Latest Updates
-
ತೀವ್ರ ಶಾಖದ ಅಲೆ: ಬಿಸಿಲಿನಲ್ಲಿ ವ್ಯಾಯಾಮ ಮಾಡುವ ಮುನ್ನ ಎಚ್ಚರ! -
ಅಕ್ಷಯ ತೃತೀಯ ಮದುವೆ: ಬಾಲ್ಯ ವಿವಾಹ ತಡೆಯಲು ನೀವೇನು ಮಾಡಬೇಕು? -
ಬಾಲ್ಕನಿ ಗಿಡಗಳು ಒಣಗುತ್ತಿವೆಯೇ? ಈ ಟಿಪ್ಸ್ ಪಾಲಿಸಿ! -
ಬಿಸಿಲಿನ ಬೇಗೆಯಿಂದ ಪಾರಾಗಲು ಈ ಆಹಾರಗಳೇ ನಿಮ್ಮ ರಕ್ಷಕ -
ಅಕ್ಷಯ ತೃತೀಯ 2026: ಈ ಹೊಸ ಟ್ರೆಂಡ್ಸ್ ಮಿಸ್ ಮಾಡ್ಬೇಡಿ! -
ಲಿವರ್ ಆರೋಗ್ಯಕ್ಕೆ ಈ ಸರಳ ಅಭ್ಯಾಸಗಳು ನಿಮ್ಮನ್ನು ಕಾಪಾಡುತ್ತವೆ -
ಅಕ್ಷಯ ತೃತೀಯ: ಚಿನ್ನದ ಖರೀದಿ ಮತ್ತು ನಿಶ್ಚಿತಾರ್ಥಕ್ಕೆ ಹೀಗೆ ಪ್ಲಾನ್ ಮಾಡಿ -
ದೆಹಲಿ ಧೂಳು ತಡೆಯಲು ನಿಮ್ಮ ಮನೆಯನ್ನು ಹೀಗೆ ರಕ್ಷಿಸಿಕೊಳ್ಳಿ -
FSSAI ದಾಳಿ: ವಿಷಕಾರಿ ಹಣ್ಣುಗಳನ್ನು ಗುರುತಿಸುವುದು ಹೇಗೆ ಗೊತ್ತಾ? -
ಅಕ್ಷಯ ತೃತೀಯ ಸಂಭ್ರಮ: ಈ ಟ್ರೆಂಡಿ ಆಭರಣಗಳೇ ಈಗ ಹವಾ
75ನೇ ಸ್ವಾತಂತ್ರ್ಯ ದಿನಾಚರಣೆ: ದೇಶಾಭಿಮಾನದ ಕಿಚ್ಚು ಹೆಚ್ಚಿಸುವ ಸ್ವಾತಂತ್ರ್ಯ ಹೋರಾಟಗಾರರ ಘೋಷಣೆಗಳಿವು
ನಾವೆಲ್ಲಾ ಈ ವರ್ಷ 75ನೇ ಸ್ವಾತಂತ್ರ್ಯ ದಿನಾಚರಣೆ ಆಚರಿಸುತ್ತಿದ್ದೇವೆ. ಜಾತಿ-ಮತ, ರಾಜ್ಯ ಎಂಬ ಬೇಧ ಮರೆತು ಭಾರತೀಯರೆಲ್ಲರೂ ಒಂದಾಗಿ ಸ್ವಾತಂತ್ರ್ಯ ದಿನಾಚರಣೆ ಆಚರಿಸುತ್ತೇವೆ. ಈ ಆಚರಣೆ ಮೂಲಕ ನಮ್ಮ ಹಿರಿಯರು ಮಾಡಿರುವ ತ್ಯಾಗವನ್ನು ಸ್ಮರಿಸುತ್ತೇವೆ, ಏನೇ ಬರಲಿ ಒಗ್ಗಟ್ಟಾಗಿ ಭಾರತಾಂಬೆಯ ರಕ್ಷಣೆ ಮಾಡುತ್ತೇವೆ ಎಂದು ಪಣ ತೊಡುತ್ತೇವೆ.
ಇಂದು ನಾವು ಅನುಭವಿಸುತ್ತಿರುವ ಸ್ವಾತಂತ್ರ್ಯ, ನಮ್ಮ ದೇಶಕ್ಕೆ ಇತರ ದೇಶಗಳು ತೋರುತ್ತಿರುವ ಗೌರವ ಇವೆಲ್ಲಾ ಸುಮ್ಮನೆ ದೊರೆತಿಲ್ಲ. ಅನೇಕರು ಮಾಡಿರುವ ತ್ಯಾಗ, ಬಲಿದಾನ, ಹೋರಾಟದ ಫಲ ಇಂದು ನಾವು ಅನುಭವಿಸುತ್ತಿರುವ ಸ್ವಾತಂತ್ರ್ಯ. ಬ್ರಿಟಿಷರನ್ನು ಓಡಿಸಲು ಅವರು ಮಾಡಿರುವ ಹೋರಾಟ, ಕೂಗಿದ ಘೋಷಣೆಗಳು ಅವುಗಳ ಬಗ್ಗೆ ಕೇಳಿದಾಗ ಇಂದಿಗೂ ನಮ್ಮ ಮೈ ನವಿರೇಳುವುದು. ಸ್ವಾತಂತ್ರ್ಯಕ್ಕಾಗಿ ಹೋರಾಡುವ ಜನರಲ್ಲಿ ದೇಶಾಭಿಮಾನದ ಕಿಚ್ಚು ಹೆಚ್ಚಿಸಲು ಮಹಾ ನಾಯಕರುಗಳು ಕೂಗಿರುವ ಘೋಷಣೆ ಕೇಳುವಾಗ ನಮ್ಮ ಮನದಲ್ಲಿ ದೇಶಾಭಿಮಾನ ಉಕ್ಕಿ ಹರಿಯುವುದು.
ನಾವಿಲ್ಲಿ ಸ್ವಾತಂತ್ರ್ಯ ಹೋರಾಟದ ಕಿಚ್ಚನ್ನು ಹೆಚ್ಚಿಸಿ ಸ್ವಾತಂತ್ರ್ಯ ಪಡೆಯಲು ಮಹಾ ನಾಯಕರುಗಳು ಕೂಗಿದ ಘೋಷಣೆಗಳ ಬಗ್ಗೆ ಇಲ್ಲಿ ಹೇಳಲಾಗಿದೆ.

