Latest Updates
-
ಮದುವೆಗೆ ಮುನ್ನ ಎಚ್ಚರ: ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ವರದಕ್ಷಿಣೆ ಮತ್ತು ಉಡುಗೊರೆಗಳ ನಡುವಿನ ವ್ಯತ್ಯಾಸವೇನು? -
ಬೆಂಗಳೂರಿನಲ್ಲಿ ಮಳೆ ಬಿಡುವು: ನಿಮ್ಮ ಬಾಲ್ಕನಿ ಗಾರ್ಡನ್ ಗಿಡಗಳನ್ನು ರಕ್ಷಿಸಲು ಈ ಸರಳ ಟಿಪ್ಸ್ ಪಾಲಿಸಿ -
ಟೊಮೆಟೊ, ಶುಂಠಿ ಬೆಲೆ ಏರಿಕೆ: ಅಡುಗೆ ಮನೆ ಬಜೆಟ್ ಉಳಿಸಲು ಇಲ್ಲಿದೆ ಸ್ಮಾರ್ಟ್ ಟಿಪ್ಸ್! -
2026ರಲ್ಲಿ ಚಿನ್ನದ ಆಭರಣ: ತೂಕದಲ್ಲಿ ಕಡಿಮೆ ಖರೀದಿ, ಖರ್ಚಿ ನಲ್ಲಿ ಹೆಚ್ಚು — ಕುಟುಂಬಗಳ ಖರೀ ದಿ ಹೇಗೆ ಬದಲಾಗುತ್ತಿದೆ? -
ನಥಿಂಗ್ ಫೋನ್ (4b) RCB ಎಡಿಷನ್ ಸೇಲ್ ಶುರು: ಫ್ಯಾನ್ಸ್ ಮಿಸ್ ಮಾಡ್ಬೇಡಿ, ಇಂದೇ ಖರೀದಿಸಿ! -
ಆಷಾಢ ಅಮಾವಾಸ್ಯೆ: ಉಪವಾಸದ ದಿನ ಸುಸ್ತಾಗದಂತೆ ಇರಲು ಈ 7 ನಿಮಿಷದ ವ್ಯಾಯಾಮ ಟ್ರೈ ಮಾಡಿ! -
ಮಳೆಗಾಲದ ಮದುವೆ: ನಿಮ್ಮ ಸಂಭ್ರಮಕ್ಕೆ ಅಡ್ಡಿಯಾಗದಂತೆ ಪ್ಲಾನ್ ಮಾಡುವುದು ಹೇಗೆ? -
ಮುಂಗಾರು ಮಳೆ: ನಿಮ್ಮ ಬಾಲ್ಕನಿ ಮತ್ತು ಎಸಿ ಸುರಕ್ಷಿತವೇ? ಈ 10 ನಿಮಿಷದ ಕೆಲಸ ಜೀವ ಉಳಿಸಬಹುದು! -
ಮಳೆಗಾಲದಲ್ಲಿ ಆರೋಗ್ಯದ ರಕ್ಷಣೆ: ಕೇವಲ 20 ರೂಪಾಯಿಯಲ್ಲಿ ಸಿಗುವ ಈ ಆಹಾರಗಳು ನಿಮ್ಮನ್ನು ರೋಗಗಳಿಂದ ಕಾಪಾಡುತ್ತವೆ! -
ಪುರಿ ರಥಯಾತ್ರೆ 2026: ಭಕ್ತರೇ ಎಚ್ಚರ! ಸುಗಮ ದರ್ಶನಕ್ಕೆ ಇಲ್ಲಿವೆ ಪ್ರಮುಖ ಟಿಪ್ಸ್
ಗಂಡನ ಶ್ರೇಯೋಭಿವೃದ್ಧಿಗಾಗಿ ಭೀಮನ ಅಮವಾಸ್ಯೆ ಪೂಜಾ ವಿಧಿಗಳೇನು? ನಿಯಮಗಳೇನು?
