Latest Updates
-
ಜಗನ್ನಾಥ ರಥಯಾತ್ರೆ 2026: ಸಂಚಾರ ಮಾರ್ಗ ಬದಲಾವಣೆ, ಭಕ್ತರಿಗಾಗಿ ಇಲ್ಲಿದೆ ಮಹತ್ವದ ಮಾಹಿತಿ! -
ನೀಟ್ ಪರೀಕ್ಷೆಯ ಆತಂಕವೇ? ಈ 6 ನಿಮಿಷದ ವ್ಯಾಯಾಮ ನಿಮ್ಮ ಒತ್ತಡವನ್ನು ಮರೆಸುತ್ತದೆ! -
ಮಧ್ಯಪ್ರದೇಶ UCC: ಲಿವ್-ಇನ್ ಜೋಡಿಗಳಿಗೆ ಕಡ್ಡಾಯ ನೋಂದಣಿ, ನಿಯಮ ಮೀರಿದರೆ ಕಾದಿದೆ ಸಂಕಷ್ಟ! -
ಹಾಲಿನಲ್ಲಿ ವಿಷಕಾರಿ ಕಲಬೆರಕೆ ಪತ್ತೆ: ನಿಮ್ಮ ಮನೆಯ ಹಾಲಿನ ಸುರಕ್ಷತೆ ಪರೀಕ್ಷಿಸುವುದು ಹೇಗೆ? -
ಬೆಂಗಳೂರಿನಲ್ಲಿ 12 ಗಂಟೆಗಳ ಕಾಲ ನೀರಿನ ಕಡಿತ: ನಾಳೆ ನೀರು ಉಳಿಸಲು ಈ ಟಿಪ್ಸ್ ಫಾಲೋ ಮಾಡಿ! -
ಮಳೆಗಾಲದಲ್ಲಿ ಜಿಮ್ಗೆ ಹೋಗಲು ಸಾಧ್ಯವಿಲ್ಲವೇ? ಮನೆಯಲ್ಲೇ ಫಿಟ್ ಆಗಿರಲು 8 ನಿಮಿಷದ ಈ ವರ್ಕೌಟ್ ಟ್ರೈ ಮಾಡಿ! -
ಮದುವೆಗೆ ಮುನ್ನ ಎಚ್ಚರ: ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ವರದಕ್ಷಿಣೆ ಮತ್ತು ಉಡುಗೊರೆಗಳ ನಡುವಿನ ವ್ಯತ್ಯಾಸವೇನು? -
ಬೆಂಗಳೂರಿನಲ್ಲಿ ಮಳೆ ಬಿಡುವು: ನಿಮ್ಮ ಬಾಲ್ಕನಿ ಗಾರ್ಡನ್ ಗಿಡಗಳನ್ನು ರಕ್ಷಿಸಲು ಈ ಸರಳ ಟಿಪ್ಸ್ ಪಾಲಿಸಿ -
ಟೊಮೆಟೊ, ಶುಂಠಿ ಬೆಲೆ ಏರಿಕೆ: ಅಡುಗೆ ಮನೆ ಬಜೆಟ್ ಉಳಿಸಲು ಇಲ್ಲಿದೆ ಸ್ಮಾರ್ಟ್ ಟಿಪ್ಸ್! -
2026ರಲ್ಲಿ ಚಿನ್ನದ ಆಭರಣ: ತೂಕದಲ್ಲಿ ಕಡಿಮೆ ಖರೀದಿ, ಖರ್ಚಿ ನಲ್ಲಿ ಹೆಚ್ಚು — ಕುಟುಂಬಗಳ ಖರೀ ದಿ ಹೇಗೆ ಬದಲಾಗುತ್ತಿದೆ?
ಧನ, ವೈಭವ ಪ್ರಾಪ್ತಿಗಾಗಿ ಮನೆಯಲ್ಲಿಯೇ ಚೈತ್ರ ಪೌರ್ಣಿಮೆಯನ್ನು ಆಚರಿಸುವುದು ಹೇಗೆ?
ಹಿಂದೂ ಧರ್ಮದಲ್ಲಿ ಪೂರ್ಣಿಮೆಗೆ ವಿಶೇಷ ಮಹತ್ವವನ್ನು ನೀಡಲಾಗಿದೆ. ಪೂರ್ಣಿಮೆ ದಿನದಂದು ಶಿವ ಮತ್ತು ವಿಷ್ಣುವನ್ನು ಉಪವಾಸವಿದ್ದು ಆರಾಧನೆ ಮಾಡಲಾಗುವುದು. ಚೈತ್ರ ಪೂರ್ಣಿಮೆಯಂದು ವಿಷ್ಣುವನ್ನು ಪೂಜಿಸುವುದರಿಂದ ಜೀವನದ ಎಲ್ಲಾ ತೊಂದರೆಗಳು ನಿವಾರಣೆಯಾಗುತ್ತವೆ ಎಂದು ನಂಬಲಾಗಿದೆ.
ಹಿಂದೂ ವರ್ಷದ ಮೊದಲು ಬರುವ ಹುಣ್ಣಿಮೆಯೇ ಚೈತ್ರ ಪೂರ್ಣಿಮೆ. ಇದೇ ದಿನ ಹನುಮಾನ್ ಜಯಂತಿಯನ್ನು ಆಚರಿಸಲಾಗುವುದು. ಅಲ್ಲದೆ ಈ ದಿನ ಸತ್ಯನಾರಾಯಣನ ಉಪವಾಸ ಮಾಡಲಾಗುವುದು. ಚೈತ್ರ ಪೂರ್ಣಿಮೆ ಹಾಗೂ ಚಿತ್ರ ಪೂರ್ಣಿಮೆ ಬೇರೆಯಾಗಿದ್ದು, ಬೇರೆ-ಬೇರೆ ತಿಂಗಳಿನಲ್ಲಿ ಬರುವುದು. 2021ರಲ್ಲಿ ಏಪ್ರಿಲ್ 27ರಂದು ಇರುವುದು ಚೈತ್ರ ಪೂರ್ಣಿಮೆಯಾಗಿದೆ.
ಈ ದಿನ ಉಪವಾಸ ವ್ರತ ಮಾಡಿ ಸತ್ಯನಾರಾಯಣ ಆರಾಧನೆ ಮಾಡಿದರೆ ಧನ, ವೈಭವ ಪ್ರಾಪ್ತಿಯಾಗುವುದು ಎಂದು ಹೇಳಲಾಗುವುದು. ಮನೆಯಲ್ಲಿ ಪೌರ್ಣಿಮೆ ವ್ರತ ಮಾಡುವುದು ಹೇಗೆ, ಈ ದಿನ ಮಾಡುವ ದಾನದ ಮಹತ್ವವೇನು ಎಂದು ಹೇಳಲಾಗಿದೆ ನೋಡಿ:

