ಮರೆತು ರಂಗಿನಾಟದಲ್ಲಿ ನಾವು ಸಂಪೂರ್ಣ ಮೈಮರೆಯುತ್ತೇವೆ. ಈ ಹಬ್ಬದಂದು ಬಾಂಗ್ನಂತಹ ಪಾನೀಯವನ್ನು ಸೇವಿಸಿ ಉನ್ಮತ್ತರಾಗಿ ಹಬ್ಬದಲ್ಲಿ ಇನ್ನಷ್ಟು ತಲ್ಲೀನತೆಯನ್ನು ಪಡೆದುಕೊಳ್ಳಲು ಸಾಧ್ಯವಾಗುತ್ತದೆ ಎಂಬ ನಂಬಿಕೆ ಕೂಡ ಚಾಲ್ತಿಯಲ್ಲಿದೆ.
ಆದರೆ ಪ್ರತಿಯೊಂದು ಹಬ್ಬಗಳಂತೆ ಹೋಳಿ ಹಬ್ಬವೂ ಪುರಾಣ ಕಥೆಯನ್ನು ಹೊಂದಿದೆ. ಹೋಳಿ ಹಬ್ಬದ ಆಚರಣೆಯ ಹಿಂದೆ ಕೆಲವು ಕಾರಣಗಳಿದ್ದು ದೈವೀ ಸ್ವರೂಪಗಳ ಮಹತ್ವತೆಯನ್ನು ಈ ಹಬ್ಬವು ಒಳಗೊಂಡಿದೆ. ಹಿರಣ್ಯಕಶಿಪು ಮತ್ತು ಆತನ ಸಹೋದರಿ ಹೋಲಿಕಾಳಿಂದ ತನ್ನ ಭಕ್ತನನ್ನು ಕಾಪಾಡುವ ಶ್ರೀಮನ್ನಾರಾಯಣನ ದೈವೀ ಮಹಿಮೆ ಅಂತೆಯೇ ಶಿವ ಪಾರ್ತಿಯರ ಸಮ್ಮಿಲನಕ್ಕಾಗಿ ತನ್ನ ದೇಹವನ್ನೇ ಸುಟ್ಟು ಭಸ್ಮ ಮಾಡಿದ ಕಾಮದೇವನ ತ್ಯಾಗದ ಮಹಿಮೆಯನ್ನು ಹೋಳಿಯಂದು ಜನರು ಕೊಂಡಾಡುತ್ತಾರೆ. ಬನ್ನಿ ಇಂದಿನ ಲೇಖನದಲ್ಲಿ ಹೋಳಿ ಹಬ್ಬದ ಪ್ರಾಮುಖ್ಯತೆ ಮತ್ತು ಅದರ ಮಹತ್ವವನ್ನು ನಾವು ಅರಿಯಲಿದ್ದು ಇದು ಭಾರತದಲ್ಲಿ ಏಕೆ ಇಷ್ಟೊಂದು ಪ್ರಸಿದ್ಧಿಯನ್ನು ಪಡೆದುಕೊಂಡಿದೆ ಎಂಬುದನ್ನು ಕಂಡುಕೊಳ್ಳೋಣ....

ಹಿಂದೂ ಧರ್ಮಗ್ರಂಥಗಳ ಪ್ರಕಾರ
ಹಿಂದೂ ಧರ್ಮಗ್ರಂಥಗಳ ಪ್ರಕಾರ ಹಿರಣ್ಯಕಶಿಪು ರಾಕ್ಷಸರಾಜನಾಗಿದ್ದು ಬ್ರಹ್ಮನನ್ನು ಮೆಚ್ಚಿಸಿ ವರವನ್ನು ಪಡೆದುಕೊಂಡ ಅಸುರನಾಗಿದ್ದ. ಜನರು ತನ್ನನ್ನು ಪೂಜಿಸಬೇಕು ಮತ್ತು ತನ್ನ ಸಹೋದರ ಹಿರಣ್ಯಾಕ್ಷನ ಅಂತ್ಯಕ್ಕೆ ಕಾರಣನಾದ ವಿಷ್ಣುವನ್ನು ಸಂಹರಿಸಬೇಕೆಂಬ ಹೆಬ್ಬಯಕೆಯನ್ನು ಹಿರಣ್ಯಕಶಿಪು ಹೊಂದಿದ್ದ.

