Latest Updates
-
ತಾಯಂದಿರ ದಿನದ ಗೊಂದಲವೇ? ಅಮ್ಮ ಮತ್ತು ಅತ್ತೆ ಇಬ್ಬರನ್ನೂ ಖುಷಿಪಡಿಸಲು ಇಲ್ಲಿದೆ ಬೆಸ್ಟ್ ಪ್ಲಾನ್! -
ಅಮೆಜಾನ್ ಸೇಲ್ ಶುರು: ನಿಮ್ಮ ಬಾಲ್ಕನಿಯನ್ನು ಸುಂದರ ತೋಟವನ್ನಾಗಿಸಲು ಮಿಸ್ ಮಾಡ್ಬೇಡಿ ಈ ಬೆಸ್ಟ್ ಡೀಲ್ಸ್! -
ಬಿಸಿಲ ಧಗೆಯಿಂದ ಸುಸ್ತಾಗಿದ್ದೀರಾ? ದೇಹವನ್ನು ತಂಪಾಗಿಡಲು ಈ ಪಾನೀಯಗಳೇ ಮದ್ದು! -
ಅಮ್ಮನಿಗೆ ಕೊನೆಯ ನಿಮಿಷದಲ್ಲಿ ಗಿಫ್ಟ್ ಕೊಡಬೇಕಾ? ಈ ಟ್ರಿಕ್ಸ್ ಫಾಲೋ ಮಾಡಿ, ಅಮ್ಮನ ಮುಖದಲ್ಲಿ ನಗು ಮೂಡಿಸಿ! -
ಬಿಸಿಗಾಳಿಯ ಎಚ್ಚರಿಕೆ: ಮಧ್ಯಾಹ್ನ ವರ್ಕೌಟ್ ಮಾಡ್ತಿದ್ದೀರಾ? ಈ ತಪ್ಪು ನಿಮ್ಮ ಆರೋಗ್ಯಕ್ಕೆ ಕುತ್ತು ತರಬಹುದು! -
ಬಿಸಿಗಾಳಿಯ ನಡುವೆ ಮದುವೆ ಸಂಭ್ರಮ: ಅತಿಥಿಗಳ ಸುರಕ್ಷತೆಗಾಗಿ ನೀವು ಮಾಡಲೇಬೇಕಾದ ಬದಲಾವಣೆಗಳಿವು! -
ಬಿಸಿಗಾಳಿಯ ಅಬ್ಬರ ಶುರು: ನಿಮ್ಮ ಮನೆ ತಂಪಾಗಿರಲು ಮತ್ತು ಗಿಡಗಳನ್ನು ಉಳಿಸಲು ಈ ಸೀಕ್ರೆಟ್ ಟಿಪ್ಸ್ ಮಿಸ್ ಮಾಡ್ಬೇಡಿ! -
ಸುಡುವ ಬಿಸಿಲಿಗೆ ಸುಸ್ತಾಗಿದ್ದೀರಾ? ದೇಹವನ್ನು ತಂಪಾಗಿಡಲು ಈ ಆಹಾರ ಕ್ರಮ ಪಾಲಿಸಿ! -
ಮದರ್ಸ್ ಡೇ 2026: ಅಮ್ಮನಿಗೆ ಸರ್ಪ್ರೈಸ್ ನೀಡಲು ಈ ವೈರಲ್ ಟ್ರೆಂಡ್ಸ್ ಫಾಲೋ ಮಾಡಿ, ಮಿಸ್ ಮಾಡ್ಬೇಡಿ! -
ಅಮ್ಮನಿಗೆ ಈ ಬಾರಿ ವಿಶೇಷ ಉಡುಗೊರೆ: ತಾಯಂದಿರ ದಿನದಂದು 20 ನಿಮಿಷದ ಯೋಗದ ಮ್ಯಾಜಿಕ್!
ಜ.25ಕ್ಕೆ ಕಾಲಾಷ್ಟಮಿ, ಈ ದಿನ ಮಹತ್ವವೇನು? ಪೂಜಾ ವಿಧಿಗಳೇನು?
ಜನವರಿ 25ಕ್ಕೆ ಕಾಲಾಷ್ಟಮಿ. ಪ್ರತೀ ತಿಂಗಳು ಕೃಷ್ಣ ಪಕ್ಷದ ಅಷ್ಟಮಿಯಂದು ಕಾಲಾಷ್ಟಮಿ ವ್ರತವನ್ನು ಆಚರಿಸಲಾಗುವುದು. ಈ ದಿನ ಕಾಲ ಭೈರವನನ್ನು ಅಂದ್ರೆ ಶಿವನನ್ನು ಪೂಜಿಸಲಾಗುವುದು. ಈ ದಿನ ಉಪವಾಸವಿದ್ದು ಅವನಿಗೆ ಭಕ್ತಿಯಿಂದ ಪೂಜೆ ಸಲ್ಲಿಸಿದೆ ಶಿವನ ಸಂತುಷ್ಟನಾಗಿ ನಮ್ಮ ಸಂಕಲ್ಪವನ್ನು ನೆರವೇರಿಸುತ್ತಾನೆ. ಅದರಲ್ಲೂ ಮಾರ್ಗಶಿರ ಮಾಸದಲ್ಲಿ ಬರುವ ಕಾಲಾಷ್ಟಮಿ ತುಂಬಾನೇ ಮಹತ್ವವನ್ನು ಪಡೆದಿದೆ.
ಕಾಲ ಭೈರವನನ್ನು ಬಟುಕ ಭೈರವ ಎಂದು ಕೂಡ ಹೇಳಲಾಗುವುದು. ಬಟುಕ ಬೈರವ ನಾಯಿಯ ಮೇಲೆ ಸವಾರಿ ಮಾಡುತ್ತಾನೆ ಎಂದು ಪುರಾಣದಲ್ಲಿ ಹೇಳಲಾಗಿದೆ. ಆದ್ದರಿಂದ ಈ ದಿನದಂದು ನಾಯಿಗೆ ಆಹಾರ ನೀಡಿದರೆ ಕಾಲ ಭೈರವನಿಗೆ ಸಂತೋಷವಾಗುವುದು.
ಕಾಲಾಷ್ಟಮಿ ಮಹತ್ವ, ಅಷ್ಟಮಿ ತಿಥಿ ಸಮಯ, ಪೂಜಾ ವಿಧಾನ ತಿಳಿಯಲು ಮುಂದೆ ಓದಿ:

ಅಷ್ಟಮಿ ತಿಥಿ ಸಮಯ
ದಿನಾಂಕ: ಜನವರಿ 25
ತಿಥಿ ಪ್ರಾರಂಭ: ಜನವರಿ 25 ಬೆಳಗ್ಗೆ 7:49ಕ್ಕೆ
ತಿಥಿ ಮುಕ್ತಾಯ: ಜನವರಿ 26 ಬೆಳಗ್ಗೆ 6:25ಕ್ಕೆ

ಕಾಲಾಷ್ಟಮಿ ಮಹತ್ವ:
ಈ ದಿನ ಭಕ್ತರು ಕಾಲ ಭೈರವನ ಜೊತೆಗೆ ಶಿವ ಹಾಗೂ ಪಾರ್ವತಿಯನ್ನು ಪೂಜಿಸಲಾಗುವುದು. ಕಾಲಾಷ್ಟಮಿ ವ್ರತ ಮಾಡುವುದರಿಂದ ಒಳ್ಳೆಯ ಆರೋಗ್ಯ, ಸಂಪತ್ತು, ಸಂತೋಷ, ಯಶಸ್ಸು ಪ್ರಾಪ್ತಿಯಾಗುವುದು. ಈ ದಿನ ಕಾಲ ಭೈರವನನ್ನು ಪೂಜಿಸುವುದರಿಂದ ರಾಹು ಮತ್ತು ಶನಿ ದೋಷ ಇದ್ದರೆ ಅದು ಕೂಡ ನಿವಾರಣೆಯಾಗುವುದು.

ಕಾಲಾಷ್ಟಮಿಯ ಪೂಜೆಯ ಮಹತ್ವ
* ಈ ದಿನ ಬೆಳಗ್ಗೆ ಎದ್ದು ಸ್ನಾನ ಮಾಡಿ, ಶುದ್ಧವಾದ ಬಟ್ಟೆ ತೊಟ್ಟು ಸ್ಪೆಷಲ್ ಪೂಜೆ ಮಾಡಬೇಕು. ಈ ದಿನ ಪಿತೃಗಳಿಗೂ ಪೂಜೆ ಮಾಡಬೇಕು.
* ರಾತ್ರ ಜಾಗರಣೆ ಮಾಡಬೇಕು, ರಾತ್ರಿ ಶಿವನ ಮಂತ್ರಗಳನ್ನು ಹೇಳುತ್ತಾ, ಕಾಲಭೈರವನ ಕತೆಗಳನ್ನು ಓದುತ್ತಾ ಕಾಲ ಕಳೆಯಬೇಕು.
* ಮಧ್ಯರಾತ್ರಿ ಶಂಖ ಊದುವುದು, ಗಂಟೆ ಬಾರಿಸುತ್ತಾ ಮಂತ್ರಗಳನ್ನು ಹೇಳುವುದು ಒಳ್ಳೆಯದು.
* ಕೆಲವರು ಈ ದಿನ ಪೂರ್ತಿ ಉಪವಾಸ ಇರುತ್ತಾರೆ.
* ಈ ದಿನ ನಾಯಿಗೆ ಹಾಲು, ಆಹಾರವನ್ನು ನೀಡಲಾಗುವುದು.

ಕಾಲಾಷ್ಟಮಿ ವ್ರತ ಮಂತ್ರ
"ಓಂ ಭಯಹರಣಂ ಚ ಭೈರವಃ|
ಓಂ ಕಾಲಭೈರವಾಯ ನಮಃ|
ಓಂ ಹ್ರೀಂ ಬಂ ಬಟುಕಾಯ ಆಪದುದ್ಧಾರಣಾಯ ಕುರೂಕುರೂ ಬಟುಕಾಯ ಹ್ರೀಂ|
ಓಂ ಭ್ರಂ ಕಾಲಭೈರವಾಯ ಫಟ್|"



Click it and Unblock the Notifications