Latest Updates
-
10ನೇ ಅಂತರಾಷ್ಟ್ರೀಯ ಯೋಗ ದಿನ: ಮಳೆಯನ್ನೂ ಮೀರಿ ಕೋಲ್ಕತ್ತಾದಲ್ಲಿ ಯೋಗ ಸಂಭ್ರಮ, ಮನೆಯಲ್ಲೇ ಅಭ್ಯಾಸ ಮಾಡಲು ಇಲ್ಲಿದೆ ಸರಳ ಟಿಪ್ಸ್! -
ಭಾರತ vs ಅಫ್ಘಾನಿಸ್ತಾನ ಪಂದ್ಯ: ಮ್ಯಾಚ್ ನೋಡುವಾಗ ಮನೆಯಲ್ಲಿ ಶಾಂತಿ ಕಾಪಾಡಲು ಈ ಟಿಪ್ಸ್ ಫಾಲೋ ಮಾಡಿ! -
ನಾಳೆ ನೀಟ್ ಮರುಪರೀಕ್ಷೆ: ಮಳೆಗಾಲದ ನಡುವೆ ಪರೀಕ್ಷೆಗೆ ಸಜ್ಜಾಗುವುದು ಹೇಗೆ? ಇಲ್ಲಿದೆ ಫೈನಲ್ ಚೆಕ್ಲಿಸ್ಟ್ -
ಪಿಎಂ-ಕಿಸಾನ್ ಹಣ ಜಮೆ: ರೈತರೇ, ಈ 2,000 ರೂಪಾಯಿಯಲ್ಲಿ ಆರೋಗ್ಯಕರ ಆಹಾರ ಖರೀದಿಸಿ, ಮಧುಮೇಹ ನಿಯಂತ್ರಿಸಿ! -
ಭಾರಿ ಗಾಳಿ-ಮಳೆಯ ಎಚ್ಚರಿಕೆ: ಜೂನ್ 20ರಂದು ನಿಮ್ಮ ಸುರಕ್ಷತೆಗಾಗಿ ಈ ಮುನ್ನೆಚ್ಚರಿಕೆ ಕ್ರಮಗಳನ್ನು ಮರೆಯದಿರಿ! -
ಮಳೆಗಾಲದಲ್ಲಿ ಅಂತರಾಷ್ಟ್ರೀಯ ಯೋಗ ದಿನ: ಹಿರಿಯರು ಸುರಕ್ಷಿತವಾಗಿ ಯೋಗ ಮಾಡುವುದು ಹೇಗೆ? -
ವಿಶ್ವ ಸಂಗೀತ ದಿನ: ಸಂಗಾತಿಯೊಂದಿಗೆ ಮರೆಯಲಾಗದ ಕ್ಷಣ ಕಳೆಯಲು ಇಲ್ಲಿದೆ ಸಿಂಪಲ್ ಪ್ಲಾನ್! -
ಮುಂಬೈನಲ್ಲಿ ತೀವ್ರ ನೀರಿನ ಅಭಾವ: ಬಿಎಂಸಿ ಕಠಿಣ ನಿಯಮಗಳ ನಡುವೆ ನೀರು ಉಳಿಸಲು ಈ ಟಿಪ್ಸ್ ಪಾಲಿಸಿ -
ಮಳೆಗಾಲದಲ್ಲಿ ಸಿಕಲ್ ಸೆಲ್ ಸಮಸ್ಯೆ: ಆರೋಗ್ಯ ಕಾಪಾಡಲು ಈ ಆಹಾರ ಕ್ರಮ ಪಾಲಿಸಿ, ನೋವು ದೂರವಿಡಿ! -
ಟೆಲಿಗ್ರಾಂ ಬ್ಯಾನ್: ಜೂನ್ 22ರವರೆಗೆ ಈ ಆಪ್ಗಳನ್ನು ಬಳಸಿ, ಇಲ್ಲದಿದ್ದರೆ ತೊಂದರೆ ಕಟ್ಟಿಟ್ಟ ಬುತ್ತಿ!
ಧನ, ವೈಭವ ಪ್ರಾಪ್ತಿಗಾಗಿ ಮನೆಯಲ್ಲಿಯೇ ಚೈತ್ರ ಪೌರ್ಣಿಮೆಯನ್ನು ಆಚರಿಸುವುದು ಹೇಗೆ?
ಹಿಂದೂ ಧರ್ಮದಲ್ಲಿ ಪೂರ್ಣಿಮೆಗೆ ವಿಶೇಷ ಮಹತ್ವವನ್ನು ನೀಡಲಾಗಿದೆ. ಪೂರ್ಣಿಮೆ ದಿನದಂದು ಶಿವ ಮತ್ತು ವಿಷ್ಣುವನ್ನು ಉಪವಾಸವಿದ್ದು ಆರಾಧನೆ ಮಾಡಲಾಗುವುದು. ಚೈತ್ರ ಪೂರ್ಣಿಮೆಯಂದು ವಿಷ್ಣುವನ್ನು ಪೂಜಿಸುವುದರಿಂದ ಜೀವನದ ಎಲ್ಲಾ ತೊಂದರೆಗಳು ನಿವಾರಣೆಯಾಗುತ್ತವೆ ಎಂದು ನಂಬಲಾಗಿದೆ.
ಹಿಂದೂ ವರ್ಷದ ಮೊದಲು ಬರುವ ಹುಣ್ಣಿಮೆಯೇ ಚೈತ್ರ ಪೂರ್ಣಿಮೆ. ಇದೇ ದಿನ ಹನುಮಾನ್ ಜಯಂತಿಯನ್ನು ಆಚರಿಸಲಾಗುವುದು. ಅಲ್ಲದೆ ಈ ದಿನ ಸತ್ಯನಾರಾಯಣನ ಉಪವಾಸ ಮಾಡಲಾಗುವುದು. ಚೈತ್ರ ಪೂರ್ಣಿಮೆ ಹಾಗೂ ಚಿತ್ರ ಪೂರ್ಣಿಮೆ ಬೇರೆಯಾಗಿದ್ದು, ಬೇರೆ-ಬೇರೆ ತಿಂಗಳಿನಲ್ಲಿ ಬರುವುದು. 2021ರಲ್ಲಿ ಏಪ್ರಿಲ್ 27ರಂದು ಇರುವುದು ಚೈತ್ರ ಪೂರ್ಣಿಮೆಯಾಗಿದೆ.
ಈ ದಿನ ಉಪವಾಸ ವ್ರತ ಮಾಡಿ ಸತ್ಯನಾರಾಯಣ ಆರಾಧನೆ ಮಾಡಿದರೆ ಧನ, ವೈಭವ ಪ್ರಾಪ್ತಿಯಾಗುವುದು ಎಂದು ಹೇಳಲಾಗುವುದು. ಮನೆಯಲ್ಲಿ ಪೌರ್ಣಿಮೆ ವ್ರತ ಮಾಡುವುದು ಹೇಗೆ, ಈ ದಿನ ಮಾಡುವ ದಾನದ ಮಹತ್ವವೇನು ಎಂದು ಹೇಳಲಾಗಿದೆ ನೋಡಿ:

ಮನೆಯಲ್ಲಿಯೇ ಚೈತ್ರ ಪೌರ್ಣಿಮೆ ವ್ರತ ಮಾಡುವುದು ಹೇಗೆ?
ಚೈತ್ರ ಪೂರ್ಣಿಮೆಯೆಂದು ಸಾಮಾನ್ಯವಾಗಿ ಪುಣ್ಯ ನದಿಯಲ್ಲಿ ಹೋಗಿ ಸ್ನಾನ ಮಾಡಿ ವ್ರತ ನಿಯಮಗಳನ್ನು ಪಾಲಿಸಲಾಗುವುದು. ಆದರೆ ಈ ಬಾರಿ ಕೊರೊನಾ ಕಾರಣ ನದಿಗೆ ಹೋಗಿ ಸ್ನಾನ ಮಾಡಬೇಡಿ, ಮನೆಯಲ್ಲಿ ನೀವು ಸ್ನಾನ ಮಾಡುವ ನೀರಿಗೆ ಸ್ವಲ್ಪ ಗಂಗಾ ಜಲವನ್ನು ಹಾಕಿ ಸ್ನಾನ ಮಾಡಿ. ನಂತರ ಉಪವಾಸವಿದ್ದು ವಿಷ್ಣುವನ್ನು ಹಾಗೂ ಆಂಜನೇಯನನ್ನು ಆರಾಧಿಸಿ.
ವಿಷ್ಣು ಮಂತ್ರ ಹಾಗೂ ಹನುಮಾನ್ ಚಾಲೀಸಾ ಪಠಿಸಿ