1. ಜೈ ಹಿಂದ್-ಸುಭಾಷ್ ಚಂದ್ರಬೋಸ್
ಭಾರತದ ಸ್ವಾತಂತ್ರ್ಯ ಹೋರಾಟಗಾರರಲ್ಲಿ ಪ್ರಮುಖರು ನೇತಾಜಿ ಸುಭಾಷ್ ಚಂದ್ರ ಬೋಸ್. ಕ್ರಾಂತಿಕಾರಿ ಮಾರ್ಗದ ಮೂಲಕ ದೇಶಕ್ಕೆ ಸ್ವಾತಂತ್ರ್ಯ ತಂದು ಕೊಡಲು ಶ್ರಮಿಸಿದ ಮಹಾನ್. ಇವರನ್ನು ನೇತಾಜಿ ಎಂದು ಕರೆಯಲಾಗುವುದು. ಅವರು ಅಂದು ಮೊಳಗಿಸಿದ 'ಜೈ ಹಿಂದ್' ಘೋಷಣೆ ನಾವೆಲ್ಲಾ ಇಂದಿಗೂ ಅನೇಕ ಸಂದರ್ಭಗಳಲ್ಲಿ ಬಳಸುತ್ತೇವೆ. ಈ ಪದವೇ ನಮ್ಮಲ್ಲಿರುವ ದೇಶಾಭಿಮಾನ ಎತ್ತಿ ತೋರಿಸುವುದು.

