Latest Updates
-
ಬೆಂಗಳೂರಿನ ನೀರಿನ ಅಭಾವ: ರೂಮ್ಮೇಟ್ಗಳ ಜಗಳ ತಪ್ಪಿಸಲು ಈ 'ಮೈಕ್ರೋ-ಸ್ಕ್ರಿಪ್ಟ್' ಟ್ರಿಕ್ ಬಳಸಿ! -
ಚೆನ್ನೈ ಮಳೆ ಎಚ್ಚರಿಕೆ: ನಿಮ್ಮ ಮನೆಯನ್ನು ಸುರಕ್ಷಿತವಾಗಿಡಲು ಕೇವಲ 15 ನಿಮಿಷದ ಈ ಟಿಪ್ಸ್ ಸಾಕು! -
ಅಮರನಾಥ ಯಾತ್ರೆ 2026: ಹಿಮಾಲಯದ ಕಡಿದಾದ ಹಾದಿಯಲ್ಲಿ ಆರೋಗ್ಯ ಕಾಪಾಡಿಕೊಳ್ಳಲು ಈ ಆಹಾರ ಕ್ರಮಗಳನ್ನು ಮರೆಯದಿರಿ! -
ಮೊಹರಂ ಮೆರವಣಿಗೆ: ಇಂದು ನಿಮ್ಮ ನಗರದಲ್ಲಿ ಟ್ರಾಫಿಕ್ ಸಮಸ್ಯೆ? ಹೊರಡುವ ಮುನ್ನ ಈ ಅಪ್ಡೇಟ್ ನೋಡಿ -
ಮುಂಬೈ ನೀರಿನ ಕಡಿತ: ನೀರು ಉಳಿಸಿ ಫಿಟ್ ಆಗಿರಲು 12 ನಿಮಿಷದ ವ್ಯಾಯಾಮ ಮತ್ತು ಸ್ನಾನದ ಟಿಪ್ಸ್! -
ಬೆಂಗಳೂರು ಮೆಟ್ರೋ ವ್ಯತ್ಯಯ: ಆಫೀಸ್ ತಲುಪಲು ತಡವಾಗುತ್ತಿದೆಯೇ? ಈ ಟಿಪ್ಸ್ ಫಾಲೋ ಮಾಡಿ! -
ಮಳೆಗಾಲದ ತೇವಾಂಶದಿಂದ ನಿಮ್ಮ ಮನೆ ಮತ್ತು ವಸ್ತುಗಳನ್ನು ರಕ್ಷಿಸಲು ಇಲ್ಲಿವೆ ಸರಳ ಟಿಪ್ಸ್! -
ಮುಂಬೈ ಮಳೆಗಾಲದಲ್ಲಿ ಆರೋಗ್ಯವಾಗಿರಬೇಕೆ? ರಸ್ತೆ ಬದಿಯ ತಿಂಡಿ ತಿನ್ನುವ ಮುನ್ನ ಈ ಎಚ್ಚರಿಕೆ ವಹಿಸಿ! -
ಭಾರತ-ಐರ್ಲೆಂಡ್ ಮೊದಲ ಟಿ20: ಬೆಲ್ಫಾಸ್ಟ್ನಲ್ಲಿ ಮಳೆ ಕಾಟ, ಪಂದ್ಯ ನಡೆಯುತ್ತಾ? ಇಲ್ಲಿದೆ ಪಿಚ್ ಮತ್ತು ಹವಾಮಾನ ವರದಿ -
ವಿಶ್ವ ವಿಟಲಿಗೋ ದಿನ 2026: ಚರ್ಮದ ಆರೋಗ್ಯಕ್ಕಾಗಿ ನೀವು ಪಾಲಿಸಬೇಕಾದ 'ಯುವಿ-ಸೇಫ್' ದಿನಚರಿ ಇಲ್ಲಿದೆ!
ಗಂಡನ ಶ್ರೇಯೋಭಿವೃದ್ಧಿಗಾಗಿ ಭೀಮನ ಅಮವಾಸ್ಯೆ ಪೂಜಾ ವಿಧಿಗಳೇನು? ನಿಯಮಗಳೇನು?
