Latest Updates
-
ಬೇಸಿಗೆಯಲ್ಲಿ ಈ ಗಂಜಿ ಕುಡಿಯಿರಿ.. ಕೊಬ್ಬು ಕಡಿಮೆ, ದೇಹಕ್ಕೂ ತಂಪು! ಈ ಗಂಜಿಯ ಆರೋಗ್ಯ ರಹಸ್ಯ ಇಲ್ಲಿದೆ -
30 ವರ್ಷಗಳ ಬಳಿಕ ಸೂರ್ಯ-ಶನಿ ಸಂಯೋಗ! ಯಾರಿಗೆ ಶುಭ? ಯಾರಿಗೆ ಸಮಸ್ಯೆ? 12 ರಾಶಿಗಳ ಜಾತಕ ತಿಳಿಯಿರಿ -
ಈ 5 ವಿಷಯಗಳಲ್ಲಿ ಮಿತಿ ಮೀರಿದ್ರೆ ಜೀವನ ಸರ್ವನಾಶ! ಅಹಂಕಾರ ಬಿಡಿ.. ಇಂದೇ ಇವುಗಳಿಂದ ದೂರವಿರಿ -
ಪಕ್ಕಾ ಹೈದರಾಬಾದಿ ರುಚಿ.. ಅತಿಥಿಗಳು ಬಂದ್ರೆ ಈ ಚಿಕನ್ ಯಖನಿ ಪುಲಾವ್ ಮಾಡಿ! ಸಿಂಪಲ್ & ಸೂಪರ್ ರುಚಿ -
2026ರ ಸೂರ್ಯ ಗೋಚಾರ: ಇವರಿಗೆ ಸಿಗಲಿದೆ ಸರ್ಕಾರಿ ಉದ್ಯೋಗ! ಯಾರಿಗೆ ಮಾನಸಿಕ ಒತ್ತಡ? 12 ರಾಶಿಯವರಿಗೆ ರಾಶಿಫಲ ಇಲ್ಲಿದೆ -
ಹೋಟೆಲ್ ಶೈಲಿಯ ಆಲೂ ಮಸಾಲಾ ಪೂರಿ! ಈ ರೀತಿ ಮನೆಯಲ್ಲೇ ಮಾಡಿ, ಪರ್ಫೆಕ್ಟ್ ಆಗಿ ಉಬ್ಬಿ ಬರುತ್ತೆ -
ಇವರ ಜೀವನದಲ್ಲಿ ಹೊಸ ಕಿಡಿ ಹೊತ್ತಿಕೊಳ್ಳಲಿದೆ! ಹಠಮಾರಿ ಸ್ವಭಾವವನ್ನು ಬಿಡಿ -
March 12 Horoscope: ಹಣಕಾಸಿನ ಸವಾಲುಗಳು ದೊಡ್ಡದಾಗುವ ಸಂಭವ -
ಕೋಮಾದಲ್ಲಿದ್ದ ಹರೀಶ್ ರಾಣಾ ದಯಾಮರಣಕ್ಕೆ ಸುಪ್ರೀಂ ಒಪ್ಪಿಗೆ: ಈ ಕೇಸ್ ಬಗ್ಗೆ ನಿಮಗೆ ಗೊತ್ತಾ? -
ಪಂಜಾಬಿ ಸ್ಟೈಲ್ ಮಲೈ ಲಸ್ಸಿ! ಈ ರೀತಿ ಮಾಡಿ ಗಟ್ಟಿ ಕೆನೆಯ ಢಾಬಾ ಸ್ಟೈಲ್ ಲಸ್ಸಿ.. ಬಿಸಿಲ ತಾಪಕ್ಕೆ ಬೆಸ್ಟ್ ಕೂಲ್ ಡ್ರಿಂಕ್
ಕಷ್ಟಗಳು ನೀಗಲು ಶನಿ ದೇವನನ್ನು ಒಲಿಸಿಕೊಳ್ಳುವುದು ಹೇಗೆ?
ನಮ್ಮ ಬದುಕಿನಲ್ಲಿ ಏಳಿಗೆಯಾಗಬೇಕಾದರೆ ಶನಿಯ ವಕ್ರದೃಷ್ಟಿ ಇರಬಾರದು, ಶನಿಯ ಕೃಪೆ ಇರಬೇಕೆಂದು ಹೇಳುತ್ತಾರೆ. ಶನಿವಾರ ಶನಿ ದೇವನಿಗೆ ಮೀಸಲು.

ಶನಿಯ ವಕ್ರದೃಷ್ಟಿಗೆ ಬಿದ್ದರೆ ಯಾವ ಗ್ರಹಗಳಿಂದಲೂ ನಮ್ಮನ್ನು ಪಾರು ಮಾಡಲು ಸಾಧ್ಯವಿಲ್ಲ ಎಂದು ಜ್ಯೋತಿಷ್ಯ ಶಾಸ್ತ್ರ ಹೇಳುತ್ತದೆ. ಶನಿಯು ಕಷ್ಟದ ಸಂಕೇತವಾಗಿದೆ. ಯಾರು ಆತನ ಕಷ್ಟಗಳನ್ನು ಗೆಲ್ಲುತ್ತಾರೋ ಅವರು ಅವನ ಕೃಪೆಗೆ ಪಾತ್ರರಾಗುತ್ತಾರೆ, ಪ್ರಗತಿಯನ್ನು ಹೊಂದುತ್ತಾರೆ
ಶನಿಯ ಕೃಪೆಗೆ ಪಾತ್ರರಾಗಲು ಹಾಗೂ ಶನಿ ದೋಷವಿದ್ದರೆ ಆ ಕಷ್ಟಗಳು ಬೇಗನೆ ನೀಗಲು ಶನಿವಾರ ಶನಿಯನ್ನು ಈ ರೀತಿ ಪೂಜಿಸಿ:

ಸಾಸಿವೆಯೆಣ್ಣೆ ಅಥವಾ ಎಳ್ಳೆಣ್ಣೆ ಅರ್ಪಿಸಿ
ಶನಿ ದೇವನ ಕೃಪೆಗೆ ಪಾತ್ರರಾಗಲು ಇದೊಂದು ತುಂಬಾ ಜನಪ್ರಿಯವಾದ ವಿಧಾನವಾಗಿದೆ. ತಾಮ್ರದ ಪಾತ್ರೆಗೆ ಸಾಸಿವೆಯೆಣ್ಣೆ ಅಥವಾ ಎಳ್ಳೆಣ್ಣೆ ತುಂಬಿ ಶನಿ ದೇವರ ಮೂರ್ತಿಗೆ ಅರ್ಪಿಸಬೇಕು. ಈ ರೀತಿ ಎಣ್ಣೆ ಅರ್ಪಿಸುವಾಗ ಓಂ ಪ್ರಾಂ ಪ್ರೀಂ ಪ್ರೌಂ ಸಃ ಶನೈಶ್ಚರಾಯ ನಮಃ
ಓಂ ಐಂಗ್ ಹ್ರಿಂಗ್ ಶ್ರೀಂಗ್ ಶಂಗ್ ಶನೈಶ್ಚರಾಯ ನಮಃ ಓಂ
ಓಂ ಹಿಂ ಶಂ ಶನಯೇ ನಮಃ
ಓಂ ಶಂ ಶನೈಶ್ಚರಾಯ ನಮಃ ಎಂದು ಶನಿ ಬೀಜ ಮಂತ್ರ ಹೇಳಿ.

ಹನುಮಂತನನ್ನು ಪೂಜಿಸಿ
ಶನಿವಾರ ಹನುಮಂತನನ್ನು ಭಕ್ತಿಯಿಂದ ಪೂಜಿಸಿದರೆ ಶನಿಯ ಹನುಮಂತನ ಕೃಪೆಯ ಜೊತೆಗೆ ಶನಿಯ ಕೃಪೆಗೆ ಪಾತ್ರರಾಗುವಿರಿ. ಹಿಂದೂ ಪುರಾಣದ ಪ್ರಕಾರ ಹನುಮಂತ ಶನಿ ದೇವನನ್ನು ರಾಕ್ಷಸ ರಾವಣನಿಂದ ಕಾಪಾಡುತ್ತಾನೆ. ಆದ್ದರಿಂದ ಹನುಮಂತನಿಗೆ ಪೂಜೆ ಸಲ್ಲಿಸಿದರೆ ಶನಿ ದೇವ ನಿಮ್ಮನ್ನು ಹರಿಸುತ್ತಾನೆ.

ದಾನ ಮಾಡಿ
ಶನಿವಾರ ನಿಮ್ಮ ಕೈಯಲ್ಲಿ ಆದಷ್ಟು ಬಡವರಿಗೆ ದಾನ ಮಾಡಿ. ಯಾವುದೇ ಫಲ ಅಪೇಕ್ಷೆಯಿಲ್ಲದೆ ದಾನ ಮಾಡಬೇಕು.

ಮನೆಯನ್ನು ಸ್ವಚ್ಛವಾಗಿ ಇಡಬೇಕು
ನೀವು ಮನೆಯಲ್ಲಿರುವ ಕಸವೆಲ್ಲಾ ತೆಗೆದು ಸ್ವಚ್ಛವಾಗಿಡಬೇಕು. ಮುರಿದ ವಸ್ತುಗಳನ್ನು ಹೊರಗಡೆ ಹಾಕಿ. ಮನೆಯನ್ನು ಮಾತ್ರವಲ್ಲ ಮನಸ್ಸನ್ನು ಶುದ್ಧ ಮಾಡಿ, ನಿಮ್ಮಲ್ಲಿರುವ ಎಲ್ಲಾ ಋಣಾತ್ಮಕ ಚಿಂತೆಗಳನ್ನು ಹೊರಹಾಕಿ.

ಆಲದ ಮರ ಹಾಗೂ ಕಾಗೆಯನ್ನು ಪೂಜಿಸಿ
ಶನಿವಾರ ಸ್ವಲ್ಪ ಸಾಸಿವೆಯೆಣ್ಣೆಯನ್ನು ಆಲದ ಮರಕ್ಕೆ ಹಾಕಿ ಪೂಜಿಸಿ ಅಲ್ಲದೆ ಶನಿವಾರ ಕಾಗೆಗಳಿಗೆ ತಿನ್ನಲು ಕೊಡಿ. ಇದರಿಂದ ಶನಿಯ ಕೃಪೆಗೆ ಪಾತ್ರರಾಗುವಿರಿ.



Click it and Unblock the Notifications