ಮನೆಯಲ್ಲಿಯೇ ಚೈತ್ರ ಪೌರ್ಣಿಮೆ ವ್ರತ ಮಾಡುವುದು ಹೇಗೆ?
ಚೈತ್ರ ಪೂರ್ಣಿಮೆಯೆಂದು ಸಾಮಾನ್ಯವಾಗಿ ಪುಣ್ಯ ನದಿಯಲ್ಲಿ ಹೋಗಿ ಸ್ನಾನ ಮಾಡಿ ವ್ರತ ನಿಯಮಗಳನ್ನು ಪಾಲಿಸಲಾಗುವುದು. ಆದರೆ ಈ ಬಾರಿ ಕೊರೊನಾ ಕಾರಣ ನದಿಗೆ ಹೋಗಿ ಸ್ನಾನ ಮಾಡಬೇಡಿ, ಮನೆಯಲ್ಲಿ ನೀವು ಸ್ನಾನ ಮಾಡುವ ನೀರಿಗೆ ಸ್ವಲ್ಪ ಗಂಗಾ ಜಲವನ್ನು ಹಾಕಿ ಸ್ನಾನ ಮಾಡಿ. ನಂತರ ಉಪವಾಸವಿದ್ದು ವಿಷ್ಣುವನ್ನು ಹಾಗೂ ಆಂಜನೇಯನನ್ನು ಆರಾಧಿಸಿ.
ವಿಷ್ಣು ಮಂತ್ರ ಹಾಗೂ ಹನುಮಾನ್ ಚಾಲೀಸಾ ಪಠಿಸಿ

