Just In
- 38 min ago ಆಕಾಶದಲ್ಲಿ ಮತ್ತೆ ಕಾಣಿಸಿಕೊಂಡ ವಿಚಿತ್ರ ವಸ್ತು.! ಸ್ಪಷ್ಟನೆ ಬೇಕೆಂದ ನಿವಾಸಿಗಳು..!
- 1 hr ago ದುಬೈ ಪ್ರವಾಹದ ವೈರಲ್ ವೀಡಿಯೋಗಳು: ಒಂದೊಂದು ದೃಶ್ಯವೂ ಬದುಕಿನ ಪಾಠ ಹೇಳುತ್ತೆ
- 5 hrs ago ಎಳ ನೀರು ಹಾಕಿ ಮಾಡುವ 2 ದೋಸೆ ರೆಸಿಪಿ: ರುಚಿ ಸೂಪರ್, ಆರೋಗ್ಯಕ್ಕೆ ತುಂಬಾನೇ ಒಳ್ಳೆಯದು
- 7 hrs ago ಬೇಸಿಗೆಯಲ್ಲಿ ದಿನಾ ಎಳನೀರು ಕುಡಿದರೆ ಏನಾಗುತ್ತೆ? ಯಾವ ಸಮಯದಲ್ಲಿ ಎಳನೀರು ಕುಡಿಯಬೇಕು?
Don't Miss
- News "ಅಲ್ಲಾ ಹೋ ಅಕ್ಬರ್" ಕೂಗಬೇಕು ಎಂದು ಮುಸ್ಲಿಂ ಗೂಂಡಾಗಳಿಂದ ಧಮ್ಕಿ ; ನಾವು ಪಾಕಿಸ್ತಾನದಲ್ಲಿ ಇದ್ದೇವಾ - ಆರ್.ಅಶೋಕ್
- Movies ಸುಶಾಂತ್ ಸಿಂಗ್ ರಜಪೂತ್ ಸತ್ತಾಗ ಯಾರು ದು:ಖಿಸಲಿಲ್ಲ ; ಜನರಿಗೆ ಬೇಕಿದ್ದಿದ್ದು 'ಮಸಾಲೆಯುಕ್ತ ಗಾಸಿಪ್' ಅಷ್ಟೇ..!
- Finance ನೆಸ್ಲೆಯ ಸೆರೆಲಾಕ್ ಶಿಶು ಹಾಲಿನಲ್ಲಿ ಸಕ್ಕರೆ ಅಂಶ ಪತ್ತೆ: ತನಿಖಾ ವರದಿಯಲ್ಲಿ ಬಹಿರಂಗ
- Technology ಬೋರಿಂಗ್ ಫೋನ್ಗಾಗಿ ಕೈಜೋಡಿಸಿದ HMD, ಹೈನೆಕೆನ್ ಮತ್ತು ಬೊಡೆಗಾ! ಯಾತಕ್ಕಾಗಿ ಈ ಫೋನ್?
- Automobiles Tata: ಮಧ್ಯಮ ವರ್ಗದವರಿಗೆ ಸಿಹಿಸುದ್ದಿ.. ಮುಂಬರಲಿರುವ ಟಾಟಾ ಕಾರುಗಳಿವು, ಒಂದಕ್ಕಿಂತ ಒಂದು ಭರ್ಜರಿಯಾಗಿವೆ!