2. 'ವಂದೇ ಮಾತರಂ'- ಬಂಕಿಮ ಚಂದ್ರ ಚಟ್ಟೋಪಾಧ್ಯಾಯ
ದೇಶದ ಸ್ವಾತಂತ್ರ್ಯ ಹೋರಾಟಗಾರರಲ್ಲಿ ಇವರು ಕೂಡ ಪ್ರಮುಖರು. ಇವರು ವಂದೇ ಮಾತರಂ ಎಂಬ ಘೋಷಣೆ ಕೂಗಿದರು. ವಂದೇ ಮಾತರಂ ಎಂಬ ಹಾಡು ಮೊಳಗುವಾಗ ನಾವೆಲ್ಲರೂ ಒಂದು ಕ್ಷಣ ಸ್ತಬ್ಧರಾಗುತ್ತೇವೆ, ಅಷ್ಟು ಶಕ್ತಿಯಿದೆ ಆ ಘೋಷಣೆಗೆ.

3. 'ಸ್ವರಾಜ್ಯ ನನ್ನ ಜನ್ಮ ಸಿದ್ಧ ಹಕ್ಕು, ಇದನ್ನು ನಾನು ಪಡದೇ ತೀರುತ್ತೇನೆ'- ಬಾಲಗಂಗಾಧರ್ ತಿಲಕ್
ಕ್ರಾಂತಿಕಾರಿ ಮಾರ್ಗದಲ್ಲಿ ದೇಶಕ್ಕೆ ಸ್ವಾತಂತ್ರ್ಯ ತಂದು ಕೊಡಲು ಬಯಸಿದ ಮತ್ತೊಬ್ಬ ಮಹಾನ್ ಹೋರಾಟಗಾರ ಬಾಲ ಗಂಗಾಧರ್ ತಿಲಕ್. ಸ್ವರಾಜ್ಯ ನನ್ನ ಜನ್ಮ ಸಿದ್ಧ ಹಕ್ಕು, ಅದನ್ನು ನಾನು ಪಡದೇ ತೀರುತ್ತೇನೆ ಎಂದು ಎಂಬ ಇವರ ಘರ್ಜನೆ ಬ್ರಿಟಿಷರಲ್ಲಿ ನಡುಕ ಹುಟ್ಟಿಸಿತ್ತು.

4. 'ಜೈ ಜವಾನ್, ಜೈ ಕಿಸಾನ್'-ಲಾಲ್ ಬಹೂದ್ದೂರ್ ಶಾಸ್ತ್ರಿ
ಈ ಘೋಷಣೆಯನ್ನು ನಾವೆಲ್ಲರೂ ಇಂದಿಗೂ ಕೂಗುತ್ತೇವೆ. ದೇಶವನ್ನು ಕಾಯುವ ಸೈನಿಕರು ಹಾಗೂ ದೇಶದ ಬೆನ್ನೆಲುಬು ಆಗಿರುವ ರೈತರಿಗೆ ಕೃತಜ್ಞತೆ ಸಲ್ಲಿಸುತ್ತಾ ಈ ಘೋಷಣೆ ಕೂಗಲಾಗುವುದು.

5. ಸತ್ಯಮೇವ ಜಯತೇ: ಪಂಡಿತ್ ಮದನ್ ಮೋಹನ್ ಮಾಳವೀಯ
ಸತ್ಯಕ್ಕೆ ಸಾವಿಲ್ಲ ಎಂಬುವುದು ಈ ಘೋಷಣೆಯ ಅರ್ಥವಾಗಿದೆ. ಈ ಘೋಷಣೆ ಕೂಗಿದವರು ಪಂಡಿತ್ ಮದನ್ ಮೋಹನ್ ಮಾಳವೀಯ. ಇದನ್ನು ದೇಶದ ಧ್ಯೇಯ ವಾಕ್ಯವಾಗಿ ಸ್ವೀಕರಿಸಲಾಗಿದೆ.