ಪ್ರಹ್ಲಾದನ ಮೇಲೆ ಸೇಡು...
ಹಿರಣ್ಯಕಶಿಪುವಿಗೆ ಹೆದರಿ ಆತನ ಆಳ್ವಿಕೆಯಲ್ಲಿದ್ದ ಜನರು ಅವನನ್ನು ಪೂಜಿಸಲು ಆರಂಭಿಸುತ್ತಾರೆ. ಆದರೆ ಹಿರಣ್ಯಕಶಿಪುವಿನ ಮಗನಾದ ಪ್ರಹ್ಲಾದ ನಾರಾಯಣ ಭಕ್ತನಾಗಿರುತ್ತಾನೆ. ವಿಷ್ಣುವಿನ ಅಪರಾವತಾರವಾದ ನಾರಾಯಣನ ಭಕ್ತನಾಗಿದ್ದ ಪ್ರಹ್ಲಾದನನ್ನು ಕೊಲ್ಲಲು ಹಿರಣ್ಯಕಶಿಪು ಹಲವು ಸಲ ಪ್ರಯತ್ನಪಡುತ್ತಾನೆ ಆದರೆ ತನ್ನ ಭಕ್ತನಿಗೆ ಕೂದಲೆಳೆಯ ಅಪಾಯವೂ ತಗುಲದಂತೆ ಶ್ರೀಮನ್ನಾರಾಯಣನು ಪ್ರಹ್ಲಾದನನ್ನು ಕಾಪಾಡುತ್ತಾನೆ.

ಪ್ರಹ್ಲಾದನ ಮೇಲೆ ಸೇಡು...
ಆದರೆ ಎಷ್ಟುಬಾರಿ ಸಾಯಿಸಲು ಪ್ರಯತ್ನಿಸಿದರೂ, ಮರಣ ಹೊಂದದ ಪ್ರಹ್ಲಾದನನ್ನು ಕೊಲ್ಲಿಸುವುದಕ್ಕಾಗಿ ಹಿರಣ್ಯಕಶಿಪು ತನ್ನ ಸಹೋದರಿ ಹೋಲಿಕಾಳ ನೆರವನ್ನು ಪಡೆಯುತ್ತಾನೆ. ಹೋಲಿಕಾ ಬೆಂಕಿಯಲ್ಲಿ ಧಹಿಸದೇ ಇರುವ ವರವನ್ನು ಪಡೆದುಕೊಂಡಿರುತ್ತಾಳೆ. ಉಪಾಯದಿಂದ ತನ್ನ ಸೋದರಳಿಯ ಪ್ರಹ್ಲಾದನನ್ನು ಚಿತೆಯ ಮೇಲೆ ತನ್ನೊಂದಿಗೆ ಕುಳಿತುಕೊಳ್ಳುವಂತೆ ಹೋಲಿಕಾ ಮಾಡುತ್ತಾಳೆ. ಪ್ರಹ್ಲಾದನಿಗೆ ಈ ಷಡ್ಯಂತ್ರದ ಅರಿವಾಗುತ್ತದೆ ಆದರೆ ದೃಢಚಿತ್ತದಿಂದ ಹೆದರದೇ ಶ್ರೀಮನ್ನಾರಾಯಣನ ನಾಮಸ್ಮರಣೆಯನ್ನು ಮಾಡುತ್ತಾನೆ. ಚಿತೆಗೆ ಬೆಂಕಿಯನ್ನು ನೀಡಿದೊಡನೆ ಅದು ಉರಿಯಲು ಆರಂಭವಾಗುತ್ತದೆ. ಬೆಂಕಿಯಲ್ಲಿ ಸುಡದೇ ಇರುವ ಹೋಲಿಕಾ ತಾನು ಪಡೆದುಕೊಂಡ ವರದಿಂದಲೇ ಸಾವನ್ನು ಹೊಂದುತ್ತಾಳೆ. ಒಬ್ಬ ವ್ಯಕ್ತಿಯು ಬೆಂಕಿಯನ್ನು ಪ್ರವೇಶಿಸಿದಾಗ ಮಾತ್ರವೇ ತನ್ನ ವರ ಫಲಿಸುವುದು ಎಂಬುದನ್ನು ಆಕೆ ಮರೆತಿರುತ್ತಾಳೆ. ನಂತರ ನರಸಿಂಹನ ರೂಪವನ್ನು ತಾಳಿ ಹಿರಣ್ಯಕಶಿಪುವನ್ನು ವಿಷ್ಣುವು ಸಂಹರಿಸುತ್ತಾನೆ. ಬೆಂಕಿಯಲ್ಲಿ ಹೋಲಿಕಾ ಧಹಿಸಿದ ನಂತರ ಈ ಹಬ್ಬಕ್ಕೆ ಹೋಳಿ ಹೆಸರನ್ನು ಇಡಲಾಯಿತು ಎಂಬುದು ಪ್ರತೀತಿಯಲ್ಲಿದ್ದು ಕೆಟ್ಟದ್ದರ ಮೇಲೆ ಒಳ್ಳೆಯದರ ವಿಜಯ ಎಂಬ ಅಚರಣೆಯನ್ನು ಹೋಳಿ ಇಲ್ಲಿ ಪ್ರತನಿಧಿಸುತ್ತದೆ.

