Latest Updates
-
ಬಿಸಿಲಿನಲ್ಲಿ ವ್ಯಾಯಾಮ ಮಾಡ್ತಿದ್ದೀರಾ? ಈ ತಪ್ಪುಗಳನ್ನು ಮಾಡಿದರೆ ನಿಮ್ಮ ಆರೋಗ್ಯಕ್ಕೆ ಅಪಾಯ ಕಾದಿದೆ! -
ಸೋಶಿಯಲ್ ಮೀಡಿಯಾದಲ್ಲಿ ನಿಮ್ಮ ಸಂಬಂಧವನ್ನು ರಹಸ್ಯವಾಗಿಡಬೇಕಾ? ನೆಮ್ಮದಿಯ ಬದುಕಿಗೆ ಈ ಡಿಜಿಟಲ್ ಬೌಂಡರಿಗಳು ಮಸ್ಟ್! -
ದೆಹಲಿ-ಎನ್ಸಿಆರ್ನಲ್ಲಿ ಬಿರುಗಾಳಿ ಅಬ್ಬರ: ನಿಮ್ಮ ಬಾಲ್ಕನಿ ಮತ್ತು ಗಿಡಗಳನ್ನು ಸುರಕ್ಷಿತವಾಗಿಡಲು ಈ ಮುನ್ನೆಚ್ಚರಿಕೆ ಮರೆಯದಿರಿ! -
ಅಡುಗೆಮನೆಯಲ್ಲಿ ಕಡಲೆ ಹಿಟ್ಟು ಬಳಸುವ ಮುನ್ನ ಎಚ್ಚರ: FSSAI ಜಾರಿಗೆ ತಂದಿದೆ ಹೊಸ ಕಠಿಣ ನಿಯಮಗಳು! -
ಫ್ಲಿಪ್ಕಾರ್ಟ್ GRWM ಸೇಲ್: ಟ್ರೆಂಡಿ ಲುಕ್ ಪಡೆಯಲು ಇನ್ಫ್ಲುಯೆನ್ಸರ್ ಸಜೆಸ್ಟ್ ಮಾಡಿದ ಬೆಸ್ಟ್ ಡೀಲ್ಗಳು ಇಲ್ಲಿವೆ! -
ಬಿಸಿಲಿನಲ್ಲಿ ವ್ಯಾಯಾಮ ಮಾಡ್ತಿದ್ದೀರಾ? ಈ ತಪ್ಪುಗಳನ್ನು ಮಾಡಿದರೆ ಹೀಟ್ಸ್ಟ್ರೋಕ್ ಕಟ್ಟಿಟ್ಟ ಬುತ್ತಿ, ಎಚ್ಚರವಿರಲಿ! -
ಅಸ್ಸಾಂನಲ್ಲಿ ಲಿವ್-ಇನ್ ಸಂಬಂಧದಲ್ಲಿದ್ದೀರಾ? ಹೊಸ ಕಾನೂನಿನ ಪ್ರಕಾರ ನೋಂದಣಿ ಮಾಡದಿದ್ದರೆ ಜೈಲು ಶಿಕ್ಷೆ ಕಟ್ಟಿಟ್ಟ ಬುತ್ತಿ! -
ಬಿಸಿಲಿಗೆ ಗಿಡಗಳು ಬಾಡುತ್ತಿವೆಯೇ? ಈ ಮ್ಯಾಜಿಕ್ ಟಿಪ್ಸ್ ಬಳಸಿ ನಿಮ್ಮ ಬಾಲ್ಕನಿ ಗಾರ್ಡನ್ ಅನ್ನು ಹಸಿರಾಗಿಡಿ! -
ಬಿಸಿಲ ಝಳಕ್ಕೆ ಸುಸ್ತಾಗಿದ್ದೀರಾ? ಹೀಟ್ಸ್ಟ್ರೋಕ್ನಿಂದ ಪಾರಾಗಲು ಈ ತಂಪು ಪದಾರ್ಥಗಳು ನಿಮ್ಮ ಆಹಾರದಲ್ಲಿರಲಿ, ಇಂದೇ ಟ್ರೈ ಮಾಡಿ! -
ಬಕ್ರೀದ್ 2026: ಈ ಬಾರಿಯ ಹಬ್ಬದ ಸಂಭ್ರಮದಲ್ಲಿ ಮಿಂಚಲು ನೀವು ಮಿಸ್ ಮಾಡಲೇಬಾರದ ಫ್ಯಾಷನ್ ಟ್ರೆಂಡ್ಸ್ ಮತ್ತು ಸ್ಟೈಲಿಂಗ್ ಟಿಪ್ಸ್!
ಶನಿ ದೋಷ, ಕಷ್ಟದಿಂದ ಮುಕ್ತಿಗೆ ಶನಿವಾರ ಶನಿ ದೇವನ ಪೂಜೆ ಹೇಗಿರಬೇಕು?
ಶನಿವಾರವೆಂಬುವುದು ನ್ಯಾಯದ ದೇವರು ಶನಿಗೆ ಮೀಸಲಾದ ದಿನ. ಈ ದಿನ ಶನಿಯನ್ನು ಆರಾಧಿಸಿದರೆ ಶನಿ ದೋಷ, ಕಷ್ಟಗಳು ನೀಗುವುದು ಎಂಬ ನಂಬಿಕೆಯಿದೆ. ಮನುಷ್ಯನ ಕರ್ಮಕ್ಕೆ ತಕ್ಕ ಫಲ ಶನಿ ನೀಡುವುದು ಎಂದು ಹೇಳಲಾಗುವುದು.
ಶನಿವಾರ ಸಂಜೆ ಯಾರು ಶನಿ ದೇವನಿಗೆ ಭಕ್ತಿ ಹಾಗೂ ಶ್ರದ್ಧೆಯಿಂದ ಪೂಜೆ ಸಲ್ಲಿಸುತ್ತಾರೋ ಅವರ ಕಷ್ಟಗಳು ಶನಿಯ ಕೃಪೆಯಿಂದಾಗಿ ದೂರವಾಗಿವುದು, ಸಾಡೇಸಾತಿ ಸಮಸ್ಯೆ ಇರುವವರಿಗೆ ಉತ್ತಮ ಪರಿಹಾರವೂ ಸಿಗುವುದು.