6. 'ಇಂಕ್ವಿಲಾಬ್ ಜಿಂದಾಬಾದ್'-ಹಸ್ರತ್ ಮೋಹನಿ
ಭಗತ್ ಸಿಂಗ್ರಂತೆಯೇ ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಟ ಮಾಡಿದ ಮುಸ್ಲಿಂ ನಾಯಕ ಹಸ್ರತ್ ಮೋಹನಿ. ಬ್ರಿಟಿಷರ ವಿರುದ್ಧ ಹೋರಾಟದಲ್ಲಿ ಘೋಷ ವಾಕ್ಯವಾಗಿ ಇದನ್ನು ಬಳಸಲಾಯಿತು. ಈ ಘೋಷ ವಾಕ್ಯ ಸ್ವಾತಂತ್ರ್ಯದ ಮಹತ್ವವನ್ನು ಸಾರುತ್ತದೆ.

7. 'ನೀವು ನನಗೆ ರಕ್ತ ನೀಡಿ, ನಾನು ನಿಮಗೆ ಸ್ವಾತಂತ್ರ್ಯ ನೀಡುತ್ತೇನೆ'-ಸುಭಾಷ್ ಚಂದ್ರಬೋಸ್
ದೇಶಕ್ಕೆ ಸ್ವಾತಂತ್ರ್ಯ ಸಿಗಬೇಕೆಂದರೆ ಅಹಿಂಸೆ ಮಾರ್ಗಕ್ಕಿಂತ ಕ್ರಾಂತಿಕಾರಿ ಮಾರ್ಗ ಅನುಸರಿಸಬೇಕು ಎಂದು ಕರೆ ನೀಡಿದ್ದ ಸುಭಾಷ್ ಚಂದ್ರ ಬೋಸ್, 'ನೀವು ನನಗೆ ರಕ್ತ ನೀಡಿ, ನಾನು ನಿಮಗೆ ಸ್ವಾತಂತ್ರ್ಯ ನೀಡುತ್ತೇನೆ' ಎಂದು ಘೋಷಣೆ ಕೂಗುತ್ತಾ ಭಾರತೀಯರಲ್ಲಿ ಹೋರಾಟದ ಕಿಚ್ಚು ಹೆಚ್ಚಿಸುತ್ತಾ ಬ್ರಿಟಿಷರಿಗೆ ಸಿಂಹ ಸ್ವಪ್ನವಾಗಿ ಕಾಡಿದ ಮಹಾನ್ ನಾಯಕ.

8. ಆರಾಮವಾಗಿರುವುದು ತುಂಬಾ ಕೆಟ್ಟದು-ಪಂಡಿತ್ ಜವಾಹರಲಾಲ್ ನೆಹರು
ಸ್ವಾತಂತ್ರ್ಯ ಸಿಗಬೇಕೆಂದರೆ ಮೊದಲು ಆರಾಮವಾಗಿ ಇರುವುದನ್ನು ಬಿಡಬೇಕು ಎಂದು ಹೇಳಿದ ನೆಹರು ಅವರು ಆರಾಮ್ ಹರಾಮ್ ಹೈ ಎಂದು ಘೋಷಣೆ ಕೂಗಿದರು.

9. 'ಮಾಡು ಅಥವಾ ಮಡಿ'- ಮಹಾತ್ಮ ಗಾಂಧಿ
ಅಹಿಂಸೆ ಮೂಲಕ ಸ್ವಾತಂತ್ರ್ಯ ಹೋರಾಟ ಮಾಡಿದ ಮಹಾತ್ಮ ಗಾಂಧಿಯವರು 'ಮಾಡು ಇಲ್ಲವೇ ಮಡಿ' ಎಂಬ ಘೋಷಣೆ ಕೂಗಿದರು.



Click it and Unblock the Notifications