ಆಷಾಢ ಅಮವಾಸ್ಯೆ, ಭೀಮನ ಅಮವಾಸ್ಯೆಯನ್ನು ಜುಲೈ 28ರಂದು ಆಚರಿಸಲಾಗುತ್ತಿದೆ. ಈ ದಿನ ಮುತ್ತೈದೆಯರು ಶ್ರೀ ಜ್ಯೋತಿರ್ಭೀಮೇಶ್ವರ ವ್ರತವನ್ನು ಆಚರಿಸುತ್ತಾರೆ, ಇದನ್ನು ಭೀಮನ ಅಮಾವಾಸ್ಯೆವ್ರತ, ಜ್ಯೋತಿಸ್ತಂಭ ವ್ರತ ಎಂದು ಕೂಡ ಕರೆಯಲಾಗುವುದು.
ಈ ದಿನ ಮುತ್ತೈದೆಯರು ಕೈಗೆ ಕಂಕಣ ಕಟ್ಟಿಕೊಂಡು ಜ್ಯೋರ್ತಿರ್ಭೀಮೇಶ್ವರನ್ನು ಧ್ಯಾನಿಸಿ, ವ್ರತ ಮಾಡುತ್ತಾರೆ. ಈ ವ್ರತವನ್ನು ರಾಹುಕಾಲದಲ್ಲಿ ಹೊರತು ಪಡೆಸಿ
ಉಳಿದ ಸಮಯದಲ್ಲಿ ಕೈಗೊಳ್ಳಬಹುದು.
2022ರಲ್ಲಿ ಭೀಮನಅಮಾವಾಸ್ಯೆ ಪೂಜೆಗೆ ಶುಭ ಸಮಯ ಹಾಗೂ ಪೂಜಾ ವಿಧಾನಗಳ ಬಗ್ಗೆ ತಿಳಿಯೋಣ:

ಭೀಮನ ಅಮಾವಾಸ್ಯೆ ಪೂಜೆಗೆ ಶುಭ ಸಮಯ
ಭೀಮನ ಅಮಾವಾಸ್ಯೆ ಶುಭ ಮುಹೂರ್ತ: ಜುಲೈ 27, ರಾತ್ರಿ 9:11ರಿಂದ
ಭೀಮನ ಅಮಾವಾಸ್ಯೆ ಮುಕ್ತಾಯ: ಜುಲೈ 28 ಗುರುವಾರ ರಾತ್ರಿ 11:24ಕ್ಕೆ
ರಾಹುಕಾಲ ಹೊರತು ಪಡಿಸಿ ಯಾವುದೇ ಸಮಯದಲ್ಲಿ ಪೂಜೆಯನ್ನು ಮಾಡಬಹುದು.

ಯಾರು ಆಚರಿಸುತ್ತಾರೆ?
ಕನ್ಯೆಯರು, ನವಾಹಿತ ಹೆಣ್ಮಕ್ಕಳು ಭೀಮನ ಅಮವಾಸ್ಯೆ ಮಾಡುತ್ತಾರೆ. ಹೆಣ್ಮಕ್ಕಳು ಒಳ್ಳೆಯ ಬಾಳ ಸಂಗಾತಿಗಾಗಿ ಈ ವ್ರತ ಮಾಡಿದರೆ, ಮುತ್ತೈದೆಯರು ಪತಿಯ ಆಯುಸ್ಸು, ಆರೋಗ್ಯಕ್ಕಾಗಿ ಈ ವ್ರತ ಮಾಡುತ್ತಾರೆ.
ಈ ವ್ರತವನ್ನು ಒಮ್ಮೆ ಮಾಡಿದರೆ ಐದು, ಒಂಭತ್ತು, 16 ವರ್ಷ ಮಾಡಬೇಕು ಎಂಬ ನಿಯಮವಿದೆ.