ವಿಷ್ಣು ಮಂತ್ರ
ಓಂ ನಮೋ ಭಗವತೇ ವಾಸುದೇವಾಯ ನಮಃ
ಓಂ ಶ್ರೀಮ್ ಕೃಷ್ಣಾಯ ಶ್ರೀಮ್ ಶ್ರೀಮ್ ಶ್ರೀಮ್ ಗೋವಿಂದಾಯ ಗೋಪಾಲಯ ಗೋಲೋಕಾ ಸುಂದರಾಯ ಸತ್ಯಾಯ ಪರಮಾತ್ಮನೇ, ಪಾರಾಯ ವೈಖನಸಾಯ ವೈರಾಜಮೂರ್ತಯೇ ಮೇಶಾತ್ಮಾನ್ ಶ್ರೀಮ್ ನರಸಿಂಹವಾಸ ನಮಃ

ಹನುಮಾನ್ ಚಾಲೀಸ ಪಠಿಸಿ.
ಹನುಮಾನ್ ಚಾಲೀಸಾ ಪಠಣೆ ಮಾಡುವ ಮುನ್ನ ಹನುಮಂತ್ರನ ಫೋಟದ ಮುಂದೆ ಕಮಂಡಲದಲ್ಲಿ ನೀರನನ್ನು ಇಡಿ, ಪಠಣೆ ಮುಗಿದ ಬಳಿಕ ಆ ನೀರನ್ನು ಪ್ರಸಾದದ ರೂಪದಲ್ಲಿ ಸೇವಿಸಬೇಕು. ಅಲ್ಲದೆ ಮನೆಯಲ್ಲಿ ಈ ಆ ನೀರನ್ನು ಸಿಂಪಡಿಸಿ, ಇದರಿಂದ ಮನೆಯಲ್ಲಿ ಧನಾತ್ಮಕ ಶಕ್ತಿ ಹೆಚ್ಚಾಗುವುದು.
ಚಂದ್ರನನ್ನು ಪೂಜಿಸಿ
ಚೈತ್ರ ಪೌರ್ಣಿಮೆಯೆಂದು ಚಂದ್ರನನ್ನು ಪೂಜಿಸುವುದರಿಂದ ಚಂದ್ರದೋಷವಿದ್ದರೆ ಅದು ದೂರವಾಗುವುದು. ನಂತರ ಸತ್ಯನಾರಾಯಣ ಕತೆ ಓದಿ.

ಚೈತ್ರ ಪೌರ್ಣಿಮೆಯಂದು ಮಾಡುವ ದಾನ
ಧಾರ್ಮಿಕ ನಂಬಿಕೆಗಳ ಪ್ರಕಾರ ಚೈತ್ರ ಪೌರ್ಣಿಮೆಯಂದು ಮಾಡುವ ದಾನಕ್ಕೆ ದುಪ್ಪಟ್ಟು ಫಲ ಸಿಗುವುದು. ಈ ದಿನ ನಿರ್ಗತಿಕರಿಗೆ ಹಣ ನೀಡಿ. ಈ ದಿನ ಬೆಳಗ್ಗೆ ಗಾಯತ್ರಿ ಮಂತ್ರದೊಂದಿಗೆ ಸೂರ್ಯನಿಗೆ ಆರ್ಘ್ಯ ನೀಡಿ. ಬಟ್ಟೆ, ಅಕ್ಕಿ, ತರಕಾರಿಗಳನ್ನು ದಾನ ಮಾಡಿ.



Click it and Unblock the Notifications