ಆಷಾಢ ಅಮವಾಸ್ಯೆ, ಭೀಮನ ಅಮವಾಸ್ಯೆಯನ್ನು ಜುಲೈ 28ರಂದು ಆಚರಿಸಲಾಗುತ್ತಿದೆ. ಈ ದಿನ ಮುತ್ತೈದೆಯರು ಶ್ರೀ ಜ್ಯೋತಿರ್ಭೀಮೇಶ್ವರ ವ್ರತವನ್ನು ಆಚರಿಸುತ್ತಾರೆ, ಇದನ್ನು ಭೀಮನ ಅಮಾವಾಸ್ಯೆವ್ರತ, ಜ್ಯೋತಿಸ್ತಂಭ ವ್ರತ ಎಂದು ಕೂಡ ಕರೆಯಲಾಗುವುದು.
ಈ ದಿನ ಮುತ್ತೈದೆಯರು ಕೈಗೆ ಕಂಕಣ ಕಟ್ಟಿಕೊಂಡು ಜ್ಯೋರ್ತಿರ್ಭೀಮೇಶ್ವರನ್ನು ಧ್ಯಾನಿಸಿ, ವ್ರತ ಮಾಡುತ್ತಾರೆ. ಈ ವ್ರತವನ್ನು ರಾಹುಕಾಲದಲ್ಲಿ ಹೊರತು ಪಡೆಸಿ
ಉಳಿದ ಸಮಯದಲ್ಲಿ ಕೈಗೊಳ್ಳಬಹುದು.
2022ರಲ್ಲಿ ಭೀಮನಅಮಾವಾಸ್ಯೆ ಪೂಜೆಗೆ ಶುಭ ಸಮಯ ಹಾಗೂ ಪೂಜಾ ವಿಧಾನಗಳ ಬಗ್ಗೆ ತಿಳಿಯೋಣ:

ಭೀಮನ ಅಮಾವಾಸ್ಯೆ ಪೂಜೆಗೆ ಶುಭ ಸಮಯ
ಭೀಮನ ಅಮಾವಾಸ್ಯೆ ಶುಭ ಮುಹೂರ್ತ: ಜುಲೈ 27, ರಾತ್ರಿ 9:11ರಿಂದ
ಭೀಮನ ಅಮಾವಾಸ್ಯೆ ಮುಕ್ತಾಯ: ಜುಲೈ 28 ಗುರುವಾರ ರಾತ್ರಿ 11:24ಕ್ಕೆ
ರಾಹುಕಾಲ ಹೊರತು ಪಡಿಸಿ ಯಾವುದೇ ಸಮಯದಲ್ಲಿ ಪೂಜೆಯನ್ನು ಮಾಡಬಹುದು.

ಯಾರು ಆಚರಿಸುತ್ತಾರೆ?
ಕನ್ಯೆಯರು, ನವಾಹಿತ ಹೆಣ್ಮಕ್ಕಳು ಭೀಮನ ಅಮವಾಸ್ಯೆ ಮಾಡುತ್ತಾರೆ. ಹೆಣ್ಮಕ್ಕಳು ಒಳ್ಳೆಯ ಬಾಳ ಸಂಗಾತಿಗಾಗಿ ಈ ವ್ರತ ಮಾಡಿದರೆ, ಮುತ್ತೈದೆಯರು ಪತಿಯ ಆಯುಸ್ಸು, ಆರೋಗ್ಯಕ್ಕಾಗಿ ಈ ವ್ರತ ಮಾಡುತ್ತಾರೆ.
ಈ ವ್ರತವನ್ನು ಒಮ್ಮೆ ಮಾಡಿದರೆ ಐದು, ಒಂಭತ್ತು, 16 ವರ್ಷ ಮಾಡಬೇಕು ಎಂಬ ನಿಯಮವಿದೆ.
