Just In
- 1 hr ago ಮೊಲದ ಜೊತೆ ಓಡಿ ಮತ್ತೊಮ್ಮೆ ರೇಸ್ ಗೆದ್ದ ಆಮೆ..! ಈ ಕಥೆ ನಿಜವಾಗಿದ್ದು ಹೇಗೆ ನೋಡಿ.!
- 1 hr ago ಗುರು ಸಂಚಾರ: ಮೇ 1ರಿಂದ 3ನೇ ಸ್ಥಾನದಲ್ಲಿರುವ ಗುರು ಮೀನ ರಾಶಿಯವರಿಗೆ ಅದೃಷ್ಟವೇ?
- 13 hrs ago ಗುರು ಸಂಚಾರದಿಂದ ಕುಂಭ ರಾಶಿಯವರ ಆರ್ಥಿಕ ಬದುಕು ಸುಧಾರಿಸಲಿದೆಯೇ?
- 14 hrs ago ಮೇ 1ರಿಂದ ಗುರು ಮಕರ ರಾಶಿಯಲ್ಲಿ ಪಂಚಮ ಸ್ಥಾನದಲ್ಲಿ ಇರುವುದರಿಂದ ಈ ರೀತಿಯೆಲ್ಲಾ ಪ್ರಯೋಜನಗಳಿವೆ
Don't Miss
- News Ballari Lok Sabha Election: ಶ್ರೀರಾಮುಲು ಪತ್ನಿ ನಾಮಪತ್ರ ವಾಪಸ್, ಅಂತಿಮ ಕಣದಲ್ಲಿ 10 ಅಭ್ಯರ್ಥಿಗಳು
- Technology ನಾಳೆ ವಿವೋದ ಈ ಹೊಸ ಫೋನ್ ಫಸ್ಟ್ ಸೇಲ್!..ಬಜೆಟ್ ಬೆಲೆಗೆ ಲಭ್ಯ!
- Movies ಕಲರ್ಫುಲ್ ಲೈಟು.. ಡಿಂಪಲ್ ಸ್ಮೈಲು.. 'ಸಂಜು ವೆಡ್ಸ್ ಗೀತಾ 2' ಒಂದು ಹಾಡಿನ ಸೆಟ್ಟಿಗೆ ಬರೋಬ್ಬರಿ ₹50 ಲಕ್ಷ!
- Sports T20 World Cup 2024: ಟಿ20 ವಿಶ್ವಕಪ್ನಲ್ಲಿ ಟೀಮ್ ಇಂಡಿಯಾ ಆರಂಭಿಕರನ್ನು ಸೂಚಿಸಿದ ಸೌರವ್ ಗಂಗೂಲಿ
- Automobiles ಫೋಕ್ಸ್ವ್ಯಾಗನ್ ವರ್ಟಸ್ ಕಾರಿಗೆ ಮನಸೋತ ಗ್ರಾಹಕರು: ಭಾರೀ ಬೇಡಿಕೆ
- Finance Bengaluru Karaga: ಇಂದು ಈ ರಸ್ತೆಗಳಲ್ಲಿ ಸಂಚಾರ ಬಂದ್, ಬದಲಿ ಮಾರ್ಗ ವಿವರ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಗಾಂಧಾರಿ ಶಾಪ; ಶ್ರೀಕೃಷ್ಣಾವತಾರದ ಪರಿಸಮಾಪ್ತಿ ಹೇಗೆ?
ನಮ್ಮ ಹಿಂದೂ ಪುರಾಣಗಳಲ್ಲಿ ಕೆಲವರಿಗೆ ಮಾತ್ರ ತಿಳಿದಿರುವ ಅನೇಕ ಕುತೂಹಲ ಕೆರಳಿಸುವ ಕಥೆಗಳಿವೆ. ಅಂತಹದರಲ್ಲಿ ಶ್ರೀ ಕೃಷ್ಣನ ಸಾವಿನ ಬಗ್ಗೆ ಒಂದು ಕಥೆ ಇದೆ. ಶ್ರೀ ಕೃಷ್ಣನು ಹೇಗೆ ಜನ್ಮತಾಳಿದನೆಂದು ಎಲ್ಲರಿಗೂ ಗೊತ್ತಿದೆ. ಆದರೆ ಶ್ರೀ ಕೃಷ್ಣಾವತಾರದ ಪರಿಸಮಾಪ್ತಿ ಹೇಗಾಯ್ತು ಗೊತ್ತಿದೆಯೇ? ಇಲ್ಲವಾದರೆ ಮುಂದೆ ಓದಿ...
