Just In
- 7 hrs ago
ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ 2021: ಇಲ್ಲಿದೆ ಬೆಸ್ಟ್ ವೇ ಸ್ ಟು ಸೆಲೆಬ್ರೇಟ್..
- 8 hrs ago
ಮಕ್ಕಳಿಗೆ ಪಿಸ್ತಾ ನೀಡಿದರೆ ಬುದ್ಧಿ ಶಕ್ತಿ ಹೆಚ್ಚುವುದರ ಜೊತೆಗೆ ಈ ಪ್ರಯೋಜನಗಳಿವೆ
- 9 hrs ago
ಸಂಬಂಧ ಲಾಂಗ್ ಡಿಸ್ಟಾನ್ಸ್ ನಲ್ಲಿದ್ದಾಗ ಈ ಪ್ರೀತಿ ಮಂತ್ರ ಸಹಾಯ ಮಾಡುತ್ತೆ..
- 11 hrs ago
ಕೊರೊನಾ 2ನೇ ಅಲೆ: ಹೀಗೆ ಮಾಡಿ ವೈರಸ್ ವಿರುದ್ಧ ರೋಗ ನಿರೋಧಕ ಸಾಮರ್ಥ್ಯ ಹೆಚ್ಚಿಸಿ
Don't Miss
- Automobiles
17 ನಗರಗಳಲ್ಲಿ 22 ಫಾಸ್ಟ್ ಚಾರ್ಜಿಂಗ್ ನಿಲ್ದಾಣಗಳನ್ನು ತೆರೆದ ಎಂಜಿ ಮೋಟಾರ್
- News
ಭಾರತದಲ್ಲಿ ಫೆ.27 ಹಾಗೂ 28 ರಂದು ಕೊರೊನಾ ಲಸಿಕೆ ಪ್ರಕ್ರಿಯೆ ಇಲ್ಲ
- Movies
ಇವರೇ ನೋಡಿ ಭಟ್ಟರ ಎರಡನೇ ಗಾಳಿಪಟದ ನಾಯಕಿಯರು
- Sports
ಐಎಸ್ಎಲ್: ಕೇರಳಕ್ಕೆ ಸೋಲುಣಿಸಿದ ನಾರ್ಥ್ಈಸ್ಟ್ ಯುನೈಟೆಡ್ ಪ್ಲೇ ಆಫ್ ಗೆ
- Finance
ಅಡಿಕೆ, ಕಾಫೀ, ಮೆಣಸು ಹಾಗೂ ರಬ್ಬರ್ನ ಫೆ. 26ರ ಮಾರುಕಟ್ಟೆ ದರ ಇಲ್ಲಿದೆ
- Education
RBI Grade B Admit Card 2021: ಪ್ರವೇಶ ಪತ್ರ ಡೌನ್ಲೋಡ್ ಮಾಡುವುದು ಹೇಗೆ ?
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಸೋಮವಾರ ಶಿವನಿಗೆ ಬಿಲ್ವಪತ್ರೆ ಅರ್ಪಿಸುವುದರ ಮಹತ್ವ
ಕೈಲಾಸನಾಥನಿಗೆ ಬಿಲ್ವ ಪತ್ರೆ ಅಂದರೆ ತುಂಬಾ ಪ್ರೀತಿ. ಶಿವನನ್ನು ಆರಾಧಿಸುವಾಗ ಬಿಲ್ವ ಪತ್ರೆ ಜತೆ ಪೂಜಿಸಿದರೆ ಶಿವನಿಗೆ ತುಂಬಾ ಪ್ರಿಯವಾಗುವುದು ಎಂದು ಶಿವನಿಗೆ ಪೂಜೆ ಸಲ್ಲಿಸುವಾಗ ಬಿಲ್ವೆ ಪತ್ರೆ ಉಪಯೋಗಿಸುತ್ತಾರೆ. ಅದರಲ್ಲೂ ಸೋಮವಾರದ ಶಿವನ ಪೂಜೆಗೆ ವಿಶೇಷವಾದ ದಿನ, ಈ ದಿನದಂದು ಬಿಲ್ವೆ ಪತ್ರೆ ಎಲೆಗಳಿಂದ ಶಿವನಿಗೆ ಪೂಜೆ ಸಲ್ಲಿಸಲಾಗುವುದು.
