Latest Updates
-
ಟೆಲಿಗ್ರಾಂ ಬಳಕೆದಾರರೇ ಗಮನಿಸಿ: ಸೇವೆ ಆರಂಭವಾದರೂ ಈ ಬದಲಾವಣೆ ಮರೆಯದಿರಿ! -
ಬಿಸಿಗಾಳಿಯ ಎಚ್ಚರಿಕೆ: ಅಡುಗೆ ಮಾಡದೆಯೇ ದೇಹಕ್ಕೆ ತಂಪು ನೀಡುವ ಪ್ರೋಟೀನ್ ಆಹಾರಗಳಿವು! -
ಮಳೆಯ ನಡುವೆ ಯುಜಿಸಿ ನೆಟ್ ಪರೀಕ್ಷೆ: ಸಂಗಾತಿಯ ಈ ಸಣ್ಣ ಬೆಂಬಲವೇ ಯಶಸ್ಸಿನ ಗುಟ್ಟು -
ಮಳೆಗಾಲದಲ್ಲಿ ಮನೆಯ ಪೀಠೋಪಕರಣ ಹಾಳಾಗುತ್ತಿದೆಯೇ? ಬೂಸು ತಡೆಯಲು ಈ ಸರಳ ಟಿಪ್ಸ್ ಪಾಲಿಸಿ -
ಮುಂಬೈ ಆರೆಂಜ್ ಅಲರ್ಟ್: ಮಳೆಯಲ್ಲಿ ಆಫೀಸ್ ಹೋಗುವವರೇ, ಈ 'ನೋ-ಕುಕ್' ಪ್ರೋಟೀನ್ ಮೀಲ್ಸ್ ಮಿಸ್ ಮಾಡ್ಬೇಡಿ! -
ಅಮೆಜಾನ್ ಪ್ರೈಮ್ ಡೇ ಸೇಲ್: ಕಡಿಮೆ ಬೆಲೆಗೆ ವಸ್ತುಗಳನ್ನು ಖರೀದಿಸಲು ಈ ಸ್ಮಾರ್ಟ್ ಟ್ರಿಕ್ಸ್ ಮಿಸ್ ಮಾಡ್ಬೇಡಿ! -
ಯೋಗದ ನಂತರ ಮೈಕೈ ನೋವು ಕಾಡುತ್ತಿದೆಯೇ? ಕಚೇರಿಯಲ್ಲಿ ಕೆಲಸ ಮಾಡುವಾಗ ಈ 12 ನಿಮಿಷದ ಟಿಪ್ಸ್ ಪಾಲಿಸಿ -
NEET ಮರುಪರೀಕ್ಷೆ ಮುಗಿದಿದೆ: ಮಕ್ಕಳ ಆತಂಕ ದೂರ ಮಾಡಲು ಪೋಷಕರು ಮಾಡಬೇಕಾದ ಅತ್ಯಗತ್ಯ ಕೆಲಸಗಳಿವು! -
ಪುಣೆ-ಮುಂಬೈ ಮಳೆಗಾಲ: ನಿಮ್ಮ ಮನೆಯನ್ನು ಸುರಕ್ಷಿತವಾಗಿಡಲು ಇಂದೇ ರಾತ್ರಿ ಈ 45 ನಿಮಿಷಗಳ ಕೆಲಸ ಮಾಡಿ! -
ಮಳೆಗಾಲದಲ್ಲಿ ಆರೋಗ್ಯದ ಬಗ್ಗೆ ಎಚ್ಚರ: ಅತಿಸಾರ ತಡೆಯಲು ಮತ್ತು ಸುರಕ್ಷಿತ ಆಹಾರಕ್ಕಾಗಿ ಈ ಸರಳ ಟಿಪ್ಸ್ ಪಾಲಿಸಿ
ಭಾರತದ ಈ ಹಳ್ಳಿಯ ಮನೆಗಳಿಗೆ, ಬ್ಯಾಂಕ್ಗೆ ಬಾಗಿಲುಗಳೇ ಇಲ್ಲ, ಕಳ್ಳತನವೂ ನಡೆದಿಲ್ಲ!!
ನಾವೆಲ್ಲಾ ಮನೆ ಕಟ್ಟಿಸುವಾಗ ಮನೆ ಬಾಗಿಲು ಗಟ್ಟಿಯಾಗಿರಬೇಕೆಂದು ಬಯಸುತ್ತೇವೆ, ಇಲ್ಲದಿದ್ದರೆ ಯಾವುದಾದರೂ ಕಳ್ಳ ನಾವಿಲ್ಲದ ಹೊತ್ತಲ್ಲಿ ಒಳ ನುಗ್ಗಬಹುದು ಎಂಬ ಭಯ ಇದ್ದಿದ್ದೇ.