ಶನಿ ದೇವನ ಕೃಪೆಗಾಗಿ ಶನಿವಾರ ಏನು ಮಾಡಬೇಕು?
ಶನಿವಾರ ಸಂಜೆ ಶನಿಯ ಪೂಜೆ ಮಾಡುವಾಗ ಸ್ನಾನ ಮಾಡಿ ಮಡಿ ಬಟ್ಟೆ ಧರಿಸಿ. ಕಪ್ಪು, ನೀಲಿ, ಬೂದು ಬಣ್ಣದ ಬಟ್ಟೆಯನ್ನು ಈ ದಿನ ಧರಿಸಬೇಡಿ.
50 ಗ್ರಾಂ ಉದ್ದಿನ ಬೇಳೆ, 50 ಗ್ರಾಂ ಕಪ್ಪು ಎಳ್ಳು, 50 ಗ್ರಾಂ ಸಾಸಿವೆಯೆಣ್ಣೆ, ಎರಡೂವರೆ ಮೀಟರ್ ಕಪ್ಪು ಬಟ್ಟೆ, 5 ಕಬ್ಬಿಣದ ಮೊಳೆ, ಒಣ ಹಣ್ಣುಗಳು ಅಥವಾ ಸಿಹಿ ಜೊತೆಗೆ ದೇವಾಲಯಕ್ಕೆ ಹೋಗಬೇಕು.
ನಂತರ ದೇವಾಲಯದಲ್ಲಿ ಕೂತು ಶನಿ ದೇವನನ್ನು ಧ್ಯಾನಿಸಿ. ಅವನನ್ನು ಗುಣಗಾನ ಮಾಡಿ.