ಶಿವನಿಗೆ ಬಿಲ್ವೆ ಪತ್ರೆ ಅರ್ಪಿಸುವುದರ ಹಿಂದಿರುವ ಪೌರಾಣಿಕ ಕತೆಯ ಹಿನ್ನೆಲೆಯೇನು?
ಮುಕ್ಕಣ್ಣ ಶಿವನಿಗೆ ಬಿಲ್ವೆ ಪತ್ರೆ ಏಕೆ ಪ್ರಿಯವಾದದು ಎಂಬುವದರ ಹಿಂದೆ ಒಂದು ಪೌರಾಣಿಕ ಕತೆಯಿದೆ. ಬಿಲ್ವೆ ಪತ್ರೆ ಮರ ನೋಡಿದರೆ ಒಂದು ದಂಟಿನಲ್ಲಿ ಮೂರು ಎಲೆಗಳಿರುತ್ತವೆ. ಬಿಲ್ವಪತ್ರೆ ಎಲೆಯಲ್ಲಿ ತ್ರಿಮೂರ್ತಿಗಳು ಅಂದರೆ ಬ್ರಹ್ಮ, ವಿಷ್ನು,ಶಿವ ನೆಲೆಸಿದ್ದಾರೆ ಎಮಬ ನಂಬಿಕೆಯಿದೆ. ಬಿಲ್ವೆ ಪತ್ರೆಯ ಮುಂಭಾಗದಲ್ಲಿ ಅಮೃತ, ಹಿಂಭಾಗದಲ್ಲಿ ಯಕ್ಷರು ಇರುತ್ತಾರೆ. ಈ ಬಿಲ್ವಪತ್ರೆ ಮರ ಕಾಶಿಕ್ಷೇತ್ರಕ್ಕೆ ಸಮವಾದ ಮರವಾಗಿದೆ ಎಂದು ಹೇಳಲಾಗುವುದು.
ಇನ್ನು ಈ ಮರದ ಹುಟ್ಟಿನ ಬಗ್ಗೆಯೂ ಸ್ಕಂದ ಪುರಾಣದಲ್ಲಿ ಹೇಳಾಗಿದೆ. ಈ ಪವಿತ್ರವಾದ ಮರ ಪಾರ್ವತಿಯ ಬೆವರು ಹನಿ ಮಂದಾರ ಪರ್ವತದ ಮೇಲೆ ಬಿದ್ದಾಗ ಬಿಲ್ವಪತ್ರೆ ಹುಟ್ಟಿಕೊಂಡಿತುಕೊಂಡಿತು. ಪಾರ್ವತಿ ದೇವಿ ಗಿರಿಜೆಯಾಗಿ ಈ ಮರದ ಬೇರುಗಳಲ್ಲಿ ನೆಲೆಸಿರುತ್ತಾಳೆ. ಆದ್ದರಿಂದ ಶಿವನಿಗೆ ಈ ಮರದ ಎಲೆಗಳಿಂದ ಪ್ರಿಯವಾದದ್ದು ಎಂದು ಹೇಳಲಾಗಿದೆ.
ಈ ಮರದಲ್ಲಿ ಲಕ್ಷ್ಮೀದೇವಿ ವಿವಿಧ ರೂಪದಲ್ಲಿ ನೆಲೆಸಿರುತ್ತಾಳೆ, ಕಾಂಡದಲ್ಲಿ ಮಹೇಶ್ವರಿಯಾಗಿ, ಕೊಂಬೆಯಲ್ಲಿ ದಾಕ್ಷಾಯಣಿಯಾಗಿ, ಎಲೆಗಳಲ್ಲಿ ಪಾರ್ವತಿ, ಕಾತ್ಯಾನಿಯಾಗಿ ಹಣ್ಣಿನಲ್ಲಿ, ಗೌರಿಯಾಗಿ ಹೂಗಳಲ್ಲಿ ನೆಲೆಸಿರುತ್ತಾಳೆ, ಆದ್ದರಿಂದ ಈ ಮರದ ಸಮಿಪ ಹೋದರೆ, ಆ ಮರ, ಎಲೆ, ಹೂ, ಕಾಯಿಗಳನ್ನು ಮುಟ್ಟಿದರೆ ಪುಣ್ಯ ದೊರೆಯುತ್ತದೆ ಎಂಬ ನಂಬಿಕೆಯಿದೆ. ಆದ್ದರಿಂದಲೇ ಶಿವಾಲಯದ ಸಮೀಪ ಬಿಲ್ವ ಪತ್ರೆ ಗಿಡ ಬೆಳೆಯಲಾಗುವುದು.
