Latest Updates
-
ಆರ್ಬಿಐ ಹೊಸ ಆಟೋ-ಪೇ ನಿಯಮ: ನಿಮ್ಮ OTT ಮತ್ತು SIP ಪಾವತಿಗಳು ಸ್ಥಗಿತಗೊಳ್ಳುವ ಮುನ್ನ ಎಚ್ಚೆತ್ತುಕೊಳ್ಳಿ! -
ಸುಡುವ ಬಿಸಿಲಲ್ಲೂ ಮನೆ ತಂಪಾಗಿರಬೇಕೆ? ಕಡಿಮೆ ಖರ್ಚಿನಲ್ಲಿ ಕೂಲರ್ ಇಲ್ಲದೆ ತಂಪಾಗಿಸಲು ಇಲ್ಲಿದೆ ಮ್ಯಾಜಿಕ್ ಟಿಪ್ಸ್! -
ಬಿಸಿಲಿನ ಅಲೆ: ಸುಡುವ ಬಿಸಿಲಿನಲ್ಲಿ ನಿಮ್ಮ ಆರೋಗ್ಯ ಕಾಪಾಡಿಕೊಳ್ಳಲು ಈ ಪಾನೀಯಗಳೇ ಮದ್ದು! -
ಬಿಸಿಲ ಧಗೆಗೆ ಕಂಗಾಲಾಗಿದ್ದೀರಾ? ಸ್ಟೈಲಿಶ್ ಆಗಿ ಕೂಲ್ ಆಗಿರಲು ಇಲ್ಲಿದೆ ವೈರಲ್ ಸಮ್ಮರ್ ಹ್ಯಾಕ್ಸ್! -
ಬಿಸಿಗಾಳಿಯ ಅಬ್ಬರ: ಫಿಟ್ನೆಸ್ ಕಾಪಾಡಿಕೊಳ್ಳಲು ನಿಮ್ಮ ವರ್ಕೌಟ್ ಸಮಯ ಬದಲಾಯಿಸುವುದು ಅನಿವಾರ್ಯವೇ? -
ಡೇಟಿಂಗ್ ಆ್ಯಪ್ಗಳಲ್ಲಿ ಪ್ರೀತಿಯ ಬಲೆ: ಎಐ ಡೀಪ್ಫೇಕ್ ವಂಚನೆಯಿಂದ ಪಾರಾಗುವುದು ಹೇಗೆ? -
ಬಿಸಿಲ ಬೇಗೆಯಿಂದ ತತ್ತರಿಸಿದ್ದೀರಾ? ಎಸಿ ಇಲ್ಲದೆಯೇ ನಿಮ್ಮ ಮನೆಯನ್ನು ತಂಪಾಗಿಡಲು ಇಲ್ಲಿದೆ ಮ್ಯಾಜಿಕ್ ಟಿಪ್ಸ್! -
ಅಶ್ವಗಂಧದ ಎಲೆಗಳ ಬಳಕೆ ನಿಷೇಧ: ನಿಮ್ಮ ನೆಚ್ಚಿನ ಹೆಲ್ತ್ ಸಪ್ಲಿಮೆಂಟ್ಸ್ ಮಾರುಕಟ್ಟೆಯಿಂದ ಮಾಯವಾಗುತ್ತಾ? -
ಬಿಸಿಗಾಳಿಯ ಅಬ್ಬರ: ಸುಡುವ ಬಿಸಿಲಿನಲ್ಲಿ ಆರೋಗ್ಯ ಮತ್ತು ಫಿಟ್ನೆಸ್ ಕಾಪಾಡಿಕೊಳ್ಳುವುದು ಹೇಗೆ? -
ದೆಹಲಿ ಬಿಸಿಲಿನಲ್ಲಿ ಮದುವೆ ಸಂಭ್ರಮ: ಹೀಟ್ವೇವ್ ನಡುವೆ ನಿಮ್ಮ ಮದುವೆ ಪ್ಲಾನ್ ಬದಲಾಯಿಸುವುದು ಹೇಗೆ?
ಮೇ 22ಕ್ಕೆ ಕಾಲಾಷ್ಟಮಿ: ರಾಹು, ಶನಿ ದೋಷ ನಿವಾರಣೆಗೆ ಕಾಲ ಭೈರವನನ್ನು ಹೇಗೆ ಪೂಜಿಸಬೇಕು?
ಮೇ 22ಕ್ಕೆ ಕಾಲಾಷ್ಟಮಿ, ಕಾಲ ಭೈರವನ ಪೂಜೆಗಂದೇ ಮೀಸಲಾಗಿರುವ ದಿನ. ವರ್ಷದಲ್ಲಿ 12 ಕಾಲಾಷ್ಟಮಿ ಆಚರಿಸಲಾಗುವುದು. ಪ್ರತೀ ತಿಂಗಳ ಕೃಷ್ಣ ಪಕ್ಷದ ಅಷ್ಟಮಿ ತಿಥಿಯಂದು ಕಾಲಾಷ್ಟಮಿ ಆಚರಿಸಲಾಗುವುದು.