- Sports ಟಿ20 ವಿಶ್ವಕಪ್ ಬಗ್ಗೆ ಸ್ಪಷ್ಟನೆ ಕೇಳಿದ ವಿರಾಟ್ ಕೊಹ್ಲಿ; ಕಹಾನಿ ಮೇ ಟ್ವಿಸ್ಟ್ ನೀಡಿದ ಬಿಸಿಸಿಐ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಅಣ್ಣ-ತಂಗಿಯರ ಬಾಂಧವ್ಯದ ಪ್ರತೀಕವೇ 'ರಾಖಿ ಹಬ್ಬ'
ಶ್ರಾವಣ ಮಾಸ ಬಂತೆಂದರೆ ಹಬ್ಬಗಳ ಸುಗ್ಗಿ....ಅದರಲ್ಲೂ ನಾಗರ ಪಂಚಮಿ ಮುಗಿದ ನಂತರ ಒಂದಾದ ಮೇಲೊಂದರಂತೆ ಸಾಲು ಸಾಲಾಗಿ ಹಬ್ಬಗಳು ಬರುತ್ತಾ ಹೋಗುತ್ತವೆ, ಸಂತೋಷವನ್ನು ನೀಡುತ್ತಾ ಹೋಗುತ್ತವೆ. ಅದರಲ್ಲಿ ಅತ್ಯಂತ ಸಂತೋಷ ತರುವ ಹಬ್ಬವೆಂದರೆ ತಂಗಿಯು ಅಣ್ಣನಿಗೆ ರಾಖಿ ಕಟ್ಟುವ ರಕ್ಷಾಬಂಧನ ಹಬ್ಬ. ಅಣ್ಣನ ಕೈಗಂಟಿಗೆ ಬಣ್ಣದ ರಾಖಿ ಕಟ್ಟುವ ಮೂಲಕ ತಂಗಿ ತನ್ನ ಅಣ್ಣನು ತನಗೆ ದುಷ್ಟಶಕ್ತಿಗಳಿಂದ ಸುರಕ್ಷತೆಯನ್ನು ನೀಡುವಂತಾಗಲಿ ಎಂದು ಹಾರೈಸುತ್ತಾಳೆ. ರಕ್ಷಣೆಯನ್ನು ನೀಡುವ ಬಂಧನ- ಅದುವೇ 'ರಕ್ಷಾ ಬಂಧನ'
ಹೌದು, ಅಣ್ಣ ತಂಗಿಯ ಅನುಬಂಧ ಬೆಲೆ ಕಟ್ಟಲಾಗದ್ದು. ತಾಯಿಯ ಮಮತೆಯಂತೆಯೇ ಅಣ್ಣನ ರಕ್ಷಣೆ ಪ್ರೀತಿ ಹೆಣ್ಣಿಗೆ ಬಲವಿದ್ದಂತೆ. ಅನಾದಿ ಕಾಲದಿಂದಲೂ ಅಣ್ಣ ತಂಗಿಯ ಪವಿತ್ರ ಅನುಬಂಧ ಗಟ್ಟಿಯಾಗಿ ನೆಲೆ ನಿಂತಿರುವಂಥದ್ದು. ಸಹೋದರನ ಶ್ರೀರಕ್ಷೆ ಎಂದಿಗೂ ಸಹೋದರಿಯ ಮೇಲಿರಲಿ ಎಂಬ ಆಶಯದೊಂದಿಗೆ ರಕ್ಷಾ ಬಂಧನವನ್ನು ಭಾರತದೆಲ್ಲೆಡೆ ಸಂಭ್ರಮದಿಂದ ಆಚರಿಸಲಾಗುತ್ತದೆ...ಅಷ್ಟೇ ಏಕೆ ದೇವತೆಯರ ಕಾಲದಲ್ಲಿಯೂ ರಾಖಿ ಹಬ್ಬದ ಮಹತ್ವದ ಬಗ್ಗೆ ವಿಶ್ಲೇಷಿಸಲಾಗಿದೆ ಅಚ್ಚರಿವಾಯಿತಲ್ಲವೇ? ಹಾಗಾದರೆ ಮುಂದಿನ ಸ್ಲೈಡ್ ಕ್ಲಿಕ್ ಮಾಡಿ...