ಬಿಲ್ವ ಪತ್ರೆ ಎಲೆಗಳನ್ನು ಶಿವನ ಪೂಜೆಗೆ ಅರ್ಪಿಸುವುದರ ಮಹತ್ವದ ಬಗ್ಗೆ ಶ್ಲೋಕವಿದೆ
ಮೂಲತೋಭವರೂಪಾಯ ಮಧ್ಯತೋ ಮೃದುರೂಪಿಣಿ
ಅಗ್ರತಃ ಶಿವರೂಪಾಯ ಪತ್ರ್ನೆವೇರ್ದಸ್ವರೂಪಿಣಿ
ಸ್ಕಂದೇ ವೇದಾಂತರೂಪೆಯ ತರುರಾಜಯಃ ತೆ ನಮಃ
ಸರ್ವಕಾಮಪ್ರದಾಮ್ ಬಿಲ್ವಮ್ ದಾರಿದ್ರ್ಯ ಪ್ರಣಾಶನಂ ಬಿಲ್ವಾತ್ಪಾತ್ರಂ ನಾಸ್ಪಿ ಯೇನ ತುಷ್ಯತಿ ಶಂಕರ
ಬಿಲ್ವ ಮರ ಶಿವನ ಭಾವ ರೂಪ, ಅದರ ಮೂರು ಎಲೆಗಳು ಮೂರು ವೇದಗಳು, ಕೊಂಬೆಗಳು ಉಪನಿಷತ್ತುಗಳು, ಬಿಲ್ವ ಪತ್ರೆ ಮರ ಮರಗಳ ರಾಜ, ಈ ಮರವನ್ನು ಭಕ್ತಿಯಿಂದ ಪೂಜಿಸಿದರೆ ಬಡತನ ದೂರವಾಗುವುದು, ಶಿವನಿಗೆ ಈ ಮರದ ಎಲೆಗಳನ್ನು ಅರ್ಪಿಸಿದರೆ ತುಂಬಾ ಖುಷಿಯಾಗುವುದು ಎಂಬುವುದು ಈ ಶ್ಲೋಕದ ಅರ್ಥವಾಗಿದೆ.
ಶಿವಪೂಜೆಗೆ ಬಿಲ್ವಪತ್ರೆ ಎಲೆಗಳ ಆಯ್ಕೆ ಹೇಗಿರಬೇಕು?
ಶಿವಪೂಜೆಗೆ ಬಿಲ್ವಪತ್ರೆ ಆಯ್ಕೆ ಮಾಡುವಾಗ ಎಲೆಯ ಮೇಲೆ ಯಾವುದೇ ಹುಳುಗಳ ಕುಳಿತು ಎಲೆಗಳು ಹಾಳಾಗಿಬಾರದು, ಅದರ ಮೇಲೆ ಬಿಳಿ ಚುಕ್ಕಿಗಳಿರಬಾರದು, ಇನ್ನು ತರುವ ಎಲೆ ಹರಿದಿರಬಾರದು. ಮೂರು ಎಲೆಗಳಿರುವ ದಂಟನ್ನು ಕಿತ್ತು ತಂದು ಶಿವನಿಗೆ ಅರ್ಪಿಸಬೇಕು. ಶಿವನಿಗೆ ಬಿಲ್ವಪತ್ರೆಯ ಮಾಲೆ ಮಾಡಿ ಹಾಕಬಹುದು, ಬಿಲ್ವಪತ್ರೆ ಎಲೆಗಳ ಜತೆಗೆ ಕಾಯಿಗಳನ್ನೂ ಪೂಜೆಗೆ ಅರ್ಪಿಸಬಹುದು.
