Latest Updates
-
ಅಸ್ಸಾಂನಲ್ಲಿ ಲಿವ್-ಇನ್ ಸಂಬಂಧದಲ್ಲಿದ್ದೀರಾ? ಹೊಸ ಕಾನೂನಿನ ಪ್ರಕಾರ ನೋಂದಣಿ ಮಾಡದಿದ್ದರೆ ಜೈಲು ಶಿಕ್ಷೆ ಕಟ್ಟಿಟ್ಟ ಬುತ್ತಿ! -
ಬಿಸಿಲಿಗೆ ಗಿಡಗಳು ಬಾಡುತ್ತಿವೆಯೇ? ಈ ಮ್ಯಾಜಿಕ್ ಟಿಪ್ಸ್ ಬಳಸಿ ನಿಮ್ಮ ಬಾಲ್ಕನಿ ಗಾರ್ಡನ್ ಅನ್ನು ಹಸಿರಾಗಿಡಿ! -
ಬಿಸಿಲ ಝಳಕ್ಕೆ ಸುಸ್ತಾಗಿದ್ದೀರಾ? ಹೀಟ್ಸ್ಟ್ರೋಕ್ನಿಂದ ಪಾರಾಗಲು ಈ ತಂಪು ಪದಾರ್ಥಗಳು ನಿಮ್ಮ ಆಹಾರದಲ್ಲಿರಲಿ, ಇಂದೇ ಟ್ರೈ ಮಾಡಿ! -
ಬಕ್ರೀದ್ 2026: ಈ ಬಾರಿಯ ಹಬ್ಬದ ಸಂಭ್ರಮದಲ್ಲಿ ಮಿಂಚಲು ನೀವು ಮಿಸ್ ಮಾಡಲೇಬಾರದ ಫ್ಯಾಷನ್ ಟ್ರೆಂಡ್ಸ್ ಮತ್ತು ಸ್ಟೈಲಿಂಗ್ ಟಿಪ್ಸ್! -
ಬಿಸಿಲ ಬೇಗೆಯಲ್ಲಿ ವರ್ಕೌಟ್ ಮಾಡ್ತಿದ್ದೀರಾ? ಈ ತಪ್ಪುಗಳನ್ನು ಮಾಡಿದರೆ ನಿಮ್ಮ ಆರೋಗ್ಯಕ್ಕೆ ಕಾದಿದೆ ದೊಡ್ಡ ಅಪಾಯ! -
ಬಿಸಿಲಿನ ಬೇಗೆಗೆ ದಂಪತಿಗಳ ನಡುವೆ ಜಗಳವೇ? ಈ ಸಣ್ಣ ಬದಲಾವಣೆಗಳು ನಿಮ್ಮ ಸಂಬಂಧವನ್ನು ಬಿರುಕಿನಿಂದ ಕಾಪಾಡುತ್ತವೆ! -
ಉತ್ತರ ಭಾರತದಲ್ಲಿ ಸುಡುವ ಬಿಸಿಲು: ಮನೆಯನ್ನು ತಂಪಾಗಿಡಲು ಮತ್ತು ಗಿಡಗಳನ್ನು ಬಚಾವ್ ಮಾಡಲು ಈ ಟಿಪ್ಸ್ ಫಾಲೋ ಮಾಡಿ! -
ಬಿಸಿಲ ಬೇಗೆಯಿಂದ ಸುಸ್ತಾಗಿದ್ದೀರಾ? ದೇಹವನ್ನು ತಂಪಾಗಿಡಲು ಈ ಆಹಾರಗಳೇ ನಿಮಗೆ ರಾಮಬಾಣ! -
ಬಿಸಿಲ ಝಳಕ್ಕೆ ಸುಸ್ತಾಗಿದ್ದೀರಾ? ಈ ಸಿಂಪಲ್ ಟಿಪ್ಸ್ ಪಾಲಿಸಿದ್ರೆ ಬೇಸಿಗೆಯಲ್ಲೂ ನೀವು ಕೂಲ್ ಆಗಿರಬಹುದು! -
ಬಿಸಿಲ ಬೇಗೆಯಲ್ಲಿ ವ್ಯಾಯಾಮ ಮಾಡ್ತಿದ್ದೀರಾ? ನಿಮ್ಮ ಹೃದಯದ ಆರೋಗ್ಯಕ್ಕೆ ಕಾದಿದೆ ದೊಡ್ಡ ಅಪಾಯ, ಎಚ್ಚರ!
ಜ.25ಕ್ಕೆ ಕಾಲಾಷ್ಟಮಿ, ಈ ದಿನ ಮಹತ್ವವೇನು? ಪೂಜಾ ವಿಧಿಗಳೇನು?
ಜನವರಿ 25ಕ್ಕೆ ಕಾಲಾಷ್ಟಮಿ. ಪ್ರತೀ ತಿಂಗಳು ಕೃಷ್ಣ ಪಕ್ಷದ ಅಷ್ಟಮಿಯಂದು ಕಾಲಾಷ್ಟಮಿ ವ್ರತವನ್ನು ಆಚರಿಸಲಾಗುವುದು. ಈ ದಿನ ಕಾಲ ಭೈರವನನ್ನು ಅಂದ್ರೆ ಶಿವನನ್ನು ಪೂಜಿಸಲಾಗುವುದು. ಈ ದಿನ ಉಪವಾಸವಿದ್ದು ಅವನಿಗೆ ಭಕ್ತಿಯಿಂದ ಪೂಜೆ ಸಲ್ಲಿಸಿದೆ ಶಿವನ ಸಂತುಷ್ಟನಾಗಿ ನಮ್ಮ ಸಂಕಲ್ಪವನ್ನು ನೆರವೇರಿಸುತ್ತಾನೆ. ಅದರಲ್ಲೂ ಮಾರ್ಗಶಿರ ಮಾಸದಲ್ಲಿ ಬರುವ ಕಾಲಾಷ್ಟಮಿ ತುಂಬಾನೇ ಮಹತ್ವವನ್ನು ಪಡೆದಿದೆ.
ಕಾಲ ಭೈರವನನ್ನು ಬಟುಕ ಭೈರವ ಎಂದು ಕೂಡ ಹೇಳಲಾಗುವುದು. ಬಟುಕ ಬೈರವ ನಾಯಿಯ ಮೇಲೆ ಸವಾರಿ ಮಾಡುತ್ತಾನೆ ಎಂದು ಪುರಾಣದಲ್ಲಿ ಹೇಳಲಾಗಿದೆ. ಆದ್ದರಿಂದ ಈ ದಿನದಂದು ನಾಯಿಗೆ ಆಹಾರ ನೀಡಿದರೆ ಕಾಲ ಭೈರವನಿಗೆ ಸಂತೋಷವಾಗುವುದು.
ಕಾಲಾಷ್ಟಮಿ ಮಹತ್ವ, ಅಷ್ಟಮಿ ತಿಥಿ ಸಮಯ, ಪೂಜಾ ವಿಧಾನ ತಿಳಿಯಲು ಮುಂದೆ ಓದಿ:

ಅಷ್ಟಮಿ ತಿಥಿ ಸಮಯ
ದಿನಾಂಕ: ಜನವರಿ 25
ತಿಥಿ ಪ್ರಾರಂಭ: ಜನವರಿ 25 ಬೆಳಗ್ಗೆ 7:49ಕ್ಕೆ
ತಿಥಿ ಮುಕ್ತಾಯ: ಜನವರಿ 26 ಬೆಳಗ್ಗೆ 6:25ಕ್ಕೆ

ಕಾಲಾಷ್ಟಮಿ ಮಹತ್ವ:
ಈ ದಿನ ಭಕ್ತರು ಕಾಲ ಭೈರವನ ಜೊತೆಗೆ ಶಿವ ಹಾಗೂ ಪಾರ್ವತಿಯನ್ನು ಪೂಜಿಸಲಾಗುವುದು. ಕಾಲಾಷ್ಟಮಿ ವ್ರತ ಮಾಡುವುದರಿಂದ ಒಳ್ಳೆಯ ಆರೋಗ್ಯ, ಸಂಪತ್ತು, ಸಂತೋಷ, ಯಶಸ್ಸು ಪ್ರಾಪ್ತಿಯಾಗುವುದು. ಈ ದಿನ ಕಾಲ ಭೈರವನನ್ನು ಪೂಜಿಸುವುದರಿಂದ ರಾಹು ಮತ್ತು ಶನಿ ದೋಷ ಇದ್ದರೆ ಅದು ಕೂಡ ನಿವಾರಣೆಯಾಗುವುದು.

ಕಾಲಾಷ್ಟಮಿಯ ಪೂಜೆಯ ಮಹತ್ವ
* ಈ ದಿನ ಬೆಳಗ್ಗೆ ಎದ್ದು ಸ್ನಾನ ಮಾಡಿ, ಶುದ್ಧವಾದ ಬಟ್ಟೆ ತೊಟ್ಟು ಸ್ಪೆಷಲ್ ಪೂಜೆ ಮಾಡಬೇಕು. ಈ ದಿನ ಪಿತೃಗಳಿಗೂ ಪೂಜೆ ಮಾಡಬೇಕು.
* ರಾತ್ರ ಜಾಗರಣೆ ಮಾಡಬೇಕು, ರಾತ್ರಿ ಶಿವನ ಮಂತ್ರಗಳನ್ನು ಹೇಳುತ್ತಾ, ಕಾಲಭೈರವನ ಕತೆಗಳನ್ನು ಓದುತ್ತಾ ಕಾಲ ಕಳೆಯಬೇಕು.
* ಮಧ್ಯರಾತ್ರಿ ಶಂಖ ಊದುವುದು, ಗಂಟೆ ಬಾರಿಸುತ್ತಾ ಮಂತ್ರಗಳನ್ನು ಹೇಳುವುದು ಒಳ್ಳೆಯದು.
* ಕೆಲವರು ಈ ದಿನ ಪೂರ್ತಿ ಉಪವಾಸ ಇರುತ್ತಾರೆ.
* ಈ ದಿನ ನಾಯಿಗೆ ಹಾಲು, ಆಹಾರವನ್ನು ನೀಡಲಾಗುವುದು.

ಕಾಲಾಷ್ಟಮಿ ವ್ರತ ಮಂತ್ರ
"ಓಂ ಭಯಹರಣಂ ಚ ಭೈರವಃ|
ಓಂ ಕಾಲಭೈರವಾಯ ನಮಃ|
ಓಂ ಹ್ರೀಂ ಬಂ ಬಟುಕಾಯ ಆಪದುದ್ಧಾರಣಾಯ ಕುರೂಕುರೂ ಬಟುಕಾಯ ಹ್ರೀಂ|
ಓಂ ಭ್ರಂ ಕಾಲಭೈರವಾಯ ಫಟ್|"



Click it and Unblock the Notifications