ಒಮ್ಮೆ ಇಂದ್ರನ ಅಮರಾವತಿಯ ಮೇಲೆ ರಾಕ್ಷಸನೊಬ್ಬ ದಾಳಿ ಮಾಡಿದನಂತೆ. ಆಗ ಇಂದ್ರನ ಪತ್ನಿಯಾದ ಶಚಿ ದೇವಿಯು ಸಹಾಯಕ್ಕಾಗಿ ವಿಷ್ಣುವಿನ ಮೊರೆ ಹೋದಾಗ, ವಿಷ್ಣು ಶಚಿ ದೇವಿಗೆ ಒಂದು ಹತ್ತಿಯ ದಾರವನ್ನು ನೀಡಿ, ಅದನ್ನು ಆಕೆಯ ಗಂಡನ ಕೈಗೆ ಕಟ್ಟುವಂತೆ ಹೇಳಿದನಂತೆ. ಆಕೆಯು ಹಾಗೆಯೇ ಮಾಡಿದಾಗ, ಇಂದ್ರನು ಯುದ್ಧದಲ್ಲಿ ರಾಕ್ಷಸನನ್ನು ಸೋಲಿಸದನಂತೆ. ಅಂದಿನಿಂದ ಈ ದಾರವನ್ನು ಕಟ್ಟುವ ರಕ್ಷಾ ಬಂಧನ ಪರಿಕಲ್ಪನೆಯು ಆರಂಭವಾಯಿತು. ರಾಖಿ ಹಬ್ಬದ ಸ್ಪೆಷಲ್-ಕೇಸರಿ ಸಂದೇಶ್ ಸ್ವೀಟ್
ಪುರಾಣಗಳಲ್ಲಿ ದ್ರೌಪದಿಯು ಶ್ರೀ ಕೃಷ್ಣನಿಗೆ ರಕ್ಷಾಬಂಧನವನ್ನು ಕಟ್ಟಿದಳಂತೆ. ಇದರ ಜೊತೆಗೆ ಪಾರ್ವತಿಯು ಸಹ ವಿಷ್ಣುವಿಗೆ ರಕ್ಷಾ ಬಂಧನವನ್ನು ಕಟ್ಟಿ ಆತನನ್ನು ತನ್ನ ಅಣ್ಣನಾಗಿ ಸ್ವೀಕರಿಸಿದಳಂತೆ. ಅದಕ್ಕೆ ಪ್ರತಿಯಾಗಿ ವಿಷ್ಣು ಪಾರ್ವತಿ ದೇವಿಗೆ ಅಪಾಯವೊದಗಿದಾಗ ಆಕೆಯನ್ನು ತಾನು ಕಾಪಾಡುವುದಾಗಿ ಅಭಯವನ್ನಿತ್ತನಂತೆ.
ಇನ್ನೊಂದು ಕಥೆಯ ಪ್ರಕಾರ ಬಲಿ ಚಕ್ರವರ್ತಿಯು ವಿಷ್ಣು ದೇವರನ್ನು ತನ್ನ ಅರಮನೆಗೆ ಆಹ್ವಾನಿಸುತ್ತಾನೆ. ಬಲಿಯ ಅರಮನೆಯಲ್ಲಿ ಉಳಿಯಲು ವಿಷ್ಣು ದೇವರು ಬಯಸುತ್ತಾರೆ. ಆದರೆ ಲಕ್ಷ್ಮಿ ದೇವಿಗೆ ಇದು ಇಷ್ಟವಾಗುವುದಿಲ್ಲ ಮತ್ತು ಆಕೆ ವಿಷ್ಣು ದೇವರನ್ನು ಹಿಂಬಾಲಿಸಿಕೊಂಡು ಬಂದು ಬಲಿ ಚಕ್ರವರ್ತಿ ಮುಂದೆ ಬಂದು ನಿಲ್ಲುತ್ತಾರೆ.
ಬಲಿ ಚಕ್ರವರ್ತಿಯ ಭಕ್ತಿಯಿಂದ ಪ್ರಸನ್ನಳಾದ ಲಕ್ಷ್ಮಿ ದೇವಿಯು ಆತನನ್ನು ತನ್ನ ಸಹೋದರನೆಂದು ಸ್ವೀಕರಿಸಿ ರಾಖಿ ಕಟ್ಟುತ್ತಾಳೆ. ತನ್ನ ರಾಜ್ಯದಿಂದ ಏನು ಬೇಕಾದರೂ ಕೇಳಬಹುದೆಂದು ಬಲಿ ಚಕ್ರವರ್ತಿಯು ಲಕ್ಷ್ಮೀ ದೇವಿಗೆ ಹೇಳುತ್ತಾನೆ. ವಿಷ್ಣು ದೇವರು ವೈಕುಂಠಕ್ಕೆ ಮರಳಬೇಕೆಂದು ಲಕ್ಷ್ಮಿ ದೇವಿ ಕೇಳಿಕೊಳ್ಳುತ್ತಾಳೆ. ಇದಕ್ಕೆ ಬಲಿ ಚಕ್ರವರ್ತಿ ಒಪ್ಪಿಕೊಳ್ಳುತ್ತಾನೆ. ರಾಖಿ ಕಟ್ಟುವ ಸಂಪ್ರದಾಯವು ಈ ದಿನದಿಂದ ಆರಂಭವಾಯಿತೆಂದು ನಂಬಲಾಗಿದೆ.