ನವ ವಿವಾಹಿತ ಹೆಣ್ಮಕ್ಕಳು ಆಷಾಢದಲ್ಲಿ ತಾಯಿ ಮನೆಗೆ ಹೋಗುವ ಪದ್ಧತಿ ಇದೆ. ಭೀಮನ ಅಮಾವಾಸ್ಯೆಗೆ ಹಿಂತಿರುಗಿ, ಗಂಡನ ಪಾದ ಮುಟ್ಟಿ ನಮಸ್ಕರಿಸಿ ಈ ವ್ರತ ಮಾಡುತ್ತಾರೆ.

ಪೂಜಾ ವಿಧಾನ:
ಒಂದು ತಟ್ಟೆಯಲ್ಲಿ ಧಾನ್ಯ ರಾಶಿ (ಅಕ್ಕಿ) ಹಾಕಿ , ಅದರ ಮೇಲೆ 2 ದೀಪದ ಕಂಭ ಇಡಬೇಕು. ತುಪ್ಪ ಹಾಕಿ ದೀಪ ಹಚ್ಚಬೇಕು . ಈ ದೀಪಸ್ತಂಭದಲ್ಲಿ ಈಶ್ವರ ಪಾರ್ವತಿಯನ್ನು ಆವಾಹನೆ ಮಾಡಿ ಪೂಜೆ ಮಾಡಬೇಕು .
ಪೂಜಾ ಸಾಮಾಗ್ರಿಗಳು:
ಮಣೆ / ಮಂಟಪ, ಭೀಮೇಶ್ವರ ದೇವರ ಪಟ * ನಂದಾ ದೀಪ, ತುಪ್ಪ, ಎಣ್ಣೆ, ದೀಪಕ್ಕೆ ಹಾಕುವ ಬತ್ತಿ
* ಘಂಟೆ, ಪಂಚಪಾತ್ರೆ, ಉದ್ದರಣೆ, ಅರ್ಘ್ಯ ಪಾತ್ರೆ, ನೀರು
* ಅರಿಶಿನ, ಕುಂಕುಮ, ಮಂತ್ರಾಕ್ಷತೆ
* ಶ್ರೀಗಂಧ, ಊದಿನ ಕಡ್ಡಿ
* ವಿವಿಧ ಹೂವು, ಬಿಲ್ವ ಪತ್ರೆ, ಗೆಜ್ಜೆ ವಸ್ತ್ರ
* ವೀಳ್ಯದ ಎಲೆ, ಅಡಿಕೆ, ಹಣ್ಣು , ತೆಂಗಿನಕಾಯಿ,ದಕ್ಷಿಣೆ
* ನೈವೇದ್ಯ - ಪಾಯಸ, ಹಣ್ಣು..ಭಂಡಾರಕ್ಕೆ ಮಾಡಿದ ಹಿಟ್ಟಿನ ಪದಾರ್ಥ
*ಆರತಿ ತಟ್ಟೆ, ಹಲಗಾರತಿ, ಕರ್ಪೂರ, ಮಂಗಳಾರತಿ ಬತ್ತಿ.
9 ಗಂಟಿನ ಗೌರಿ ದಾರ ಇಟ್ಟು ಪೂಜೆ ಮಾಡಬೇಕು, ಪೂಜೆ ನಂತರ ಕೈಗೆ ಕಟ್ಟಿಕೊಳ್ಳಬೇಕು. ಸಂಕಲ್ಪದಿಂದ ಮೊದಲುಗೊಂಡು ಗಣಪತಿ ಪೂಜೆ ಮಾಡಿ ನಂತರ ಭೀಮೆಶ್ವರನ ಪೂಜೆ ಮಾಡಬೇಕು. ಗಣಪತಿ ಅಷ್ಟೋತ್ತರ, ಶಿವ ಅಷ್ಟೋತ್ತರ, ದೇವರ ಆವಾಹನೆ,ಸ್ಥಾಪನೆ, ಅರ್ಚಣೆ, ಹೂವು, ನೈವೇದ್ಯ ಅರ್ಪಣೆ, ಆರತಿಯೊಂದಿಗೆ ಒಂದು ಹಂತ ಪೂಜೆ ಸಮಾಪ್ತಿಗೊಳಿಸಬಹುದು.



Click it and Unblock the Notifications