ಶನಿ ದೇವನ ಮಂತ್ರ ಪಠಿಸಿ
"ಓಂ ಹಿಲ್ಮ್ ಶಾಮ್ ಶನಾಯ ನಮ"
"ಓಂ ಪ್ರಾಮ್ ಪ್ರೀಮ್ ಪ್ರೌಮ್ ಸಹ ಶಾನೈಶ್ರಾಯ ನಮ"
"ಓಂ ಶಾಮ್ ಶನೇಶ್ಚಾರ ನಮಃ"
"ಔಮ್ ಐಂಗ್ ಹರಿಂಗ್ ಶರಿಂಗ್ ಶಂಗ್ ಶನೈಶ್ಚರಾಯ ನಮ ಔಮ್"
ಶನಿ ಗಾಯತ್ರಿ ಮಂತ್ರ
ಓಂ ಶನೈಶ್ಚರಾಯ ವಿದ್ಮಯೇ
ಸೂರ್ಯಪುತ್ರಾಯ ದಹಿಮಹಿ
ತನ್ನೊ ಮಂಡಾ ಪ್ರಚೋದಾಯತ್
ಶನಿ ಧ್ಯಾನ ಮಂತ್ರ
ನೀಲಂಜನ ಸಮಾಭಮ್ ರವಿಪುತ್ರಂ ಯಮಗ್ರಾಜಂ
ಚಯಾ ಮಾರ್ತಾಂದ ಸಂಭಾತ್ ತಮ್ ನಮಮಿ ಶೈಶ್ಚರಂ

ದಾನ ಮಾಡಿ
ಶನಿ ದೇವನ ಕೃಪೆಗೆ ಪಾತ್ರರಾಗಬೇಕೆಂದರೆ ಈ ದಿನ ನಿರ್ಗತಿಕರಿಗೆ ದಾನ ಮಾಡಬೇಕು. ಹಿರಿಯರನ್ನು, ನಿರ್ಗತಿಕರನ್ನು ನಿಂದಿಸಬಾರದು. ನಿರ್ಗತಿಕರಿಗೆ ಕಪ್ಪು ಎಳ್ಳು, ಆಹಾರ, ಕಪ್ಪು ಅಥವಾ ನೀಲಿ ಬಟ್ಟೆಗಳನ್ನು ದಾನ ಮಾಡಬಹುದು.

ಆರತಿ ಮಾಡುವಾಗ ಏನು ಮಾಡಬೇಕು?
ಆರತಿಯನ್ನು ಶನಿ ದೇವನ ವಿಗ್ರಹದ ಮುಂದೆ ನಿಂತು ಮಾಡಬೇಡಿ, ಶನಿಯ ದೃಷ್ಟಿ ನಿಮ್ಮ ಮೇಲೆ ಬೀಳದಂತೆ ಎಚ್ಚರವಹಿಸಿ. ಸ್ವಲ್ಪ ಬದಿಗೆ ಸರಿದು ಪೂಜೆ ಮಾಡಿ, ಆರತಿ ಬೆಳಗಿ. ನಂತರ ನೀವೂ ಆರತಿ ತಗೊಂಡು ದೇವರಿಗೆ ಪ್ರಸಾದ ಅರ್ಪಿಸಿ. ಬಳಿಕ ಶನಿ ದೇವನ ಮಂತ್ರ ಹೇಳುತ್ತಾ ಧ್ಯಾನಿಸಿ.
ಇದರಿಂದ ಶನಿ ದೋಷ, ಸಾಡೇಸಾತಿ, ಕಷ್ಟಗಳು ಇವೆಲ್ಲಾ ದೂರವಾಗುವುದು.



Click it and Unblock the Notifications