ಇನ್ನು ಬೆಂಗಳೂರಿನಂಥ ಮನೆಗಳಲ್ಲಾದರೆ ಮಲಗುವ ಮುನ್ನ ಹಾಗೂ ಹೊರಗಡೆ ಹೋಗುವ ಮುನ್ನ ಬಾಗಿಲು ಸರಿಯಾಗಿ ಹಾಕಿದೆಯೇ ಎಂದು ಎರಡೆರಡು ಸಲ ಚೆಕ್ ಮಾಡ್ತೀವಿ, ಇನ್ನು ಬ್ಯಾಂಕ್ಗಳಲ್ಲಾದರೆ ತುಂಬಾ ಸೆಕ್ಯೂರಿಟಿ ಇರುತ್ತದೆ.
ಆದರೆ ಭಾರತದ ಮಹಾರಾಷ್ಟ್ರದ ಅಹ್ಮದ್ ನಗರ ಜಿಲ್ಲೆಯಲ್ಲಿ ಶನಿ ಶಿಂಗ್ನಾಪುರ್ ಎಂಬ ಗ್ರಾಮ ಇದೆ. ಈ ಗ್ರಾಮದ ವಿಶೇಷವೆಂದರೆ ಈ ಗ್ರಾಮದ ಯಾವುದೇ ಮನೆಗಳಿಗೇ ಬಾಗಿಲೇ ಇಲ್ಲ, ಮನೆ ಚಿಕ್ಕದಾಗಿರಲಿ ಅಥವಾ ದೊಡ್ಡದಾಗಿರಲಿ ಆದರೆ ಇಲ್ಲಿ ಯಾರ ಮನೆಯಲ್ಲೂ ಬಾಗಿಲುಗಳು ಮಾತ್ರ ಇಲ್ಲ, ಇದರ ಕುರಿತ ಆಸಕ್ತಿಕರ ವಿಷಯಗಳನ್ನು ಇಲ್ಲಿ ನೀಡಿದ್ದೇವೆ ನೋಡಿ...

ಇದುವರೆಗೆ ಒಂದೂ ಕಳ್ಳತನ ನಡೆದಿಲ್ಲ
ಇಲ್ಲಿಯ ಮನೆಗಳಿಗೆ ಬಾಗಿಲು ಇಲ್ಲ, ಆದರೆ ಈ ಗ್ರಾಮದೊಳಗೆ ಬಂದು ಕಳ್ಳತನ ಮಾಡುವ ಧೈರ್ಯ ಮಾತ್ರ ಯಾವುದೇ ಕಳ್ಳನಿಗೆ ಇಲ್ಲ. ಇದುವರೆಗೆ ಈ ಹಳ್ಳಿಯಲ್ಲಿ ಒಂದೇ ಒಂದು ಕಳ್ಳತನ ನಡೆದಿಲ್ಲ. 2010ರಲ್ಲಿ ಒಬ್ಬರು ತಮ್ಮ 35, 00 ಕಳ್ಳತನವಾಗಿದೆ ಎಂದು ಹೇಳಿ ದೂರು ನೀಡಿದ್ದರು. ಆದರೆ ಪರಿಶೀಲಿಸಿದಾಗ ಆ ಕಳ್ಳತನ ಗ್ರಾಮದ ಹೊರಭಾಗದಲ್ಲಿ ನಡೆದಿತ್ತು.