ದುರ್ಯೋಧನನು ಅಂತಿಮವಾಗಿ ಹತ್ಯೆಯಾಗಿ ಮಹಾಭಾರತದ ಯುದ್ಧ ಕೊನೆಗೊಂಡ ಮೇಲೆ, ಅವನ ಮಾತೆ ಗಾಂಧಾರಿಯ ಮನ ಛಿದ್ರಗೊಂಡಿತು. ಆಕೆ ತನ್ನ ಮಗನ ಅವಶೇಷವನ್ನು ನೋಡಿ ಶೋಕಿಸಲು ಯುದ್ಧ ಭೂಮಿಗೆ ತೆರಳಿದಳು. ಶ್ರೀ ಕೃಷ್ಣ ಮತ್ತು ಪಾಂಡವರು ಆಕೆಯ ಜೊತೆಗೂಡಿದರು.
ತನ್ನ ಮಕ್ಕಳನ್ನೆಲ್ಲ ಕಳೆದುಕೊಂಡು ಶೋಕತಪ್ತೆಯಾಗಿದ್ದ ಗಾಂಧಾರಿ, ಶ್ರೀ ಕೃಷ್ಣನಿಗೆ 36 ವರ್ಷದ ಬಳಿಕ ಮರಣ ಹೊಂದಲಿ ಎಂದು ಶಾಪಕೊಡುತ್ತಾರೆ. ಸ್ವತಃ ಶ್ರೀ ಕೃಷ್ಣನು ಮುಗುಳ್ನಗೆಯಿಂದ ಈ ಶಾಪವನ್ನು ಸ್ವೀಕರಿಸುತ್ತಾರೆ. ಈ ಪ್ರಕರಣ ನಿಖರ 36 ವರ್ಷಗಳ ಬಳಿಕ ಒಬ್ಬ ಬೇಟೆಗಾರನ ಬಾಣದಿಂದ ಶ್ರೀಕೃಷ್ಣನು ಸಾವನ್ನಪ್ಪುತ್ತಾರೆ. ಇದರೊಂದಿಗೆ ಕೃಷ್ಣಾವತಾರದ ಪರಿಸಮಾಪ್ತಿಯಾಗುತ್ತದೆ.
ಕ್ರಮೇಣವಾಗಿ ಕೃಷ್ಣ ಪರಮಾತ್ಮನ ಯಾದವಕುಲ ಸಂಪೂರ್ಣವಾಗಿ ನಶಿಸಿಹೋಗುತ್ತದೆ. ದ್ವಾರಕ ಪಟ್ಟಣವು ಸಮುದ್ರದಲ್ಲಿ ಮುಳುಗಿ ಹೋಗಿದ್ದು, ಅದು ಈಗಲೂ ಸಮುದ್ರದಲ್ಲಿ ಉಳಿದುಕೊಂಡಿದೆವೆಂಬ ಐತಿಹ್ಯವಿದೆ. ಶ್ರೀ ಕೃಷ್ಣನ ಸಾವಿನ ದುರಂತ ಕಥೆ ಇಂತಿದೆ:
ಶ್ರೀಕೃಷ್ಣ
ಜನ್ಮಾಷ್ಟಮಿಯ
ಮಹತ್ವ
ತಿಳಿದುಕೊಳ್ಳಿ
ಗಾಂಧಾರಿಯ ಶಾಪ:
ತನ್ನ ನೂರು ಮಕ್ಕಳ ಸಾವಿನಿಂದ ದುಃಖಿತಳಾಗಿ ಗಾಂಧಾರಿಯು ಸಂಪೂರ್ಣ ರಕ್ತಪಾತಕ್ಕೆ ಶ್ರೀ ಕೃಷ್ಣನನ್ನು ಆರೋಪಿಸಿದಳು. ಶ್ರೀ ಕೃಷ್ಣನು ಸ್ವತಃ ದೇವರಾಗಿದ್ದರಿಂದ ಕುರು ಕ್ಷೇತ್ರಯುದ್ಧವನ್ನು ಸುಲಭವಾಗಿ ತಪ್ಪಿಸಬಹುದಾಗಿತ್ತೆಂದು ಗಾಂಧಾರಿಯು ಹೇಳಿದಳು. ಆದರೆ ಅವನು ಸಹೋದರರು ಒಬ್ಬರೊನ್ನೊಬ್ಬರು ಪರಸ್ಪರ ಕೊಲ್ಲಲು ಅವಕಾಶ ಮಾಡಿದನು. ಹಾಗಾಗಿ, ಗಾಂಧಾರಿಯು ಕೃಷ್ಣನಿಗೆ ಯಾದವ ಕುಲವೂ ಕೂಡ ಕುರುವಂಶವು ನಾಶವಾದ ರೀತಿಯಲ್ಲಿ ನಾಶವಾಗಿಹೋಗಲಿ ಎಂದು ಶಪಿಸಿದಳು.
