Latest Updates
-
ಅಕ್ಷಯ ತೃತೀಯ ಮದುವೆ: ಬಾಲ್ಯ ವಿವಾಹ ತಡೆಯಲು ನೀವೇನು ಮಾಡಬೇಕು? -
ಬಾಲ್ಕನಿ ಗಿಡಗಳು ಒಣಗುತ್ತಿವೆಯೇ? ಈ ಟಿಪ್ಸ್ ಪಾಲಿಸಿ! -
ಬಿಸಿಲಿನ ಬೇಗೆಯಿಂದ ಪಾರಾಗಲು ಈ ಆಹಾರಗಳೇ ನಿಮ್ಮ ರಕ್ಷಕ -
ಅಕ್ಷಯ ತೃತೀಯ 2026: ಈ ಹೊಸ ಟ್ರೆಂಡ್ಸ್ ಮಿಸ್ ಮಾಡ್ಬೇಡಿ! -
ಲಿವರ್ ಆರೋಗ್ಯಕ್ಕೆ ಈ ಸರಳ ಅಭ್ಯಾಸಗಳು ನಿಮ್ಮನ್ನು ಕಾಪಾಡುತ್ತವೆ -
ಅಕ್ಷಯ ತೃತೀಯ: ಚಿನ್ನದ ಖರೀದಿ ಮತ್ತು ನಿಶ್ಚಿತಾರ್ಥಕ್ಕೆ ಹೀಗೆ ಪ್ಲಾನ್ ಮಾಡಿ -
ದೆಹಲಿ ಧೂಳು ತಡೆಯಲು ನಿಮ್ಮ ಮನೆಯನ್ನು ಹೀಗೆ ರಕ್ಷಿಸಿಕೊಳ್ಳಿ -
FSSAI ದಾಳಿ: ವಿಷಕಾರಿ ಹಣ್ಣುಗಳನ್ನು ಗುರುತಿಸುವುದು ಹೇಗೆ ಗೊತ್ತಾ? -
ಅಕ್ಷಯ ತೃತೀಯ ಸಂಭ್ರಮ: ಈ ಟ್ರೆಂಡಿ ಆಭರಣಗಳೇ ಈಗ ಹವಾ -
ಹೀಟ್ವೇವ್ ಎಚ್ಚರಿಕೆ: ಬಿಸಿಲಿನ ತಾಪದಿಂದ ಪಾರಾಗಲು ಈ ಟಿಪ್ಸ್ ಫಾಲೋ ಮಾಡಿ
ಅಣ್ಣ-ತಂಗಿಯರ ಬಾಂಧವ್ಯದ ಪ್ರತೀಕವೇ 'ರಾಖಿ ಹಬ್ಬ'
ಶ್ರಾವಣ ಮಾಸ ಬಂತೆಂದರೆ ಹಬ್ಬಗಳ ಸುಗ್ಗಿ....ಅದರಲ್ಲೂ ನಾಗರ ಪಂಚಮಿ ಮುಗಿದ ನಂತರ ಒಂದಾದ ಮೇಲೊಂದರಂತೆ ಸಾಲು ಸಾಲಾಗಿ ಹಬ್ಬಗಳು ಬರುತ್ತಾ ಹೋಗುತ್ತವೆ, ಸಂತೋಷವನ್ನು ನೀಡುತ್ತಾ ಹೋಗುತ್ತವೆ. ಅದರಲ್ಲಿ ಅತ್ಯಂತ ಸಂತೋಷ ತರುವ ಹಬ್ಬವೆಂದರೆ ತಂಗಿಯು ಅಣ್ಣನಿಗೆ ರಾಖಿ ಕಟ್ಟುವ ರಕ್ಷಾಬಂಧನ ಹಬ್ಬ. ಅಣ್ಣನ ಕೈಗಂಟಿಗೆ ಬಣ್ಣದ ರಾಖಿ ಕಟ್ಟುವ ಮೂಲಕ ತಂಗಿ ತನ್ನ ಅಣ್ಣನು ತನಗೆ ದುಷ್ಟಶಕ್ತಿಗಳಿಂದ ಸುರಕ್ಷತೆಯನ್ನು ನೀಡುವಂತಾಗಲಿ ಎಂದು ಹಾರೈಸುತ್ತಾಳೆ. ರಕ್ಷಣೆಯನ್ನು ನೀಡುವ ಬಂಧನ- ಅದುವೇ 'ರಕ್ಷಾ ಬಂಧನ'