ಬಿಲ್ವಪತ್ರೆಗಳನ್ನು ಹೇಗೆ ಅರ್ಪಿಸಬೇಕು?
ಬಿಲ್ವಪತ್ರೆಗಳನ್ನು ಲಿಂಗದ ಮೇಲೆ ಅರ್ಪಿಸುವಾಗ ಅದನ್ನು ಕೆಳಮುಖವಾಗಿ, ತೊಟ್ಟು ನಮ್ಮ ಕಡೆಗೆ ಬರುವಂತೆ ಇಡಬೇಕು. ಹೀಗೆ ಮಾಡುವುದರಿಂದ ಮೂರು ಎಲೆಗಳಿಂದ ಬರುವ ಶಕ್ತಿಗಳಿಂದ ಬರುವ ಶಕ್ತಿ ನಮ್ಮ ಕಡೆಗೆ ಬರುತ್ತದೆ. ಎಲೆಗಳ ತುದಿಗಳಿಂದ ಶಿವತತ್ತ್ವವು ವಾತಾವರಣದಲ್ಲಿ ಹರಡಿ ನಮಗೆ ಧನಾತ್ಮಕ ಶಕ್ತಿಯ ಅನುಬವ ಉಂಟಾಗುವುದು.
ಬಿಲ್ವಪತ್ರೆ ಎಲೆಗಳ ತೊಟ್ಟನ್ನು ನಮ್ಮ ಕಡೆಗೆ, ಎಲೆಗಳ ತುದಿಗಳನ್ನು ಶಿವನ ಕಡೆಗೆ ಇರುವಂತೆ ಅರ್ಪಿಸಿದರೆ ಆಗ ಬಲ್ವಪತ್ರೆ ಯಾರು ಅರ್ಪಿಸುತ್ತಾರೋ ಅವರಿಗೆ ಮಾತ್ರ ಶಿವತತ್ತ್ವ ಸಿಗುತ್ತದೆ. ಮೇಲೆ ಹೇಳಿದಂತೆ ಅರ್ಪಿಸಿದರೆ ಶಿವನ ಪೂಜೆಗೆ ಬರುವ ಭಕ್ತರಿಗೂ ಶಿವತತ್ತ್ವವೂ ದೊರೆಯುವುದು.
ಬಿಲ್ವಪತ್ರೆ ಸೋಮವಾರ ಏಕೆ ಅರ್ಪಿಸಬೇಕು?
ಸೋಮವಾರ ಶಿವಪೂಜೆಗೆ ಶ್ರೇಷ್ಠವಾದ ದಿನ, ಸೋಮವಾರದ ಬಿಲ್ವಪತ್ರೆ ಮರುದಿನ ನಡೆಯುವುದಿಲ್ಲ. ಬೆಳಗ್ಗೆ ಎದ್ದು ಸ್ನಾನ ಮಾಡಿ ಬಿಳಿ ಬಣ್ಣದ ಮಡಿ ಬಟ್ಟೆ ಧರಿಸಬೇಕು. ಬಿಲ್ವಪತ್ರೆಯನ್ನು ಅರ್ಚನೆ ಮಾಡುವಾಗ ಓಂ ನಮಃ ಶಿವಾಯ ಎಂಬ ಮಂತ್ರ ಪಠಣೆ ಮಾಡುತ್ತಾ ಶಿವಲಿಂಗಕ್ಕೆ ಒಂದೊಂದೇ ಎಲೆಗಳನ್ನು ಅರ್ಪಿಸಬೇಕು. ಬಿಲ್ವಪತ್ರೆ ಎಲೆಗಳು ಶಿವಲಿಂಗವನ್ನು ಮುಚ್ಚುವಂತೆ ಅರ್ಪಣೆ ಮಾಡಬೇಕು. ಬಿಲ್ವ ಪತ್ರೆ ಎಲೆಗಳ ಜತೆಗೆ ಶ್ರೀಗಂಧ, ಹೂಗಳು, ಹಣ್ಣುಗಳು, ಎಳ್ಳುಗಳನ್ನು ಅರ್ಪಿಸಬಹುದು.