ನವ ವಿವಾಹಿತ ಹೆಣ್ಮಕ್ಕಳು ಆಷಾಢದಲ್ಲಿ ತಾಯಿ ಮನೆಗೆ ಹೋಗುವ ಪದ್ಧತಿ ಇದೆ. ಭೀಮನ ಅಮಾವಾಸ್ಯೆಗೆ ಹಿಂತಿರುಗಿ, ಗಂಡನ ಪಾದ ಮುಟ್ಟಿ ನಮಸ್ಕರಿಸಿ ಈ ವ್ರತ ಮಾಡುತ್ತಾರೆ.

ಪೂಜಾ ವಿಧಾನ:
ಒಂದು ತಟ್ಟೆಯಲ್ಲಿ ಧಾನ್ಯ ರಾಶಿ (ಅಕ್ಕಿ) ಹಾಕಿ , ಅದರ ಮೇಲೆ 2 ದೀಪದ ಕಂಭ ಇಡಬೇಕು. ತುಪ್ಪ ಹಾಕಿ ದೀಪ ಹಚ್ಚಬೇಕು . ಈ ದೀಪಸ್ತಂಭದಲ್ಲಿ ಈಶ್ವರ ಪಾರ್ವತಿಯನ್ನು ಆವಾಹನೆ ಮಾಡಿ ಪೂಜೆ ಮಾಡಬೇಕು .
ಪೂಜಾ ಸಾಮಾಗ್ರಿಗಳು:
ಮಣೆ / ಮಂಟಪ, ಭೀಮೇಶ್ವರ ದೇವರ ಪಟ * ನಂದಾ ದೀಪ, ತುಪ್ಪ, ಎಣ್ಣೆ, ದೀಪಕ್ಕೆ ಹಾಕುವ ಬತ್ತಿ
* ಘಂಟೆ, ಪಂಚಪಾತ್ರೆ, ಉದ್ದರಣೆ, ಅರ್ಘ್ಯ ಪಾತ್ರೆ, ನೀರು
* ಅರಿಶಿನ, ಕುಂಕುಮ, ಮಂತ್ರಾಕ್ಷತೆ
* ಶ್ರೀಗಂಧ, ಊದಿನ ಕಡ್ಡಿ
* ವಿವಿಧ ಹೂವು, ಬಿಲ್ವ ಪತ್ರೆ, ಗೆಜ್ಜೆ ವಸ್ತ್ರ
* ವೀಳ್ಯದ ಎಲೆ, ಅಡಿಕೆ, ಹಣ್ಣು , ತೆಂಗಿನಕಾಯಿ,ದಕ್ಷಿಣೆ
* ನೈವೇದ್ಯ - ಪಾಯಸ, ಹಣ್ಣು..ಭಂಡಾರಕ್ಕೆ ಮಾಡಿದ ಹಿಟ್ಟಿನ ಪದಾರ್ಥ
*ಆರತಿ ತಟ್ಟೆ, ಹಲಗಾರತಿ, ಕರ್ಪೂರ, ಮಂಗಳಾರತಿ ಬತ್ತಿ.
9 ಗಂಟಿನ ಗೌರಿ ದಾರ ಇಟ್ಟು ಪೂಜೆ ಮಾಡಬೇಕು, ಪೂಜೆ ನಂತರ ಕೈಗೆ ಕಟ್ಟಿಕೊಳ್ಳಬೇಕು. ಸಂಕಲ್ಪದಿಂದ ಮೊದಲುಗೊಂಡು ಗಣಪತಿ ಪೂಜೆ ಮಾಡಿ ನಂತರ ಭೀಮೆಶ್ವರನ ಪೂಜೆ ಮಾಡಬೇಕು. ಗಣಪತಿ ಅಷ್ಟೋತ್ತರ, ಶಿವ ಅಷ್ಟೋತ್ತರ, ದೇವರ ಆವಾಹನೆ,ಸ್ಥಾಪನೆ, ಅರ್ಚಣೆ, ಹೂವು, ನೈವೇದ್ಯ ಅರ್ಪಣೆ, ಆರತಿಯೊಂದಿಗೆ ಒಂದು ಹಂತ ಪೂಜೆ ಸಮಾಪ್ತಿಗೊಳಿಸಬಹುದು.



Click it and Unblock the Notifications