ಹೌದು, ಅಣ್ಣ ತಂಗಿಯ ಅನುಬಂಧ ಬೆಲೆ ಕಟ್ಟಲಾಗದ್ದು. ತಾಯಿಯ ಮಮತೆಯಂತೆಯೇ ಅಣ್ಣನ ರಕ್ಷಣೆ ಪ್ರೀತಿ ಹೆಣ್ಣಿಗೆ ಬಲವಿದ್ದಂತೆ. ಅನಾದಿ ಕಾಲದಿಂದಲೂ ಅಣ್ಣ ತಂಗಿಯ ಪವಿತ್ರ ಅನುಬಂಧ ಗಟ್ಟಿಯಾಗಿ ನೆಲೆ ನಿಂತಿರುವಂಥದ್ದು. ಸಹೋದರನ ಶ್ರೀರಕ್ಷೆ ಎಂದಿಗೂ ಸಹೋದರಿಯ ಮೇಲಿರಲಿ ಎಂಬ ಆಶಯದೊಂದಿಗೆ ರಕ್ಷಾ ಬಂಧನವನ್ನು ಭಾರತದೆಲ್ಲೆಡೆ ಸಂಭ್ರಮದಿಂದ ಆಚರಿಸಲಾಗುತ್ತದೆ...ಅಷ್ಟೇ ಏಕೆ ದೇವತೆಯರ ಕಾಲದಲ್ಲಿಯೂ ರಾಖಿ ಹಬ್ಬದ ಮಹತ್ವದ ಬಗ್ಗೆ ವಿಶ್ಲೇಷಿಸಲಾಗಿದೆ ಅಚ್ಚರಿವಾಯಿತಲ್ಲವೇ? ಹಾಗಾದರೆ ಮುಂದಿನ ಸ್ಲೈಡ್ ಕ್ಲಿಕ್ ಮಾಡಿ...

ಒಮ್ಮೆ ಇಂದ್ರನ ಅಮರಾವತಿಯ ಮೇಲೆ ರಾಕ್ಷಸನೊಬ್ಬ ದಾಳಿ ಮಾಡಿದನಂತೆ. ಆಗ ಇಂದ್ರನ ಪತ್ನಿಯಾದ ಶಚಿ ದೇವಿಯು ಸಹಾಯಕ್ಕಾಗಿ ವಿಷ್ಣುವಿನ ಮೊರೆ ಹೋದಾಗ, ವಿಷ್ಣು ಶಚಿ ದೇವಿಗೆ ಒಂದು ಹತ್ತಿಯ ದಾರವನ್ನು ನೀಡಿ, ಅದನ್ನು ಆಕೆಯ ಗಂಡನ ಕೈಗೆ ಕಟ್ಟುವಂತೆ ಹೇಳಿದನಂತೆ. ಆಕೆಯು ಹಾಗೆಯೇ ಮಾಡಿದಾಗ, ಇಂದ್ರನು ಯುದ್ಧದಲ್ಲಿ ರಾಕ್ಷಸನನ್ನು ಸೋಲಿಸದನಂತೆ. ಅಂದಿನಿಂದ ಈ ದಾರವನ್ನು ಕಟ್ಟುವ ರಕ್ಷಾ ಬಂಧನ ಪರಿಕಲ್ಪನೆಯು ಆರಂಭವಾಯಿತು. ರಾಖಿ ಹಬ್ಬದ ಸ್ಪೆಷಲ್-ಕೇಸರಿ ಸಂದೇಶ್ ಸ್ವೀಟ್
