Latest Updates
-
ಕಂಟೆಂಟ್ ಕ್ರಿಯೇಟರ್ಗಳೇ ಗಮನಿಸಿ: ಫೋಟೊ ಶೂಟ್ ವೇಳೆ ನೋವು ಮರೆಯಾಗಲು ಈ 12 ನಿಮಿಷದ ವರ್ಕೌಟ್ ಸಾಕು! -
ಫೋಟೋಗ್ರಾಫರ್ಗಳೇ ಎಚ್ಚರ! ನೋವಿಲ್ಲದೆ ಅದ್ಭುತ ಫೋಟೋ ಕ್ಲಿಕ್ಕಿಸಲು ಈ 7 ನಿಮಿಷದ ಮೊಬಿಲಿಟಿ ರಿಸೆಟ್ ಟ್ರೈ ಮಾಡಿ -
ಮಂಗಳ ಗೌರಿ ವ್ರತದ ದಿನ ದಂಪತಿಗಳ ನಡುವೆ ಕಿರಿಕಿರಿ ಬೇಡ: ಪ್ರೀತಿ ಹೆಚ್ಚಿಸಲು ಇಲ್ಲಿದೆ ಬೆಸ್ಟ್ ಟಿಪ್ಸ್ -
ನ್ಯಾಷನಲ್ ಕಪಲ್ಸ್ ಡೇ: ಪ್ರೀತಿಯ ಸಂಭ್ರಮದ ಜೊತೆಗೆ ಡಿಜಿಟಲ್ ಪ್ರೈವೆಸಿ ಮತ್ತು ರೊಮ್ಯಾಂಟಿಕ್ ಡೇಟ್ ಐಡಿಯಾಗಳು -
ವರಮಹಾಲಕ್ಷ್ಮಿ ಹಬ್ಬದ ಸೌಂದರ್ಯಕ್ಕೆ ಸಾಂಪ್ರದಾಯಿಕ ಆಭರಣಗಳ ಮೆರುಗು: ಈ ಬಾರಿಯ ಫ್ಯಾಷನ್ ಟ್ರೆಂಡ್ಸ್ -
ಅಪಾರ್ಟ್ಮೆಂಟ್ನಲ್ಲಿ ಓಣಂ ಸಂಭ್ರಮ: ಮಳೆಗೆ ಹಾಳಾಗದ, ಬಜೆಟ್ ಸ್ನೇಹಿ ಪೂಕಳಂಗೆ ಇಲ್ಲಿದೆ ಸೂಪರ್ ಟಿಪ್ಸ್! -
ವಿಶ್ವ ಛಾಯಾಗ್ರಹಣ ದಿನ: ಮನೆಯಲ್ಲೇ ಫೋಟೋ ಸ್ಟುಡಿಯೋ ಮಾಡಿ, ನಿಮ್ಮ ಗಿಡಗಳ ಫೋಟೋ ವೈರಲ್ ಆಗುವಂತೆ ಕ್ಲಿಕ್ ಮಾಡಿ! -
98% ಅಂಕ ಪಡೆದರೂ ಅಂಗಡಿ ಬಂದ್: FDAಗೆ ಹೈಕೋರ್ಟ್ ತರಾಟೆ, ಕಲಬೆರಕೆ ಸಿಹಿ ಪತ್ತೆಹಚ್ಚುವುದು ಹೇಗೆ? -
BWF ವಿಶ್ವ ಚಾಂಪಿಯನ್ಷಿಪ್ 2026: ಲಕ್ಷ್ಯ ಸೇನ್ ಅಬ್ಬರಕ್ಕೆ ದೆಹಲಿ ಸಜ್ಜು, ಲೈವ್ ಮಿಸ್ ಮಾಡ್ಬೇಡಿ! -
ವಿಶ್ವ ಹಿರಿಯ ನಾಗರಿಕರ ದಿನ: ಪೋಷಕರ ಆರೋಗ್ಯ ಮತ್ತು ಸಮತೋಲನ ಹೆಚ್ಚಿಸುವ ಸರಳ ಬೆಳಗಿನ ವ್ಯಾಯಾಮಗಳು
ಶನಿ ದೋಷ, ಕಷ್ಟದಿಂದ ಮುಕ್ತಿಗೆ ಶನಿವಾರ ಶನಿ ದೇವನ ಪೂಜೆ ಹೇಗಿರಬೇಕು?
ಶನಿವಾರವೆಂಬುವುದು ನ್ಯಾಯದ ದೇವರು ಶನಿಗೆ ಮೀಸಲಾದ ದಿನ. ಈ ದಿನ ಶನಿಯನ್ನು ಆರಾಧಿಸಿದರೆ ಶನಿ ದೋಷ, ಕಷ್ಟಗಳು ನೀಗುವುದು ಎಂಬ ನಂಬಿಕೆಯಿದೆ. ಮನುಷ್ಯನ ಕರ್ಮಕ್ಕೆ ತಕ್ಕ ಫಲ ಶನಿ ನೀಡುವುದು ಎಂದು ಹೇಳಲಾಗುವುದು.
ಶನಿವಾರ ಸಂಜೆ ಯಾರು ಶನಿ ದೇವನಿಗೆ ಭಕ್ತಿ ಹಾಗೂ ಶ್ರದ್ಧೆಯಿಂದ ಪೂಜೆ ಸಲ್ಲಿಸುತ್ತಾರೋ ಅವರ ಕಷ್ಟಗಳು ಶನಿಯ ಕೃಪೆಯಿಂದಾಗಿ ದೂರವಾಗಿವುದು, ಸಾಡೇಸಾತಿ ಸಮಸ್ಯೆ ಇರುವವರಿಗೆ ಉತ್ತಮ ಪರಿಹಾರವೂ ಸಿಗುವುದು.