ಯಾದವ ಕುಲದಲ್ಲಿಯೂ ಸಹೋದರರು ಪರಸ್ಪರ ಕೊಂದು ಕೃಷ್ಣನ ರಾಜ್ಯವು ಅಂತ್ಯವಾಗಲಿಯೆಂದು ಹೇಳಿದಳು. ಹಾಗೆಯೇ ಶ್ರೀ ಕೃಷ್ಣನು ಏಕಾಂಗಿಯಾಗಿ ಸಾಯುವನೆಂದು ಮತ್ತು ದ್ವಾರಕಾ ಪಟ್ಟಣವನ್ನು ಸಮುದ್ರವು ನುಂಗಿ ಹಾಕಲಿಯೆಂದೂ ಸಹ ಶಾಪ ಕೊಟ್ಟಳು. ಶ್ರೀ ಕೃಷ್ಣನು ಎಷ್ಟಾದರೂ ಗಾಂಧಾರಿಯು ತನ್ನ ಉತ್ಕಟ ಭಕ್ತಳೆಂದು ಮುಗುಳ್ನಗೆಯಿಂದ ಶಾಪವನ್ನು ಸ್ವೀಕರಿಸಿದನು.
ಯಾದವರ ಅಂತ್ಯ
ಯಾದವರು ಕೃಷ್ಣನ ಆಳ್ವಿಕೆಯಲ್ಲಿ ಒಂದು ಪ್ರವರ್ಧಮಾನ ವಂಶವಾಗಿತ್ತು. ಆದರೆ ಕಾಲಕ್ರಮೇಣ ಅವರಿಗೆ ತಮ್ಮ ಶಕ್ತಿ ಮತ್ತು ಶ್ರೀಮಂತಿಕೆಯ ಜೊತೆ ಮೈಮರೆತರು. ಯಾದವರು ಎಲ್ಲಾ ರೀತಿಯ ವ್ಯಭಿಚಾರಗಳಲ್ಲಿ ತೊಡಗಿ ಸಹೋದರಗಳಲ್ಲಿಯೇ ಕಾದಾಟಗಳು ನಡೆಯಿತು. ಇದರ ಫಲವಾಗಿ ದೊಡ್ದ ಪ್ರಮಾಣದ ಯುದ್ಧಗಳಾಗಿ ಕೊನೆಗೆ ಯಾದವರು ರಣರಂಗದಲ್ಲಿ ಪರಸ್ಪರ ಕೊಲ್ಲಲ್ಪಟ್ಟರು. ಈ ಯುದ್ಧಗಳಲ್ಲಿ ಕೃಷ್ಣನ ಮಗನಾದ ಪ್ರದ್ಯುಮ್ನನೂ ಸಹ ಕೊಲ್ಲಲ್ಪಟ್ಟನು. ಶ್ರೀ ಕೃಷ್ಣನು ಈ ವಿನಾಶವನ್ನು ನೋಡಿ ದ್ವಾರಕಾ ಪಟ್ಟಣವನ್ನು ಬಿಟ್ಟು ಅರಣ್ಯದೊಳಗೆ ಹೋಗಲು ನಿಶ್ಚಯಿಸಿದನು.