ವಿಷ್ಣು ಮಂತ್ರ
ಓಂ ನಮೋ ಭಗವತೇ ವಾಸುದೇವಾಯ ನಮಃ
ಓಂ ಶ್ರೀಮ್ ಕೃಷ್ಣಾಯ ಶ್ರೀಮ್ ಶ್ರೀಮ್ ಶ್ರೀಮ್ ಗೋವಿಂದಾಯ ಗೋಪಾಲಯ ಗೋಲೋಕಾ ಸುಂದರಾಯ ಸತ್ಯಾಯ ಪರಮಾತ್ಮನೇ, ಪಾರಾಯ ವೈಖನಸಾಯ ವೈರಾಜಮೂರ್ತಯೇ ಮೇಶಾತ್ಮಾನ್ ಶ್ರೀಮ್ ನರಸಿಂಹವಾಸ ನಮಃ

ಹನುಮಾನ್ ಚಾಲೀಸ ಪಠಿಸಿ.
ಹನುಮಾನ್ ಚಾಲೀಸಾ ಪಠಣೆ ಮಾಡುವ ಮುನ್ನ ಹನುಮಂತ್ರನ ಫೋಟದ ಮುಂದೆ ಕಮಂಡಲದಲ್ಲಿ ನೀರನನ್ನು ಇಡಿ, ಪಠಣೆ ಮುಗಿದ ಬಳಿಕ ಆ ನೀರನ್ನು ಪ್ರಸಾದದ ರೂಪದಲ್ಲಿ ಸೇವಿಸಬೇಕು. ಅಲ್ಲದೆ ಮನೆಯಲ್ಲಿ ಈ ಆ ನೀರನ್ನು ಸಿಂಪಡಿಸಿ, ಇದರಿಂದ ಮನೆಯಲ್ಲಿ ಧನಾತ್ಮಕ ಶಕ್ತಿ ಹೆಚ್ಚಾಗುವುದು.
ಚಂದ್ರನನ್ನು ಪೂಜಿಸಿ
ಚೈತ್ರ ಪೌರ್ಣಿಮೆಯೆಂದು ಚಂದ್ರನನ್ನು ಪೂಜಿಸುವುದರಿಂದ ಚಂದ್ರದೋಷವಿದ್ದರೆ ಅದು ದೂರವಾಗುವುದು. ನಂತರ ಸತ್ಯನಾರಾಯಣ ಕತೆ ಓದಿ.

ಚೈತ್ರ ಪೌರ್ಣಿಮೆಯಂದು ಮಾಡುವ ದಾನ
ಧಾರ್ಮಿಕ ನಂಬಿಕೆಗಳ ಪ್ರಕಾರ ಚೈತ್ರ ಪೌರ್ಣಿಮೆಯಂದು ಮಾಡುವ ದಾನಕ್ಕೆ ದುಪ್ಪಟ್ಟು ಫಲ ಸಿಗುವುದು. ಈ ದಿನ ನಿರ್ಗತಿಕರಿಗೆ ಹಣ ನೀಡಿ. ಈ ದಿನ ಬೆಳಗ್ಗೆ ಗಾಯತ್ರಿ ಮಂತ್ರದೊಂದಿಗೆ ಸೂರ್ಯನಿಗೆ ಆರ್ಘ್ಯ ನೀಡಿ. ಬಟ್ಟೆ, ಅಕ್ಕಿ, ತರಕಾರಿಗಳನ್ನು ದಾನ ಮಾಡಿ.



Click it and Unblock the Notifications