ಕಾಲಭೈರವನ ಪೂಜೆಗೆ ಕಾಲಾಷ್ಟಮಿ ತುಂಬಾ ವಿಶೇಷವಾದ ದಿನ ಏಕೆ, ಮೇ 22ರಂದು ಕಾಲ ಭೈರವನ ಪೂಜೆಗೆ ಶುಭ ಮುಹೂರ್ತ ಯಾವಾಗ? ಈ ದಿನದ ಪೂಜಾ ವಿಧಿಗಳೇನು ಎಂದು ನೋಡೋಣ ಬನ್ನಿ?

ಮೇ ತಿಂಗಳಿನಲ್ಲಿ ಕಾಲಾಷ್ಟಮಿ ದಿನಾಂಕ ಹಾಗೂ ಶುಭ ಮುಹೂರ್ತ
ಮೇ 22, ಭಾನುವಾರ 2022
ಅಷ್ಟಮಿ ತಿಥಿ ಪ್ರಾರಂಭ ಮೇ 22 ಮಧ್ಯಾಹ್ನ 1 ಗಂಟೆಗೆ
ಅಷ್ಟಮಿ ತಿಥಿ ಮುಕ್ತಾಯ ಮೇ 23 ಬೆಳಗ್ಗೆ 11:34ಕ್ಕೆ

ಕಾಲಾಷ್ಟಮಿ ಮಹತ್ವ
ಕಾಲಾಷ್ಟಮಿಯಂದು ಶಿವನ ಕಾಲ ಭೈರವ ರೂಪ ಅಂದರೆ ರೌದ್ರಾವತಾರದ ರೂಪವನ್ನುಆರಾಧಿಸಲಾಗುವುದು. ಈ ದಿನ ಕಾಲ ಭೈರವನ ಭಕ್ತರು ಶಿವನ ಜೊತೆಗೆ ಪಾರ್ವತಿಗೂ ಪೂಜೆಯನ್ನು ಸಲ್ಲಿಸುತ್ತಾರೆ. ಪೂಜೆಯ ಬಳಿಕ ಕಾಲ ಭೈರವ ಕತೆ ಹೇಳಲಾಗುವುದು.
ಈ ದಿನದಂದು ಬೆಳಗ್ಗೆ ವಿಶೇಷ ಪೂಜೆಯನ್ನು ಮಾಡಲಾಗುವುಉದ, ಈ ದಿನದಂದು ಪೂರ್ವಜರಿಗೂ ಪೂಜೆ ಸಲ್ಲಿಸಲಾಗುವುದು.
ಈ ದಿನ ರಾತ್ರಿ ಎಚ್ಚರವಾಗಿದ್ದು ಕಾಲ ಭೈರವನ ಕತೆ ಓದುವುದು, ಕೇಳುವುದು ಮಾಡಲಾಗುವುದು. ಮಧ್ಯರಾತ್ರಿಯಲ್ಲಿ ಕಾಲ ಭೈರವನಿಗೆ ವಿಶೇಷ ಪೂಜೆಯನ್ನು ಸಲ್ಲಿಸಲಾಗುವುದು, ಸಾಂಪ್ರದಾಯಿಕವಾದ ಡ್ರಮ್ ಬಾರಿಸಲಾಗುವುದು ಗಂಟೆ ಬಾರಿಸಿ ಶಂಖ ಓದಿಸಲಾಗುವುದು.
ಈ ದಿನ ಉಪವಾಸವಿದ್ದು ಪೂಜೆಯನ್ನು ಸಲ್ಲಿಸಲಾಗುವುದು. ಈ ದಿನ ನಾಯಿಗಳಿಗೆ ಆಹಾರ ನೀಡುವುದು. ಈ ದಿನ ಕಾಲ ಭೈರವ ನಾಯಿಯ ಮೇಲೆ ಕುಳಿತು ಸವಾರಿ ಮಾಡುತ್ತಾನೆ ಆದ್ದರಿಂದ ಈ ದಿನ ನಾಯಿಗಳಿಗೆ ಆಹಾರ ನೀಡಿದರೆ ತೃಪ್ತನಾಗುತ್ತಾನೆ ಎಂದು ನಂಬಲಾಗುವುದು.

ಕಾಲ ಭೈರವನ ಪೂಜೆ ಮಾಡಿದರೆ ದೊರೆಯುವ ಪ್ರಯೋಜನಗಳೇನು?
* ಈ ದಿನ ಭೈರವನ ಪೂಜೆ ಮಾಡುವುದರಿಂದ ಶಿವ ನಮ್ಮ ಪಾಪಗಳಿಂದ ವಿಮೋಚನೆ ಮಾಡುತ್ತಾನೆ ಎಂದು ನಂಬಲಾಗಿದೆ.
* ಶಿವನನ್ನು ಪೂಜಿಸುವುದರಿಂದ ಇಷ್ಟಾರ್ಥಗಳು ನೆರವೇರುವುದು.
* ಶಿವ ಒಳ್ಳೆಯ ಆರೋಗ್ಯ, ಸಂಪತ್ತು ನೀಡಿ ಆಶೀರ್ವದಿಸುತ್ತಾನೆ.
* ರಾಹು ಹಾಗೂ ಶನಿ ದೋಷವಿರುವವರು ಕಾಲ ಭೈರವನ ಪೂಜಿಸಿದರೆ ಗ್ರಹ ದೋಷದ ಕೆಟ್ಟ ಪರಿಣಾಮ ಕಡಿಮೆಯಾಗುವುದು.



Click it and Unblock the Notifications