ಕಾಮದೇವ ಮತ್ತು ಶಿವ ದೇವರು
ಪ್ರೇಮದ ಅಧಿದೇವತೆ ಎಂದೇ ಖ್ಯಾತಿವೆತ್ತಿರುವ ಕಾಮದೇವನೂ ಕೂಡ ಹೋಳಿ ಹಬ್ಬಕ್ಕೆ ಪುರಾಣ ಹಿನ್ನಲೆಯನ್ನು ಒದಗಿಸಿದ್ದಾನೆ. ಪತ್ನಿ ದಾಕ್ಷಾಯಿಣಿಯ ಮರಣದ ನಂತರ ಶಿವನು ದೀರ್ಘ ತಪಸ್ಸನ್ನು ಆಚರಿಸುತ್ತಾನೆ. ಆದರೆ ಶಿವನನ್ನೇ ತನ್ನ ಪತಿಯಾಗಿ ಸ್ವೀಕರಿಸಬೇಕೆಂಬ ಇಚ್ಛೆಯನ್ನು ಹೊಂದಿ ಮರುಜನ್ಮವನ್ನು ಪಡೆದಿದ್ದ ದಾಕ್ಷಾಯಿಣಿಯು ಪಾರ್ವತಿಯ ರೂಪದಲ್ಲಿ ಘೋರ ತಪಸ್ಸನ್ನು ಮಾಡುತ್ತಿರುತ್ತಾಳೆ.

ಕಾಮದೇವ ಮತ್ತು ಶಿವ ದೇವರು
ಶಿವನಿಗೆ ಇದರ ಅರಿವಿರುವುದಿಲ್ಲ ಏಕೆಂದರೆ ಆತ ಘೋರ ತಪ್ಪಸ್ಸಿನಲ್ಲಿರುತ್ತಾನೆ. ಇದನ್ನರಿತ ಬ್ರಹ್ಮನು ಶಿವನ ತಪೋಭಂಗವನ್ನು ಮಾಡಲು ಕಾಮದೇವನನ್ನು ಕಳುಹಿಸುವ ಯೋಜನೆಯನ್ನು ಸಿದ್ಧಪಡಿಸುತ್ತಾನೆ. ಕಾಮದೇವನು ದಕ್ಷಿಣ ತಂಗಾಳಿಯಲ್ಲಿ ನಂದಿನಿಯ ಮೂಲಕ ಹಾದು ಹೋಗಿ ಶಿವನ ನಿವಾಸವನ್ನು ಪ್ರವೇಶಿಸುತ್ತಾನೆ. ಹೂಗಳ ಬಾಣವನ್ನು ಧ್ಯಾನಸ್ಥಿತಿಯಲ್ಲಿರುವ ಶಿವನ ಮೇಲೆ ಮದನನು ಹೂಡುತ್ತಾನೆ. ಇದರಿಂದ ತಪೋಭಂಗಗೊಂಡ ಶಿವನು ಕ್ರೋಧನಾಗಿ ಮೂರನೆಯ ಕಣ್ಣಿನಿಂದ ಕಾಮದೇವನನ್ನು ಸುಟ್ಟು ಭಸ್ಮ ಮಾಡುತ್ತಾನೆ. ಕಾಮದೇವನನ್ನು ಶಿವನು ಹೋಳಿಯಂದೇ ಭಸ್ಮ ಮಾಡಿರುವುದಾಗಿ ಪ್ರತೀತಿ ಇದ್ದು ಜನರು ಕಾಮದೇವನ ದೇಹತ್ಯಾಗವನ್ನು ಕೊಂಡಾಡುತ್ತಾ ಹೋಳಿ ಹಬ್ಬವನ್ನು ಆಚರಿಸುತ್ತಾರೆ.



Click it and Unblock the Notifications