ದ್ವಾರಕಾ ಪಟ್ಟಣವು ಮುಳುಗಿಹೋದದ್ದು
ಶ್ರೀ ಕೃಷ್ಣನು ದ್ವಾರಕಾ ಪಟ್ಟಣವನ್ನು ಬಿಟ್ಟಮೇಲೆ ಪಟ್ಟಣವನ್ನು ಸಮುದ್ರವು ಆವರಿಸಿ ಕೊನೆಗೆ ಸಂಪೂರ್ಣವಾಗಿ ಮುಳುಗಿಹೋಯಿತು. ಆ ನೈಜ ದ್ವಾರಕಾ ಪಟ್ಟಣವು ಈಗಲೂ ಸಹ ಅರೇಬಿಯನ್ ಸಮುದ್ರದೊಳಗೆ ಅಡಗಿದೆ.
ಕೃಷ್ಣನ ಸಾವು
ಕೃಷ್ಣನು ಅರಣ್ಯದೊಳಗೆ ತನ್ನ ಅಣ್ಣ ಬಲರಾಮನ ಜೊತೆ ಹೋದ ಕೆಲವು ಸಮಯದ ನಂತರ ಬಲರಾಮನು ಮೃತನಾದನು. ಕೃಷ್ಣನು ಬಹಳ ದುಃಖಿತನಾಗಿ ಒಂದು ಮರದಕೆಳಗೆ ಕುಳಿತು ವಿಶ್ರಾಂತಿ ಪಡೆಯುತ್ತಿದ್ದನು. ಒಬ್ಬ ಬೇಡನು ದೂರದಿಂದ ಕೃಷ್ಣನ ಪಾದದಲ್ಲಿ ಕಾಣುತ್ತಿದ್ದ ಕಮಲದ ಚಿಹ್ನೆಯನ್ನು ಒಂದು ಪ್ರಾಣಿಯೆಂದು ತಪ್ಪಾಗಿ ಅರಿತುಕೊಂಡನು. ಬೇಡನು ಆ ಕಮಲದ ಮೇಲೆ ಗುರಿಯಿಟ್ಟು ಬಾಣ ಬಿಟ್ಟಾಗ ಅದು ಕೃಷ್ಣನ ಪಾದಕ್ಕೆ ಹೊಡೆಯಿತು. ತನ್ನ ತಪ್ಪು ಅರಿವಾದ ತಕ್ಷಣವೇ ಬೇಡನು ಕೃಷ್ಣನ ಬಳಿ ಬಂದು ಕ್ಷಮೆಯಾಚಿಸಿದನು. ಶ್ರೀ ಕೃಷ್ಣನು ಇದೆಲ್ಲ ವಿಧಿನಿಯಮವೆಂದು ಹೇಳಿದನು. ಹೀಗೆ ಶ್ರೀ ಕೃಷ್ಣನು ಇಹಲೋಕವನ್ನು ತೊರೆದು ದ್ವಾಪರಯುಗದ ಅಂತ್ಯವಾಗುವಂತಾಯಿತು.
ಬೇಡನ ನಿಜವಾದ ಸ್ವರೂಪ
ಪುರಾಣಗಳ ಪ್ರಕಾರ ಶ್ರೀ ಕೃಷ್ಣನನ್ನು ಕೊಂದ ಬೇಡನು ಮತ್ತೆ ಯಾರೂ ಅಲ್ಲದೆ ಬೇಡನಾಗಿ ಜನ್ಮ ತಾಳಿದ ವಾನರ ರಾಜ ವಾಲಿ. ಶ್ರೀ ಕೃಷ್ಣನ ಹಿಂದಿನ ಜನ್ಮದಲ್ಲಿ ಶ್ರೀ ರಾಮನಾಗಿ ವಾನರ ರಾಜ ವಾಲಿಯನ್ನು ಮರಗಳ ಹಿಂದೆ ನಿಂತು ಯಾವ ನಿರ್ದಿಷ್ಟ ಕಾರಣವಿಲ್ಲದೆ ಕೊಂದಿದ್ದರಿಂದ ಈ ಜನ್ಮದಲ್ಲಿ ಬೇಡನ ಜನ್ಮತಾಳಿದ ವಾಲಿಯಿಂದ ಸಾಯಬೇಕೆಂದು ಪೂರ್ವ ನಿಯೋಜಿತವಾಗಿತ್ತು. ಹೀಗಾಗಿರುವುದನ್ನು ನೋಡಿದರೆ ಪರಮಾತ್ಮನೂ ಸಹ ಕರ್ಮ ಫಲದಿಂದ ಹೊರಗಿಲ್ಲವೆಂದು ಸ್ಪಷ್ಟವಾಗಿ ಗೋಚರಿಸುತ್ತದೆ.