ಪುರಾಣಗಳಲ್ಲಿ ದ್ರೌಪದಿಯು ಶ್ರೀ ಕೃಷ್ಣನಿಗೆ ರಕ್ಷಾಬಂಧನವನ್ನು ಕಟ್ಟಿದಳಂತೆ. ಇದರ ಜೊತೆಗೆ ಪಾರ್ವತಿಯು ಸಹ ವಿಷ್ಣುವಿಗೆ ರಕ್ಷಾ ಬಂಧನವನ್ನು ಕಟ್ಟಿ ಆತನನ್ನು ತನ್ನ ಅಣ್ಣನಾಗಿ ಸ್ವೀಕರಿಸಿದಳಂತೆ. ಅದಕ್ಕೆ ಪ್ರತಿಯಾಗಿ ವಿಷ್ಣು ಪಾರ್ವತಿ ದೇವಿಗೆ ಅಪಾಯವೊದಗಿದಾಗ ಆಕೆಯನ್ನು ತಾನು ಕಾಪಾಡುವುದಾಗಿ ಅಭಯವನ್ನಿತ್ತನಂತೆ.
ಇನ್ನೊಂದು ಕಥೆಯ ಪ್ರಕಾರ ಬಲಿ ಚಕ್ರವರ್ತಿಯು ವಿಷ್ಣು ದೇವರನ್ನು ತನ್ನ ಅರಮನೆಗೆ ಆಹ್ವಾನಿಸುತ್ತಾನೆ. ಬಲಿಯ ಅರಮನೆಯಲ್ಲಿ ಉಳಿಯಲು ವಿಷ್ಣು ದೇವರು ಬಯಸುತ್ತಾರೆ. ಆದರೆ ಲಕ್ಷ್ಮಿ ದೇವಿಗೆ ಇದು ಇಷ್ಟವಾಗುವುದಿಲ್ಲ ಮತ್ತು ಆಕೆ ವಿಷ್ಣು ದೇವರನ್ನು ಹಿಂಬಾಲಿಸಿಕೊಂಡು ಬಂದು ಬಲಿ ಚಕ್ರವರ್ತಿ ಮುಂದೆ ಬಂದು ನಿಲ್ಲುತ್ತಾರೆ.
ಬಲಿ ಚಕ್ರವರ್ತಿಯ ಭಕ್ತಿಯಿಂದ ಪ್ರಸನ್ನಳಾದ ಲಕ್ಷ್ಮಿ ದೇವಿಯು ಆತನನ್ನು ತನ್ನ ಸಹೋದರನೆಂದು ಸ್ವೀಕರಿಸಿ ರಾಖಿ ಕಟ್ಟುತ್ತಾಳೆ. ತನ್ನ ರಾಜ್ಯದಿಂದ ಏನು ಬೇಕಾದರೂ ಕೇಳಬಹುದೆಂದು ಬಲಿ ಚಕ್ರವರ್ತಿಯು ಲಕ್ಷ್ಮೀ ದೇವಿಗೆ ಹೇಳುತ್ತಾನೆ. ವಿಷ್ಣು ದೇವರು ವೈಕುಂಠಕ್ಕೆ ಮರಳಬೇಕೆಂದು ಲಕ್ಷ್ಮಿ ದೇವಿ ಕೇಳಿಕೊಳ್ಳುತ್ತಾಳೆ. ಇದಕ್ಕೆ ಬಲಿ ಚಕ್ರವರ್ತಿ ಒಪ್ಪಿಕೊಳ್ಳುತ್ತಾನೆ. ರಾಖಿ ಕಟ್ಟುವ ಸಂಪ್ರದಾಯವು ಈ ದಿನದಿಂದ ಆರಂಭವಾಯಿತೆಂದು ನಂಬಲಾಗಿದೆ.



Click it and Unblock the Notifications