ಇಲ್ಲಿನ ಬ್ಯಾಂಕ್ಗಳಿಗೂ ಬಾಗಿಲುಗಳಿಲ್ಲ
ದೇವರು ಈ ಗ್ರಾಮವನ್ನು ರಕ್ಷಿಸುತ್ತಾನೆ, ಮನೆಗೆ ಬಾಗಿಲುಗಳು ಇಟ್ಟರೆ ಒಳಿತಾಗುವುದಿಲ್ಲ ಎಂಬ ಭಾವನೆ ಗ್ರಾಮಸ್ಥರಲ್ಲಿದೆ. ಗ್ರಾಮಸ್ಥರ ಈ ಭಾವನೆಗೆ ಧಕ್ಕೆಯಾಗದಂತೆ ಅಲ್ಲಿನ ಬ್ಯಾಂಕ್ಗಳಲ್ಲಿ ಕೂಡ ಯಾವುದೇ ಬಾಗಿಲುಗಳಿಲ್ಲ.
ಆದರೆ ಕೂಲಂಕಷವಾಗಿ ನೋಡಿದರೆ ಬ್ಯಾಂಕ್ನಲ್ಲಿ ರಿಮೋಟ್ ಕಂಟ್ರೋಲ್ ಎಲೆಕ್ಟ್ರೋ ಮ್ಯಾಗ್ನೆಟ್ ಲಾಕ್ ಸಿಸ್ಟಮ್ ಇದೆ, ಅಲ್ಲದೆ ಸಂಜೆ ಹಣವನ್ನೆಲ್ಲಾ ಸಮೀಪದ ಬ್ಯಾಂಕ್ಗೆ ವರ್ಗಾಯಿಸಲಾಗುವುದು.

ನಾಮಕಾವಸ್ಥೆಗೆ ಇರುವ ಪೊಲೀಸ್ ಸ್ಟೇಷನ್
ಈ ಊರಲ್ಲಿ ಪೊಲೀಸ್ ಸ್ಟೇಷನ್ ಇರಲಿಲ್ಲ, ಆದರೆ ಸರಕಾರ ಅಲ್ಲೊಂದು ಪೊಲೀಸ್ ಸ್ಟೇಷನ್ ಹಾಕಿದೆ. ಆದರೆ ಆ ಸ್ಟೇಷನ್ ಕೇವಲ ನಾಮಕಾವಸ್ಥೆಗೆ ಇದೆ. ಅಲ್ಲಿ ಯಾವುದೇ ದೂರುಗಳು ದಾಖಲಾಗುತ್ತಿಲ್ಲ. ಇಲ್ಲಿ ಜನರ ನಂಬಿಕೆ ದೊಡ್ಡದಾಗಿದೆ, ಜನರು ಏನೇ ತಪ್ಪು ಮಾಡಲು ಭಯ ಪಡುತ್ತಾರೆ.

ಜನರಲ್ಲಿರುವ ನಂಬಿಕೆ ಏನು?
ಗ್ರಾಮಸ್ಥರು ಹೇಳುವ ಪ್ರಕಾರ ಎಷ್ಟೋ ವರ್ಷಗಳ ಹಿಂದೆ ಆ ಗ್ರಾಮದಲ್ಲಿ ಶನಿ ಪ್ರತ್ಯಕ್ಷವಾಗಿ ಈ ಗ್ರಾಮದ ಮನೆಗಳಿಗೆ ಬಾಗಿಲು ಇರಬಾರದು, ನಾನು ನಿಮ್ಮನ್ನು ರಕ್ಷಣೆ ಮಾಡುತ್ತೇನೆ ಎಂದನಂತೆ, ಅಲ್ಲಿಂದ ಆ ಗ್ರಾಮದ ಮನೆಗಳಿಗೆ ಬಾಗಿಲುಗಳಿಲ್ಲ ಎನ್ನುತ್ತಾರೆ. ಅಲ್ಲದೆ ಅಲ್ಲಿಯ ಜನರ ನಂಬಿಕೆಗೆ ಇದುವರೆಗೆ ಮೋಸವಾಗಿಲ್ಲ, ಆದ್ದರಿಂದ ಶನಿ ಮಹಾತ್ಮ ನಮ್ಮನ್ನು ರಕ್ಷಣೆ ಮಾಡುತ್ತಿದ್ದಾನೆ ಎಂಬ ನಂಬಿಕೆ ಬಲವಾಗಿದೆ.



Click it and Unblock the Notifications