ಶನಿ ದೇವನ ಕೃಪೆಗಾಗಿ ಶನಿವಾರ ಏನು ಮಾಡಬೇಕು?
ಶನಿವಾರ ಸಂಜೆ ಶನಿಯ ಪೂಜೆ ಮಾಡುವಾಗ ಸ್ನಾನ ಮಾಡಿ ಮಡಿ ಬಟ್ಟೆ ಧರಿಸಿ. ಕಪ್ಪು, ನೀಲಿ, ಬೂದು ಬಣ್ಣದ ಬಟ್ಟೆಯನ್ನು ಈ ದಿನ ಧರಿಸಬೇಡಿ.
50 ಗ್ರಾಂ ಉದ್ದಿನ ಬೇಳೆ, 50 ಗ್ರಾಂ ಕಪ್ಪು ಎಳ್ಳು, 50 ಗ್ರಾಂ ಸಾಸಿವೆಯೆಣ್ಣೆ, ಎರಡೂವರೆ ಮೀಟರ್ ಕಪ್ಪು ಬಟ್ಟೆ, 5 ಕಬ್ಬಿಣದ ಮೊಳೆ, ಒಣ ಹಣ್ಣುಗಳು ಅಥವಾ ಸಿಹಿ ಜೊತೆಗೆ ದೇವಾಲಯಕ್ಕೆ ಹೋಗಬೇಕು.
ನಂತರ ದೇವಾಲಯದಲ್ಲಿ ಕೂತು ಶನಿ ದೇವನನ್ನು ಧ್ಯಾನಿಸಿ. ಅವನನ್ನು ಗುಣಗಾನ ಮಾಡಿ.

ಶನಿ ದೇವನ ಮಂತ್ರ ಪಠಿಸಿ
"ಓಂ ಹಿಲ್ಮ್ ಶಾಮ್ ಶನಾಯ ನಮ"
"ಓಂ ಪ್ರಾಮ್ ಪ್ರೀಮ್ ಪ್ರೌಮ್ ಸಹ ಶಾನೈಶ್ರಾಯ ನಮ"
"ಓಂ ಶಾಮ್ ಶನೇಶ್ಚಾರ ನಮಃ"
"ಔಮ್ ಐಂಗ್ ಹರಿಂಗ್ ಶರಿಂಗ್ ಶಂಗ್ ಶನೈಶ್ಚರಾಯ ನಮ ಔಮ್"
ಶನಿ ಗಾಯತ್ರಿ ಮಂತ್ರ
ಓಂ ಶನೈಶ್ಚರಾಯ ವಿದ್ಮಯೇ
ಸೂರ್ಯಪುತ್ರಾಯ ದಹಿಮಹಿ
ತನ್ನೊ ಮಂಡಾ ಪ್ರಚೋದಾಯತ್
ಶನಿ ಧ್ಯಾನ ಮಂತ್ರ
ನೀಲಂಜನ ಸಮಾಭಮ್ ರವಿಪುತ್ರಂ ಯಮಗ್ರಾಜಂ
ಚಯಾ ಮಾರ್ತಾಂದ ಸಂಭಾತ್ ತಮ್ ನಮಮಿ ಶೈಶ್ಚರಂ

ದಾನ ಮಾಡಿ
ಶನಿ ದೇವನ ಕೃಪೆಗೆ ಪಾತ್ರರಾಗಬೇಕೆಂದರೆ ಈ ದಿನ ನಿರ್ಗತಿಕರಿಗೆ ದಾನ ಮಾಡಬೇಕು. ಹಿರಿಯರನ್ನು, ನಿರ್ಗತಿಕರನ್ನು ನಿಂದಿಸಬಾರದು. ನಿರ್ಗತಿಕರಿಗೆ ಕಪ್ಪು ಎಳ್ಳು, ಆಹಾರ, ಕಪ್ಪು ಅಥವಾ ನೀಲಿ ಬಟ್ಟೆಗಳನ್ನು ದಾನ ಮಾಡಬಹುದು.

ಆರತಿ ಮಾಡುವಾಗ ಏನು ಮಾಡಬೇಕು?
ಆರತಿಯನ್ನು ಶನಿ ದೇವನ ವಿಗ್ರಹದ ಮುಂದೆ ನಿಂತು ಮಾಡಬೇಡಿ, ಶನಿಯ ದೃಷ್ಟಿ ನಿಮ್ಮ ಮೇಲೆ ಬೀಳದಂತೆ ಎಚ್ಚರವಹಿಸಿ. ಸ್ವಲ್ಪ ಬದಿಗೆ ಸರಿದು ಪೂಜೆ ಮಾಡಿ, ಆರತಿ ಬೆಳಗಿ. ನಂತರ ನೀವೂ ಆರತಿ ತಗೊಂಡು ದೇವರಿಗೆ ಪ್ರಸಾದ ಅರ್ಪಿಸಿ. ಬಳಿಕ ಶನಿ ದೇವನ ಮಂತ್ರ ಹೇಳುತ್ತಾ ಧ್ಯಾನಿಸಿ.
ಇದರಿಂದ ಶನಿ ದೋಷ, ಸಾಡೇಸಾತಿ, ಕಷ್ಟಗಳು ಇವೆಲ್ಲಾ ದೂರವಾಗುವುದು.



Click it and Unblock the Notifications